Homeಕರ್ನಾಟಕಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ಕ್ಕೆ ಜನಚಳವಳಿಗಳ ಜನಾಗ್ರಹ ಸಮಾವೇಶ

- Advertisement -
- Advertisement -

ಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮತ್ತು ಸರಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ನಾಳೆ (ಮೇ 20) ಸಂಯುಕ್ತ ಹೋರಾಟ ಕರ್ನಾಟಕವತಿಯಿಂದ  ಬೆಂಗಳೂರಿನ ಗಾಂಧಿ ಭವನದಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ –ಕರ್ನಾಟಕದ ಸಂಯೋಜಕರಾದ ಬಡಗಲಪುರ ನಾಗೇಂದ್ರ ಅವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ, ಸಂವಿಧಾನ ಹಕ್ಕುಗಳ ಖಾತರಿ, ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ, ರೈತರಿಗೆ ಬೆಂಬಲ ಬೆಲೆ ರಕ್ಷಣೆ ಮುಂತಾದ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನೇ ಮುಂದುವರೆಸುತ್ತಿರುವ ರಾಜ್ಯ ಸರ್ಕಾರ, ವಿದ್ಯುತ್‌ ಖಾಸಗೀಕರಣ ಸೇರಿದಂತೆ ಮೋದಿ ಸರ್ಕಾರದ ಜನ ವಿರೋಧಿ ಕಾರ್ಪೊರೇಟ್ ಪರವಾದ ಎಲ್ಲಾ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿದೆ. ಇದನ್ನು ವಿರೋಧಿಸಿ ಈ ಜನಾಗ್ರಹ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಯುವಜನ ಸಂಘಟನೆಗಳ ಪ್ರಮುಖರು ಭಾಗವಹಿಸುತ್ತಿದ್ದು ಹಿಂದಿನ ಬಿಜೆಪಿ ಸರ್ಕಾರದ ಕ್ರಮಗಳನ್ನೇ ಮುಂದುವರೆಸುತ್ತಿರುವ ಔಚಿತ್ಯವನ್ನು ಪ್ರಶ್ನಿಸಿ, ಜನಾಗ್ರಹ ನಿರ್ಣಯಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುತ್ತದೆ.  ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಸರಿಸುತ್ತಿದ್ದ ನೀತಿಗಳನ್ನೇ ಈ ಸರ್ಕಾರ ಕೂಡ ಮುಂದುವರೆಸುತ್ತಿದೆ. ಕಾರ್ಮಿಕರ ದುಡಿಮೆ ಅವಧಿಯನ್ನು 8 ಗಂಟೆಯಿಂದ 12 ಗಂಟೆಯವರೆಗೆ ಹಿಂದಿನ ಸರ್ಕಾರ ಏರಿಕೆ ಮಾಡಿತ್ತು. ಈಗಿನ ಸರ್ಕಾರ ಈ ಕಾರ್ಮಿಕ ವಿರೋಧಿ ಕ್ರಮವನ್ನು ರದ್ದುಪಡಿಸುವ ಬದಲು ಏರಿಕೆಯನ್ನು ನೊಟೀಪಿಕೇಷನ್ ಮಾಡಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಲಕ್ಷಾಂತರ ಬಡ ದಲಿತ ಹಿಂದುಳಿದ ವರ್ಗಗಳ ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕು ಕೋರಿರುವ ಅರ್ಜಿಗಳನ್ನು ಸಕ್ರಮಾತಿ ಸಮಿತಿ ಮುಂದೆ ತರದೇ ತಹಶಿಲ್ದಾರ್ ಹಾಗೂ ಜಿಲ್ಲಾಧಿಕಾರಿ ಗಳ ಹಂತಗಳಲ್ಲೇ ಕಾನೂನುಬಾಹಿರವಾಗಿ ವಜಾಗೊಳಿಸಿ ರಾಜ್ಯದ ಎಲ್ಲಕಡೆ ನಿರ್ದಯವಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಮೂಲಕ ದೌರ್ಜನ್ಯ ಬಳಸಿ ಒಕ್ಕಲೆಬ್ಬಿಸಲಾಗುತ್ತಿದೆ. ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಮನಸೋ ಇಚ್ಚೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳದೇ ಆಹಾರ ಭದ್ರತೆಗೆ ಗಂಭೀರ ಆಪಾಯ ತಂದೊಡ್ಡಿದೆ. ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅನಿರ್ದಿಷ್ಟವಾಗಿ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ರೈತರಿಗೆ ಅಂತಿಮ ಅಧಿಸೂಚನೆ ಹೊರಡಿಸಿ ದೌರ್ಜನ್ಯದ ಮೂಲಕ ಭೂಮಿ ಕಿತ್ತುಕೊಳ್ಳುತ್ತಿದೆ. ಈ ಎಲ್ಲಾ ವಿವರಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮೇಲಿಂದ ಮೇಲೆ ಬಂಡವಾಳ ಹೂಡಿಕೆ ಸಮಾವೇಶಗಳನ್ನು ಏರ್ಪಡಿಸುತ್ತಿರುವುದು ಕೇವಲ ಕೃಷಿ ಭೂಮಿ ಕಬಳಿಕೆಯ ದುರುದ್ದೇಶಕ್ಕಾಗಿ ಮಾತ್ರ. ಈಗಾಗಲೇ ಕೆಐಎಡಿಬಿ ವಶದಲ್ಲಿರುವ ಲಕ್ಷಾಂತರ ಎಕರೆ ಭೂಮಿಯನ್ನು ಸಮರ್ಥವಾಗಿ ಬಳಸದೇ ಮತ್ತೇ ಮತ್ತೇ ಹೊಸ ಹೊಸ ಭೂ ಸ್ವಾಧೀನವನ್ನು ರಿಯಲ್ ಎಸ್ಟೇಟ್  ಹಿತಾಸಕ್ತಿರಕ್ಷಣೆಗಾಗಿ ಮಾಡಲಾಗುತ್ತಿದೆ. ಕೃಷಿ ಮಾರುಕಟ್ಟೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಪರವಾಗಿ ದುರ್ಬಲಗೊಳಿಸಿ ಖಾಸಗಿ ಮಾರುಕಟ್ಟೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಮೂಲಕ ವಿದ್ಯುತ್ ಖಾಸಗೀಕರಣಕ್ಕೆ ಬೆಂಬಲ ನೀಡಲಾಗುತ್ತಿದ್ದು ಕೃಷಿ ಪಂಪಸೆಟ್ ಗಳಿಗೂ ಪ್ರೀ ಪೇಯ್ಡ್ ಮೀಟರ್ ಅಳವಡಿಕೆಯನ್ನು ಒತ್ತಾಯಿಸಲಾಗುತ್ತಿದೆ. ಕಾರ್ಮಿಕ ವಿರೋಧಿ ಲೇಬರ್‌ಕೋಡ್ ಗಳ ಜಾರಿಗೆ ಕ್ರಮ ವಹಿಸುತ್ತಿದ್ದು, ಯಾವುದೇ ಓಟಿ ಸೌಲಭ್ಯ ಇಲ್ಲದೇ ದಿನಕ್ಕೆ 12 ಗಂಟೆ ದುಡಿಸಿಕೊಳ್ಳಲು ಕಾರ್ಖಾನೆಗಳಿಗೆ ಅನುಮತಿ ನೀಡುತ್ತಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರತಿಯೊಂದು ನಾಗರಿಕ ಸೌಲಭ್ಯಗಳನ್ನು ಖಾಸಗೀಕರಿಸಲಾಗುತ್ತಿದ್ದು, ಹತ್ತು ತಿಂಗಳ ಆತಿಥಿ ಶಿಕ್ಷಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವಂತೆ ಆದೇಶ ಹೊರಡಿಸಿದೆ. ದಲಿತರು, ಮಹಿಳೆಯರು, ಮಕ್ಕಳು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿಫಲರಾಗಿರುವುದು ಮಾತ್ರವಲ್ಲ ಕೋಮುವಾದಿ ಹಾಗೂ ಮೂಲಭೂತವಾದಿ ಶಕ್ತಿಗಳ ಉಪಟಳಗಳನ್ನು ಹಿಮ್ಮೆಟ್ಟಿಸಲು ವಿಫಲವಾಗಿದೆ. ಅದೇ ಸಂದರ್ಭದಲ್ಲಿ ಪ್ರಜಾಸತ್ತಾತ್ಮಕ ಚಟುವಟಿಕೆಗಳ ಮೇಲೆ ಹೆಚ್ಚು ಹೆಚ್ಚು ನಿರ್ಬಂಧ ಏರಿಕೆ ಮಾಡಿ ಶಾಂತಿಯುತ ಪ್ರತಿಭಟನೆಗಳ ಮೇಲೂ ಕೂಡ ಕಠಿಣ ಕಾನೂನುಗಳನ್ನು ಅನ್ವಯಿಸಿ ಮೊಕದ್ದಮೆ ದಾಖಲಿಸಲಾಗುತ್ತಿದೆ. ಹೀಗೆ ಪ್ರತಿಯೊಂದು ವಲಯದಲ್ಲೂ ರಾಜ್ಯ ಸರ್ಕಾರದ ಜನ ವಿರೋಧಿ ಕ್ರಮಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಸಂಯುಕ್ತ ಹೋರಾಟ ಕರ್ನಾಟಕವು ಹೇಳಿಕೆಯಲ್ಲಿ ತಿಳಿಸಿದೆ.

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...