Homeಮುಖಪುಟಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು...

ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ

- Advertisement -
- Advertisement -

ಮಾವೋವಾದಿಗಳ ಹಿಡಿತವಿದ್ದ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಹೊಸ ಕಬ್ಬಿಣದ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಾತ್ವಿಕ ಅರಣ್ಯ ಅನುಮತಿಯನ್ನು ನೀಡಿದೆ ಎಂದು indianexpress.com ವರದಿ ಮಾಡಿದೆ.

ಕೇಂದ್ರದ ಈ ತಾತ್ವಿಕ ಅನುಮತಿಯು 937 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲು ಮತ್ತು 1.23 ಲಕ್ಷ ಮರಗಳನ್ನು ಕಡಿಯಲು ಕಂಪನಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಸಚಿವಾಲಯದ ದಾಖಲೆಗಳು ಉಲ್ಲೇಖಿಸಿ ವರದಿ ಹೇಳಿದೆ.

ಗಡ್ಚಿರೋಲಿ ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ವಿಸ್ತರಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿರುವ ಮಧ್ಯೆ, ಪ್ರಸ್ತಾವಿತ ಸ್ಥಾವರಕ್ಕೆ ಅರಣ್ಯ ಅನುಮತಿ ದೊರೆತಿದೆ.

ಕಳೆದ ತಿಂಗಳು, ಮಹಾರಾಷ್ಟ್ರದ ಸಚಿವ ಸಂಪುಟವು ಪ್ರಮುಖ ಮತ್ತು ಸಣ್ಣ ಖನಿಜಗಳ ನಿರ್ವಹಣೆಗಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ಗಡ್ಚಿರೋಲಿ ಜಿಲ್ಲಾ ಗಣಿಗಾರಿಕೆ ಪ್ರಾಧಿಕಾರವನ್ನು ಸ್ಥಾಪಿಸಲು ಒಪ್ಪಿಗೆ ನೀಡಿದೆ. ಗಡ್ಚಿರೋಲಿ ಜಿಲ್ಲೆಯು ಕಬ್ಬಿಣದ ಅದಿರು, ಸುಣ್ಣದ ಕಲ್ಲು ಮತ್ತು ವಜ್ರ ನಿಕ್ಷೇಪಗಳನ್ನು ಹೊಂದಿದೆ ಎಂದು ಹೇಳಲಾಗ್ತಿದೆ.

ಸುರ್ಜಾಗಢದಲ್ಲಿ ಪ್ರಸ್ತುತ ಇರುವ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಕಂಪನಿಯ ಗಣಿಯಿಂದ ಹೊರತೆಗೆಯುವ ಕಡಿಮೆ ದರ್ಜೆಯ ಕಬ್ಬಿಣದ ಅದಿರನ್ನು (ಹೆಮಟೈಟ್ ಕ್ವಾರ್ಟ್‌ಜೈಟ್) ಸಂಸ್ಕರಿಸಲು ಈ ಹೊಸ ಸಂಸ್ಕರಣಾ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಸುರ್ಜಾಗಢದಲ್ಲಿ 348 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕಬ್ಬಿಣದ ಅದಿರು ಗಣಿಯ ಗುತ್ತಿಗೆಯನ್ನು 2007ರಲ್ಲಿ 20 ವರ್ಷಗಳ ಅವಧಿಗೆ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ ಕಂಪನಿಗೆ ನೀಡಲಾಗಿತ್ತು. ನಂತರ ಗುತ್ತಿಗೆಯನ್ನು ಮೇ 2057ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರಕ್ಕೆ ಸಲ್ಲಿಸಿರುವ ಕಂಪನಿ ದಾಖಲೆಗಳನ್ನು ಉಲ್ಲೇಖಿಸಿ indianexpress.com ಹೇಳಿದೆ.

ಅರಣ್ಯ ಅನುಮತಿ ಕೋರುವ ಪ್ರಸ್ತಾವನೆಗಳನ್ನು ಪರಿಶೀಲಿಸುವ ಕೇಂದ್ರ ಸಚಿವಾಲಯದ ಅರಣ್ಯ ಸಲಹಾ ಸಮಿತಿ (ಎಫ್‌ಎಸಿ) ಶಿಫಾರಸಿನ ಮೇರೆಗೆ ಮೇ 12ರಂದು ಹೊಸ ಅದಿರು ಸಂಸ್ಕರಣಾ ಘಟಕಕ್ಕೆ ಷರತ್ತುಬದ್ಧ ತಾತ್ವಿಕ ಅನುಮೋದನೆಯನ್ನು ನೀಡಲಾಗಿದೆ.

ಗಡ್ಚಿರೋಲಿ ಜಿಲ್ಲೆಯ ಅರಣ್ಯ ನಾಶಕ್ಕೆ ಪರಿಹಾರವಾಗಿ ಮಹಾರಾಷ್ಟ್ರದ ಕರಾವಳಿಯ ರತ್ನಗಿರಿ ಜಿಲ್ಲೆಯ ಚಿಪ್ಲುನ್‌ನಲ್ಲಿ 900 ಹೆಕ್ಟೇರ್‌ಗೂ ಹೆಚ್ಚು ಭೂಮಿಯಲ್ಲಿ ಅರಣ್ಯ ಬೆಳೆಸಲು ಪ್ರಸ್ತಾಪಿಸಲಾಗಿದೆ ಎಂದು ಎಫ್‌ಎಸಿ ಸಭೆಯ ಮಿನಿಟ್ಸ್ ತೋರಿಸಿದೆ ಎಂದು ವರದಿ ಹೇಳಿದೆ.

ಪರಿಸರ ಜವಾಬ್ದಾರಿ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಕಾಪಾಡಿಕೊಳ್ಳಲು ಗಡ್ಚಿರೋಲಿಯ ಅರಣ್ಯ ಭೂಮಿಯನ್ನು ಹಂತ ಹಂತವಾಗಿ ಮತ್ತು ನಿಯಂತ್ರಿತ ರೀತಿಯಲ್ಲಿ ಕಟ್ಟುನಿಟ್ಟಾಗಿ ಅದಿರು ಸಂಸ್ಕರಣಾ ಘಟಕ ಸ್ಥಾಪನೆಗೆ ಬಳಸಬೇಕು ಎಂಬುದು ಅನುಮತಿ ನೀಡುವಾಗ ವಿಧಿಸಿರುವ ಪ್ರಮುಖ ಷರತ್ತುಗಳಲ್ಲಿ ಒಂದಾಗಿದೆ.

ಮೊದಲ ಹಂತದ ಯಶಸ್ವಿ ಅನುಷ್ಠಾನ ಮತ್ತು ಪರಿಶೀಲನೆ ನಡೆದರೆ ಹಾಗೂ ಭೂಮಿಯ ಸಂಪೂರ್ಣ ಬಳಕೆಯ ನಂತರವೇ ಉಳಿದ 237.077 ಹೆಕ್ಟೇರ್‌ ಬಳಕೆಗೆ ಅನುಮತಿಸಲಾಗುತ್ತದೆ ಎಂದು ಹೇಳಲಾಗಿದೆ.

ತಡೋಬಾ ಹುಲಿ ಮೀಸಲು ಪ್ರದೇಶ ಮತ್ತು ಇಂದ್ರಾವತಿ ಹುಲಿ ಮೀಸಲು ಪ್ರದೇಶಗಳ ನಡುವೆ ಹುಲಿಗಳ ವಲಸೆಗೆ ಸಹಾಯ ಮಾಡುವ ಹುಲಿ ಕಾರಿಡಾರ್ ವ್ಯಾಪ್ತಿಯಲ್ಲಿ ಯೋಜನಾ ಪ್ರದೇಶದ ಒಂದು ಭಾಗ ಬರುವುದರಿಂದ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯಿಂದ ಅನುಮೋದನೆ ಪಡೆಯುವಂತೆ ಸಚಿವಾಲಯವು ಕಂಪನಿಗೆ ನಿರ್ದೇಶನ ನೀಡಿದೆ.

ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ ಕಂಪನಿ 2007ರಲ್ಲಿ ಗಣಿಗಾರಿಕೆ ಗುತ್ತಿಗೆಯನ್ನು ಪಡೆದಿದ್ದರೂ, ಗಣಿಗಾರಿಕೆ ಕಾರ್ಯಾಚರಣೆಗಳು ಪ್ರಾರಂಭವಾಗಿದ್ದು 2016ರಲ್ಲಿ ಆಗಿದೆ. ಮಾವೋವಾದಿಗಳ ತೀವ್ರ ವಿರೋಧ, ಬುಡಕಟ್ಟು ಮತ್ತು ಅರಣ್ಯ ಹಕ್ಕುಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬುಡಕಟ್ಟು ಸಮುದಾಯಗಳಿಂದ ವ್ಯಕ್ತವಾದ ತೀವ್ರ ತರಹದ ಪ್ರತಿಭಟನೆಗಳು ಮತ್ತು ಆಂದೋಲನಗಳು ಗಣಿಗಾರಿಕೆ ಪ್ರಾರಂಭಕ್ಕೆ ಅಡ್ಡಿಯಾಗಿತ್ತು.

ಡಿಸೆಂಬರ್ 2016ರಲ್ಲಿ, ಗಡ್ಚಿರೋಲಿಯ ಸುರ್ಜಾಗಢದಲ್ಲಿ ಮಾವೋವಾದಿಗಳು ಗಣಿಗಾರಿಕೆಗೆ ಸಂಬಂಧಿಸಿದ 69 ಟ್ರಕ್‌ಗಳು ಮತ್ತು ಮೂರು ಮಣ್ಣು ತೆಗೆಯುವ ಯಂತ್ರಗಳನ್ನು ಸುಟ್ಟುಹಾಕಿದ್ದರು. ಇದು ಈ ಪ್ರದೇಶದಲ್ಲಿ ಮಾವೋವಾದಿಗಳು ನಡೆಸಿದ ಅತಿದೊಡ್ಡ ದಾಳಿಗಳಲ್ಲಿ ಒಂದಾಗಿದೆ. 2016ರ ಘಟನೆಗೂ ಮುನ್ನ ಲಾಯ್ಡ್ ಸ್ಟೀಲ್‌ನ ಉಪಾಧ್ಯಕ್ಷ ಜಸ್ಪಾಲ್ ಸಿಂಗ್ ಧಿಲ್ಲೋನ್ ಅವರನ್ನು ಮಾವೋವಾದಿಗಳು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಇದನ್ನೂ ಮಾವೋವಾದಿಗಳೇ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಾರಾಷ್ಟ್ರದ ನಕ್ಸಲ್ ವಿರೋಧಿ ಕಮಾಂಡೋ ಪಡೆ ಸಿ60ಯ ಮತ್ತು ಕೇಂದ್ರ ಪಡೆಗಳ ಕಾರ್ಯಾಚರಣೆಗಳಿಂದಾಗಿ ಗಡ್ಚಿರೋಲಿಯಲ್ಲಿ ಮಾವೋವಾದಿ ಹಿಡಿತ ಕ್ರಮೇಣ ಕಡಿಮೆಯಾಗಿದೆ ಎಂದು ವರದಿ ಹೇಳಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ವರ್ಷದ ಮೊದಲ ದಿನವನ್ನು ಗಡ್ಚಿರೋಲಿಯಲ್ಲಿ ಕಳೆದಿದ್ದರು. ಅಲ್ಲಿ 11 ಮಾವೋವಾದಿಗಳು ಸಿಎಂ ಮುಂದೆ ಶರಣಾಗಿದ್ದರು. ಇದೇ ವೇಳೆ ಸಿಎಂ 32 ಕಿಮೀ ಉದ್ದದ ರಾಜ್ಯ ಸಾರಿಗೆ ಬಸ್ ಸೇವೆಯನ್ನು ಸಹ ಉದ್ಘಾಟಿಸಿದ್ದರು.

ಈಶಾನ್ಯ ರಾಜ್ಯಗಳಲ್ಲಿ ರಿಲಯನ್ಸ್ 75,000 ಕೋಟಿ ರೂ. ಹೂಡಿಕೆ ಮಾಡಲಿದೆ: ಮುಖೇಶ್ ಅಂಬಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...