Homeಮುಖಪುಟಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

ಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಸರ್ಕಾರಿ ಬಸ್ಸೊಂದರಿಂದ ‘ಮಣಿಪುರ’ಎಂಬ ಹೆಸರನ್ನು ತೆಗೆದು ಹಾಕಿದ್ದನ್ನು ಖಂಡಿಸಿ ಮೈತೇಯಿ ಸಂಘಟನೆಯಾದ ಕೋ- ಆರ್ಡಿನೇಟಿಂಗ್ ಕಮಿಟಿ ಆನ್ ಮಣಿಪುರ್ ಇಂಟಗ್ರಿಟಿ (ಕೊಕೊಮಿ) ಕರೆ ನೀಡಿರುವ 48 ಗಂಟೆಗಳ ರಾಜ್ಯವ್ಯಾಪಿ ಬಂದ್‌ನಿಂದಾಗಿ ಮಣಿಪುರದ ಐದು ಜಿಲ್ಲೆಗಳಲ್ಲಿ ಸತತ ಎರಡನೇ ದಿನವಾದ ಶುಕ್ರವಾರವೂ (ಮೇ.23) ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ವ್ಯಾಪಾರ ಸಂಸ್ಥೆಗಳು, ಸರ್ಕಾರಿ, ಖಾಸಗಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಉಖ್ರುಲ್ ಜಿಲ್ಲೆಯ ‘ಶಿರುಯಿ ಲಿಲಿ’ ಉತ್ಸವಕ್ಕೆ ಪ್ರಯಾಣಿಸುವವರಿಗೆ ಮತ್ತು ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ, ಖಾಸಗಿ ವಾಹನಗಳ ಸಂಚಾರವನ್ನೂ ನಿರ್ಬಂಧಿಸಲಾಗಿದೆ.

ಬಿಷ್ಣುಪುರ ಮತ್ತು ತೌಬಲ್ ಜಿಲ್ಲೆಗಳಲ್ಲಿ ಬಂದ್ ಬೆಂಬಲಿಸಿ ಮಹಿಳೆಯರು ಕೇಂದ್ರ ಭದ್ರತಾ ಪಡೆ ವಾಹನಗಳನ್ನು ತಡೆದು ‘ಮಣಿಪುರ/ಕಾಂಗ್ಲೇಪಾಕ್’ ಎಂಬ ಸ್ಟಿಕರ್ ಅನ್ನು ಅವುಗಳ ವಿಂಡ್‌ಶೀಲ್ಡ್‌ಗಳಿಗೆ ಅಂಟಿಸಿಸಿದ್ದಾರೆ. ಕಾಂಗ್ಲೇಪಾಕ್ ಎಂಬುವುದು ಮಣಿಪುರದ ಐತಿಹಾಸಿಕ ಹೆಸರನ್ನು ಸೂಚಿಸುತ್ತದೆ.

ಶುಕ್ರವಾರ ಮುಂಜಾನೆ, ಇಂಫಾಲ್ ಪೂರ್ವ ಜಿಲ್ಲೆಯ ಆಂಡ್ರೊ ಪಾರ್ಕಿಂಗ್, ಕೊಂಗ್ಬಾ ಮತ್ತು ಖುರೈ ಪ್ರದೇಶಗಳಲ್ಲಿನ ರಸ್ತೆಬದಿಯ ತರಕಾರಿ ಮಾರಾಟಗಾರರಿಗೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ವ್ಯಾಪಾರ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಉರಿಪೋಕ್, ಸಿಂಗ್ಜಮೈ ಮತ್ತು ಕ್ವಾಕಿಥೆಲ್‌ನಲ್ಲಿಯೂ ಸಂಪೂರ್ಣ ಬಂದ್ ಪರಿಸ್ಥಿತಿಯಿದೆ ಎಂದು ವರದಿ ಹೇಳಿದೆ.

ಗುರುವಾರ ರಾತ್ರಿ 2 ಕಿಲೋಮೀಟರ್ ಪಂಜಿನ ಮೆರವಣಿಗೆ ನಡೆಸಿದ ಬಂದ್ ಪ್ರತಿಭಟನಾಕಾರರು “ಮಣಿಪುರವನ್ನು ಅಳಿಸಿಹಾಕಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಭದ್ರತಾ ದೃಷ್ಟಿಯಿಂದ ರಾಜಭವನಕ್ಕೆ ಹೋಗುವ ಆಯಕಟ್ಟಿನ ಸ್ಥಳಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಸಾಗಿಸುತ್ತಿದ್ದ ಬಸ್‌ನಲ್ಲಿದ್ದ ‘ಮಣಿಪುರ’ ರಾಜ್ಯದ ಹೆಸರನ್ನು ಭದ್ರತಾ ಸಿಬ್ಬಂದಿ ತೆಗೆದು ಹಾಕಿದ್ದಾರೆ ಎಂಬ ಆರೋಪದ ಬಗ್ಗೆ ರಾಜ್ಯ ಸರ್ಕಾರ ಬುಧವಾರ ತನಿಖೆ ಆರಂಭಿಸಿದೆ.

ಮಂಗಳವಾರ ಉಖ್ರುಲ್ ಜಿಲ್ಲಾ ಪ್ರವಾಸೋದ್ಯಮ ಉತ್ಸವಕ್ಕೆ ಅಥವಾ ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಅನ್ನು ತಡೆದ ಭದ್ರತಾ ಪಡೆಗಳು ಮಣಿಪುರ ಹೆಸರಿಗೆ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಡಿಐಪಿಆರ್ ಸಿಬ್ಬಂದಿ ವಿಂಡ್‌ಸ್ಕ್ರೀನ್‌ನಲ್ಲಿದ್ದ ರಾಜ್ಯದ ಹೆಸರನ್ನು ಬಿಳಿ ಕಾಗದದಿಂದ ಮರೆಮಾಡಬೇಕಾಯಿತು ಎಂದು ವರದಿಗಳು ಹೇಳಿವೆ.

ಈ ಬಗ್ಗೆ ತನಿಖೆ ಮಾಡಲು ರಾಜ್ಯ ಸರ್ಕಾರ ಇಬ್ಬರು ಸದಸ್ಯರ ಸಮಿತಿ ರಚಿಸಿದೆ. ಏನು ತಪ್ಪಾಗಿದೆ ಎಂಬುವುದರ ಬಗ್ಗೆ ಸಮಿತಿ ತನಿಖೆ ಮಾಡುತ್ತದೆ ಮತ್ತು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ಶಿಫಾರಸ್ಸುಗಳನ್ನು ನೀಡಲಿದೆ ಎಂದು ಸರ್ಕಾರ ಹೇಳಿದೆ.

ಆಯುಕ್ತರ ಎನ್. ಅಶೋಕ್ ಕುಮಾರ್ ಮತ್ತು ಕಾರ್ಯದರ್ಶಿ ಟಿ ಕಿರಣ್‌ಕುಮಾರ್ ಸಿಂಗ್ ಅವರನ್ನೊಳಗೊಂಡ ಸಮಿತಿಯು 15 ದಿನಗಳಲ್ಲಿ ತನಿಖಾ ವರದಿ ಸಲ್ಲಿಸಲಿದೆ.

ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರ ಕ್ಷಮೆಯಾಚನೆ ಮತ್ತು ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್, ಡಿಜಿಪಿ ರಾಜೀವ್ ಸಿಂಗ್ ಹಾಗೂ ಮುಖ್ಯ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿಂಗ್ ಅವರ ರಾಜೀನಾಮೆಗೆ ಒತ್ತಾಯಿಸಿ ಕೊಕೊಮಿ ಸಂಘಟನೆ ಬುಧವಾರ ಮಧ್ಯರಾತ್ರಿಯಿಂದ 48 ಗಂಟೆಗಳ ಸಾರ್ವತ್ರಿಕ ಮುಷ್ಕರವನ್ನು ಪ್ರಾರಂಭಿಸಿದೆ.

“ರಾಜ್ಯದ ಬಸ್‌ನಿಂದ ಮಣಿಪುರ ಹೆಸರನ್ನು ತೆಗೆದುಹಾಕಿದ ಕ್ರಮ ಮಣಿಪುರ ವಿರೋಧಿ ನಡೆಯಾಗಿದೆ. ಇದು ಮಣಿಪುರದ ಕಲ್ಪನೆ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಗುರುತಿನ ಪ್ರಶ್ನೆಯಾಗಿದೆ” ಎಂದು ಕೊಕೊಮಿ ಸಂಚಾಲಕ ಖುರೈಜಮ್ ಅಥೌಬಾ ಹೇಳಿದ್ದಾರೆ.

“ಯಾರ ಅದೇಶ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಣಿಪುರದ ಜನರಿಗೆ ಗೊತ್ತಾಗಬೇಕು. 48 ಗಂಟೆಗಳ ಒಳಗೆ ಸಾರ್ವಜನಿಕರಿಗೆ ಇದನ್ನು ಸ್ಪಷ್ಟಪಡಿಸಬೇಕು” ಎಂದು ಅಥೌಬಾ ಆಗ್ರಹಿಸಿದ್ದಾರೆ.

ಮಣಿಪುರದಲ್ಲಿ ಎರಡು ವರ್ಷಗಳ ನಂತರ ಶಿರುಯಿ ಲಿಲಿ ಉತ್ಸವ ಪುನರಾರಂಭಗೊಂಡಿದೆ. ಎನ್ ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆಗಳಿಗೆ ಸಾಕ್ಷಿಯಾದ ರಾಜ್ಯ ಈಗ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ನಕ್ಸಲ್ ಬಸವರಾಜ್ ಭಾಗಿಯಾಗಿದ್ದ: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...