Homeಮುಖಪುಟಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ರೋಹಿಂಗ್ಯಾ ನಿರಾಶ್ರಿತರನ್ನು ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತ ಸರ್ಕಾರ ಸಮುದ್ರಕ್ಕೆ ತಳ್ಳಿದೆ ಎಂಬ ಗಂಭೀರ ಆರೋಪವನ್ನು ನಂಬಲು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.16) ಹಿಂದೇಟು ಹಾಕಿದ್ದು, ಸಾಕ್ಷಿ ಕೇಳಿದೆ ಎಂದು ವರದಿಯಾಗಿದೆ.

ಮಹಿಳೆಯರು, ಮಕ್ಕಳು, ವೃದ್ಧರು, ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿದ್ದ ಸುಮಾರು 43 ರೋಹಿಂಗ್ಯಾ ನಿರಾಶ್ರಿತರನ್ನು ಭಾರತ-ಮ್ಯಾನ್ಮಾರ್ ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತೀಯ ನೌಕಾಪಡೆ ಹಡಗಿನಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೋರಿ ಇಬ್ಬರು ರೋಹಿಂಗ್ಯಾ ನಿರಾಶ್ರಿತರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೆ ಸಿಂಗ್ ಅವರ ಪೀಠವು, ದೃಢವಾದ ಪುರಾವೆಗಳಿಲ್ಲದೆ ಮಧ್ಯಪ್ರವೇಶಿಸಲು ಒಲವು ತೋರಿಲ್ಲ ಎಂದು ವರದಿಯಾಗಿದೆ.

“ಪ್ರತಿ ಬಾರಿಯೂ ನಿಮ್ಮದೊಂದು ಹೊಸ ಕಥೆ ಸಿದ್ದವಾಗುತ್ತದೆ. ಈ ಬಾರಿ ಈ ಸುಂದರವಾದ ರಚಿಸಿದ್ದೀರಿ. ಸಮುದ್ರಕ್ಕೆ ತಳ್ಳಿದ್ದರ ಫೋಟೋ, ವಿಡಿಯೋ ತೆಗೆದವರು ಯಾರು? ಅವರು ವಾಪಸ್ ಬಂದಿದ್ದು ಹೇಗೆ? ಏನು ದಾಖಲೆ ಇದೆ?” ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಕೇಳಿದ್ದಾರೆ ಎಂದು barandbench.com ವರದಿ ಮಾಡಿದೆ.

“ದೇಶ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ನೀವು ಈ ಕಾಲ್ಪನಿಕ ಅರ್ಜಿ ಸಲ್ಲಿಸಿದ್ದೀರಿ” ನ್ಯಾಯಾಧೀಶರು ಹೇಳಿದ್ದಾರೆ. ಈ ಮೂಲಕ ಅವರು ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದರ ನಂತರದ ಘಟನೆಗಳನ್ನು ಉಲ್ಲೇಖಿಸಿರಬಹುದು ಎಂದು barandbench.com ವರದಿ ತಿಳಿಸಿದೆ.

ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಅವರು, ಅರ್ಜಿದಾರರಿಗೆ ಆಪಾದಿತ ಘಟನೆಗಳ ಬಗ್ಗೆ ಮಾಹಿತಿ ನೀಡುವ ಫೋನ್ ಕರೆಗಳು ಬಂದಿವೆ. ವಿಶ್ವಾಸಾರ್ಹ ಸುದ್ದಿ ವರದಿಗಳೂ ಇವೆ ಎಂದು ಹೇಳಿದ್ದಾರೆ.

“ಅವರನ್ನು (ರೋಹಿಂಗ್ಯಾ ನಿರಾಶ್ರಿತರನ್ನು) ಅಂಡಮಾನ್‌ಗೆ ಕರೆದೊಯ್ದು. ಲೈಫ್ ಜಾಕೆಟ್‌ ತೊಡಿಸಿ ಸಮುದ್ರಕ್ಕೆ ತಳ್ಳಲಾಗಿದೆ. ಈ ಬಗ್ಗೆ ಮ್ಯಾನ್ಮಾರ್‌ನಿಂದ ಕರೆ ಬಂದಿದೆ. ಅವರು (ಅರ್ಜಿದಾರರು) ದೆಹಲಿಯಲ್ಲಿದ್ದಾರೆ, ಅವರಿಗೆ ಫೋನ್‌ನಲ್ಲಿ ವಿಷಯ ತಿಳಿಸಲಾಗಿದೆ. ನಮ್ಮ ಬಳಿ ಫೋನ್ ಕರೆಯ ಅನುವಾದವೂ ಇದೆ. ದಯವಿಟ್ಟು ವಿದೇಶಿ ಮಾಧ್ಯಮ ವರದಿಗಳನ್ನು ನೋಡಿ… ಅದು ವಿಶ್ವಾಸಾರ್ಹ ವರದಿಗಳೆಂದು ಹೇಳುತ್ತದೆ” ಎಂದು ವಕೀಲ ಗೊನ್ಸಾಲ್ವೆಸ್ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಈ ಬಗ್ಗೆ ತನಿಖೆಗೆ ನಿರ್ದೇಶಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ. ಆದರೆ, ನ್ಯಾಯಾಲಯ ಈ ಬಗ್ಗೆ ಯಾವುದೇ ಆದೇಶ ನೀಡಲು ಒಲವು ತೋರಿಲ್ಲ.

“ಆ ಕರೆಗಳನ್ನು ಯಾರು ಪರಿಶೀಲಿಸಿದ್ದಾರೆ ಮತ್ತು ಯಾರಿಗೆ ಇದೆಲ್ಲದರ ಬಗ್ಗೆ ವೈಯಕ್ತಿಕ ಜ್ಞಾನವಿದೆ ಎಂಬುದನ್ನು ನಮಗೆ ತೋರಿಸಿ. ಯಾರಾದರೂ ನಿಂತು ಇದನ್ನು ವೀಕ್ಷಿಸದ, ಅರ್ಜಿದಾರರು ಅದನ್ನು ನೈಜ ಸಮಯದಲ್ಲಿ ನೋಡದ ಹೊರತು ನೀವು ಇದನ್ನು ಹೇಗೆ ದೃಢೀಕರಿಸುತ್ತೀರಿ? ಈ ವರದಿಗಳನ್ನು ದಾಖಲೆಯಲ್ಲಿ ಇರಿಸಿ… ನಾವು ನೋಡುತ್ತೇವೆ. ಹೊರಗೆ ಕುಳಿತಿರುವ ಈ ಎಲ್ಲಾ ಜನರು ನಮ್ಮ ಸಾರ್ವಭೌಮತ್ವ ಮತ್ತು ನಮ್ಮ ಅಧಿಕಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಈ ನಡುವೆ ರೋಹಿಂಗ್ಯಾ ನಿರಾಶ್ರಿತರನ್ನು ರಕ್ಷಿಸಬೇಕು ಎಂಬುದನ್ನು ಪರಿಗಣಿಸುವಂತೆ ಗೊನ್ಸಾಲ್ವೆಸ್ ನ್ಯಾಯಾಲಯವನ್ನು ಕೋರಿದ್ದಾರೆ.

“ದಯವಿಟ್ಟು ಅಂತಾರಾಷ್ಟ್ರೀಯ ನ್ಯಾಯಾಲಯವು ರೋಹಿಂಗ್ಯಾಗಳ ಬಗ್ಗೆ ಏನು ಹೇಳಿದೆ ಮತ್ತು ರೋಹಿಂಗ್ಯಾಗಳನ್ನು ಏಕೆ ವಾಪಸ್ ಕಳಿಸಬಾರದು ಎಂಬುದನ್ನು ನೋಡಿ… ವಲಸಿಗರನ್ನು ವಾಪಸ್ ಕಳಿಸಬಹುದು. ಆದರೆ, ರೋಹಿಂಗ್ಯಾಗಳನ್ನು ಕಳುಹಿಸುವಂತಿಲ್ಲ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಅರ್ಜಿದಾರರು ಮಾಡಿರುವ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳಿದ್ದರೆ ಮಾತ್ರ ಮಧ್ಯಪ್ರವೇಶಿಸಬಹುದು ಎಂದಿದೆ.

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...