Homeಮುಖಪುಟಪ್ರಧಾನಿ ಮೋದಿಯ ರಕ್ತವು ಕ್ಯಾಮೆರಾಗಳು ಆನ್ ಆಗಿರುವಾಗ ಮಾತ್ರ ಕುದಿಯುತ್ತದೆಯೇ?: ರಾಹುಲ್ ಗಾಂಧಿ

ಪ್ರಧಾನಿ ಮೋದಿಯ ರಕ್ತವು ಕ್ಯಾಮೆರಾಗಳು ಆನ್ ಆಗಿರುವಾಗ ಮಾತ್ರ ಕುದಿಯುತ್ತದೆಯೇ?: ರಾಹುಲ್ ಗಾಂಧಿ

- Advertisement -
- Advertisement -

ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವನಾತ್ಮಕ ಭಾಷಣಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕ್ಯಾಮೆರಾಗಳು ಆನ್ ಆಗಿರುವಾಗ ಮಾತ್ರ ಅವರ ರಕ್ತ ಕುದಿಯುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ಆಯೋಜಿಸಿದ್ದಕ್ಕಾಗಿ ಮತ್ತು ಬೆಂಬಲಿಸಿದ್ದಕ್ಕಾಗಿ ಪಾಕಿಸ್ತಾನ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಆಪರೇಷನ್ ಸಿಂಧೂರ್ ಸ್ಪಷ್ಟಪಡಿಸಿದೆ ಎಂದು ಪ್ರಧಾನಿ ಮೋದಿ ಗುರುವಾರದಂದು ರಾಜಸ್ಥಾನದಲ್ಲಿ ಹೇಳಿದ್ದಾರೆ. “ನನ್ನ ರಕ್ತನಾಳಗಳಲ್ಲಿ ಕೇವಲ ರಕ್ತ ಮಾತ್ರ ಹರಿಯುತ್ತಿಲ್ಲ, ಬದಲಾಗಿ ಬಿಸಿ ಸಿಂಧೂರ್ (ಸಿಂಧೂರ)ವು ಕುದಿಯುತ್ತಿದೆ” ಎಂದು ಮೋದಿ ಘೋಷಿಸಿದ್ದರು.

“ಮೋದಿಜೀ, ಟೊಳ್ಳು ಭಾಷಣಗಳನ್ನು ಮಾಡುವುದನ್ನು ನಿಲ್ಲಿಸಿ. ಭಯೋತ್ಪಾದನೆಯ ಕುರಿತು ಪಾಕಿಸ್ತಾನದ ಹೇಳಿಕೆಯನ್ನು ನೀವು ಏಕೆ ನಂಬಿದ್ದೀರಿ ಎಂದು ಹೇಳಿ? ಟ್ರಂಪ್‌ಗೆ ನಮಸ್ಕರಿಸುವ ಮೂಲಕ ನೀವು ಭಾರತದ ಹಿತಾಸಕ್ತಿಗಳನ್ನು ಏಕೆ ತ್ಯಾಗ ಮಾಡಿದ್ದೀರಿ? ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಕುದಿಯುತ್ತದೆಯೇ? ನೀವು ಭಾರತದ ಗೌರವಕ್ಕೆ ಧಕ್ಕೆ ತಂದಿದ್ದೀರಿ!” ಎಂದು ಗಾಂಧಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಗುರುವಾರದಂದು, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರಧಾನಿ ನರೇಂದ್ರ ಮೋದಿಯವರು ಭವ್ಯವಾದ ಆದರೆ ಟೊಳ್ಳಾದ ಚಲನಚಿತ್ರ ಶೈಲಿಯ ಸಂಭಾಷಣೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಇಂದು ಬಿಕಾನೇರ್‌ನಲ್ಲಿ ಮಾಡಿದಂತೆ ಸಾರ್ವಜನಿಕ ರ್ಯಾಲಿಗಳಲ್ಲಿ ಭವ್ಯವಾದ ಆದರೆ ಟೊಳ್ಳಾದ ಚಲನಚಿತ್ರ ಸಂಭಾಷಣೆಗಳನ್ನು ಮಾಡುವ ಬದಲು, ಪ್ರಧಾನಿ ತಮ್ಮ ಬಗ್ಗೆ ಕೇಳಲಾಗುತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಜೈರಾಮ್ ರಮೇಶ್ ಪೋಸ್ಟ್ ಮಾಡಿದ್ದಾರೆ.

“ಪಹಲ್ಗಾಮ್‌ನ ಕ್ರೂರ ಹಂತಕರು ಇನ್ನೂ ಏಕೆ ಮುಕ್ತರಾಗಿದ್ದಾರೆ. ಕೆಲವು ವರದಿಗಳ ಪ್ರಕಾರ ಕಳೆದ 18 ತಿಂಗಳುಗಳಲ್ಲಿ ಪೂಂಚ್, ಗಗಂಗೀರ್ ಮತ್ತು ಗುಲ್ಮಾರ್ಗ್‌ನಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಗಳಿಗೆ ಅವರು ಕಾರಣರಾಗಿದ್ದರು. ನೀವು ಯಾವುದೇ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿಲ್ಲ ಮತ್ತು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಏಕೆ?” ಎಂದು ಅವರು ಪ್ರಶ್ನಿಸಿದರು.

ರಾಜಸ್ಥಾನಕ್ಕೆ ನೀಡಿದ ಭೇಟಿಯಲ್ಲಿ ಬಾಲಾಕೋಟ್ ವಾಯುದಾಳಿಯನ್ನು ಪ್ರಧಾನಿ ನೆನಪಿಸಿಕೊಂಡಿದ್ದಾರೆ.  ಏಪ್ರಿಲ್ 22ರಂದು ಭಯೋತ್ಪಾದಕರು ನಮ್ಮ ಸಹೋದರಿಯರ ಹಣೆಯ ಮೇಲಿನ ಸಿಂಧೂರವನ್ನು ಅವರ ಧರ್ಮದ ಬಗ್ಗೆ ಕೇಳುವ ಮೂಲಕ ನಾಶಪಡಿಸಿದರು. ಭಯೋತ್ಪಾದಕರ ಆ ಗುಂಡುಗಳು 140 ಕೋಟಿ ದೇಶವಾಸಿಗಳ ಹೃದಯಗಳನ್ನು ಚುಚ್ಚಿದವು. ಇದರ ನಂತರ ದೇಶದ ಪ್ರತಿಯೊಬ್ಬ ನಾಗರಿಕರು ಒಗ್ಗೂಡಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ನಿರ್ಧರಿಸಿದರು. ಅವರು ಊಹಿಸುವುದಕ್ಕಿಂತ ಹೆಚ್ಚಿನ ಮಟ್ಟದಲ್ಲಿ ನಾವು ಅವರನ್ನು ಶಿಕ್ಷಿಸುತ್ತೇವೆ ಎಂದು ರಾಹುಲ್ ಹೇಳಿದರು.

ಈ ತಿಂಗಳ ಆರಂಭದಲ್ಲಿ ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳನ್ನು ನಾಶಮಾಡುವ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಂಡಿತು. ನಂತರ ಭಾರತವು ಭಾರತೀಯ ಮಿಲಿಟರಿ ಸ್ಥಾಪನೆಗಳು ಮತ್ತು ನಾಗರಿಕ ಪ್ರದೇಶಗಳ ಮೇಲೆ ಪಾಕಿಸ್ತಾನಿ ಸಶಸ್ತ್ರ ಪಡೆಗಳ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ವಾಯುನೆಲೆಗಳಿಗೆ ಗಮನಾರ್ಹ ಹಾನಿಯನ್ನುಂಟುಮಾಡಿತು.

ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳು ಕದನ ವಿರಾಮ ಒಪ್ಪಂದಕ್ಕೆ ಬಂದ ನಂತರ ನಾಲ್ಕು ದಿನಗಳ ಕಾಲ ನಡೆದ ಯುದ್ಧವನ್ನು ವಿರಾಮಗೊಳಿಸಲಾಯಿತು.

ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...