Homeಕರ್ನಾಟಕಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಸಾವು ಪ್ರಕರಣ: ಆರೋಪಿ ಪ್ರೊಫೆಸರ್ ಪೊಲೀಸ್‌ ವಶಕ್ಕೆ

ಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಸಾವು ಪ್ರಕರಣ: ಆರೋಪಿ ಪ್ರೊಫೆಸರ್ ಪೊಲೀಸ್‌ ವಶಕ್ಕೆ

- Advertisement -
- Advertisement -

ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿದ್ದ ಧರ್ಮಸ್ಥಳದ ಯುವತಿ ಆಕಾಂಕ್ಷಾ ಎಸ್‌ ನಾಯರ್ ಅನುಮಾನಾಸ್ಪಾದ ಸಾವು ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪಂಜಾಬ್ ಪೊಲೀಸರು, ಕೇರಳ ಮೂಲದ ಪ್ರೊಫೆಸರ್ ಬಿಜಿಲ್ ಸಿ ಮ್ಯಾಥ್ಯೂ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಆರೋಪಿ ಎನ್ನಲಾಗಿರುವ ಪ್ರೊಫೆಸರ್ ಬಿಜಿಲ್ ಸಿ ಮ್ಯಾಥ್ಯೂ ಅವರನ್ನು ಮೇ 19ರಂದು ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಧರ್ಮಸ್ಥಳ ಗ್ರಾಮದ ಬೋಲಿಯಾರ್ ನಿವಾಸಿ 22 ವರ್ಷದ ಆಕಾಂಕ್ಷಾ ಎಸ್‌ ನಾಯರ್ ತನ್ನ ಪದವಿ ಪ್ರಮಾಣಪತ್ರ ಪಡೆಯಲು ಮೇ 16ರಂದು ದೆಹಲಿಯಿಂದ ಪಂಜಾಬ್‌ಗೆ ತೆರಳಿದ್ದರು. ಮೇ 17ರಂದು ಆಕೆ, ಪಂಜಾಬ್‌ನ ಜಲಂಧರ್‌ನ ಫಾಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಹಾಸ್ಟೆಲ್‌ ಕಟ್ಟಡದ ನಾಲ್ಕನೇ ಅಂತಸ್ಥಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

ಆಕಾಂಕ್ಷಾ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮೇ 19ರಂದು ಮಧ್ಯಾಹ್ನದ ಬಳಿಕ ನಡೆಸಲಾಗಿದೆ. ನಂತರ ಸರ್ಕಾರಿ ಆಸ್ಪತ್ರೆಯು ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದೆ.

ಮೇ 20 ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಆಂಬ್ಯುಲೆನ್ಸ್ ಮೂಲಕ ಮೃತದೇಹವನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಸಾಗಿಸಲಾಗಿದೆ. ಅಲ್ಲಿಂದ ಬೆಂಗಳೂರಿಗೆ ಮೃತದೇಹ ತರಲು ಆಕಾಂಕ್ಷಾ ಕೆಲಸ ಮಾಡುತ್ತಿದ್ದ ಕಂಪನಿಯು ಉಚಿತ ವಿಮಾನದ ವ್ಯವಸ್ಥೆ ಮಾಡಿದೆ.

ಮೇ 20ರಂದು ರಾತ್ರಿ 8 ಗಂಟೆಗೆ ದೆಹಲಿಯಿಂದ ಹೊರಡುವ ಸ್ಪೈಸ್ ಜೆಟ್ ವಿಮಾನದ ಮೂಲಕ ಮೃತದೇಹವನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗುತ್ತದೆ. ರಾತ್ರಿ 11 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣ ತಲುಪುವ ಸಾಧ್ಯತೆ ಇದೆ.

ಅಲ್ಲಿಂದ ಆಂಬ್ಯುಲೆನ್ಸ್ ಮೂಲಕ ಧರ್ಮಸ್ಥಳದ ಬೋಲಿಯಾರ್‌ನಲ್ಲಿರುವ ಮನೆಗೆ ಮೃತದೇಹ ಕೊಂಡೊಯ್ದು, ಮೇ 21ರ ಬೆಳಿಗ್ಗೆ ಅಂತ್ಯ ಸಂಸ್ಕಾರ ನೆರವೇರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

“ನನ್ನ ಮಗಳು ಧೈರ್ಯವಂತೆ, ಆತ್ಮಹತ್ಯೆ ಮಾಡಿಕೊಳ್ಳುವಂಥವಳಲ್ಲ”

“ನನ್ನ ಮಗಳು ಧೈರ್ಯವಂತೆ, ಆತ್ಮಹತ್ಯೆ ಮಾಡಿಕೊಳ್ಳುವಂಥವಳಲ್ಲ ಎಂದು ಸಾವಿಗೀಡಾದ ಆಕಾಂಕ್ಷಾ ಅವರ ತಾಯಿ ಸುದ್ದಿ ಸಂಸ್ಥೆ ವಾರ್ತಾಭಾರತಿ ಜೊತೆ ಮಾತನಾಡುವಾಗ ಹೇಳಿದ್ದಾರೆ.

ಆಕಾಂಕ್ಷಾಗೆ ವಿವಾಹಿತ ಅಧ್ಯಾಪಕರೊಬ್ಬರ ಜೊತೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ನನಗನಿಸುವಂತೆ ಅಧ್ಯಾಪಕರೇ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಿ, ಅವರ ರೂಮ್‌ಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಏನೋ ಅಚಾತುರ್ಯ ನಡೆದಿದೆ. ಹಾಗಾಗಿ ನನ್ನ ಮಗಳು ಈ ರೀತಿ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...