Homeಮುಖಪುಟಭದ್ರತಾ ಅನುಮತಿ ರದ್ದತಿಯಿಂದ 10,000 ಭಾರತೀಯ ಉದ್ಯೋಗಗಳಿಗೆ ಹೊಡೆತ: ಹೈಕೋರ್ಟ್‌ಗೆ ತುರ್ಕಿ ಸಂಸ್ಥೆ ಹೇಳಿಕೆ

ಭದ್ರತಾ ಅನುಮತಿ ರದ್ದತಿಯಿಂದ 10,000 ಭಾರತೀಯ ಉದ್ಯೋಗಗಳಿಗೆ ಹೊಡೆತ: ಹೈಕೋರ್ಟ್‌ಗೆ ತುರ್ಕಿ ಸಂಸ್ಥೆ ಹೇಳಿಕೆ

- Advertisement -
- Advertisement -

ಕೇಂದ್ರ ಸರ್ಕಾರ ತನ್ನ ಭದ್ರತಾ ಅನುಮತಿಯನ್ನು ರದ್ದುಗೊಳಿಸಿದ ಕಾರಣಕ್ಕೆ ಭಾರತದಾದ್ಯಂತ ತನ್ನ 10,000 ಕ್ಕೂ ಹೆಚ್ಚು ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ ಎಂದು ತುರ್ಕಿ ಮೂಲದ ವಿಮಾನ ನಿಲ್ದಾಣದ ಭೂ ನಿರ್ವಹಣೆ ಸಂಸ್ಥೆ ಸೆಲೆಬಿ ಬುಧವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಭದ್ರತಾ ಅನುಮತಿ ರದ್ದತಿಯಿಂದ

ಕಂಪನಿಯನ್ನು ಪ್ರತಿನಿಧಿಸುವ ವಕೀಲ ಮುಕುಲ್ ರೋಹಟ್ಗಿ ಹಾಜರಾಗಿ, ಸಂಸ್ಥೆಯು ಟರ್ಕಿ ಸರ್ಕಾರದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಮತ್ತು ಭಾರತದೊಂದಿಗೆ ಯಾವುದೇ ಸಂಘರ್ಷಗಳು ಅಥವಾ ಸಮಸ್ಯೆಗಳನ್ನು ಹೊಂದಿಲ್ಲ ಎಂದು ನ್ಯಾಯಮೂರ್ತಿ ಸಚಿನ್ ದತ್ತಾ ಅವರಿಗೆ ತಿಳಿಸಿದ್ದಾರೆ.

“ನಮ್ಮೊಂದಿಗೆ ಕೆಲಸ ಮಾಡುವ ಜನರು ಭಾರತೀಯರು. ಸಂಸ್ಥೆಯಲ್ಲಿ ಹಲವಾರು ವಿಮಾನ ನಿಲ್ದಾಣಗಳಲ್ಲಿ 10,000 ಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. ಯಾವುದೆ ಕಳಂಕವಿಲ್ಲದೆ, ಸಂಸ್ಥೆ ತೃಪ್ತಿಕರವಾಗಿ ಕೆಲಸ ಮಾಡಿದೆ.” ಎಂದು ರೋಹಟ್ಗಿ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಉದ್ವಿಗ್ನತೆಯ ನಡುವೆ ಕೇಂದ್ರ ಸರ್ಕಾರವು ಸೆಲೆಬಿ ಏರ್‌ಪೋರ್ಟ್ ಸರ್ವೀಸಸ್ ಇಂಡಿಯಾ ಕಂಪನಿಯ ಭದ್ರತಾ ಅನುಮತಿಯನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸೆಲೆಬಿ ಕಂಪನಿಯು ಮೇ 16 ರಂದು  ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಟರ್ಕಿಯ ಕಂಪನಿಗಳು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡಿರುವ ಬಗ್ಗೆ ಭಾರತದಲ್ಲಿ ಸಾರ್ವಜನಿಕ ಆಕ್ರೋಶ ಹುಟ್ಟುಹಾಕಿತ್ತು. ಈ ನಡುವೆ ಭಾರತವು ಮೇ 15 ರಂದು “ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ” ಸೆಲೆಬಿ ಅವರ ಭದ್ರತಾ ಅನುಮತಿಯನ್ನು ಸ್ಥಗಿತಗೊಳಿಸಿತ್ತು.

ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ರೋಹಟ್ಗಿ ಅವರು ಭಾರತ ಸರ್ಕಾರದ ಕ್ರಮ ಕಾನೂನಿಗೆ ವಿರುದ್ಧವಾಗಿದೆ ಎಂದು ವಾದಿಸಿದ್ದಾರೆ. “ಇದು ನೈಸರ್ಗಿಕ ನ್ಯಾಯದ ತತ್ವಗಳ ಉಲ್ಲಂಘನೆ ಎಂದು ನಾನು ಹೇಳುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಸಂಸ್ಥೆಯ ಅನುಮತಿಯನ್ನು ರದ್ದು ಮಾಡಿರುವುದಕ್ಕೆ ಕಾರಣಗಳನ್ನು ಮೊಹರು ಮಾಡಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಮಾತ್ರ ಸಿಗುವಂತಹ ರೀತಿಯಲ್ಲಿ ಸಲ್ಲಿಸುವ ಕೇಂದ್ರದ ನಿರ್ಧಾರಕ್ಕೂ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೆಲವು ವಿವರಗಳನ್ನು ನ್ಯಾಯಾಲಯದೊಂದಿಗೆ ಮಾತ್ರ ಹಂಚಿಕೊಳ್ಳಬಹುದು ಮತ್ತು ಕಂಪನಿಯೊಂದಿಗೆ ಅಲ್ಲ ಎಂದು ಹೇಳಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಸೋಮವಾರ ನಡೆದ ಹಿಂದಿನ ವಿಚಾರಣೆಯಲ್ಲಿ, ಕೇಂದ್ರವು ಅರ್ಜಿಯನ್ನು ವಿರೋಧಿಸಿ, ಕಂಪನಿಯ ಸೇವೆಗಳನ್ನು ಬಳಸುವುದರಿಂದ ದೇಶಕ್ಕೆ ಅಪಾಯ ಉಂಟಾಗಬಹುದು ಎಂದು ವಾದಿಸಿತ್ತು.

ಮೇ 16 ರ ಕೇಂದ್ರ ಸರ್ಕಾರದ ಆದೇಶದ ಮೊದಲು, ಸೆಲೆಬಿ ಏವಿಯೇಷನ್ ​​ದೆಹಲಿ, ಮುಂಬೈ, ಕೊಚ್ಚಿ, ಕಣ್ಣೂರು, ಬೆಂಗಳೂರು, ಹೈದರಾಬಾದ್, ಮೋಪಾ (ಗೋವಾ), ಅಹಮದಾಬಾದ್ ಮತ್ತು ಚೆನ್ನೈ ಸೇರಿದಂತೆ ಹಲವಾರು ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂದು ಅದರ ವೆಬ್‌ಸೈಟ್ ತಿಳಿಸಿದೆ. ಭದ್ರತಾ ಅನುಮತಿ ರದ್ದತಿಯಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತುಮಕೂರು | ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ತುಮಕೂರು | ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...