Homeಮುಖಪುಟಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

- Advertisement -
- Advertisement -

ಶಾಲಾ ಶಿಕ್ಷಣಕ್ಕಾಗಿ ರೂಪಿಸಿರುವ ಸಮಗ್ರ ಶಿಕ್ಷಣ (ಎಸ್‌ಎಸ್‌) ಯೋಜನೆಗೆ ನೀಡಬೇಕಾದ ತನ್ನ ಪಾಲಿನ ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ತ್ರಿಭಾಷಾ ಸೂತ್ರ ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ನಿಬಂಧನೆಗಳು ಒಳಗೊಂಡಿರುವ ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ತಮಿಳುನಾಡು ನಿರಾಕರಿಸಿದ ಹಿನ್ನೆಲೆ ಕೇಂದ್ರ ಸರ್ಕಾರ ಅನುದಾನ ತಡೆ ಹಿಡಿದಿದೆ ಎಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಮಿಳುನಾಡು ಸರ್ಕಾರ, ಮೇ 1,2025 ರಿಂದ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥಗೊಳ್ಳುವವರಗೆ 2,151.59 ಕೋಟಿ ರೂಪಾಯಿ ಮೂಲ ಮೊತ್ತದ ಮೇಲೆ ವಾರ್ಷಿಕ ಶೇ. 6 ದರದಲ್ಲಿ ಭವಿಷ್ಯದ ಬಡ್ಡಿಯೊಂದಿಗೆ 2,291.30 ಕೋಟಿ ರೂಪಾಯಿಯನ್ನು ನ್ಯಾಯಾಲಯ ನಿಗದಿಪಡಿಸುವ ಸಮಯದೊಳಗೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದೆ.

ಶನಿವಾರ ಚೆನ್ನೈನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ಅನುದಾನ ತಡೆ ಹಿಡಿದ ಬಗ್ಗೆ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಘೋಷಿಸಿದ್ದರು. ಕಳೆದ ಏಪ್ರಿಲ್‌ನಲ್ಲಿ ರಾಜ್ಯಪಾಲ ಆರ್.ಎನ್. ರವಿ ವಿರುದ್ಧದ ಪ್ರಕರಣದಲ್ಲಿ ಬಂದಂತೆ ಅನುಕೂಲಕರ ತೀರ್ಪು ಬರುವ ಭರವಸೆ ವ್ಯಕ್ತಪಡಿಸಿದ್ದರು.

ಕೇಂದ್ರ ಸರ್ಕಾರವು ಶಿಕ್ಷಣ ಯೋಜನೆಗಳಿಗೆ ಬಿಡುಗಡೆ ಮಾಡಬೇಕಾದ ಅನುದಾನಗಳನ್ನು ಪ್ರತ್ಯೇಕ ಕೇಂದ್ರ ಪ್ರಾಯೋಜಿತ ಯೋಜನೆಯಾದ ಪಿಎಂಶ್ರಿ ಜೊತೆ ಲಿಂಕ್ ಮಾಡಲು ಉದ್ದೇಶಿಸಿದೆ. ಈ ಮೂಲಕ ತ್ರಿಭಾಷಾ ಸೂತ್ರ ಸೇರಿದಂತೆ ಎನ್‌ಇಪಿಯ ನಿಬಂಧನೆಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದೆ ಎಂದು ವರದಿಯಾಗಿದೆ.

ಸಮಗ್ರ ಶಿಕ್ಷಣ ಯೋಜನೆಗಳ ಅನುದಾನ ನೀಡದೆ ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ. ಇದು ಪಟ್ಟಿ IIIರ ನಮೂದು 25 ಅಡಿಯಲ್ಲಿ ಕಾನೂನು ರೂಪಿಸಲು ರಾಜ್ಯ ಸರ್ಕಾರ ಹೊಂದಿರುವ ಅಧಿಕಾರವನ್ನು ಕಸಿದು ಕಸಿದುಕೊಳ್ಳುವ ಪ್ರಯತ್ನವಾಗಿದೆ. ಕೇಂದ್ರ ಸರ್ಕಾರ ಎನ್‌ಇಪಿಯನ್ನು ಹೇರುವ ಮೂಲಕ ಪ್ರಸ್ತುತ ಇರುವ ಶಿಕ್ಷಣ ನೀತಿಯನ್ನು ಕೈಬಿಡಲು ಒತ್ತಾಯಿಸುತ್ತಿದೆ ದೂರಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಔಪಚಾರಿಕ ಒಪ್ಪಂದ ಮಾಡಿಕೊಳ್ಳುವವರೆಗೆ ಎನ್‌ಇಪಿ- 2020 ಮತ್ತು ಪಿಎಂಶ್ರಿ ಯೋಜನೆಯು ತಮಿಳುನಾಡಿಗೆ ಅನ್ವಯಿಸುವುದಿಲ್ಲ ಎಂದು ಘೋಷಿಸಲು ನ್ಯಾಯಾಲಯವನ್ನು ಕೋರಿದೆ.

ಸಮಗ್ರ ಶಿಕ್ಷಣ ಯೋಜನೆಯ ಅನುದಾನವನ್ನು ಪಿಎಂಶ್ರಿ ಯೋಜನೆಯ ಜೊತೆಗೆ ಲಿಂಕ್ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ‘ಅಸಂವಿಧಾನಿಕ, ಕಾನೂನುಬಾಹಿರ, ಅನಿಯಂತ್ರಿತ ಮತ್ತು ಅಸಮಂಜಸ’ ಎಂದು ಘೋಷಿಸಲು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಫೆಬ್ರವರಿ 23 ಮತ್ತು ಮಾರ್ಚ್ 7, 2024 ರಂದು ಕೇಂದ್ರ ಶಿಕ್ಷಣ ಸಚಿವಾಲಯ ಬರೆದ ಪತ್ರಗಳು ‘ಕಾನೂನುಬಾಹಿರ, ಅನೂರ್ಜಿತ’ ಮತ್ತು ರಾಜ್ಯಕ್ಕೆ ಅನ್ವಯ ಆಗುವುದಿಲ್ಲ’ ಎಂದು ಘೋಷಿಸಲು ಸಹ ಕೋರಿದೆ.

ಈಗಾಗಲೇ ಕೋರಿರುವ ಹಣವನ್ನು ಬಡ್ಡಿಯೊಂದಿಗೆ ಬಿಡುಗಡೆ ಮಾಡುವುದರ ಜೊತೆಗೆ, ಪ್ರತಿ ಶೈಕ್ಷಣಿಕ ವರ್ಷದ ಆರಂಭಕ್ಕೂ ಮುನ್ನ ಮತ್ತು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ಮಿತಿಯೊಳಗೆ 2009ರ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ಅನುಷ್ಠಾನಕ್ಕೆ ಅಗತ್ಯವಾದ ಅನುದಾನವನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಮೂಲಕ ತನ್ನ ಶಾಸನಬದ್ಧ ಬಾಧ್ಯತೆಗಳನ್ನು ಅನುಸರಿಸಲು ಮತ್ತು ನಿರ್ವಹಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...