Homeಕರ್ನಾಟಕಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಸಾವು ಪ್ರಕರಣ: ಆರೋಪಿ ಪ್ರೊಫೆಸರ್ ಪೊಲೀಸ್‌ ವಶಕ್ಕೆ

ಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಸಾವು ಪ್ರಕರಣ: ಆರೋಪಿ ಪ್ರೊಫೆಸರ್ ಪೊಲೀಸ್‌ ವಶಕ್ಕೆ

- Advertisement -
- Advertisement -

ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿದ್ದ ಧರ್ಮಸ್ಥಳದ ಯುವತಿ ಆಕಾಂಕ್ಷಾ ಎಸ್‌ ನಾಯರ್ ಅನುಮಾನಾಸ್ಪಾದ ಸಾವು ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪಂಜಾಬ್ ಪೊಲೀಸರು, ಕೇರಳ ಮೂಲದ ಪ್ರೊಫೆಸರ್ ಬಿಜಿಲ್ ಸಿ ಮ್ಯಾಥ್ಯೂ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಆರೋಪಿ ಎನ್ನಲಾಗಿರುವ ಪ್ರೊಫೆಸರ್ ಬಿಜಿಲ್ ಸಿ ಮ್ಯಾಥ್ಯೂ ಅವರನ್ನು ಮೇ 19ರಂದು ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಧರ್ಮಸ್ಥಳ ಗ್ರಾಮದ ಬೋಲಿಯಾರ್ ನಿವಾಸಿ 22 ವರ್ಷದ ಆಕಾಂಕ್ಷಾ ಎಸ್‌ ನಾಯರ್ ತನ್ನ ಪದವಿ ಪ್ರಮಾಣಪತ್ರ ಪಡೆಯಲು ಮೇ 16ರಂದು ದೆಹಲಿಯಿಂದ ಪಂಜಾಬ್‌ಗೆ ತೆರಳಿದ್ದರು. ಮೇ 17ರಂದು ಆಕೆ, ಪಂಜಾಬ್‌ನ ಜಲಂಧರ್‌ನ ಫಾಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಹಾಸ್ಟೆಲ್‌ ಕಟ್ಟಡದ ನಾಲ್ಕನೇ ಅಂತಸ್ಥಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

ಆಕಾಂಕ್ಷಾ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮೇ 19ರಂದು ಮಧ್ಯಾಹ್ನದ ಬಳಿಕ ನಡೆಸಲಾಗಿದೆ. ನಂತರ ಸರ್ಕಾರಿ ಆಸ್ಪತ್ರೆಯು ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದೆ.

ಮೇ 20 ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಆಂಬ್ಯುಲೆನ್ಸ್ ಮೂಲಕ ಮೃತದೇಹವನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಸಾಗಿಸಲಾಗಿದೆ. ಅಲ್ಲಿಂದ ಬೆಂಗಳೂರಿಗೆ ಮೃತದೇಹ ತರಲು ಆಕಾಂಕ್ಷಾ ಕೆಲಸ ಮಾಡುತ್ತಿದ್ದ ಕಂಪನಿಯು ಉಚಿತ ವಿಮಾನದ ವ್ಯವಸ್ಥೆ ಮಾಡಿದೆ.

ಮೇ 20ರಂದು ರಾತ್ರಿ 8 ಗಂಟೆಗೆ ದೆಹಲಿಯಿಂದ ಹೊರಡುವ ಸ್ಪೈಸ್ ಜೆಟ್ ವಿಮಾನದ ಮೂಲಕ ಮೃತದೇಹವನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗುತ್ತದೆ. ರಾತ್ರಿ 11 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣ ತಲುಪುವ ಸಾಧ್ಯತೆ ಇದೆ.

ಅಲ್ಲಿಂದ ಆಂಬ್ಯುಲೆನ್ಸ್ ಮೂಲಕ ಧರ್ಮಸ್ಥಳದ ಬೋಲಿಯಾರ್‌ನಲ್ಲಿರುವ ಮನೆಗೆ ಮೃತದೇಹ ಕೊಂಡೊಯ್ದು, ಮೇ 21ರ ಬೆಳಿಗ್ಗೆ ಅಂತ್ಯ ಸಂಸ್ಕಾರ ನೆರವೇರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

“ನನ್ನ ಮಗಳು ಧೈರ್ಯವಂತೆ, ಆತ್ಮಹತ್ಯೆ ಮಾಡಿಕೊಳ್ಳುವಂಥವಳಲ್ಲ”

“ನನ್ನ ಮಗಳು ಧೈರ್ಯವಂತೆ, ಆತ್ಮಹತ್ಯೆ ಮಾಡಿಕೊಳ್ಳುವಂಥವಳಲ್ಲ ಎಂದು ಸಾವಿಗೀಡಾದ ಆಕಾಂಕ್ಷಾ ಅವರ ತಾಯಿ ಸುದ್ದಿ ಸಂಸ್ಥೆ ವಾರ್ತಾಭಾರತಿ ಜೊತೆ ಮಾತನಾಡುವಾಗ ಹೇಳಿದ್ದಾರೆ.

ಆಕಾಂಕ್ಷಾಗೆ ವಿವಾಹಿತ ಅಧ್ಯಾಪಕರೊಬ್ಬರ ಜೊತೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ನನಗನಿಸುವಂತೆ ಅಧ್ಯಾಪಕರೇ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಿ, ಅವರ ರೂಮ್‌ಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಏನೋ ಅಚಾತುರ್ಯ ನಡೆದಿದೆ. ಹಾಗಾಗಿ ನನ್ನ ಮಗಳು ಈ ರೀತಿ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...