Homeಕರ್ನಾಟಕಅತಿಥಿ ಶಿಕ್ಷಕರಿಗೆ ಸಿಇಟಿ ಪರೀಕ್ಷೆ ಕಡ್ಡಾಯ ಮಾಡಿದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ; ತೀವ್ರ ಟೀಕೆ

ಅತಿಥಿ ಶಿಕ್ಷಕರಿಗೆ ಸಿಇಟಿ ಪರೀಕ್ಷೆ ಕಡ್ಡಾಯ ಮಾಡಿದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ; ತೀವ್ರ ಟೀಕೆ

- Advertisement -
- Advertisement -

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಅತಿಥಿ ಶಿಕ್ಷಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕಡ್ಡಾಯಗೊಳಿಸಿ ಹೊರಡಿಸಿರುವ ಅಧಿಸೂಚನೆಗೆ ಆಕಾಂಕ್ಷಿಗಳು ಮತ್ತು ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 2024 ರಲ್ಲಿ ನೇಮಕಗೊಂಡ ಮತ್ತು ಪ್ರಸ್ತುತ ಕಾಲೇಜು ಶಿಕ್ಷಣ, ಶಾಲಾ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಿಂದ ನಿರ್ವಹಿಸಲ್ಪಡುವ ಸಂಸ್ಥೆಗಳಲ್ಲಿ ಬೋಧಿಸುತ್ತಿರುವ ಅತಿಥಿ ಅಧ್ಯಾಪಕರ ಕಡೆಗೆ ಗಮನಸೆಳೆದ ಅತಿಥಿ ಶಿಕ್ಷಕರು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಇತ್ತೀಚಿನ ಅಧಿಸೂಚನೆಯ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದ್ದಾರೆ. ಅತಿಥಿ ಶಿಕ್ಷಕರಿಗೆ ಸಿಇಟಿ ಪರೀಕ್ಷೆ

ಇಲಾಖೆಯು ಅಧಿಸೂಚನೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಹಳೆಯ ನೇಮಕಾತಿ ಪ್ರಕ್ರಿಯೆಗೆ ಮರಳಬೇಕು ಎಂದು ಒತ್ತಾಯಿಸಿದ ಆಕಾಂಕ್ಷಿಯೊಬ್ಬರು, “ಇಲಾಖೆಯು ಇಷ್ಟು ವರ್ಷಗಳಿಂದ ಜಾರಿಯಲ್ಲಿರುವ ನಿಯಮಗಳನ್ನು ಪಾಲಿಸಲಿ. ಕೇವಲ ಹತ್ತು ತಿಂಗಳ ಅವಧಿಯ ಕೆಲಸಕ್ಕೆ ಇಲಾಖೆಯು ಪ್ರವೇಶ ಪರೀಕ್ಷೆಯನ್ನು ಏಕೆ ಕಡ್ಡಾಯಗೊಳಿಸುತ್ತಿದೆ?” ಎಂದು ಕೇಳಿದ್ದಾರೆ.

ಶಿಕ್ಷಣ ತಜ್ಞ ವಿ ಪಿ ನಿರಂಜನರಾಧ್ಯ ಪ್ರತಿಕ್ರಿಯಿಸಿ, ಸರ್ಕಾರವು ಅತಿಥಿ ಶಿಕ್ಷಕರಿಗೆ “ದ್ರೋಹ” ಮಾಡಿದೆ ಎಂದು ಆರೋಪಿಸಿದ್ದಾರೆ.

“ಮೊದಲನೆಯದಾಗಿ, ಈ ಶಿಕ್ಷಕರಿಗೆ ತಿಂಗಳಿಗೆ ಕೇವಲ 10,500 ರೂ. ವೇತನ ನೀಡಲಾಗುತ್ತದೆ. ಕೇವಲ ಹತ್ತು ತಿಂಗಳುಗಳ ಕಾಲ ನೇಮಕ ಮಾಡಿಕೊಳ್ಳಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಪ್ರವೇಶ ಪರೀಕ್ಷೆ ಬರೆಯಲು ಹೇಳುವುದು ದ್ರೋಹ. ಸಂಬಂಧಪಟ್ಟ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಹಿಂದಿನ ನೇಮಕಾತಿ ಪ್ರಕ್ರಿಯೆಗೆ ಮರಳಲು ಅಧಿಕಾರಿಗಳಿಗೆ ಸೂಚಿಸಬೇಕು” ಎಂದು ಅವರು ಹೇಳಿದ್ದಾರೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಮೌಲಾನಾ ಆಜಾದ್ ಶಾಲೆಗಳು ಮತ್ತು ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಇತರವುಗಳಿಗೆ ಶಿಕ್ಷಕರನ್ನು ನೇಮಿಸಿಕೊಳ್ಳುವ ಜವಾಬ್ದಾರಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಿದೆ.

ಹಿಂದಿನ ವ್ಯವಸ್ಥೆಯಡಿಯಲ್ಲಿ, ಅತಿಥಿ ಶಿಕ್ಷಕರನ್ನು ನೇಮಿಸುವ ಅಧಿಕಾರವನ್ನು ನಿರ್ದಿಷ್ಟ ಶಾಲೆಯ ಮುಖ್ಯೋಪಾಧ್ಯಾಯರು ಅಥವಾ ಇಲಾಖೆಯ ಜಿಲ್ಲಾ ಅಧಿಕಾರಿಗೆ ವಹಿಸಲಾಗಿತ್ತು. ಶಿಕ್ಷಕರು ತಮ್ಮ ಅರ್ಜಿಯನ್ನು ಸಲ್ಲಿಸಿದ ನಂತರ, ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ಪ್ರಾತ್ಯಕ್ಷಿಕೆ ತರಗತಿ, ಅವರ ಅರ್ಹತೆ ಮತ್ತು ಹಿರಿತನದ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ.

ಇಲಾಖೆಯು ಪ್ರಸ್ತಾಪಿಸಿದ ಸಿಇಟಿ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುವುದು ಮತ್ತು ಪ್ರಶ್ನೆ ಪತ್ರಿಕೆಯನ್ನು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಮುದ್ರಿಸಲಾಗುತ್ತದೆ, ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು OMR ಹಾಳೆಗಳಲ್ಲಿ ಗುರುತಿಸಬೇಕಾಗುತ್ತದೆ. ಕನ್ನಡ, ಇಂಗ್ಲಿಷ್, ಮಕ್ಕಳ ಅಭಿವೃದ್ಧಿ ಮತ್ತು ಶಿಕ್ಷಣಶಾಸ್ತ್ರದಲ್ಲಿ ಅವರ ಕೌಶಲ್ಯಗಳ ಮೇಲೆ ಅವರನ್ನು ಪರೀಕ್ಷಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯು ಗಳಿಸುವ ಅಂಕಗಳ ಶೇಕಡಾ 50 ರಷ್ಟು ಸಿಇಟಿ ಪರೀಕ್ಷೆಯಲ್ಲಿನ ಸಾಧನೆಗೆ, ಪೂರ್ಣಗೊಂಡ ಪದವಿ ಕೋರ್ಸ್‌ನಲ್ಲಿನ ಸಾಧನೆಗೆ ಶೇಕಡಾ 30 ರಷ್ಟು ಮೌಲ್ಯವಿರುತ್ತದೆ ಮತ್ತು ಉಳಿದ ಶೇಕಡಾ 20 ರಷ್ಟು ಬಿಇಡಿಯಲ್ಲಿ ಅಭ್ಯರ್ಥಿಯ ಸಾಧನೆಗೆ ಮೀಸಲಾಗಿರುತ್ತದೆ. ಅತಿಥಿ ಶಿಕ್ಷಕರಿಗೆ ಸಿಇಟಿ ಪರೀಕ್ಷೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನಕಲಿ’ ಎಸ್‌ಸಿ ಪ್ರಮಾಣಪತ್ರದ ಮೂಲಕ ಜಿ.ಪಂ. ಉಪಾಧ್ಯಕ್ಷ ಸ್ಥಾನ ಗಿಟ್ಟಿಕೊಂಡಿದ್ದ ಸಚಿವ ಮಂಕಾಳ ವೈದ್ಯ; ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು

‘ನಕಲಿ’ ಎಸ್‌ಸಿ ಪ್ರಮಾಣಪತ್ರದ ಮೂಲಕ ಜಿ.ಪಂ. ಉಪಾಧ್ಯಕ್ಷ ಸ್ಥಾನ ಗಿಟ್ಟಿಕೊಂಡಿದ್ದ ಸಚಿವ ಮಂಕಾಳ ವೈದ್ಯ; ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...