Homeಮುಖಪುಟಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಮುಖ್ಯ ಸಂಯೋಜಕರಾಗಿ ಆಕಾಶ್ ಆನಂದ್ ನೇಮಕ

ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಮುಖ್ಯ ಸಂಯೋಜಕರಾಗಿ ಆಕಾಶ್ ಆನಂದ್ ನೇಮಕ

- Advertisement -
- Advertisement -

ದೆಹಲಿಯಲ್ಲಿ ಭಾನುವಾರ ನಡೆದ ಸಭೆಯ ವೇಳೆ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಮುಖ್ಯ ರಾಷ್ಟ್ರೀಯ ಸಂಯೋಜಕರನ್ನಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ನೇಮಿಸಿದ್ದಾರೆ. ಈ ಹಿಂದೆ ಪಕ್ಷದಿಂದ ಹೊರ ಹಾಕಲ್ಪಟ್ಟಿದ್ದ ಆನಂದ್ ಅವರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸಿದ ಒಂದು ತಿಂಗಳ ನಂತರ ಮಾಯಾವತಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಬಿಎಸ್‌ಪಿ ಪಕ್ಷದಲ್ಲಿ ಈ ಹುದ್ದೆಯನ್ನು ಮೊದಲ ಬಾರಿಗೆ ಪರಿಚಯಿಸಲಾಗಿದ್ದು, ಅದಕ್ಕೆ ಆನಂದ್ ಅವರನ್ನು ನೇಮಿಸಲಾಗಿದೆ. ಆನಂದ್ ಅವರು ಮಾರ್ಚ್‌ ವೇಳೆ ಪಕ್ಷದಿಂದ ಹೊರಹಾಕಲ್ಪಡುವ ಮೊದಲು ಇದ್ದ ಹುದ್ದೆಗಿಂತಲೂ ಈ ಹುದ್ದೆ ಉನ್ನತ ಸ್ಥಾನದ್ದಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಹುದ್ದೆಗೆ ಆನಂದ್ ಅವರನ್ನು ನೇಮಿಸುವ ಮೂಲಕ ಪಕ್ಷದ ಎರಡನೇ ಅತ್ಯುನ್ನತ ಸ್ಥಾನದಲ್ಲಿ ಅವರನ್ನು ಇರಿಸಲಾಗಿದೆ ಎಂದು ವರದಿ ಹೇಳಿದೆ. ಈ ಹುದ್ದೆಯು ಪಕ್ಷದ ಮೂರು ರಾಷ್ಟ್ರೀಯ ಸಂಯೋಜಕರಿಗಿಂತ ಮೇಲಿರುತ್ತದೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಈ ಹುದ್ದೆಗೆ ಆನಂದ್ ನೇಮಕವಾದ್ದರಿಂದ ಅವರು ಈಗ ದೇಶಾದ್ಯಂತ ಎಲ್ಲಾ ರಾಜ್ಯ ಘಟಕಗಳಲ್ಲಿ ಪಕ್ಷದ ಕಾರ್ಯತಂತ್ರಗಳನ್ನು ನೋಡಿಕೊಳ್ಳುತ್ತಾರೆ ಮತ್ತು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಬಿಹಾರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಉದ್ದೇಶವನ್ನು ಪಕ್ಷವು ಭಾನುವಾರ ಘೋಷಿಸಿದೆ. “ಬಿಹಾರ ಚುನಾವಣೆಯ ಬಗ್ಗೆ ಪ್ರತ್ಯೇಕ ಚರ್ಚೆ ನಡೆದಿದ್ದು, ಮತ್ತು ಪಕ್ಷವು ತನ್ನ ಎಲ್ಲಾ ಶಕ್ತಿಯನ್ನು ಬಳಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಎದುರಿಸಲು ನಿರ್ಧರಿಸಿತು” ಎಂದು ಪಕ್ಷ ಹೇಳಿದೆ.

ಪಕ್ಷದ ಹೊಸ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಆನಂದ್ ಅವರು ಮಾಯಾವತಿಗೆ ಧನ್ಯವಾದ ಅರ್ಪಿಸಿದ್ದಾರೆ. “ಅವರು ನನ್ನ ತಪ್ಪುಗಳನ್ನು ಕ್ಷಮಿಸಿದ್ದಾರೆ ಮತ್ತು ಬಹುಜನ ಮಿಷನ್ ಮತ್ತು ಚಳುವಳಿಯನ್ನು ಬಲಪಡಿಸುವಲ್ಲಿ ಕೊಡುಗೆ ನೀಡಲು ನನಗೆ ಅವಕಾಶ ನೀಡಿದ್ದಾರೆ” ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

“ಪಕ್ಷ ಮತ್ತು ಚಳುವಳಿಯ ಹಿತಾಸಕ್ತಿಗಾಗಿ ನಾನು ಸಂಪೂರ್ಣ ಭಕ್ತಿಯಿಂದ ಕೆಲಸ ಮಾಡುತ್ತೇನೆ ಮತ್ತು ನಿಮ್ಮನ್ನು ಎಂದಿಗೂ ನಿರಾಶೆಗೊಳಿಸುವುದಿಲ್ಲ ಎಂದು ನಾನು ಬೆಹೆನ್‌ಜಿಗೆ ಭರವಸೆ ನೀಡುತ್ತೇನೆ.” ಎಂದು ಅವರು ತಿಳಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯ ನಂತರ ಆನಂದ್ ಅವರನ್ನು ಆರಂಭದಲ್ಲಿ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿ ನೇಮಿಸಲಾಯಿತು. ಆದಾಗ್ಯೂ, ಪ್ರಚಾರ ಭಾಷಣದ ಸಮಯದಲ್ಲಿ “ದ್ವೇಷವನ್ನು ಉತ್ತೇಜಿಸುವ” ಆರೋಪದ ಮೇಲೆ ಮೇ 2024 ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾದ ನಂತರ ಅವರನ್ನು ಆ ಹುದ್ದೆಯಿಂದ ಮತ್ತು ಮಾಯಾವತಿ ಅವರ ನಿಯೋಜಿತ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಲಾಯಿತು.

ಅದಾಗ್ಯೂ, ಜೂನ್ 2024 ರಲ್ಲಿ ಅವರನ್ನು ಎರಡೂ ಪಾತ್ರಗಳಲ್ಲಿ ಮರುಸ್ಥಾಪಿಸಲಾಗಿತ್ತು. ಆದರೆ ಈ ವರ್ಷದ ಮಾರ್ಚ್‌ನಲ್ಲಿ, ಅವರ ಮಾವ ಅಶೋಕ್ ಸಿದ್ಧಾರ್ಥ್ ಅವರೊಂದಿಗಿನ ಸಂಪರ್ಕದಿಂದಾಗಿ ಅವರನ್ನು ಪಕ್ಷದಿಂದ ಹೊರಹಾಕಲಾಯಿತು ಮತ್ತು ಮತ್ತೊಮ್ಮೆ ರಾಷ್ಟ್ರೀಯ ಸಂಯೋಜಕರ ಸ್ಥಾನದಿಂದ ತೆಗೆದುಹಾಕಲಾಯಿತು.

ಬಹುಜನ ಸಮಾಜ ಪಕ್ಷದ ಕೇಂದ್ರ-ರಾಜ್ಯ ಸಂಯೋಜಕ ನಿತಿನ್ ಸಿಂಗ್ ಅವರೊಂದಿಗೆ ಮಾಜಿ ರಾಜ್ಯಸಭಾ ಸಂಸದ ಸಿದ್ಧಾರ್ಥ್ ಅವರನ್ನು ಫೆಬ್ರವರಿ 12 ರಂದು ಗುಂಪುಗಾರಿಕೆ ಮತ್ತು “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡ ಆರೋಪದ ಮೇಲೆ ಹೊರಹಾಕಲಾಯಿತು.

ಅದಾಗ್ಯೂ, ಏಪ್ರಿಲ್‌ನಲ್ಲಿ ಮಾಯಾವತಿ ಅವರು ಆನಂದ್ ಅವರಿಗೆ “ಮತ್ತೊಂದು ಅವಕಾಶ” ನೀಡಲು ಒಪ್ಪಿಕೊಂಡರು ಮತ್ತು ಅವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಂಡಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...