Homeಮುಖಪುಟಕರ್ನಲ್ ಸೋಫಿಯಾ ಖುರೇಷಿ ಅವಹೇಳನ | ಬಿಜೆಪಿ ಸಚಿವ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್...

ಕರ್ನಲ್ ಸೋಫಿಯಾ ಖುರೇಷಿ ಅವಹೇಳನ | ಬಿಜೆಪಿ ಸಚಿವ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶ

- Advertisement -
- Advertisement -

‘ಆಪರೇಷನ್ ಸಿಂಧೂರ’ ಮಿಲಿಟರಿ ಕಾರ್ಯಾಚರಣೆ ಸಂದರ್ಭದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದ ಬಿಜೆಪಿ ಸಚಿವ ಕುನ್ವರ್ ವಿಜಯ್ ಶಾ ಅವರ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಆದೇಶಿಸಿದೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ನಾಳೆಯೊಳಗೆ ಮಧ್ಯಪ್ರದೇಶ ಕೇಡರ್‌ನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಎಸ್‌ಐಟಿ ರಚಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಆದೇಶಿಸಿದೆ. ಆದಾಗ್ಯೂ, ಐಪಿಎಸ್ ಅಧಿಕಾರಿಗಳು ಮಧ್ಯಪ್ರದೇಶದ ಹೊರಗಿನವರಾಗಿರಬೇಕು ಎಂದು ಅದು ಹೇಳಿದೆ.

“ನಾವು ಮೂವರು ಐಪಿಎಸ್ ಅಧಿಕಾರಿಗಳನ್ನು ಹೊಂದಿರುವ ಎಸ್‌ಐಟಿಯನ್ನು ರಚಿಸುತ್ತಿದ್ದೇವೆ. ಅದರಲ್ಲಿ ಒಬ್ಬರು ಐಜಿ ಅಥವಾ ಡಿಜಿಪಿ ಶ್ರೇಣಿಯವರಾಗಿರಬೇಕು. ಅವರೆಲ್ಲರೂ ರಾಜ್ಯದ ಹೊರಗಿನವರಾಗಿರಬೇಕು. ಇದು ಒಂದು ಅಗ್ನಿ ಪರೀಕ್ಷೆಯಾಗಿದ್ದು, ರಾಜ್ಯವು ಎಸ್‌ಐಟಿ ವರದಿಯನ್ನು ನಮಗೆ ಸಲ್ಲಿಸಬೇಕೆಂದು ನಾವು ಬಯಸುತ್ತೇವೆ. ನಾವು ಇದನ್ನು ಬಹಳ ನಿಕಟವಾಗಿ ಗಮನಿಸಲು ಬಯಸುತ್ತೇವೆ” ಎಂದು ನ್ಯಾಯಾಲಯ ಹೇಳಿದೆ.

ಈ ಮಧ್ಯೆ, ನ್ಯಾಯಾಲಯವು ಸಚಿವ ಶಾ ಅವರ ಬಂಧನವನ್ನು ತಡೆಹಿಡಿದು ತನಿಖೆಗೆ ಸಹಕರಿಸುವಂತೆ ಆದೇಶಿಸಿದೆ. ವಿಚಾರಣೆಯ ಸಮಯದಲ್ಲಿ, ಶಾ ಅವರ ಕ್ಷಮೆಯಾಚನೆಯನ್ನು ಪ್ರಶ್ನಿಸಿದ ನ್ಯಾಯಾಲಯ, ತಮ್ಮ ಮಾತುಗಳಿಗೆ ಕ್ಷಮೆಯಾಚಿಸಲು ಅವರು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ ಎಂದು ಹೇಳಿದೆ. “ಇದು ನೀವು ಸಂಪೂರ್ಣವಾಗಿ ವಿವೇಕಯಿಲ್ಲದೆ ಮಾಡಿದ ಈ ರೀತಿಯ ಅಸಭ್ಯ ಹೇಳಿಕೆಗಳು… ನಮಗೆ ಈ ಕ್ಷಮೆಯಾಚನೆಯ ಅಗತ್ಯವಿಲ್ಲ” ಎಂದು ನ್ಯಾಯಾಲಯವು ಅವರ ಕ್ಷಮೆ ಯಾಚನೆಯನ್ನು ತಿರಸ್ಕರಿಸಿದ್ದು, ಇದು ಪರಿಣಾಮಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಎಂದು ಹೇಳಿದೆ.

ಈ ವಿಷಯದಲ್ಲಿ ಸರ್ಕಾರದ ನಿಷ್ಕ್ರಿಯತೆಯನ್ನು ನ್ಯಾಯಾಲಯವು ಇದೆ ವೇಳೆ ಪ್ರಶ್ನಿಸಿದೆ. “ಎಫ್‌ಐಆರ್ ದಾಖಲಿಸಿದ ನಂತರ ನೀವು ಏನು ಮಾಡಿದ್ದೀರಿ? ಅವರು [SHO] ಯಾವ ರೀತಿಯ ಅಪರಾಧವನ್ನು ಮಾಡಿದ್ದಾರೆಂದು ಪರಿಶೀಲಿಸಿದ್ದಾರೆಯೇ? ಅದರ ಸ್ಥಿತಿ ಏನು” ಎಂದು ಅದು ಕೇಳಿದೆ. ಸರ್ಕಾರವು ಅವರ ವಿರುದ್ಧ ಮತ್ತಷ್ಟು ಕ್ರಮ ಕೈಗೊಳ್ಳಬೇಕಿತ್ತು ನ್ಯಾಯಾಲಯವು ಹೇಳಿದೆ.

ಮಧ್ಯಪ್ರದೇಶ ಹೈಕೋರ್ಟ್ ಮೇ 14 ರಂದು ಸಚಿವ ಶಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣವನ್ನು ಆರಂಭಿಸಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ದೇಶಿಸಿತು. ನಂತರ ಅವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

“ಅವರ ಹೇಳಿಕೆಗಳು ಆ ಅಧಿಕಾರಿಗೆ ಮಾತ್ರವಲ್ಲ, ಸಶಸ್ತ್ರ ಪಡೆಗಳಿಗೂ ಅವಹೇಳನಕಾರಿ ಮತ್ತು ಅಪಾಯಕಾರಿ,” ಎಂದು ಕಳೆದ ವಾರ ಹೈಕೋರ್ಟ್ ಅವರ ಹೇಳಿಕೆಗಳ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿತ್ತು. ಕರ್ನಲ್ ಸೋಫಿಯಾ ಖುರೇಷಿ ಅವರನ್ನು “ಭಯೋತ್ಪಾದಕರ ಸಹೋದರಿ” ಎಂದು ಕರೆದು ಸಚಿವ ಶಾ “ಗಟಾರಗಳ ಭಾಷೆ”ಯನ್ನು ಬಳಸಿದ್ದಾರೆ ಎಂದು ಹೈಕೋರ್ಟ್ ಹೇಳಿತ್ತು.

ಹೈಕೋರ್ಟ್ ಆದೇಶದ ನಂತರ, ಮೇ 14 ರಂದು ತಡರಾತ್ರಿ ಸಚಿವ ಶಾ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152, 196(1)(ಬಿ), ಮತ್ತು 197(1)(ಸಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಯಿತು. ಮೇ 15 ರಂದು, ಆರೋಪಿಗಳ ಕ್ರಮಗಳನ್ನು ಸ್ಪಷ್ಟವಾಗಿ ಉಲ್ಲೇಖಿಸದ ಕಾರಣ ಮುಂದೊಂದು ದಿನ ರದ್ದಾಗಬಹುದಾದ ಗಂಭೀರವಲ್ಲದ ರೀತಿಯಲ್ಲಿ ಎಫ್‌ಐಆರ್ ರಚಿಸಿದ್ದಕ್ಕಾಗಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಇದನ್ನೂಓದಿ:    ಬೆಳಗಾವಿಯಲ್ಲಿ ಕುರಾನ್ ಅಪವಿತ್ರ ಪ್ರಕರಣ: ಸಾವಿರಾರು ಜನರಿಂದ ಶಾಂತಿಯುತ ಪ್ರತಿಭಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...