Homeಕರ್ನಾಟಕಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

- Advertisement -
- Advertisement -

ಯಾವ ಸರ್ಕಾರ ಜನಪರ, ಸಮಾಜವಾದಿ ಸರ್ಕಾರ ಎಂದು ಭಾವಿಸಿದ್ದೆವೊ, ಅದೇ ಸರ್ಕಾರವೆ ಎಲ್ಲಾ ಜನವಿರೋಧಿ ನೀತಿಯನ್ನು ತಂದು ಜನ ಚಳವಳಿಯನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನ ಮಾಡುತ್ತಿದ್ದು, ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ ಎಂದು 1142 ದಿನಗಳಿಂದ ನಿರಂತರ ಹೋರಾಟ ಮಾಡುತ್ತಿರುವ ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರ ಕಾರಹಳ್ಳಿ ಶ್ರೀನಿವಾಸ್ ಹೇಳುತ್ತಾ ಕಣ್ಣೀರಾಗಿದ್ದಾರೆ.

ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ.

ಸಮಾವೇಶ ಉದ್ಘಾಟಿಸಿ ಮಾತನಾಡಿದ ಕಾರಹಳ್ಳಿ ಶ್ರೀನಿವಾಸ್, ಈ ಸಮಾವೇಶಕ್ಕೆ ಭಾಗವಸಿದ್ದಕ್ಕೆ ಸಂತೋಷ ಮತ್ತು ಸಂಕಟದ ಅನುಭವಾಗುತ್ತಿದೆ. ಯಾವ ಸರ್ಕಾರ ಜನಪರ ಸರ್ಕಾರ, ಸಮಾಜವಾದಿ ಸರ್ಕಾರ ಎಂದು ಭಾವಿದ್ದೆವೊ, ಅದೇ ಸರ್ಕಾರ ಎಲ್ಲಾ ಜನವಿರೋಧಿ ನೀತಿಯನ್ನು ತಂದು ಜನ ಚಳವಳಿಯನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.

ಚನ್ನರಾಯಪಟ್ಟಣ ಹೋರಾಟದ ಬಗ್ಗೆ ಮಾತನಾಡಿದ ಅವರು, 2022ರ ಎಪ್ರಿಲ್ 4ರಂದು ಹೋರಾಟ ಪ್ರಾರಂಭವಾಗಿ ಇಂದಿಗೆ 1000ಕ್ಕೂ ಹೆಚ್ಚು ದಿನಗಳು ಕಳೆದಿವೆ. ಇವತ್ತಿಗೂ ಹೋರಾಟ ಸುದೀರ್ಘವಾಗಿ ನಡೆಯುತ್ತಿದೆ. ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದು, ಇವತ್ತಿಗೂ ಕೇಸ್‌ಗಳನ್ನು ಮೈಗೆಳೆದುಕೊಂಡು ರೈತರು ಹೋರಾಟ ನಡೆಸುತ್ತಿದ್ದಾರೆ” ಎಂದು ಹೇಳಿದರು.

“ಸ್ವತಃ ಸಿದ್ದರಾಮಯ್ಯ ಅವರು ವಿಪಕ್ಷದಲ್ಲಿದ್ದಾಗ ನಾವು ಅಧಿಕಾರಕ್ಕೆ ಬಂದರೆ ಭೂ ಸ್ವಾಧೀನ ಪ್ರಕ್ರಿಯೆ ರದ್ದು ಮಾಡುವುದಾಗಿ ಹೇಳಿದ್ದರು. ಆದರೆ ಈಗ ಸಿದ್ದರಾಮಯ್ಯ ಅವರು ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾ, ನೀಡಿದ್ದ ಮಾತು ಮರೆತಿದೆ. ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ” ಎಂದು ರೈತ ಹೋರಾಟಗಾರ ಶ್ರಿನಿವಾಸ್ ಅವರು ಕಣ್ಣೀರಾದರು.

ದೆಹಲಿ ಮಾದರಿ ಹೋರಾಟಗಳು ನಮಗೆ ಸ್ಪೂರ್ತಿಯಾಗಿದ್ದು ನಿಜವೇ ಆದರೂ, ನಮ್ಮದೇ ನೆಲದ ಹೋರಾಟವನ್ನು ನಗಣ್ಯ ಮಾಡುವುದು ಸರಿಯಲ್ಲ. ಕರ್ನಾಟಕದ ಈ ಹೋರಾಟಕ್ಕೆ ನಿಮ್ಮ ಶಕ್ತಿ ಬೇಕಿದೆ ಎಂದು ರಾಜ್ಯದ ಸಂಘಟನೆಗಳಿಗೆ ಶ್ರೀನಿವಾಸ್ ಅವರು ವಿನಂತಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...