Homeಅಂತರಾಷ್ಟ್ರೀಯಭಾರತಕ್ಕೆ ಸೆಡ್ಡು ಹೊಡೆಯಲು ವಿದೇಶಕ್ಕೆ ರಾಜತಾಂತ್ರಿಕ ನಿಯೋಗ ಕಳುಹಿಸಲು ಮುಂದಾದ ಪಾಕಿಸ್ತಾನ

ಭಾರತಕ್ಕೆ ಸೆಡ್ಡು ಹೊಡೆಯಲು ವಿದೇಶಕ್ಕೆ ರಾಜತಾಂತ್ರಿಕ ನಿಯೋಗ ಕಳುಹಿಸಲು ಮುಂದಾದ ಪಾಕಿಸ್ತಾನ

- Advertisement -
- Advertisement -

ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ನಿಯೋಗವೊಂದನ್ನು ಭಾರತ ಸರ್ಕಾರ ರಚಿಸಿದ ಬೆನ್ನಲ್ಲೆ ಪಾಕಿಸ್ತಾನ ಕೂಡಾ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಾಜತಾಂತ್ರಿಕ ತಂಡವನ್ನು ಕಳುಹಿಸುವುದಾಗಿ ಘೋಷಿಸಿದೆ. ಭಾರತಕ್ಕೆ ಸೆಡ್ಡು ಹೊಡೆಯಲು

ಭಾರತದ ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ವಿಶ್ವದ ಪ್ರಮುಖ ದೇಶಗಳಿಗೆ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ದೇಶದ ನಿಲುವನ್ನು ಮಂಡಿಸಲು ಪ್ರಮುಖ ರಾಷ್ಟ್ರಗಳಿಗೆ ರಾಜತಾಂತ್ರಿಕ ತಂಡವನ್ನು ಕಳುಹಿಸುವುದಾಗಿ ಘೋಷಿಸಿದ್ದಾರೆ.

ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖ್ಯಸ್ಥ ಬಿಲಾವಲ್ ಭುಟ್ಟೋ ಜರ್ದಾರಿ ಅವರೊಂದಿಗೆ ದೂರವಾಣಿ ಸಂಭಾಷಣೆಯ ನಂತರ ಶನಿವಾರ ಪ್ರಧಾನಿ ಶೆಹಬಾಜ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

“ಭಾರತದ ಪ್ರೊಪಗಾಂಡವನ್ನು ಬಹಿರಂಗಪಡಿಸಲು ವಿಶ್ವದ ಪ್ರಮುಖ ರಾಜಧಾನಿಗಳಿಗೆ ಉನ್ನತ ಮಟ್ಟದ ರಾಜತಾಂತ್ರಿಕ ನಿಯೋಗವನ್ನು ಕಳುಹಿಸಲು ಪ್ರಧಾನಿ ಶೆಹಬಾಜ್ ನಿರ್ಧರಿಸಿದ್ದಾರೆ” ಎಂದು ಸರ್ಕಾರಿ ರೇಡಿಯೋ ಪಾಕಿಸ್ತಾನ ವರದಿ ಮಾಡಿದೆ. ಅವರು ನಿಯೋಗದ ನಾಯಕತ್ವವನ್ನು ಬಿಲಾವಲ್ ಅವರಿಗೆ ವಹಿಸಿದ್ದಾರೆ.

“ಇಂದು ಮುಂಜಾನೆ ಪ್ರಧಾನಿ [ಶೆಹಬಾಜ್ ಷರೀಫ್] ನನ್ನನ್ನು ಸಂಪರ್ಕಿಸಿದರು. ಅವರು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಶಾಂತಿಗಾಗಿ ಪಾಕಿಸ್ತಾನದ ವಾದವನ್ನು ಮಂಡಿಸಲು ನಿಯೋಗದ ನೇತೃತ್ವ ವಹಿಸುವಂತೆ ವಿನಂತಿಸಿದರು. ಈ ಜವಾಬ್ದಾರಿಯನ್ನು ಸ್ವೀಕರಿಸಲು ಮತ್ತು ಈ ಸವಾಲಿನ ಸಮಯದಲ್ಲಿ ಪಾಕಿಸ್ತಾನಕ್ಕೆ ಸೇವೆ ಸಲ್ಲಿಸಲು ಬದ್ಧರಾಗಿರಲು ನನಗೆ ಹೆಮ್ಮೆಯಿದೆ” ಎಂದು ಬಿಲಾವಲ್ ಶನಿವಾರ ಎಕ್ಸ್‌ನಲ್ಲಿ ಬರೆದಿದ್ದಾರೆ.

ಬಿಲಾವಲ್ ಜೊತೆಗೆ, ನಿಯೋಗದಲ್ಲಿ ಇಂಧನ ಸಚಿವ ಮುಸಾದಿಕ್ ಮಲಿಕ್, ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ನಾಯಕ ಖುರ್ರಾಮ್ ದಸ್ತಗೀರ್ ಖಾನ್, ಸೆನೆಟರ್ ಶೆರ್ರಿ ರೆಹಮಾನ್, ಮಾಜಿ ವಿದೇಶಾಂಗ ಸಚಿವೆ ಹಿನಾ ರಬ್ಬಾನಿ ಖಾರ್, ಮುತ್ತಹಿದಾ ಕ್ವಾಮಿ ಚಳವಳಿಯ ಶಾಸಕ ಫೈಸಲ್ ಸಬ್ಜ್ವಾರಿ, ಮಾಜಿ ವಿದೇಶಾಂಗ ಕಾರ್ಯದರ್ಶಿ ತೆಹ್ಮಿನಾ ಜಂಜುವಾ ಮತ್ತು ಜಲೀಲ್ ಅಬ್ಬಾಸ್ ಜಿಲಾನಿ ಸೇರಿದ್ದಾರೆ.

ನಿಯೋಗವು “ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಪಾಕಿಸ್ತಾನದ ಪ್ರಾಮಾಣಿಕ ಪ್ರಯತ್ನಗಳನ್ನು ಒತ್ತಿಹೇಳುತ್ತದೆ” ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಇತ್ತೀಚಿನ ಸಂಘರ್ಷದ ಕುರಿತು ಪಾಕಿಸ್ತಾನದ ನಿಲುವನ್ನು ಎತ್ತಿ ತೋರಿಸಲು ನಿಯೋಗವು ಶೀಘ್ರದಲ್ಲೇ ಅಮೆರಿಕ, ಯುಕೆ, ಬೆಲ್ಜಿಯಮ್, ಫ್ರಾನ್ಸ್ ಮತ್ತು ರಷ್ಯಾಕ್ಕೆ ಭೇಟಿ ನೀಡಲಿದೆ ಎಂದು ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಕ್ಕೆ ಪ್ರತಿಯಾಗಿ ಭಾರತವು ಮೇ 7 ರಂದು ಮುಂಜಾನೆ ‘ಆಪರೇಷನ್ ಸಿಂಧೂರ’ ಅಡಿಯಲ್ಲಿ ಭಯೋತ್ಪಾದಕ ಕೇಂದ್ರಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿತ್ತು. ಭಾರತದ ಈ ದಾಳಿಯ ನಂತರ, ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು.

ನಾಲ್ಕು ದಿನಗಳ ತೀವ್ರ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಸಂಘರ್ಷವನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಮೇ 10 ರಂದು ಒಪ್ಪಂದಕ್ಕೆ ಬಂದವು. ಭಾರತಕ್ಕೆ ಸೆಡ್ಡು ಹೊಡೆಯಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತುಮಕೂರು ಮೆಟ್ರೋ ಕಾರ್ಯಸಾಧ್ಯತಾ ಅಧ್ಯಯನ ವರದಿ ಸಲ್ಲಿಸಿದ ಬಿಎಂಆರ್‌ಸಿಎಲ್

ತುಮಕೂರು ಮೆಟ್ರೋ ಕಾರ್ಯಸಾಧ್ಯತಾ ಅಧ್ಯಯನ ವರದಿ ಸಲ್ಲಿಸಿದ ಬಿಎಂಆರ್‌ಸಿಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...