Homeಕರ್ನಾಟಕಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ...

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ

- Advertisement -
- Advertisement -

ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೇಂದ್ರದ ಬಿಜೆಪಿಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದು, ಇದಕ್ಕೆ ನೇರ ಕಾರಣ ಡಿಕೆ ಶಿವಕುಮಾರ್, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ವೆಂಕಟಾಚಲಯ್ಯ ಮಂಗಳವಾರ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ಸಮಾವೇಶದಲ್ಲಿ ಮಾತನಾಡಿದ ವೆಂಕಟಾಚಲಯ್ಯ ಅವರು, “ಕೋಮುವಾದಿಗಳು ಮನೆಗೆ ಹೋಗಬೇಕು ಎಂದು ಜನರು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ರಾಜ್ಯದ ಈಗಿನ ಸ್ಥಿತಿ ನೋಡಿದರೆ ಈಗ ಬಿಜೆಪಿಗೂ ಕಾಂಗ್ರೆಸ್‌ಗೂ ವ್ಯತ್ಯಾಸ ಕಾಣುತ್ತಿಲ್ಲ. ರೈತ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ರಾಜ್ಯ ಕಾಂಗ್ರೆಸ್ ಕೇಂದ್ರದ ಬಿಜೆಪಿಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿವೆ” ಎಂದು ಅವರು ಹೇಳಿದ್ದಾರೆ.

ರೈತರ ಭೂಮಿ ಕಿತ್ತಿಕೊಳ್ಳಲು ನೇರ ಕಾರಣ ಡಿಕೆ ಶಿವಕುಮಾರ್ ಆಗಿದ್ದು, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ ಎಂದು ಅವರು ಆರೋಪಿಸಿದ್ದಾರೆ.

“ಒಂದು ಕುಟುಂಬಕ್ಕೆ 58 ಎಕರೆ ಭೂಮಿ ಇರಬೇಕು ಎಂಬ ಕಾನೂನಿತ್ತು. ಆದರೆ ಅದಕ್ಕೆ ತಿದ್ದುಪಡಿ ತಂದಿದ್ದು ದೇವೇಗೌಡರರು. ನೈಸ್ ಕಂಪನಿ ಬಳಿ ಅಧೀಕೃತ ಮತ್ತು ಅನಧೀಕೃತವಾಗಿ ಲಕ್ಷ ಎಕರೆಗಿಂತಲೂ ಹೆಚ್ಚಿನ ಭೂಮಿಯಿದೆ. ರೈತರ ಭೂಮಿಯನ್ನು ಕಿತ್ತು ಎಲ್ಲಾ ರಿಯಲ್ ಎಸ್ಟೇಟ್‌ ಏಜೆಂಟ್‌ಗಳಿಗೆ, ಮಠಾಧೀಶರಿಗೆ, ವಿದೇಶಿ ಕಂಪನಿಗಳಿಗೆ ನೀಡಲಾಗುತ್ತಿದೆ. ನಾವು ಯಾರು ಅಭಿವೃದ್ಧಿಯ ವಿರೋಧಿಗಳು ಅಲ್ಲ. ಆದರೆ ಈ ಅಭಿವೃದ್ಧಿ ಯಾರಿಗಾಗಿ ಮಾಡುತ್ತಿದ್ದಾರೆ ಎಂದು ಗಮನಿಸಬೇಕಾಗುತ್ತದೆ‌. ಬೆಂಗಳೂರು ಸುತ್ತಮುತ್ತಲಿನ ರೈತರು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಜನವಾದಿ ಮಹಿಳಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಬಿಡದಿಯಲ್ಲಿ ನಡೆದ ಅಲೆಮಾರಿ ಸಮುದಾಯದ ಬಾಲಕಿಯ ಅತ್ಯಾಚಾರವನ್ನು ಖಂಡಿಸಿದರು. “ಒಂದು ಕಡೆಗೆ ಘಟನಾ ಸ್ಥಳಕ್ಕೆ ತೆರಳಿದ ಜನಪರ ಸಂಘಟನೆಗಳೊಂದಿಗೆ ಪೊಲೀಸರು ದರ್ಪದಿಂದ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಆರೆಸ್ಸೆಸ್ ಮತ್ತು ಬಿಜೆಪಿ ಅವರು ಈ ಘಟನೆಯನ್ನು ಇಟ್ಟು ಕೋಮುಗಲಭೆ ಎಬ್ಬಿಸಲು ಪ್ರಯತ್ನ ಮಾಡುತ್ತಿದ್ದಾರೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ, ಕೇಂದ್ರ, ಬಿಜೆಪಿ,ಕಾಂಗ್ರೆಸ್‌ ಸರ್ಕಾರ, ರೈತರ ಭೂಮಿ, ಡಿ.ಕೆ. ಶಿವಕುಮಾರ್, ರೈತ ಮುಖಂಡ ವೆಂಕಟಾಚಲಯ್ಯ, Center, BJP, Congress government, farmers' land, D.K. Shivakumar, farmer leader Venkatachaliah,
ಚಿತ್ರ ಕೃಪೆ: ಹೆಚ್‌.ಆರ್. ನವೀನ್ ಕುಮಾರ್

 

ಬೆಂಗಳೂರಿನಂತಹ ಮಹಾನಗರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುವುದು ಸಾಮಾನ್ಯ ಎಂದು ರಾಜ್ಯದ ಗೃಹ ಮಂತ್ರಿಯೆ ಹೇಳಿದ್ದರು. ಜನರ ಆಕ್ರೋಶದ ನಂತರ ಅದನ್ನು ವಾಪಾಸು ಪಡೆದರು, ಈ ಸರ್ಕಾರರಲ್ಲಿ ಎಲ್ಲವೂ ಸರಿಯಿಲ್ಲ ಎಂದು ದೇವಿ ಅವರು ಹೇಳಿದ್ದಾರೆ.

“ಗ್ಯಾರೆಂಟಿ ಹೆಸರಿನಲ್ಲಿ ಮಹಿಳೆಗೆ ಏನೂ ಬೇಕಾಗಿಲ್ಲ ಎಂಬಂತೆ ಸರ್ಕಾರ ಬಿಂಬಿಸುತ್ತಿದೆ. ಬೆಂಗಳೂರಿಗೆ ವಲಸೆ ಬಂದ ರೈತ ಮಹಿಳೆಯರು ಕಾರ್ಪೋರೇಟ್‌ ಕಂಪೆನಿಗಳ ಬಾಗಿಲು ಕಾಯುತ್ತಾ, ಅವರ ಮನೆ ಕ್ಲೀನ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಕಾರ್ಪೋರೇಟ್‌ಗಳಿಗೆ ರತ್ನಗಂಬಳಿ ಹಾಸಿ ಭೂಮಿ ಕೊಡುವ ಸರ್ಕಾರ, ಬಡವರಿಗೆ ಮತ್ತು ನಿವೇಶನ ಇಲ್ಲದವರಿಗೆ ಸರ್ಕಾರ ನಿವೇಶನ ನೀಡದೆ ಕಾಡಿಸುತ್ತಿದೆ. ವಿಧವೆಯರಿಗೆ ಮೂರಂಕಿಯ ಸಹಾಯಧನವನ್ನು ನೀಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಐಸಿಸಿಟಿಯು ರಾಜ್ಯಾಧ್ಯಕ್ಷ ಪಿಪಿ ಅಪ್ಪಣ್ಣ ಮಾತನಾಡಿ, “ಕಾರ್ಮಿಕರು, ರೈತರು ಅನುಭವಿಸುತ್ತಿರುವ ಸಂಕಷ್ಟಗಳನ್ನು ನೋಡುತ್ತಿದ್ದರೆ ಯಾರಿಗೂ ಇಲ್ಲಿ ರಕ್ಷಣೆಯಿಲ್ಲ ಎಂಬಂತಾಗಿದೆ. ಪಾಕಿಸ್ತಾನ ಮತ್ತು ಭಾರತದ ಸಂಘರ್ಷವನ್ನು ಮೋದಿ ನಿಲ್ಲಿಸಿದರೆ ಅಥವಾ ಟ್ರಂಪ್ ನಿಲ್ಲಿಸಿದರೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಯುದ್ದ ನಿಲ್ಲಿಸಿದ್ದು, ಅಮೆರಿಕದ ಬ್ಯಾಂಕ್‌ಗಳು ಆಗಿವೆ. ಅದಕ್ಕಾಗಿ ಹಣ ಸುರಿದಿದ್ದು ಕೂಡಾ ಅವರೇ ಆಗಿದ್ದಾರೆ.” ಎಂದು ಹೇಳಿದ್ದಾರೆ.

ಕರ್ನಾಟಕ ರೈತ ಸಂಘ (ಎಐಯುಕೆಎಸ್) ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ್ ಮಾತನಾಡಿ, “ಕಾಂಗ್ರೆಸ್‌ಗೆ ಈ ಹಿಂದೆ ಬೆಂಬಲ ನೀಡಿದ್ದು, ದೊಡ್ಡ ಶತ್ರುವನ್ನು ಮಣಿಸಲು ಸಣ್ಣ ಶತ್ರುವನ್ನು ಮುಂದೆ ತಳ್ಳಿದಂತೆ ಅಷ್ಟೆ. ಕಾಂಗ್ರೆಸ್‌ನ ಜನವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳ ಕಾರಣಕ್ಕೆ ದೇಶದಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿವೆ. ಇಂಡಿಯಾ ಮೈತ್ರಿ ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ವರದಿ ಜಾರಿಗೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಹಾಗಾದರೆ ಜಾರ್ಖಂಡ್ ಮತ್ತು ಕರ್ನಾಟಕದಲ್ಲಿ ಅದನ್ನು ಜಾರಿ ಮಾಡಬಹುದು ಅಲ್ಲವೇ?” ಎಂದು ಹೇಳಿದ್ದರೆ.

ಕೇಂದ್ರ ಜಾರಿ ಮಾಡಿದ್ದ ರೈತ ವಿರೋಧಿ ಕಾಯ್ದೆ ರಚನೆ ಮಾಡಿದ್ದ ತಂಡದಲ್ಲಿ ಇದ್ದವರೇ ರಾಜ್ಯ ಬೆಲೆ ಆಯೋಗದ ಅಧ್ಯಕ್ಷ ಆಗಿದ್ದಾರೆ. ಅವರನ್ನು ಕಿತ್ತೊಗೆಯಲು ನಾವು ಹೋರಾಟ ಮಾಡಬೇಕಿದೆ ಎಂದು ಬೇಸರ ತೋಡಿಕೊಂಡಿದ್ದಾರೆ.

ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ಮಾತನಾಡಿ, ನಾವು ಹಿಂದೆ ಕೂಡಾ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದೆವು.‌ ಈಗಲೂ ಅದನ್ನೇ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಅಲ್ಪ ಸಾಧನೆಯನ್ನು ದೊಡ್ಡ ಸಾಧನೆ ಎಂಬಂತೆ ಬಿಂಬಿಸಲಾಗುತ್ತಿದೆ. ಬಗರ್ ಹುಂಕುಂ ಸಾಗುವಳಿದಾರರಿಗೆ ಭೂಮಿ ಒಡೆತನ ಸಿಕ್ಕಿಲ್ಲ, ನಿವೇಶನ ರಹಿತರಿಗೆ ನಿವೇಶನ, ಮನೆ ಇಲ್ಲದವರಿಗೆ ಮನೆ ನೀಡಿ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಪ್ರಚಾರ ಮಾಡಲಿ. ನಾವು ಕರ್ನಾಟಕ ಸರ್ಕಾರದ ಬಾಲ ಅಲ್ಲ ಎಂದು ಹೇಳಿದ್ದಾರೆ.

ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ಕಾಂಗ್ರೆಸ್ ಮತ್ತು ಬಿಜೆಪಿಯ ಮೂಲ ಸಿದ್ಧಾಂತವೆ ಶ್ರೀಮಂತರ ಓಲೈಕೆ ಆಗಿದೆ. ಅದು ಗೊತ್ತಿದ್ದೂ ಕಾಂಗ್ರೆಸ್ ಬೆಂಬಲಿಸಿದ್ದು ಬಿಜೆಪಿಯ ಕೋಮು ಕಾರಣಕ್ಕಾಗಿ ಮಾತ್ರ ಎಂದು ಹೇಳಿದ್ದಾರೆ. ಅದಾಗ್ಯೂ, ಕಾಂಗ್ರೆಸ್ ಮೇಲೆ ನಮಗೆ ಅಂದೂ ಕೂಡಾ ಅಥವಾ ಇಂದೂ ಕೂಡ ಅಂತಹ ಭರವಸೆ ಇಲ್ಲ ಎಂದು ಹೇಳಿದರು.

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ, ಕೇಂದ್ರ, ಬಿಜೆಪಿ,ಕಾಂಗ್ರೆಸ್‌ ಸರ್ಕಾರ, ರೈತರ ಭೂಮಿ, ಡಿ.ಕೆ. ಶಿವಕುಮಾರ್, ರೈತ ಮುಖಂಡ ವೆಂಕಟಾಚಲಯ್ಯ, Center, BJP, Congress government, farmers' land, D.K. Shivakumar, farmer leader Venkatachaliah,
ಚಿತ್ರ ಕೃಪೆ: ಹೆಚ್‌.ಆರ್. ನವೀನ್ ಕುಮಾರ್

“ರಾಜ್ಯದಲ್ಲಿ 116 ಕೊಮುಗಲಭೆಳು ನಡೆದಿವೆ. ಅದರ ಬಗ್ಗೆ ರಾಜ್ಯ ಸರ್ಕಾರಕ್ಕೆ ಸರಿಯಾದ ನಿಲುವು ಇಲ್ಲ. ಕೋಮು ಸೌಹಾರ್ದತೆ ಹಾಳು ಮಾಡುವ ಮಠಾಧೀಶರ ಕಾಲಿಗೆ ಸರ್ಕಾರ ಬೀಳುತ್ತಿದೆ. ಈ ಸರ್ಕಾರದಿಂದ ಸಕಾರಾತ್ಮಕ ವಿಚಾರಕ್ಕಿಂತ ನಕಾರಾತ್ಮಕ ವಿಚಾರಗಳೆ ನಮಗೆ ಹೆಚ್ಚಾಗಿ ಕಾಣುತ್ತಿವೆ. ರಾಜ್ಯ ಸರ್ಕಾರ ಈ ಎರಡು ವರ್ಷಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಯಾವುದೇ ವ್ಯತ್ಯಾಸ ಇಲ್ಲ. ಹೋರಾಟದಿಂದಲೆ ಬಂದ ಸಿದ್ದರಾಮಯ್ಯ ಅವರು ಹೋರಾಟಗಾರರನ್ನು ಅವಮಾನಿಸುತ್ತಿದ್ದಾರೆ.‌ ಇನ್ನೂ ಮೂರು ವರ್ಷ ಅಧಿಕಾರ ಇದೆ, ಬದಲಾಗದಿದ್ದರೆ ನಮ್ಮ ಹೋರಾಟಗಳ ಮೂಲಕ ಬದಲಾಯಿಸಬೇಕು” ಎಂದು ವರಲಕ್ಷ್ಮಿ ಹೇಳಿದ್ದಾರೆ.

ಕರ್ನಾಟಕ ಜನಶಕ್ತಿ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಮಾತನಾಡಿ, “ಈ ಸಮಾವೇಶ ಕಾಂಗ್ರೆಸ್ ಸರ್ಕಾರದ ಜೊತೆಗಿನ ಗುದ್ದಾಟದ ಆರಂಭ ಬಿಂದು. ಸರ್ಕಾರ ಬೆಳಗಾವಿಯಲ್ಲಿ ಖಾಸಗಿ ಎಪಿಎಂಸಿಗೆ ಅವಕಾಶ ಮಾಡಿಕೊಟ್ಟಿದ್ದು, 200 ಕೊಟಿ ಖರ್ಚು ಮಾಡಿ ಕಟ್ಟಿದ ಸರ್ಕಾರಿ ಎಪಿಎಂಸಿ ಮುಚ್ಚಲಾಗಿದೆ. ಮಹಿಳೆಯರ ಅಪೌಷ್ಟಿಕತೆ ಹೆಚ್ಚಾಗುತ್ತಿವೆ. ಬಗರ್‌ಹುಕುಂ ಅರ್ಜಿಗಳನ್ನು ಹರಿದು ಬಿಸಾಕಲಾಗುತ್ತಿವೆ. ಇದನ್ನು ಪ್ರತಿಭಟಿಸಿ ದೆಹಲಿ ಮಾದರಿಯಂತೆ ಬೆಂಗಳೂರಿಗೆ ಮುತ್ತಿಗೆ ಹಾಕಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಕೇಂದ್ರದ ಬಿಜೆಪಿಗಿಂತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...