Homeಮುಖಪುಟಗುಜರಾತ್‌ನಲ್ಲಿ 71 ಕೋಟಿ ರೂ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಗರಣದ ಆರೋಪ: ಬಿಜೆಪಿ ಸಚಿವ...

ಗುಜರಾತ್‌ನಲ್ಲಿ 71 ಕೋಟಿ ರೂ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಗರಣದ ಆರೋಪ: ಬಿಜೆಪಿ ಸಚಿವ ಪುತ್ರನ ಬಂಧನ

- Advertisement -
- Advertisement -

ಅಹಮದಾಬಾದ್: ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ 71 ಕೋಟಿ ರೂ.  ಹಗರಣವು ಗುಜರಾತ್‌ನ ಗ್ರಾಮೀಣಾಭಿವೃದ್ಧಿ ವ್ಯವಸ್ಥೆಯನ್ನು ಅಲುಗಾಡಿಸಿದೆ. ಈ ಸಂಬಂಧ ರಾಜ್ಯ ಪಂಚಾಯತ್ ಮತ್ತು ಕೃಷಿ ಸಚಿವ ಬಚು ಖಬಾದ್ ಅವರ ಪುತ್ರ ಬಲ್ವಂತ್ ಖಬಾದ್ ನನ್ನು ಬಂಧಿಸಲಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಯೋಜನೆಯಲ್ಲಿನ ಭಾರಿ ಅಕ್ರಮಗಳಿಗೆ ಸಂಬಂಧಿಸಿದ ಈ ಹಗರಣವು ದಾಹೋದ್ ಜಿಲ್ಲೆಯ ಧನ್‌ಪುರ ಮತ್ತು ದೇವಗಢ್ ಬರಿಯಾ ತಾಲ್ಲೂಕುಗಳಲ್ಲಿ ಬೆಳಕಿಗೆ ಬಂದಿದೆ.

ಈ ಬಂಧನವನ್ನು ದೃಢಪಡಿಸುತ್ತಾ, ದಾಹೋದ್ ಉಪ ಎಸ್‌ಪಿ ಜಗದೀಶ್ ಭಂಡಾರಿ ಸ್ಥಳೀಯ ಮಾಧ್ಯಮಗಳಿಗೆ ಮಾತನಾಡಿ, “ಧನ್‌ಪುರ ಮತ್ತು ದೇವಗಢ್ ಬರಿಯಾದಲ್ಲಿ ನಡೆದ MGNREGA ಹಗರಣಕ್ಕೆ ಸಂಬಂಧಿಸಿದಂತೆ ಬಲ್ವಂತ್ ಖಬಾದ್ ಮತ್ತು ಅಂದಿನ ತಾಲೂಕು ಅಭಿವೃದ್ಧಿ ಅಧಿಕಾರಿ (TDO) ದರ್ಶನ್ ಪಟೇಲ್ ಅವರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದಿದ್ದಾರೆ. ಏತನ್ಮಧ್ಯೆ, ಸಚಿವರ ಕಿರಿಯ ಪುತ್ರ ಕಿರಣ್ ಖಬಾದ್ ತಲೆಮರೆಸಿಕೊಂಡಿದ್ದಾನೆ. ಬಹುಕೋಟಿ ವಂಚನೆಯ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಗರಣದ ಕೇಂದ್ರ ಬಿಂದು ‘ಕಾಲ್ಪನಿಕ’ ಮೂಲಸೌಕರ್ಯ ಯೋಜನೆಗಳು, ರಸ್ತೆಗಳು, ಕೆರೆಗಳು ಮತ್ತು ಇತರ ಸಾರ್ವಜನಿಕ ಕೆಲಸಗಳ ಸುಸಂಘಟಿತ ಜಾಲಗಳ ನಿರ್ಮಾಣವಾಗಿವೆ. ಈ ಯೋಜನೆಗಳು ಕೇವಲ ಕಾಗದದ ಮೇಲೆ ಮಾತ್ರ ಅಸ್ತಿತ್ವದಲ್ಲಿದ್ದವು. MGNREGA ಅಡಿಯಲ್ಲಿ ಬುಡಕಟ್ಟು ಜನಾಂಗದವರ ಉದ್ಯೋಗಕ್ಕಾಗಿ ಉದ್ದೇಶಿಸಲಾದ ಹಣವನ್ನು ನಕಲಿ ಪ್ರಮಾಣಪತ್ರಗಳು ಮತ್ತು ನಕಲಿ ಇನ್‌ವಾಯ್ಸ್‌ಗಳ ಮೂಲಕ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ, ಹಣವನ್ನು ಸಚಿವರ ಪುತ್ರರಿಗೆ ಸಂಬಂಧಿಸಿದ ಸಂಸ್ಥೆಗಳಿಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ.

ಜಿಲ್ಲಾ ಗ್ರಾಮೀಣಾಭಿವೃದ್ಧಿ ಸಂಸ್ಥೆ (DRDA) ನಿರ್ದೇಶಕ ಬಿ.ಎಂ.ಪಟೇಲ್, ದೇವಗಢ್ ಬರಿಯಾ ಮತ್ತು ಧನ್‌ಪುರ ತಾಲೂಕುಗಳಲ್ಲಿ ಯೋಜನೆಯ ಅನುಷ್ಠಾನದಲ್ಲಿ ಪ್ರಮುಖ ಅಕ್ರಮಗಳನ್ನು ಬಹಿರಂಗಪಡಿಸಿದ ನಂತರ ಹಗರಣ ಬೆಳಕಿಗೆ ಬಂದಿದೆ. ನಂತರದ ಲೆಕ್ಕಪರಿಶೋಧನೆಯು ವಂಚನೆಯನ್ನು ಬಹಿರಂಗಪಡಿಸಿತು. ವಂಚನೆಯ ಹಣವನ್ನು ಬಲವಂತ್ ಮತ್ತು ಕಿರಣ್ ಖಬಾದ್ ನಡೆಸುತ್ತಿರುವ ರಾಜ್ ಕನ್‌ಸ್ಟ್ರಕ್ಷನ್ ಮತ್ತು ರಾಜ್ ಟ್ರೇಡರ್ಸ್ ಸಂಸ್ಥೆಗಳಿಗೆ ವರ್ಗಾಯಿಸಿರುವುದನ್ನು ಪತ್ತೆಹಚ್ಚಲಾಗಿದೆ. ಇಬ್ಬರೂ ಹೆಚ್ಚಿನ ಪುರಾವೆಗಳ ನಡುವೆ ನಿರೀಕ್ಷಣಾ ಜಾಮೀನು ಕೋರಿದ್ದರು.

2021 ಮತ್ತು 2025ರ ನಡುವೆ, ಕುವಾ, ರೆಧಾನಾ ಮತ್ತು ಸಿಮಾಮೊಯಿ ಮುಂತಾದ ಗ್ರಾಮಗಳನ್ನು ಪೂರ್ಣಗೊಂಡ MGNREGA ಯೋಜನೆಗಳ ಫಲಾನುಭವಿಗಳೆಂದು ತಪ್ಪಾಗಿ ಗುರುತಿಸಲಾಯಿತು. ವಾಸ್ತವವಾಗಿ, ಕೆಲಸ ಕಡಿಮೆ ಅಥವಾ ಏನೂ ಇರಲಿಲ್ಲ, ನಕಲಿ ಪೂರ್ಣಗೊಳಿಸುವಿಕೆ ವರದಿಗಳು ಮತ್ತು ಹಣ ವರ್ಗಾವಣೆಯ ಜಾಡು ಮಾತ್ರ ಇತ್ತು. ತನಿಖೆ ವಿಸ್ತಾರವಾಗುತ್ತಿದ್ದಂತೆ, ದೇವಗಢ ಬರಿಯಾದ 28 ಮತ್ತು ಧನಪುರದ ಏಳು ಮಂದಿ ಸೇರಿದಂತೆ 35 ಸಾಮಗ್ರಿ ಪೂರೈಕೆದಾರರು ಸ್ಥಳೀಯ ಅಧಿಕಾರಿಗಳ ಸಹಾಯದಿಂದ ನಕಲಿ ಹಕ್ಕುಗಳನ್ನು ರವಾನಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದರು.

ಹಿರಿಯ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು, ಬಹು ಆಡಳಿತ ಹಂತಗಳಲ್ಲಿ ವಂಚನೆಯು ಉಲ್ಬಣಗೊಳ್ಳಲು ಅವಕಾಶ ಮಾಡಿಕೊಟ್ಟರು. ಇದಕ್ಕೆ ಪ್ರತಿಕ್ರಿಯೆಯಾಗಿ, ಜಿಲ್ಲಾ ಅಭಿವೃದ್ಧಿ ಅಧಿಕಾರಿ (ಡಿಡಿಒ) ನಡೆಯುತ್ತಿರುವ ಎಲ್ಲಾ MGNREGA ಪಾವತಿಗಳನ್ನು ಸ್ಥಗಿತಗೊಳಿಸಿದರು. ಲೆಕ್ಕಪರಿಶೋಧನೆಯು ಕಾಣೆಯಾದ ದಾಖಲೆಗಳು, ಅಸ್ತಿತ್ವದಲ್ಲಿಲ್ಲದ ಕೆಲಸದ ಸ್ಥಳಗಳು ಮತ್ತು ವ್ಯಾಪಕ ದಾಖಲೆಗಳ ನಕಲಿಯನ್ನು ಬಹಿರಂಗಪಡಿಸಿತು.

ಅಂದಾಜು 160 ಕೋಟಿ ರೂ. ವಂಚನೆಯ ಹಕ್ಕುಗಳು ಪರಿಶೀಲನೆಯಲ್ಲಿವೆ. ಈ ಕುರಿತು ಇನ್ನಷ್ಟು ಕೆದಕಲು ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನು ರಚಿಸಲಾಗಿದೆ. ಇಲ್ಲಿಯವರೆಗೆ ದೇವಗಢ ಬರಿಯಾದಲ್ಲಿ 60.90 ಕೋಟಿ ರೂ. ಮತ್ತು ಧನಪುರದಲ್ಲಿ 10.10 ಕೋಟಿ ರೂ. ನಕಲಿ ಬಿಲ್‌ಗಳನ್ನು ಪತ್ತೆಹಚ್ಚಲಾಗಿದೆ. ಹೆಚ್ಚಿನ ತಾಲೂಕುಗಳು ಸ್ಕ್ಯಾನರ್ ಅಡಿಯಲ್ಲಿ ಬರುವುದರಿಂದ ಈ ಸಂಖ್ಯೆಗಳು ಕೇವಲ ಆರಂಭ ಎಂದು ತನಿಖಾಧಿಕಾರಿಗಳು ಅಭಿಪ್ರಾಯಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಅಮಿತ್ ಚಾವ್ಡಾ ಈ ಹಿಂದೆ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಹಗರಣದ ಬಗ್ಗೆ ಎಚ್ಚರಿಸಿದ್ದರು. ಅವರು ವಂಚನೆಯನ್ನು ಸುಮಾರು 250 ಕೋಟಿ ರೂ. ಎಂದು ಅಂದಾಜಿಸಿದ್ದರು. ಸರ್ಕಾರದ ಮೌನವನ್ನು ಟೀಕಿಸಿದ ಚಾವ್ಡಾ, ಖಬಾದ್‌ಗೆ ಸಂಬಂಧಿಸಿದ ಸಂಸ್ಥೆಗಳು ವರ್ಷಗಳಿಂದ ಅನಿಯಂತ್ರಿತ ಪಾವತಿಗಳನ್ನು ಪಡೆದಿವೆ ಎಂದು ಆರೋಪಿಸಿದರು. “ಇದು ಗುಜರಾತ್‌ನ ಬಡವರ ಹಗಲು ದರೋಡೆ” ಎಂದು ಅವರು ಹೇಳಿದರು. ಸಚಿವರ ರಾಜೀನಾಮೆ ಮತ್ತು ರಾಜ್ಯ ಮಟ್ಟದಲ್ಲಿ ತನಿಖೆಗೆ ಒತ್ತಾಯಿಸಿದರು. ಹೆಚ್ಚುತ್ತಿರುವ ಒತ್ತಡದ ಹೊರತಾಗಿಯೂ, ಸಚಿವ ಬಚು ಖಬಾದ್ ಮೌನವಾಗಿದ್ದಾರೆ ಮತ್ತು ಆಡಳಿತಾರೂಢ ಬಿಜೆಪಿ ಯಾವುದೇ ಅಧಿಕೃತ ಪ್ರತಿಕ್ರಿಯೆಯನ್ನು ನೀಡಿಲ್ಲ, ಇದು ವಿರೋಧ ಪಕ್ಷಗಳು ಮತ್ತು ನಾಗರಿಕ ಸಮಾಜದಿಂದ ತೀವ್ರ ಟೀಕೆಗೆ ಗುರಿಯಾಗಿದೆ. ನಿಯಮಿತ ಲೆಕ್ಕಪರಿಶೋಧನೆಯಾಗಿ ಪ್ರಾರಂಭವಾದದ್ದು ಗುಜರಾತ್‌ನ ಅತಿದೊಡ್ಡ ಕಲ್ಯಾಣ ಹಗರಣಗಳಲ್ಲಿ ಒಂದಾಗಿ ಸ್ಫೋಟಗೊಂಡಿದೆ, ಇದು ಬೇರೂರಿರುವ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತದೆ ಮತ್ತು ಸರ್ಕಾರದ ಹೊಣೆಗಾರಿಕೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಕುಸಿಯುವಂತೆ ಮಾಡಿದೆ.

ಪಾಕಿಸ್ತಾನ ಪರ ಬೇಹುಗಾರಿಕೆ | ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಇನ್‌ಸ್ಟಾಗ್ರಾಮ್ ಬ್ಲಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...