Homeಮುಖಪುಟಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

ಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಸರ್ಕಾರಿ ಬಸ್ಸೊಂದರಿಂದ ‘ಮಣಿಪುರ’ಎಂಬ ಹೆಸರನ್ನು ತೆಗೆದು ಹಾಕಿದ್ದನ್ನು ಖಂಡಿಸಿ ಮೈತೇಯಿ ಸಂಘಟನೆಯಾದ ಕೋ- ಆರ್ಡಿನೇಟಿಂಗ್ ಕಮಿಟಿ ಆನ್ ಮಣಿಪುರ್ ಇಂಟಗ್ರಿಟಿ (ಕೊಕೊಮಿ) ಕರೆ ನೀಡಿರುವ 48 ಗಂಟೆಗಳ ರಾಜ್ಯವ್ಯಾಪಿ ಬಂದ್‌ನಿಂದಾಗಿ ಮಣಿಪುರದ ಐದು ಜಿಲ್ಲೆಗಳಲ್ಲಿ ಸತತ ಎರಡನೇ ದಿನವಾದ ಶುಕ್ರವಾರವೂ (ಮೇ.23) ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ವ್ಯಾಪಾರ ಸಂಸ್ಥೆಗಳು, ಸರ್ಕಾರಿ, ಖಾಸಗಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಉಖ್ರುಲ್ ಜಿಲ್ಲೆಯ ‘ಶಿರುಯಿ ಲಿಲಿ’ ಉತ್ಸವಕ್ಕೆ ಪ್ರಯಾಣಿಸುವವರಿಗೆ ಮತ್ತು ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ, ಖಾಸಗಿ ವಾಹನಗಳ ಸಂಚಾರವನ್ನೂ ನಿರ್ಬಂಧಿಸಲಾಗಿದೆ.

ಬಿಷ್ಣುಪುರ ಮತ್ತು ತೌಬಲ್ ಜಿಲ್ಲೆಗಳಲ್ಲಿ ಬಂದ್ ಬೆಂಬಲಿಸಿ ಮಹಿಳೆಯರು ಕೇಂದ್ರ ಭದ್ರತಾ ಪಡೆ ವಾಹನಗಳನ್ನು ತಡೆದು ‘ಮಣಿಪುರ/ಕಾಂಗ್ಲೇಪಾಕ್’ ಎಂಬ ಸ್ಟಿಕರ್ ಅನ್ನು ಅವುಗಳ ವಿಂಡ್‌ಶೀಲ್ಡ್‌ಗಳಿಗೆ ಅಂಟಿಸಿಸಿದ್ದಾರೆ. ಕಾಂಗ್ಲೇಪಾಕ್ ಎಂಬುವುದು ಮಣಿಪುರದ ಐತಿಹಾಸಿಕ ಹೆಸರನ್ನು ಸೂಚಿಸುತ್ತದೆ.

ಶುಕ್ರವಾರ ಮುಂಜಾನೆ, ಇಂಫಾಲ್ ಪೂರ್ವ ಜಿಲ್ಲೆಯ ಆಂಡ್ರೊ ಪಾರ್ಕಿಂಗ್, ಕೊಂಗ್ಬಾ ಮತ್ತು ಖುರೈ ಪ್ರದೇಶಗಳಲ್ಲಿನ ರಸ್ತೆಬದಿಯ ತರಕಾರಿ ಮಾರಾಟಗಾರರಿಗೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ವ್ಯಾಪಾರ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಉರಿಪೋಕ್, ಸಿಂಗ್ಜಮೈ ಮತ್ತು ಕ್ವಾಕಿಥೆಲ್‌ನಲ್ಲಿಯೂ ಸಂಪೂರ್ಣ ಬಂದ್ ಪರಿಸ್ಥಿತಿಯಿದೆ ಎಂದು ವರದಿ ಹೇಳಿದೆ.

ಗುರುವಾರ ರಾತ್ರಿ 2 ಕಿಲೋಮೀಟರ್ ಪಂಜಿನ ಮೆರವಣಿಗೆ ನಡೆಸಿದ ಬಂದ್ ಪ್ರತಿಭಟನಾಕಾರರು “ಮಣಿಪುರವನ್ನು ಅಳಿಸಿಹಾಕಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಭದ್ರತಾ ದೃಷ್ಟಿಯಿಂದ ರಾಜಭವನಕ್ಕೆ ಹೋಗುವ ಆಯಕಟ್ಟಿನ ಸ್ಥಳಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಸಾಗಿಸುತ್ತಿದ್ದ ಬಸ್‌ನಲ್ಲಿದ್ದ ‘ಮಣಿಪುರ’ ರಾಜ್ಯದ ಹೆಸರನ್ನು ಭದ್ರತಾ ಸಿಬ್ಬಂದಿ ತೆಗೆದು ಹಾಕಿದ್ದಾರೆ ಎಂಬ ಆರೋಪದ ಬಗ್ಗೆ ರಾಜ್ಯ ಸರ್ಕಾರ ಬುಧವಾರ ತನಿಖೆ ಆರಂಭಿಸಿದೆ.

ಮಂಗಳವಾರ ಉಖ್ರುಲ್ ಜಿಲ್ಲಾ ಪ್ರವಾಸೋದ್ಯಮ ಉತ್ಸವಕ್ಕೆ ಅಥವಾ ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಅನ್ನು ತಡೆದ ಭದ್ರತಾ ಪಡೆಗಳು ಮಣಿಪುರ ಹೆಸರಿಗೆ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಡಿಐಪಿಆರ್ ಸಿಬ್ಬಂದಿ ವಿಂಡ್‌ಸ್ಕ್ರೀನ್‌ನಲ್ಲಿದ್ದ ರಾಜ್ಯದ ಹೆಸರನ್ನು ಬಿಳಿ ಕಾಗದದಿಂದ ಮರೆಮಾಡಬೇಕಾಯಿತು ಎಂದು ವರದಿಗಳು ಹೇಳಿವೆ.

ಈ ಬಗ್ಗೆ ತನಿಖೆ ಮಾಡಲು ರಾಜ್ಯ ಸರ್ಕಾರ ಇಬ್ಬರು ಸದಸ್ಯರ ಸಮಿತಿ ರಚಿಸಿದೆ. ಏನು ತಪ್ಪಾಗಿದೆ ಎಂಬುವುದರ ಬಗ್ಗೆ ಸಮಿತಿ ತನಿಖೆ ಮಾಡುತ್ತದೆ ಮತ್ತು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ಶಿಫಾರಸ್ಸುಗಳನ್ನು ನೀಡಲಿದೆ ಎಂದು ಸರ್ಕಾರ ಹೇಳಿದೆ.

ಆಯುಕ್ತರ ಎನ್. ಅಶೋಕ್ ಕುಮಾರ್ ಮತ್ತು ಕಾರ್ಯದರ್ಶಿ ಟಿ ಕಿರಣ್‌ಕುಮಾರ್ ಸಿಂಗ್ ಅವರನ್ನೊಳಗೊಂಡ ಸಮಿತಿಯು 15 ದಿನಗಳಲ್ಲಿ ತನಿಖಾ ವರದಿ ಸಲ್ಲಿಸಲಿದೆ.

ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರ ಕ್ಷಮೆಯಾಚನೆ ಮತ್ತು ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್, ಡಿಜಿಪಿ ರಾಜೀವ್ ಸಿಂಗ್ ಹಾಗೂ ಮುಖ್ಯ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿಂಗ್ ಅವರ ರಾಜೀನಾಮೆಗೆ ಒತ್ತಾಯಿಸಿ ಕೊಕೊಮಿ ಸಂಘಟನೆ ಬುಧವಾರ ಮಧ್ಯರಾತ್ರಿಯಿಂದ 48 ಗಂಟೆಗಳ ಸಾರ್ವತ್ರಿಕ ಮುಷ್ಕರವನ್ನು ಪ್ರಾರಂಭಿಸಿದೆ.

“ರಾಜ್ಯದ ಬಸ್‌ನಿಂದ ಮಣಿಪುರ ಹೆಸರನ್ನು ತೆಗೆದುಹಾಕಿದ ಕ್ರಮ ಮಣಿಪುರ ವಿರೋಧಿ ನಡೆಯಾಗಿದೆ. ಇದು ಮಣಿಪುರದ ಕಲ್ಪನೆ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಗುರುತಿನ ಪ್ರಶ್ನೆಯಾಗಿದೆ” ಎಂದು ಕೊಕೊಮಿ ಸಂಚಾಲಕ ಖುರೈಜಮ್ ಅಥೌಬಾ ಹೇಳಿದ್ದಾರೆ.

“ಯಾರ ಅದೇಶ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಣಿಪುರದ ಜನರಿಗೆ ಗೊತ್ತಾಗಬೇಕು. 48 ಗಂಟೆಗಳ ಒಳಗೆ ಸಾರ್ವಜನಿಕರಿಗೆ ಇದನ್ನು ಸ್ಪಷ್ಟಪಡಿಸಬೇಕು” ಎಂದು ಅಥೌಬಾ ಆಗ್ರಹಿಸಿದ್ದಾರೆ.

ಮಣಿಪುರದಲ್ಲಿ ಎರಡು ವರ್ಷಗಳ ನಂತರ ಶಿರುಯಿ ಲಿಲಿ ಉತ್ಸವ ಪುನರಾರಂಭಗೊಂಡಿದೆ. ಎನ್ ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆಗಳಿಗೆ ಸಾಕ್ಷಿಯಾದ ರಾಜ್ಯ ಈಗ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ನಕ್ಸಲ್ ಬಸವರಾಜ್ ಭಾಗಿಯಾಗಿದ್ದ: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...