Homeಅಂತರಾಷ್ಟ್ರೀಯವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳದಂತೆ ಹಾರ್ವರ್ಡ್ ವಿವಿಗೆ ನಿರ್ಬಂಧ ವಿಧಿಸಿದ ಟ್ರಂಪ್ ಆಡಳಿತ: ದಕ್ಷಿಣ ಏಷ್ಯಾ ವಿದ್ಯಾರ್ಥಿ...

ವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳದಂತೆ ಹಾರ್ವರ್ಡ್ ವಿವಿಗೆ ನಿರ್ಬಂಧ ವಿಧಿಸಿದ ಟ್ರಂಪ್ ಆಡಳಿತ: ದಕ್ಷಿಣ ಏಷ್ಯಾ ವಿದ್ಯಾರ್ಥಿ ಸಂಘ ಖಂಡನೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ, ಟ್ರಂಪ್ ಆಡಳಿತವು ಗುರುವಾರ (ಮೇ.22) ಹಾರ್ವರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮತ್ತು ವಿನಿಮಯ ಸಂದರ್ಶಕ ಕಾರ್ಯಕ್ರಮ (ಎಸ್‌ಇವಿಪಿ) ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಅಮೆರಿಕದ ಗೃಹ ಭದ್ರತಾ ಇಲಾಖೆಗೆ ಆದೇಶಿಸಿದೆ.

ಇದರರ್ಥ ಹಾರ್ವರ್ಡ್ ಇನ್ನು ಮುಂದೆ ವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಪ್ರಸ್ತುತ ಇರುವ ವಿದೇಶಿ ವಿದ್ಯಾರ್ಥಿಗಳು ಬೇರೆಗೆ ಸ್ಥಳಾಂತರ ಆಗಬೇಕು. ಇಲ್ಲದಿದ್ದರೆ ಅವರು ಅಮೆರಿಕದಲ್ಲಿ ಉಳಿದುಕೊಳ್ಳುವ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಲಿದ್ದಾರೆ.

ಟ್ರಂಪ್ ಆಡಳಿತದ ಈ ನಿರ್ಧಾರವನ್ನು ವಿವಿಯ ದಕ್ಷಿಣ ಏಷ್ಯಾದ ವಿದ್ಯಾರ್ಥಿ ಸಂಘ ಬಲವಾಗಿ ಖಂಡಿಸಿದೆ. ಇದು ‘ಅನಗತ್ಯ ನಿರ್ಧಾರ’ ಮತ್ತು ವಿವಿ ಮೇಲಿನ ‘ಘೋರ ದಾಳಿ’ ಎಂದು ಕರೆದಿರುವ ಸಂಘ, ವಿವಿ ಆಡಳಿತ ತನ್ನ ಅಂತಾರಾಷ್ಟ್ರೀಯ ವಿದ್ಯಾರ್ಥಿ ಸಮುದಾಯಕ್ಕೆ ದೃಢವಾದ ಬೆಂಬಲ ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದೆ.

ವಿದೇಶಿ ವಿದ್ಯಾರ್ಥಿಗಳು ವಿವಿಗೆ ದಾಖಲಾಗುವುದನ್ನು ತಡೆಯುವುದಲ್ಲದೆ, ಪ್ರಸ್ತುತ ಇರುವ ವಿದ್ಯಾರ್ಥಿಗಳು ಬೇರೆಡೆಗೆ ವರ್ಗಾವಣೆಯಾಗುವಂತೆ ಒತ್ತಾಯಿಸುವ ಬಗ್ಗೆ ಸಂಘ ಕಳವಳ ವ್ಯಕ್ತಪಡಿಸಿದೆ. ಈ ಸಂದಿಗ್ಥ ಪರಿಸ್ಥಿತಿಯಲ್ಲಿ ನಮ್ಮ ದಕ್ಷಿಣ ಏಷ್ಯಾದ ಗೆಳೆಯರು ಮತ್ತು ಇಡೀ ವಿದೇಶಿ ವಿದ್ಯಾರ್ಥಿ ಸಮುದಾಯದೊಂದಿಗೆ ನಾವು ಇದ್ದೇವೆ ಎಂದು ಸಂಘ ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿಕೊಂಡಿದೆ.

ಎಲ್ಲಾ ವಿದೇಶಿ ವಿದ್ಯಾರ್ಥಿಗಳು ನಮ್ಮ ಸಂಘ ಮತ್ತು ಹಾರ್ವರ್ಡ್ ವಿವಿಯ ಅವಿಭಾಜ್ಯ ಅಂಗ ಎಂದು ಸಂಘ ತಿಳಿಸಿದೆ.

1986ರಲ್ಲಿ ಸ್ಥಾಪನೆಯಾದ ದಕ್ಷಿಣ ಏಷ್ಯಾ ವಿದ್ಯಾರ್ಥಿ ಸಂಘ ನೂರಾರು ಸದಸ್ಯರನ್ನು ಹೊಂದಿರುವ ಹಾರ್ವರ್ಡ್ ಕ್ಯಾಂಪಸ್‌ನಲ್ಲಿ ಅತಿದೊಡ್ಡ ಮತ್ತು ಅತ್ಯಂತ ಸಕ್ರಿಯ ವಿದ್ಯಾರ್ಥಿ ಗುಂಪುಗಳಲ್ಲಿ ಒಂದಾಗಿದೆ. ಇದು ಎಲ್ಲಾ ಹಿನ್ನೆಲೆಯ ದಕ್ಷಿಣ ಏಷ್ಯನ್ನರಿಗೆ, ಮುಖ್ಯವಾಗಿ ವಲಸಿಗರು, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗಾಗಿ ಕೆಲಸ ಮಾಡುತ್ತದೆ.

ಪ್ರಸ್ತುತ, ಹಾರ್ವರ್ಡ್ ತನ್ನ ಸಂಸ್ಥೆಗಳಲ್ಲಿ ಪ್ರಪಂಚದ ವಿವಿಧ ಭಾಗಗಳ ಒಟ್ಟು 10,158 ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ನೆಲೆ ಕಲ್ಪಿಸಿದೆ.

ಹಾರ್ವರ್ಡ್ ಅಂತಾರಾಷ್ಟ್ರೀಯ ಕಚೇರಿಯ ವೆಬ್‌ಸೈಟ್‌ನಲ್ಲಿರುವ ಅಂಕಿ ಅಂಶಗಳ ಪ್ರಕಾರ, 2024-25ನೇ ಶೈಕ್ಷಣಿಕ ವರ್ಷದಲ್ಲಿ ಹಾರ್ವರ್ಡ್ ವಿಶ್ವವಿದ್ಯಾಲಯದ ವ್ಯಾಪ್ತಿಯ ಎಲ್ಲಾ ಸಂಸ್ಥೆಗಳಲ್ಲಿ ಭಾರತದ 788 ವಿದ್ಯಾರ್ಥಿಗಳು ಮತ್ತು ಸಂಶೋಧಕರು ಇದ್ದಾರೆ.

ಆಪರೇಷನ್ ಸಿಂಧೂರದ ಭಾಗವಾಗಿದ್ದ ಮಹಿಳಾ ವಿಂಗ್ ಕಮಾಂಡರನ್ನು ತೆಗೆದುಹಾಕದಂತೆ ಸುಪ್ರಿಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...