Homeಕರ್ನಾಟಕಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

ಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

- Advertisement -
- Advertisement -

ಬಿಜೆಪಿ, ಆರೆಸ್ಸೆಸ್ ಸಮಾಜದಲ್ಲಿ ಭಿತ್ತುತ್ತಿರುವ ಕೋಮುವಾದಿ ವಿಚಾರಗಳ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ರಗತಿಪರ ಸಂಘಟನೆಗಳು ಒಕ್ಕೂಟ ರಚಿಸಿಕೊಂಡು ಕಾರ್ಯಮಗ್ನರಾಗಬೇಕಾದ ಅಗತ್ಯವಿದೆ ಎಂದು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಗೌರಿ ಪತ್ರಿಕಾ ಬಳಗ ಬೆಂಗಳೂರಿನ ಗಾಂಧಿಭವನದಲ್ಲಿ ಹಿರಿಯ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಮಾಜಿಕ ಕಾರ್ಯಕರ್ತರು ಹಾಗೂ ಜನಪರ ಪತ್ರಕರ್ತರ ಮೇಲಿನ ದಾಳಿಯನ್ನು ಎದುರಿಸುವ ಕುರಿತ ಚರ್ಚಾಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜನಪರವಾಗಿ ಕೆಲಸ ಮಾಡುವವರನ್ನು ಬಂಽಸುವ ಪ್ರಕ್ರಿಯೆಯನ್ನು ಮುಂದುವರೆಸುವ ಎಲ್ಲ ಮುನ್ಸೂಚನೆಗಳು ಇವೆ. ಇದನ್ನು ತಡೆಯಬೇಕಾದರೆ ಬಿಜೆಪಿಯ ಜನವಿರೋಧಿ ನಿಲುವುಗಳ ಕುರಿತು ಜನಾಭಿಪ್ರಾಯ ಮೂಡಿಸುವುದೊಂದೆ ನಮಗಿರುವ ಬಹುದೊಡ್ಡ ದಾರಿ ಮಾಡಿಕೊಟ್ಟಿತು ಎಂದರು.

ಆರೆಸ್ಸೆಸ್ ಪ್ರಜಾಪ್ರಭುತ್ವದ ದಾರಿಯನ್ನೇ ಬಳಸಿಕೊಂಡು ಇಡೀ ವ್ಯವಸ್ಥೆಯನ್ನು ಕೋಮುವಾದೀಕರಣ ಮಾಡಲು ಹೊರಟಿದೆ. ಸಂಸತ್‌ನ ಒಳಗೂ ಕೋಮುವಾದಿ ವ್ಯಕ್ತಿಗಳನ್ನು ನುಸುಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳು RSSನ ಜನವಿರೋಧಿ ನೀತಿಯನ್ನು ಬಯಲು ಮಾಡಲು ಸಾಮಾಜಿಕ ಜಾಲತಾಣಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇದೆ ಎಂದು ಅವರು ಹೇಳಿದರು.

ಇವತ್ತಿನ ರಾಜಕಾರಣಿಗಳು, ನ್ಯಾಯಾಧೀಶರು, ಪೊಲೀಸ್ ವ್ಯವಸ್ಥೆಯು ಪತ್ರಿಕೆ, ದೃಶ್ಯ ಮಾಧ್ಯಮಗಳಿಗಿಂತ ಫೇಸ್‌ಬುಕ್, ವಾಟ್ಸಾಪ್‌ಗಳಲ್ಲಿ ಬರುವ ಸುದ್ಧಿಗಳನ್ನು ಹೆಚ್ಚು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಹೀಗಾಗಿ ಪ್ರಗತಿಪರವಾಗಿ ಚಿಂತಿಸುವ ಪ್ರತಿಯೊಬ್ಬರು ತಮಗೆ ಗೊತ್ತಿರುವ ಸತ್ಯ ಸಂಗತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವ ಮೂಲಕ ಹೆಚ್ಚು ಜನರಿಗೆ ತಲುಪುವಂತೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಕೋಮು ಸೌಹಾರ್ದ ವೇದಿಕೆಯ ಕೆ.ಎಲ್.ಅಶೋಕ್ ಮಾತನಾಡಿ, ಕೋಮುವಾದಿಗಳು ಮನೆ ಒಳಗೆ ನುಸುಳಿದ್ದಾರೆ. ಮಾಡು ಇಲ್ಲವೆ ಮಡಿ ಎನ್ನುವ ಸ್ಥಿತಿಗೆ ಬಂದು ತಲುಪಿದ್ದೇವೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳು ಒಕ್ಕೂಟವಾಗಿ ಆರೆಸ್ಸೆಸ್ ಚಿಂತನೆಯ ವಿರುದ್ಧ ಜನಾಭಿಪ್ರಾಯ ಮೂಡಿಸುವುದು ಅಗತ್ಯವಾಗಿದೆ ಎಂದರು.

ಹಿರಿಯ ಪತ್ರಕರ್ತ ಸುನಿಲ್ ಶಿರಸಂಗಿ ಮಾತನಾಡಿ, ಇಪ್ಪತ್ತು ವರ್ಷಗಳಿಂದ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಜೆಪಿ ಸರಕಾರ ಬಂಧಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪತ್ರಕರ್ತರು, ಮಾನವ ಹಕ್ಕು ಹೋರಾಟಗಾರರನ್ನು ಬಂಧಿಸುವಂತಹ ಷಡ್ಯಂತ್ರಗಳನ್ನು ರೂಪಿಸಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ ಮಾತನಾಡಿ, ಇವತ್ತಿನ ಸನ್ನಿವೇಶ ಜನಪರವಾಗಿ ಚಿಂತಿಸುವವರಿಗೆ ತೀರ ಆತಂಕ ಕಾರಿಯಾಗಿದೆ. ಪ್ರಭುತ್ವ ಮಾಡುವ ಜನವಿರೋಧಿ ನೀತಿಗಳನ್ನು ಟೀಕೆ ಮಾಡಿದರೆ ಬಂಧಿಸುವಂತಹ, ಬೆದರಿಕೆ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಗತಿಪರರು ತಮ್ಮ ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಬೇಕಾದ ಅಗತ್ಯವಿದೆ ಎಂದರು.

ಸಭೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್, ಪ್ರೊ.ನಗರಗೆರೆ ರಮೇಶ್, ಕರ್ನಾಟಕ ಜನಶಕ್ತಿಯ ವಾಸು, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ, ಚಂದ್ರು, ಮಾನವ ಹಕ್ಕು ಹೋರಾಟಗಾರ ಮನೋಹರ್, ಪ್ರೊ.ಶಿವರಾಮಯ್ಯ, ಅಂಕಣಕಾರ ನಾರಾಯಣ, ಹುಲಿಕುಂಟೆಮೂರ್ತಿ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...