Homeಮುಖಪುಟಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕನ ಬಂಧನ

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕನ ಬಂಧನ

- Advertisement -
- Advertisement -

ಭಾರತೀಯ ಜನತಾ ಪಕ್ಷದ ಯುವ ವಿಭಾಗದ ಸದಸ್ಯರ ದೂರಿನ ಆಧಾರದ ಮೇಲೆ ಆಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಮತ್ತು ರಾಜಕೀಯ ವಿಜ್ಞಾನಿ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಬಂಧಿಸಲಾಗಿದೆ.

ಹರಿಯಾಣದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯೋಗೇಶ್ ಜಥೇರಿಯವರು ಪ್ರಾಧ್ಯಾಪಕರ ವಿರುದ್ಧ ದೂರು ನೀಡಿದ್ದರು. ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಹಾನಿಕರವಾದ ಕೃತ್ಯಗಳು, ಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳನ್ನು ಪ್ರಚೋದಿಸುವುದು ಮತ್ತು ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ. ಅವರನ್ನು ಗುರಿಯಾಗಿಸಿಕೊಂಡಿರುವುದರ ಬಗ್ಗೆ ಹೆಚ್ಚುತ್ತಿರುವ ಆಕ್ರೋಶದ ಮಧ್ಯೆ ಈ ಬಂಧನವಾಗಿದೆ.

ಹರಿಯಾಣ ಪೊಲೀಸರು ಡಾ. ಅಲಿ ಖಾನ್ ಅವರನ್ನು ಅಕ್ರಮವಾಗಿ ಬಂಧಿಸಿದ್ದಾರೆ. ರಾತ್ರಿ 8 ಗಂಟೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಮರುದಿನ ಬೆಳಿಗ್ಗೆ 7 ಗಂಟೆಗೆ ಪೊಲೀಸರು ಅವರ ಮನೆಗೆ ಬಂದು ಬಂಧಿಸಿಲಾಗಿದೆ ಎಂದು ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಬರಹಗಾರ ಅಪೂರ್ವಾನಂದ್ ಹೇಳುತ್ತಾರೆ.

ಮೇ 8 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮಹ್ಮದಾಬಾದ್ ಅವರು, ಹಿಂದುತ್ವ ವ್ಯಾಖ್ಯಾನಕಾರರು ಕರ್ನಲ್ ಸೋಫಿಯಾ ಖುರೇಷಿಯನ್ನು ಹೊಗಳುತ್ತಿರುವ ಸ್ಪಷ್ಟ ವ್ಯಂಗ್ಯವನ್ನು ಎತ್ತಿ ತೋರಿಸಿದ್ದರು. “ದೇಶದಲ್ಲಿ ನಡೆಯುತ್ತಿರುವ ಗುಂಪು ಹಲ್ಲೆ, ಅನಿಯಂತ್ರಿತ ಬುಲ್ಡೋಜರ್ ಮತ್ತು ಭಾರತೀಯ ಜನತಾ ಪಕ್ಷದ ದ್ವೇಷ ಪ್ರಚಾರದ ಬಲಿಪಶುಗಳಾದ ಇತರರನ್ನು ಭಾರತೀಯ ನಾಗರಿಕರಾಗಿ ರಕ್ಷಿಸಬೇಕೆಂದು ಅಷ್ಟೇ ಗಟ್ಟಿಯಾಗಿ ನಾವು ಅವರನ್ನು ಒತ್ತಾಯಿಸಬಹುದು” ಎಂದು ಶಿಕ್ಷಣ ತಜ್ಞ ಹೇಳಿದ್ದರು.

ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಅನುಸರಿಸಿ, ಹರಿಯಾಣ ರಾಜ್ಯ ಮಹಿಳಾ ಆಯೋಗವು ಮಹ್ಮದಾಬಾದ್ ಅವರ ಕಾಮೆಂಟ್‌ಗಳು “ಭಾರತೀಯ ಸಶಸ್ತ್ರ ಪಡೆಗಳಲ್ಲಿನ ಮಹಿಳಾ ಅಧಿಕಾರಿಗಳನ್ನು ಅವಹೇಳನಕಾರಿಯಾಗಿವೆ ಮತ್ತು ಕೋಮು ಸೌಹಾರ್ದತೆಯನ್ನು ಉತ್ತೇಜಿಸುತ್ತವೆ” ಎಂದು ಹೇಳಿಕೊಂಡಿತ್ತು.

ಮಹ್ಮದಾಬಾದ್ ಅವರು ತನ್ನ ಹೇಳಿಕೆಗಳನ್ನು ಆಯೋಗವು “ಸಂಪೂರ್ಣವಾಗಿ ತಪ್ಪಾಗಿ ಅರ್ಥೈಸಿಕೊಂಡಿದೆ” ಮತ್ತು ತನ್ನ ಪೋಸ್ಟ್‌ಗಳು “ಮಹಿಳೆಯರ ಹಕ್ಕು ಅಥವಾ ಕಾನೂನುಗಳಿಗೆ ವಿರುದ್ಧವಾಗಿವೆ” ಎಂಬುದನ್ನು ಎತ್ತಿ ತೋರಿಸುವಲ್ಲಿ ಅದು ವಿಫಲವಾಗಿದೆ ಎಂದು ಹೇಳಿದ್ದರು.

ರಾಜಕೀಯ ವಿಜ್ಞಾನಿ ಅಲಿ ಖಾನ್ ಮಹಮೂದಾಬಾದ್‌ಗೆ ಬೆಂಬಲ ವ್ಯಕ್ತಪಡಿಸಿ, ಶಿಕ್ಷಣ ತಜ್ಞರು, ರಾಜಕಾರಣಿಗಳು, ನಾಗರಿಕ ಸೇವಕರು ಸೇರಿದಂತೆ ಅನೇಕರು 1,200ಕ್ಕೂ ಹೆಚ್ಚು ಜನರು ಸಹಿ ಮಾಡಿದ ಮುಕ್ತ ಪತ್ರವು ಹರಿಯಾಣ ಮಹಿಳಾ ಆಯೋಗವು ಅವರಿಗೆ ನೀಡಿದ ಸಮನ್ಸ್ ಅನ್ನು ಹಿಂತೆಗೆದುಕೊಳ್ಳಬೇಕು ಮತ್ತು “ಉದ್ದೇಶಪೂರ್ವಕವಾಗಿ ಮತ್ತು ದುರುದ್ದೇಶಪೂರ್ವಕವಾಗಿ ಅವರ ಮೇಲೆ ದೂಷಿಸಿದ್ದಕ್ಕಾಗಿ” ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತು.

ಭಾನುವಾರ ಪ್ರತ್ಯೇಕ ಪೋಸ್ಟ್‌ನಲ್ಲಿ ಅವರು, “ನಾಗರಿಕರು ಯಾವಾಗಲೂ ಯುದ್ಧದ ದುಷ್ಪರಿಣಾಮಗಳಿಗೆ ಒಳಗಾಗುತ್ತಲೆ ಇದ್ದಾರೆ… ಹಾಗಾದರೆ ನೀವು ಯುದ್ಧಕ್ಕಾಗಿ ಕೂಗಾಡಿದಾಗ ಅಥವಾ ಒಂದು ದೇಶವನ್ನು ನಾಶಮಾಡಬೇಕೆಂದು ಕರೆ ನೀಡಿದಾಗ, ನಿಖರವಾಗಿ ನೀವು ಏನು ಕೇಳುತ್ತಿದ್ದೀರಿ? ಇಡೀ ಜನರ ನರಮೇಧಕ್ಕಾಗಿಯೆ?” ಎಂದು ಅವರು ಪ್ರಶ್ನಿಸಿದ್ದರು.

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...