ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಸಂಬಂಧಿಸಿದೆ ಎಂದು ಹೇಳಲಾದ ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ಜಾರಿ ನಿರ್ದೇಶನಾಲಯ (ED) ಬುಧವಾರ ಹಠಾತ್ ದಾಳಿ ನಡೆಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಅಧಿಕೃತ ಹೇಳಿಕೆಗಾಗಿ ಇನ್ನೂ ಬಂದಿಲ್ಲವಾದರೂ, ಈ ಶೋಧಗಳು ಸಂಸ್ಥೆಗಳಿಗೆ ಬಂದ ನಿಧಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿ ನಡೆಯುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ. ಗೃಹ ಸಚಿವ ಪರಮೇಶ್ವರ್ಗೆ
ತುಮಕೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬೆಂಗಳೂರಿನ ಹೊರವಲಯದಲ್ಲಿರುವ ನೆಲಮಂಗಲದಲ್ಲಿರುವ ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪತ್ರಿಕೆ ವರದಿ ಮಾಡಿದೆ.
ಇಡಿ ಅಧಿಕಾರಿಗಳು ಬೆಳಿಗ್ಗೆ ಒಂಬತ್ತು ವಾಹನಗಳಲ್ಲಿ ಆಗಮಿಸಿ ಸಂಸ್ಥೆಗಳ ಆವರಣಗಳಲ್ಲಿ ದಾಖಲೆಗಳನ್ನು ಪರಿಶೀಲಿಸಲು ಪ್ರಾರಂಭಿಸಿದರು ಎಂದು ಇತರ ಸುದ್ದಿ ಮಾಧ್ಯಮಗಳ ವರದಿ ಸೂಚಿಸಿವೆ. ನಾಲ್ಕು ವರ್ಷಗಳ ಹಿಂದೆ ಆದಾಯ ತೆರಿಗೆ ಇಲಾಖೆ ಈ ಸಂಸ್ಥೆಗಳಿಗೆ ದಾಳಿ ನಡೆಸಿತ್ತು ವರದಿಗಳು ಹೇಳಿವೆ. ಗೃಹ ಸಚಿವ ಪರಮೇಶ್ವರ್ಗೆ



It is purely a vendetta politics. There is nothing any people’s welfare programme.