Homeಮುಖಪುಟಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

- Advertisement -
- Advertisement -

ಛತ್ತೀಸ್‌ಗಢದ ನಾರಾಯಣಪುರ ಪ್ರದೇಶದಲ್ಲಿ ಬುಧವಾರ (ಮೇ.21) ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಪಕ್ಷದ 27 ಮಂದಿ ಸದಸ್ಯರು ಸಾವಿಗೀಡಾಗಿದ್ದಾರೆ.

ಮೃತರಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸುಮಾರು 68 ವರ್ಷ ವಯಸ್ಸಿನ ನಂಬಾಲಾ ಕೇಶವ ರಾವ್ ಅಲಿಯಾಸ್ ಬಸವರಾಜು ಸೇರಿದ್ದಾರೆ ಎಂದು ವರದಿಯಾಗಿದೆ.

ಕಾರ್ಯಾಚರಣೆಯ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡುವ ಹೋರಾಟದಲ್ಲಿ ಇದೊಂದು ಹೆಗ್ಗುರುತಿನ ಸಾಧನೆ. ಇಂದು, ಛತ್ತೀಸ್‌ಗಢದ ನಾರಾಯಣಪುರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ನಮ್ಮ ಭದ್ರತಾ ಪಡೆಗಳು 27 ಭಯಾನಕ ಮಾವೋವಾದಿಗಳನ್ನು ಹತ್ಯೆ ಮಾಡಿದ್ದಾರೆ. ಅವರಲ್ಲಿ ಸಿಪಿಐ-ಮಾವೋವಾದಿಯ ಪ್ರಧಾನ ಕಾರ್ಯದರ್ಶಿ, ಅಗ್ರ ನಾಯಕ ಮತ್ತು ನಕ್ಸಲ್ ಚಳುವಳಿಯ ಬೆನ್ನೆಲುಬು ನಂಬಾಲಾ ಕೇಶವ ರಾವ್ ಅಲಿಯಾಸ್ ಬಸವರಾಜು ಸೇರಿದ್ದಾರೆ. ನಕ್ಸಲ್‌ವಾದದ ವಿರುದ್ಧ ಭಾರತ ನಡೆಸುತ್ತಿರುವ ಮೂರು ದಶಕಗಳ ಹೋರಾಟದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನ ಕಾರ್ಯದರ್ಶಿ ಶ್ರೇಣಿಯ ನಾಯಕನನ್ನು ನಮ್ಮ ಪಡೆಗಳು ಹತ್ಯೆಗೈದಿವೆ. ಈ ಮಹತ್ವದ ಸಾಧನೆಗಾಗಿ ನಮ್ಮ ಧೈರ್ಯಶಾಲಿ ಭದ್ರತಾ ಪಡೆಗಳು ಮತ್ತು ಸಂಸ್ಥೆಗಳನ್ನು ನಾನು ಶ್ಲಾಘಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಹತರಾದ ಬಸವರಾಜು ಅವರು, 2010ರಲ್ಲಿ ದಂತೇವಾಡದಲ್ಲಿ 76 ಸಿಆರ್‌ಪಿಎಫ್ ಸಿಬ್ಬಂದಿ ಮೃತಪಟ್ಟಿದ್ದ ದಾಳಿ ಮತ್ತು 2013ರಲ್ಲಿ ಛತ್ತೀಸ್‌ಗಢ ರಾಜ್ಯ ಕಾಂಗ್ರೆಸ್ ನಾಯಕರೂ ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದ ಜೀರಂ ಘಾಟಿ ಹತ್ಯಾಕಾಂಡ ಸೇರಿದಂತೆ ಪ್ರಮುಖ ಮಾವೋವಾದಿ ದಾಳಿಗಳ ಹಿಂದಿನ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿದೆ.

ಬಸವರಾಜು ಅವರ ತಲೆಗೆ ಎನ್‌ಐಎ, ಛತ್ತೀಸ್‌ಗಢ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು 1.5 ಕೋಟಿ ರೂಪಾಯಿಯಷ್ಟು ನಗದು ಬಹುಮಾನ ಘೋಷಿಸಿತ್ತು.

ಬಸವರಾಜು ಯಾರು?

ವರದಿಗಳ ಪ್ರಕಾರ, ಸುಮಾರು 68 ವರ್ಷ ವಯಸ್ಸಿನ ಬಸವರಾಜು ಅವರು ಸಿಪಿಐ (ಮಾವೋವಾದಿ) ಪಕ್ಷದ ಪ್ರಧಾನ ಕಾರ್ಯದರ್ಶಿ, ಅದರ ಪಾಲಿಟ್‌ಬ್ಯೂರೋ, ಕೇಂದ್ರ ಸಮಿತಿ ಮತ್ತು ಕೇಂದ್ರ ಸೇನಾ ಸಮಿತಿ ನಾಯಕರಾಗಿದ್ದರು.

ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಜಿಯನ್ನಪೇಟೆ ಮೂಲದ ಬಸವರಾರು ಅವರು ಈಗಿನ ತೆಲಂಗಾಣ ರಾಜ್ಯದ ವಾರಂಗಲ್‌ನ ಪ್ರಾದೇಶಿಕ ಇಂಜಿನಿಯರಿಂಗ್ ಕಾಲೇಜಿನಿಂದ ಇಂಜಿನಿಯರಿಂಗ್ ಪದವಿ ಪಡೆದವರು. ರ್‍ಯಾಡಿಕಲ್ ಸ್ಟೂಡೆಂಟ್ ಯೂನಿಯನ್ (ಆರ್‌ಎಸ್‌ಯು) ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಅವರು, ನಂತರ ನಕ್ಸಲ್ ಚಳವಳಿಗೆ ಸೇರಿಕೊಂಡರು.

ಕಾಲೇಜು ದಿನಗಳಲ್ಲಿಯೇ ಎಡಪಂಥೀಯ ವಿದ್ಯಾರ್ಥಿ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಬಸವರಾಜು ಅವರು, 1980ರಲ್ಲಿ ‘ಸಿಪಿಐ (ಮಾರ್ಕ್ಸ್‌-ಲೆನಿನ್) ಪೀಪಲ್ಸ್ ವಾರ್‌’ ಪಕ್ಷವನ್ನು ಇತರರ ಜೊತೆ ಸೇರಿಕೊಂಡು ಸ್ಥಾಪಿಸಿದ್ದರು. 1992ರಲ್ಲಿ ಆ ಪಕ್ಷದ ಕೇಂದ್ರ ಸಮಿತಿ ಸದಸ್ಯರಾಗಿದ್ದರು. 2004ರಲ್ಲಿ ಸಿಪಿಐ (ಮಾವೋವಾದಿ) ಪಕ್ಷದೊಂದಿಗೆ ‘ಸಿಪಿಐ (ಮಾರ್ಕ್ಸ್‌-ಲೆನಿನ್) ಪೀಪಲ್ಸ್ ವಾರ್’ ವಿಲೀನವಾಯಿತು.

ಆ ಬಳಿಕ ಬಸವರಾಜು ಅವರು ಸಿಪಿಐ (ಮಾವೋವಾದಿ) ಪಕ್ಷದ ಕೇಂದ್ರ ಸೇನಾ ಸಮಿತಿಯ ಮುಖ್ಯಸ್ಥರಾದರು. ನಂತರ ಪಾಲಿಟ್ ಬ್ಯೂರೋ ಸದಸ್ಯರಾದರು.

ಕಾಲೇಜು ದಿನಗಳಲ್ಲಿಯೇ ತೀವ್ರ ಎಡಪಂಥೀಯ ರಾಜಕಾರಣಕ್ಕೆ ತೆರೆದುಕೊಂಡಿದ್ದ ಬಸವರಾಜು ಅವರು, 1980ರಲ್ಲಿ ಎಬಿವಿಪಿ ಸದಸ್ಯರೊಂದಿಗೆ ಜಗಳ ಮಾಡಿಕೊಂಡ ಆರೋಪದಲ್ಲಿ ಬಂಧಿತರಾಗಿದ್ದರು. 1970ರಲ್ಲಿ ಹುಟ್ಟೂರು ತೊರೆದು ನಕ್ಸಲ್ ಚಳವಳಿ ಸೇರಿದ ಅವರು, ಛತ್ತೀಸ್‌ಗಢದ ಬಸ್ತಾರ್‌ನಲ್ಲಿ 1987ರಲ್ಲಿ ಎಲ್‌ಟಿಟಿಇ ಹೋರಾಟಗಾರರಿಂದ ಗೆರಿಲ್ಲಾ ಯುದ್ದ ತಂತ್ರ ಮತ್ತು ಸ್ಟೋಟಕಗಳ ಕುರಿತು ತರಬೇತಿ ಪಡೆದುಕೊಂಡಿದ್ದರು ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ಪತ್ರಿಕೆ ವರದಿ ಮಾಡಿದೆ.

ಗಂಗಣ್ಣ, ಗಗಣ್ಣ, ಪ್ರಕಾಶ್, ಕೃಷ್ಣ, ವಿಜಯ್, ಬಸವರಾಜು, ಬಿಆರ್, ಉಮೇಶ್, ರಾಜು, ದರಪು ಮತ್ತು ನರಸಿಂಹ ಎಂಬ ಹಲವಾರು ಅಡ್ಡ ಹೆಸರುಗಳಿಂದ ಕರೆಯಲ್ಪಡುತ್ತಿದ್ದ ಕೇಶವ ರಾವ್, 2017-18ರಲ್ಲಿ ಗಣಪತಿ ಅವರಿಂದ ಸಿಪಿಐ (ಮಾವೋವಾದಿ) ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಂಡರು. ಗಣಪತಿ ಅವರು ವಯಸ್ಸು ಮತ್ತು ಅನಾರೋಗ್ಯದ ಕಾರಣದಿಂದ ಪಕ್ಷದ ಕಾರ್ಯಚಟುವಟಿಕೆಗಳಿಂದ ಹಿಂದೆ ಸರಿದರು ಎಂದು ವರದಿಗಳು ಹೇಳಿವೆ.

ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಗಡಿ ಪ್ರದೇಶ ಕರ್ರೆಗುತ್ತಲು ಬೆಟ್ಟಗಳಲ್ಲಿ 21 ದಿನಗಳ ಕಾಲ ನಡೆದ ಅತಿದೊಡ್ಡ ‘ಆಪರೇಷನ್ ಬ್ಲಾಕ್ ಫಾರೆಸ್ಟ್’ ಪೂರ್ಣಗೊಂಡ ಕೆಲ ದಿನಗಳ ನಂತರ, ಅಬುಜ್‌ಮಾದ್ ಪ್ರದೇಶದಲ್ಲಿ ನಾರಾಯಣಪುರ, ದಂತೇವಾಡ, ಕೊಂಡಗಾಂವ್ ಮತ್ತು ಬಿಜಾಪುರ ಜಿಲ್ಲೆಗಳ ಡಿಆರ್‌ಜಿ ಘಟಕಗಳನ್ನು ಒಳಗೊಂಡ ಇತ್ತೀಚಿನ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆದಿದೆ.

ಸಿಆರ್‌ಪಿಎಫ್, ಛತ್ತೀಸ್‌ಗಢ ಪೊಲೀಸರು ಮತ್ತು ಇತರ ಕೇಂದ್ರ ಮತ್ತು ರಾಜ್ಯ ಪಡೆಗಳ ಆಪರೇಷನ್ ಬ್ಲಾಕ್ ಫಾರೆಸ್ಟ್‌ನಲ್ಲಿ 31 ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ. ಶಸ್ತ್ರಾಸ್ತ್ರಗಳು ಮತ್ತು ಇತರ ನಕ್ಸಲ್ ಸರಬರಾಜುಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಮೇ 11ರಂದು 21 ದಿನಗಳ ಆಪರೇಷನ್ ‘ಬ್ಲಾಕ್ ಫಾರೆಸ್ಟ್’ ಅಂತ್ಯಗೊಂಡ ನಂತರ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಹಾರಾಷ್ಟ್ರದಾದ್ಯಂತ 54 ನಕ್ಸಲರನ್ನು ಬಂಧಿಸಲಾಗಿದೆ ಮತ್ತು 84 ನಕ್ಸಲರು ಶರಣಾಗಿದ್ದಾರೆ ಎಂದು ಗೃಹ ಸಚಿವರು ಬುಧವಾರ ಮಾಹಿತಿ ನೀಡಿದ್ದಾರೆ.

“ಮಾರ್ಚ್ 31, 2026ರ ಮೊದಲು ದೇಶದಲ್ಲಿ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲು ಮೋದಿ ಸರ್ಕಾರ ದೃಢನಿಶ್ಚಯ ಮಾಡಿದೆ” ಎಂದು ಗೃಹ ಸಚಿವರು ಹೇಳಿದ್ದಾರೆ.

ಛತ್ತೀಸ್‌ಗಢ ಪೊಲೀಸರ ಪ್ರಕಾರ, ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ನಾರಾಯಣಪುರ ಕಾರ್ಯಾಚರಣೆಯಲ್ಲಿ ಹಲವು ನಕ್ಸಲರನ್ನು ಎನ್‌ಕೌಂಟರ್ ಮಾಡಲಾಗಿದೆ ಮತ್ತು ಅವರಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬುಧವಾರ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ನಾರಾಯಣಪುರ ವ್ಯಾಪ್ತಿಯ ಬೋಟರ್ ಗ್ರಾಮ ಮತ್ತು ಲೆಕವಾಡಾ ಕಾಡಿನಲ್ಲಿ ಮಾವೋವಾದಿಗಳು ಮತ್ತು ಡಿಆರ್‌ಜಿ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಬಸವರಾಜು ಸೇರಿದಂತೆ 27 ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ. ಅವರಿಂದ ದೊಡ್ಡ ಮಟ್ಟದಲ್ಲಿ ಆಧುನಿಕ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕ್ಸಲರನ್ನು ಎದುರಿಸುವಾಗ ಒಬ್ಬ ಡಿಆರ್‌ಜಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಬಸವರಾಜು ಹೊರತುಪಡಿಸಿ ಎನ್‌ಕೌಂಟರ್‌ನಲ್ಲಿ ಹತರಾದ ಇತರರಲ್ಲಿ ಹಿರಿಯ ನಕ್ಸಲ್ ನಾಯಕರು ಮತ್ತು ವಾಂಟೆಡ್ ಕಾರ್ಯಕರ್ತರು ಸೇರಿದ್ದಾರೆ. ಅವರ ಗುರುತುಗಳನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ.

“ನಮ್ಮ ಧೈರ್ಯಶಾಲಿ ಭದ್ರತಾ ಸಿಬ್ಬಂದಿ ಮೂರು ದಿನಗಳಿಂದ ಅತ್ಯಂತ ಸವಾಲಿನ ಭೂಪ್ರದೇಶದಲ್ಲಿ ಸಾಟಿಯಿಲ್ಲದ ಸಮರ್ಪಣೆ ಮತ್ತು ಶೌರ್ಯದಿಂದ ದೃಢವಾಗಿ ನಿಂತಿದ್ದಾರೆ. ಈ ಹೋರಾಟವು ನಕ್ಸಲರ ವಿರುದ್ಧ ಮಾತ್ರವಲ್ಲ, ಶಾಂತಿ ಮತ್ತು ಅಭಿವೃದ್ಧಿಯ ಪರವಾಗಿದೆ. ಇಡೀ ರಾಜ್ಯವು ಅವರ ಮನೋಭಾವಕ್ಕೆ ವಂದಿಸುತ್ತದೆ” ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದಾರೆ.

ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ವರದಿಯಾಗಿದೆ.

ಮುರ್ಷಿದಾಬಾದ್ ಹಿಂಸಾಚಾರದ ವೇಳೆ ಪೊಲೀಸರು ನಿಷ್ಕ್ರಿಯ: ಹೈಕೋರ್ಟ್ ನೇಮಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...