Homeಮುಖಪುಟಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 9 ಮಂದಿಯ ಬಂಧನ

ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 9 ಮಂದಿಯ ಬಂಧನ

- Advertisement -
- Advertisement -

ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಹಿಸಾರ್ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ ಹರಿಯಾಣ ಮತ್ತು ಪಂಜಾಬ್‌ನಾದ್ಯಂತ ಎರಡು ವಾರಗಳಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

‘ಟ್ರಾವೆಲ್ ವಿತ್ ಜೋ’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಜ್ಯೋತಿ ಮಲ್ಹೋತ್ರಾ ಅವರನ್ನು ಹಿಸಾರ್‌ನ ನ್ಯೂ ಅಗರ್‌ವಾಲ್ ಎಕ್ಸ್‌ಟೆನ್ಶನ್ ಪ್ರದೇಶದಿಂದ ಬಂಧಿಸಲಾಗಿದೆ. ಅವರು ಯೂಟ್ಯೂಬ್‌ನಲ್ಲಿ 3.77 ಲಕ್ಷ ಚಂದಾದಾರರನ್ನು ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 1.32 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ ಬಗ್ಗೆ ವಿಡಿಯೋಗಳನ್ನು ಸಹ ಪೋಸ್ಟ್ ಮಾಡಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಸಾರ್ ಪೊಲೀಸರು ಜ್ಯೋತಿ ಮಲ್ಹೋತ್ರಾ ವಿರುದ್ದ ಎಫ್‌ಐಆರ್ ದಾಖಲಿಸಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆಕೆಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಬಿಜೇಂದರ್ ಸಿಂಗ್ ಅವರ ದೂರಿನ ಮೇರೆಗೆ ಜ್ಯೋತಿ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3 ಮತ್ತು 5 ಹಾಗೂ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ, ಜ್ಯೋತಿ ಮಲ್ಹೋತ್ರಾ ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಸಿಬ್ಬಂದಿಯಾಗಿದ್ದ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಅವರ ಜೊತೆ ಸಂಪರ್ಕ ಹೊಂದಿದ್ದು, 2023 ರಲ್ಲಿ ಎರಡು ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಡ್ಯಾನಿಶ್ ಅವರ ಹ್ಯಾಂಡ್ಲರ್ ಆಗಿ ಕಾರ್ಯನಿರ್ವಹಿಸಿದ್ದರು. ಅವರನ್ನು ಐಎಸ್‌ಐ ಕಾರ್ಯಕರ್ತರಿಗೆ ಪರಿಚಯಿಸಿದ್ದರು ಮತ್ತು ಎನ್‌ಕ್ರಿಪ್ಟ್ ಮಾಡಿದ ವೇದಿಕೆಗಳ ಮೂಲಕ ನಿಯಮಿತ ಸಂಪರ್ಕವನ್ನು ಸಾಧಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

“2023 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಅಲಿ ಎಹ್ವಾನ್ ಅವರನ್ನು ಭೇಟಿಯಾಗಿದ್ದೆ, ಅವರು ತನಗೆ ವಾಸ್ತವ್ಯ ಮತ್ತು ಪ್ರಯಾಣದ ವ್ಯವಸ್ಥೆಯನ್ನು ಮಾಡಿದ್ದರು ಎಂದು ಜ್ಯೋತಿ ಬಹಿರಂಗಪಡಿಸಿದ್ದಾರೆ. ಅಲಿ ಜ್ಯೋತಿ ಅವರನ್ನು ಶಕೀರ್ ಮತ್ತು ರಾಣಾ ಶಹಬಾಜ್ ಸೇರಿದಂತೆ ಪಾಕಿಸ್ತಾನಿ ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳಿಗೆ ಎಹ್ವಾನ್ ಪರಿಚಯಿಸಿದ್ದರು” ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಹಿಸಾರ್ ಪೊಲೀಸ್ ವಕ್ತಾರ ವಿಕಾಸ್ ಕುಮಾರ್ ಅವರು ಜ್ಯೋತಿ ಮಲ್ಹೋತ್ರಾ  ಬಂಧನವನ್ನು ದೃಢಪಡಿಸಿದ್ದು, ಹೆಚ್ಚಿನ ಮಾಹಿತಿ ಪಡೆಯಲು ಅಧಿಕಾರಿಗಳು ಜ್ಯೋತಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹೇಳಿದ್ದಾರೆ. ಭಾರತ ಸರ್ಕಾರ ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ ಸಿಬ್ಬಂದಿಯಾಗಿದ್ದ ಡ್ಯಾನಿಶ್ ಅವರನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಿ ಮೇ 13 ರಂದು ಪಾಕಿಸ್ತಾನಕ್ಕೆ ಕಳಿಸಿದೆ.

ಪ್ರತ್ಯೇಕ ಪ್ರಕರಣವೊಂದರಲ್ಲಿ, ಐಎಸ್‌ಐ ಕಾರ್ಯಕರ್ತರಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಕಾರ್ಖಾನೆಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಕೈರಾನಾದ 24 ವರ್ಷದ ಯುವಕ ನೌಮನ್ ಇಲಾಹಿ ಎಂಬಾತನ್ನು ಪಾಣಿಪತ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಸಹೋದರಿ ಜೀನತ್ ಮತ್ತು ಸೋದರ ಮಾವ ಇರ್ಫಾನ್ ಜೊತೆ ಪಾಣಿಪತ್‌ನ ಹಲಿ ಕಾಲೋನಿಯಲ್ಲಿ ವಾಸಿಸುತ್ತಿದ್ದರು.

ಮೇ 12ರಂದು, ಹರಿಯಾಣದ ಕೈಥಾಲ್ ಜಿಲ್ಲೆಯ ಗುಹ್ಲಾ ಪ್ರದೇಶದ 25 ವರ್ಷದ ದೇವೇಂದರ್ ಸಿಂಗ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಕ್ಕಾಗಿ ಬಂಧಿಸಲಾಗಿತ್ತು. ಪಂಜಾಬ್‌ನ ಕಾಲೇಜಿನಿಂದ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಸಿಂಗ್, ಕಳೆದ ವರ್ಷ ಪಾಕಿಸ್ತಾನದ ನಂಕಾನಾ ಸಾಹಿಬ್‌ಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ, ಅವರು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿದ್ದರು. ಭಾರತಕ್ಕೆ ಹಿಂದಿರುಗಿದ ನಂತರವೂ ಅವರ ಜೊತೆ ಸಂಪರ್ಕದಲ್ಲಿದ್ದರು ಎಂದು ಆರೋಪಿಸಲಾಗಿದೆ.

ಪಟಿಯಾಲ ಕಂಟೋನ್ಮೆಂಟ್‌ನ ಫೋಟೋಗಳನ್ನು ಹೊರಗಿನಿಂದ ತೆಗೆದು ಕಳುಹಿಸಿದ್ದಾಗಿ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಟಿಂಡಾ ಕಂಟೋನ್ಮೆಂಟ್‌ನ ಒಳಗಿನ ಅಂಗಡಿಯಲ್ಲಿ ಎರಡು ವರ್ಷಗಳ ಕಾಲ ಟೈಲರ್ ಆಗಿ ಕೆಲಸ ಮಾಡಿದ್ದ ಉತ್ತರಾಖಂಡದ ರೂರ್ಕಿಯ ರಕೀಬ್ ಖಾನ್ ಅವರನ್ನು ಬೇಹುಗಾರಿಕೆ ಆರೋಪದ ಮೇಲೆ ಪಂಜಾಬ್ ಪೊಲೀಸರು ಮೇ 13ರಂದು ಬಂಧಿಸಿದರು. ಕಂಟೋನ್ಮೆಂಟ್ ಅಧಿಕಾರಿಗಳು ಅನುಮಾನಾಸ್ಪದ ಚಟುವಟಿಕೆಯನ್ನು ವರದಿ ಮಾಡಿದ್ದು, ಅವರ ಫೋನ್ ಅನ್ನು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ.

ರಕೀಬ್ ಖಾನ್ ಬಟಿಂಡಾ ಕಂಟೋನ್ಮೆಂಟ್‌ ಪ್ರದೇಶದಲ್ಲಿ ಬೇಹುಗಾರಿಕೆಗೆ ಆರೋಪದಲ್ಲಿ ಬಂಧನಕ್ಕೊಳಗಾದ ಎರಡನೇ ವ್ಯಕ್ತಿಯಾಗಿದ್ದಾರೆ. ಏಪ್ರಿಲ್ 29 ರಂದು, ಬಿಹಾರದ ಸಮಸ್ತಿಪುರದ ಚಮ್ಮಾರ ಸುನಿಲ್ ಕುಮಾರ್ ಅವರನ್ನು ಇದೇ ಪ್ರದೇಶದಲ್ಲಿ ಬಂಧಿಸಲಾಗಿತ್ತು. ಅವರು 2017 ರಿಂದ ಬಟಿಂಡಾ ಕಂಟೋನ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಧೋಬಿಯಾನಾ ಬಸ್ತಿಯಲ್ಲಿ ವಾಸಿಸುತ್ತಿದ್ದರು. ಅವರ ಸಹೋದರ ಮತ್ತು ಚಿಕ್ಕಪ್ಪ ಕೂಡ ಅದೇ ಪ್ರದೇಶದಲ್ಲಿ ಚಮ್ಮಾರರಾಗಿದ್ದಾರೆ. ಪೊಲೀಸರು ಅವರ ಬ್ಯಾಂಕ್ ಮತ್ತು ಆಸ್ತಿ ದಾಖಲೆಗಳನ್ನು ವಿಶ್ಲೇಷಿಸುತ್ತಿದ್ದಾರೆ ಮತ್ತು ಅವರ ಫೋನ್ ವಿಧಿವಿಜ್ಞಾನ ಪರೀಕ್ಷೆಯಲ್ಲಿದೆ.

ಮೇ 11ರಂದು, ದೆಹಲಿಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಗೆ ಸಹಾಯ ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು 31 ವರ್ಷದ ಮಹಿಳೆ ಗುಜಲಾ ಮತ್ತು ಆಕೆಯ ಸಹಚರ ಮಲೇರ್ಕೋಟ್ಲಾದ ಯಮೀನ್ ಮೊಹಮ್ಮದ್ ಎಂಬವರನ್ನು ಬಂಧಿಸಿದ್ದರು. ಈ ಇಬ್ಬರೂ ದೊಡ್ಡ ಬೇಹುಗಾರಿಕೆ ಜಾಲದ ಭಾಗವಾಗಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ.

ಇದಕ್ಕೂ ಮೊದಲು ಮೇ 3ರಂದು, ಸೇನಾ ಕಂಟೋನ್ಮೆಂಟ್‌ಗಳು ಮತ್ತು ವಾಯುನೆಲೆಗಳ ಫೋಟೋಗಳನ್ನು ತೆಗೆದುಕೊಂಡು ಸೂಕ್ಷ್ಮ ವಿವರಗಳನ್ನು ಹಂಚಿಕೊಂಡ ಆರೋಪದ ಮೇಲೆ ಪಾಲಕ್ ಶೇರ್ ಮಸಿಹ್ ಮತ್ತು ಸೂರಜ್ ಮಸಿಹ್ ಎಂಬ ಇಬ್ಬರು ವ್ಯಕ್ತಿಗಳನ್ನು ಅಮೃತಸರದಲ್ಲಿ ಬಂಧಿಸಲಾಗಿತ್ತು. ಅಮೃತಸರ ಕೇಂದ್ರ ಜೈಲಿನಲ್ಲಿರುವ ಹರ್‌ಪ್ರೀತ್ ಸಿಂಗ್ ಅಲಿಯಾಸ್ ಪಿಟ್ಟು ಅಲಿಯಾಸ್ ಹ್ಯಾಪಿ ಮೂಲಕ ಅವರು ಐಎಸ್‌ಐ ಜೊತೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.

ಪೊಲೀಸ್ ಮೂಲಗಳು ಹೇಳುವಂತೆ, ಎಲ್ಲಾ ಒಂಬತ್ತು ವ್ಯಕ್ತಿಗಳು ಐಎಸ್‌ಐ ಜೊತೆ ಆಗಾಗ್ಗೆ ಸಂಪರ್ಕದಲ್ಲಿದ್ದರು ಮತ್ತು ಪಾಕಿಸ್ತಾನಿ ನಿರ್ವಾಹಕರಿಗೆ ಸೂಕ್ಷ್ಮ ಮಾಹಿತಿಯನ್ನು ಸಕ್ರಿಯವಾಗಿ ರವಾನಿಸುತ್ತಿದ್ದರು.

ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...