Homeಮುಖಪುಟಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಸ್ಥಳವನ್ನು 'ಶಹೀದ್ ಹಿಂದೂ ಪ್ರವಾಸಿ ತಾಣ'ವೆಂದು ಘೋಷಿಸಲು ಕೋರಿ ಪಿಐಎಲ್:...

ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಸ್ಥಳವನ್ನು ‘ಶಹೀದ್ ಹಿಂದೂ ಪ್ರವಾಸಿ ತಾಣ’ವೆಂದು ಘೋಷಿಸಲು ಕೋರಿ ಪಿಐಎಲ್: ತಿರಸ್ಕರಿಸಿದ ಕೋರ್ಟ್

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ 26 ಪ್ರವಾಸಿಗರನ್ನು ‘ಹುತಾತ್ಮರು’ ಮತ್ತು ದಾಳಿ ನಡೆದ ಸ್ಥಳವನ್ನು ‘ಶಹೀದ್ ಹಿಂದೂ ಕಣಿವೆ ಪ್ರವಾಸಿ ತಾಣ’ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ (ಮೇ 20) ತಿರಸ್ಕರಿಸಿದೆ.

ಆಯುಷ್ ಅಹುಜಾ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ಮತ್ತು ನ್ಯಾಯಮೂರ್ತಿ ಸುಮೀತ್ ಗೋಯೆಲ್ ಅವರಿದ್ದ ಪೀಠ ಆದೇಶ ಪ್ರಕಟಿಸಿದೆ ಎಂದು livelaw.in ವರದಿ ಮಾಡಿದೆ.

“ಕಾರ್ಯಾಂಗಕ್ಕೆ ಮಾತ್ರ ಮೀಸಲಾಗಿರುವ ನೀತಿ ನಿರೂಪಣಾ ಕ್ಷೇತ್ರಕ್ಕೆ ನ್ಯಾಯಾಲಯ ಪ್ರವೇಶಿಸುವುದಿಲ್ಲ” ಎಂದು ಹೇಳಿದ ಪೀಠ, ಸೂಕ್ತ ಪ್ರಾಧಿಕಾರದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರಿಗೆ ಸೂಚಿಸಿದೆ ಮತ್ತು 30 ದಿನಗಳ ಒಳಗೆ ಸಲ್ಲಿಸಿದರೆ ಅದನ್ನು ಪರಿಗಣಿಸಲಾಗುತ್ತದೆ” ಎಂದಿದೆ.

ಭಯೋತ್ಪಾದಕ ದಾಳಿಯಲ್ಲಿ ಸತ್ತವರನ್ನು ಹುತಾತ್ಮರೆಂದು ಘೋಷಿಸುವುದು ಸಂವಿಧಾನದ 226 ನೇ ವಿಧಿಯ ಅಡಿಯಲ್ಲಿ ಬರುತ್ತದೆಯೇ? ದಯವಿಟ್ಟು ಒಂದು ಪೂರ್ವನಿದರ್ಶನವನ್ನು ಒದಗಿಸಿ. ಇದು ಆಡಳಿತಾತ್ಮಕ ವಿಷಯ ಮತ್ತು ನೀತಿಯ ಪ್ರಶ್ನೆಯಾಗಿದ್ದು, ಇದನ್ನು ನಿರ್ಧರಿಸಲು ಕಾರ್ಯಾಂಗಕ್ಕೆ ಬಿಡಬೇಕು. ನಾವು ಅದನ್ನು ಮಾಡಬಹುದೇ?” ಎಂದು ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ನಾಗು ಅವರು ಅರ್ಜಿದಾರರನ್ನು ಮೌಖಿಕವಾಗಿ ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಅರ್ಜಿದಾರರಾದ ಅಹುಜಾ, “ಧರ್ಮದ ಹೆಸರಿನಲ್ಲಿ ಭಯೋತ್ಪಾದಕರು ಅಮಾಯಕ ಪ್ರವಾಸಿಗರ ತಲೆಗೆ ಗುಂಡು ಹಾರಿಸಿದ್ದಾರೆ. ಮೃತರು ಅವರನ್ನು ಸೈನಿಕರಂತೆ ಎದುರಿಸಬೇಕಾಯಿತು” ಎಂದಿದ್ದಾರೆ.

ಪಿಐಎಲ್‌ ವಿರೋಧಿಸಿ ಕೇಂದ್ರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಹಾಯಕ ಮಹಾನಿರ್ದೇಶಕ ಸತ್ಯ ಪಾಲ್ ಜೈನ್, “ಅರ್ಜಿದಾರರಿಗೆ ಭಾರತ ಸರ್ಕಾರ ಏನು ಮಾಡುತ್ತಿದೆ ಎಂದು ತಿಳಿದಿಲ್ಲ. ಗೃಹ ಸಚಿವರು ಘಟನೆ ನಡೆದ ದಿನ ಸಂಜೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ನಾವು ಇತರ ರಾಷ್ಟ್ರದೊಂದಿಗೆ ಯುದ್ಧದ ಅಂಚಿನಲ್ಲಿದ್ದೇವೆ. ಹಾಗಾಗಿ, ಇಂತಹ ವಿಷಯಗಳನ್ನು ಚರ್ಚೆ ಮಾಡುವ ಸಮಯ ಇದಲ್ಲ, ನಾವು ಇತರ ವಿಷಯಗಳಿಗೆ ಆದ್ಯತೆ ನೀಡುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಯಾವುದೇ ಸೈನಿಕರು ಸತ್ತರೂ ಸಹ, ಅವರನ್ನು ಪ್ರಶಸ್ತಿಗೆ ಪರಿಗಣಿಸಬೇಕು. ಆದರೆ, ಅದನ್ನು ತಕ್ಷಣವೇ ನೀಡಲಾಗುವುದಿಲ್ಲ. ಸಮಯ ತೆಗೆದುಕೊಳ್ಳುತ್ತದೆ. ಸಾಮಾನ್ಯವಾಗಿ ಕನಿಷ್ಠ ಒಂದು ವರ್ಷ” ಎಂದು ಇದೇ ವೇಳೆ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ಹೇಳಿದ್ದಾರೆ.

ಪಿಐಎಲ್‌ ಸಂಬಂಧ ನ್ಯಾಯಾಲಯ ಮೇ 6 ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಸೌಜನ್ಯ : livelaw.in & barandbench.com

ನ್ಯಾಯಾಂಗ ಸೇವೆಗೆ ಅರ್ಹತೆ ಪಡೆಯಲು ಮೂರು ವರ್ಷಗಳ ವಕೀಲಿಕೆ ಕಡ್ಡಾಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...