Homeಮುಖಪುಟಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

- Advertisement -
- Advertisement -

‘ಆಪರೇಷನ್ ಸಿಂಧೂರ’ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಪೋಸ್ಟ್ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ಮೇ 21) ಮಧ್ಯಂತರ ಜಾಮೀನು ನೀಡಿದೆ ಎಂದು ವರದಿಯಾಗಿದೆ.

ಅಲಿ ಖಾನ್ ಅವರನ್ನು ಮೇ 18 ರಂದು ಬಂಧಿಸಲಾಗಿತ್ತು. ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಅವರನ್ನು ಮೇ 20ರಂದು ಸೋನೆಪತ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಈ ನಡುವೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಖಾನ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಆದರೆ, ಅವರ ವಿರುದ್ದ ಹರಿಯಾಣ ಪೊಲೀಸರು ದಾಖಲಿಸಿರುವ ಎರಡು ಎಫ್‌ಐಆರ್‌ಗಳಿಗೆ ತಡೆ ನೀಡಲು ನಿರಾಕರಿಸಿದೆ.

ಅಲಿ ಖಾನ್ ಅವರ ಪೋಸ್ಟ್‌ನ ನಿಜವಾದ ಅರ್ಥವನ್ನು ಅರ್ಥಮಾಡಿಕೊಳ್ಳಲು ಮತ್ತು ತನಿಖೆ ಮಾಡಲು ಹರಿಯಾಣ ಅಥವಾ ದೆಹಲಿಗೆ ಸಂಬಂಧಿಸದ ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) 24 ಗಂಟೆಗಳ ಒಳಗೆ ರಚಿಸುವಂತೆ ಇದೇ ವೇಳೆ ಸುಪ್ರೀಂ ಕೋರ್ಟ್ ಹರಿಯಾಣ ಡಿಜಿಪಿಗೆ ನಿರ್ದೇಶನ ನೀಡಿದೆ.

ಎಸ್‌ಐಟಿಯ ಒಬ್ಬ ಅಧಿಕಾರಿ ಮಹಿಳೆಯಾಗಿರಬೇಕು. ಎಸ್‌ಐಟಿಗೆ ಐಜಿ ಶ್ರೇಣಿಯ ಅಧಿಕಾರಿ ನೇತೃತ್ವ ವಹಿಸಬೇಕು ಮತ್ತು ಉಳಿದ ಇಬ್ಬರು ಸದಸ್ಯರು ಎಸ್‌ಪಿ ಶ್ರೇಣಿಯವರಾಗಿರಬೇಕು ಎಂದು ಸೂಚಿಸಿದೆ.

ಜಾಮೀನು ನೀಡುವ ವೇಳೆ, ಪ್ರಕರಣ ದಾಖಲಾಗಲು ಕಾರಣವಾಗಿರುವ ಪೋಸ್ಟ್‌ಗೆ ಸಂಬಂಧಿಸಿದ ಯಾವುದೇ ಹೊಸ ಪೋಸ್ಟ್‌ಗಳನ್ನು ಹಾಕುವುದು ಅಥವಾ ಲೇಖನಗಳನ್ನು ಬರೆಯುವುದಕ್ಕೆ ಮತ್ತು ಭಾರತೀಯ ನೆಲದಲ್ಲಿ ನಡೆದ ಭಯೋತ್ಪಾದಕ ದಾಳಿ ಅಥವಾ ಭಾರತ ಅವುಗಳಿಗೆ ನೀಡಿದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದಂತೆ ಸುಪ್ರೀಂ ಕೋರ್ಟ್ ಅಲಿ ಖಾನ್ ಅವರಿಗೆ ನಿರ್ಬಂಧ ವಿಧಿಸಿದೆ.

ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ಮತ್ತು ಪಾಸ್‌ಪೋರ್ಟ್ ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ.

ನ್ಯಾಯಾಲಯ ಆದೇಶ ಹೊರಡಿಸಿದ ನಂತರ ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಅಲಿ ಖಾನ್ ಅವರ ವಿರುದ್ದ ಪ್ರಸ್ತುತ ವಿಷಯದ ಕುರಿತು ಹೊಸ ಎಫ್‌ಐಆರ್‌ಗಳನ್ನು ದಾಖಲಿಸದಂತೆ ತಡೆಯಲು ನ್ಯಾಯಾಲಯವನ್ನು ಕೋರಿದರು. ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಸೂರ್ಯ ಕಾಂತ್  ಅವರು,”ಏನೂ ಆಗುವುದಿಲ್ಲ” ಎಂದು ಮೌಖಿಕವಾಗಿ ಹೇಳಿದರು. ಈ ಬಗ್ಗೆ ಗಮನಿಸುವಂತೆ ಹರಿಯಾಣ ರಾಜ್ಯ ಸರ್ಕಾರಕ್ಕೂ ಸೂಚಿಸಿದರು. ತನಿಖೆಯ ಸಮಯದಲ್ಲಿ ಕಂಡುಕೊಳ್ಳುವ ಯಾವುದೇ ಹೆಚ್ಚಿನ ಅಪರಾಧದ ವಸ್ತುಗಳನ್ನು ದಾಖಲಿಸಲು ಕೋರ್ಟ್ ರಾಜ್ಯಕ್ಕೆ ಅವಕಾಶ ನೀಡಿದೆ ಎಂದು livelaw.in ವರದಿ ಮಾಡಿದೆ.

ವಿಚಾರಣೆಯ ಆರಂಭದಲ್ಲಿ, ವಕೀಲ ಕಪಿಲ್ ಸಿಬಲ್ ಅವರು ಅಲಿ ಖಾನ್ ಅವರು ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗಳಲ್ಲಿ ಆಪರೇಷನ್ ಸಿಂಧೂರ ಕುರಿತು ಹಾಕಿದ್ದ ಪೋಸ್ಟ್ ಬಗ್ಗೆ ಪೀಠದ ಗಮನ ಸೆಳೆದರು. ಅವರ ಪೋಸ್ಟ್ ಅನ್ನು ಪೀಠಕ್ಕೆ ಓದಿ ಹೇಳಿದರು. ಇದು ಅತ್ಯಂತ ದೇಶಭಕ್ತಿಯ ಪೋಸ್ಟ್ ಎಂದು ವಿವರಿಸಿದರು.

ಈ ವೇಳೆ “ಆಪರೇಷನ್ ಸಿಂಧೂರ ಕುರಿತ ಮಾಧ್ಯಮಗೋಷ್ಠಿಯ ನೇತೃತ್ವ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಹೊಗಳುವ ಬಲಪಂಥೀಯರು ಗುಂಪು ಹಲ್ಲೆ ಮತ್ತು ಆಸ್ತಿಗಳ ಅನಿಯಂತ್ರಿತ ಧ್ವಂಸಕ್ಕೆ ಬಲಿಯಾದವರ ಪರವಾಗಿ ಮಾತನಾಡುವಂತೆ” ಅಲಿಖಾನ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, “ಯುದ್ಧದ ಬಗ್ಗೆ ಹೇಳಿಕೆ ನೀಡಿದ ನಂತರ ಅಲಿ ಖಾನ್ ರಾಜಕೀಯದತ್ತ ತಿರುಗಿದ್ದಾರೆ” ಎಂದು ಹೇಳಿದ್ದಾರೆ.

“ಪ್ರತಿಯೊಬ್ಬರಿಗೂ ಮುಕ್ತ ಅಭಿವ್ಯಕ್ತಿಯ ಹಕ್ಕು ಇದೆ. ಆದರೆ ಕೋಮುವಾದದ ಬಗ್ಗೆ ಇಷ್ಟೊಂದು ಮಾತನಾಡುವ ಸಮಯ ಇದುವಾ? ದೇಶ ದೊಡ್ಡ ಸವಾಲನ್ನು ಎದುರಿಸುತ್ತಿದೆ. ರಾಕ್ಷಸರು ಎಲ್ಲೆಡೆ ಬಂದು ನಮ್ಮ ಮುಗ್ಧ ಜನರ ಮೇಲೆ ದಾಳಿ ಮಾಡಿದ್ದಾರೆ. ನಾವು ಒಗ್ಗಟ್ಟಿನಿಂದ ಇದ್ದೇವೆ. ಈ ಸಮಯದಲ್ಲಿ ಈ ರೀತಿಯ ಅಗ್ಗದ ಜನಪ್ರಿಯತೆ ಬೇಕು?” ಎಂದು ನ್ಯಾಯಮೂರ್ತಿ ಕಾಂತ್ ಪ್ರಶ್ನಿಸಿದ್ದಾರೆ.

ಈ ವೇಳೆ ಅಲಿ ಖಾನ್ ಅವರ ಹೇಳಿಕೆಗಳನ್ನು ಸಮರ್ಥಿಸಿಕೊಂಡ ವಕೀಲ ಕಪಿಲ್ ಸಿಬಲ್, “ಅವರ ಪೋಸ್ಟ್‌ನಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ನ್ಯಾ.ಕಾಂತ್, “ಕಳೆದ 75 ವರ್ಷಗಳಿಂದ ದೇಶ ಹಕ್ಕುಗಳನ್ನು ವಿತರಿಸುತ್ತಿದೆ ಎಂಬಂತೆ, ಎಲ್ಲರೂ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಸೌಜನ್ಯ ; livelaw.in

ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...