Homeಕರ್ನಾಟಕಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

ಕಾಂಗ್ರೆಸ್ ಅಧಿಕಾರ ಹಿಡಿದು ಬಿಜೆಪಿಯ ನೀತಿಯನ್ನು ಮುಂದುವರಿಸಿದೆ: ಎದ್ದೇಳು ಕರ್ನಾಟಕ ಆಕ್ರೋಶ

- Advertisement -
- Advertisement -

ವಿಪಕ್ಷದಲ್ಲಿದ್ದಾಗ ಬಿಜೆಪಿ ತಂದಿದ್ದ ಜಾನುವಾರು ಹತ್ಯೆ ಕಾಯ್ದೆ, ಭೂ ಸುದಾರಣೆ ಕಾಯ್ದೆ, ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 12ಕ್ಕೆ ಏರಿಸುವುದರ ವಿರುದ್ಧ ಮಾತಾನಾಡಿದ್ದ ಕಾಂಗ್ರೆಸ್, ಅಧಿಕಾರ ಹಿಡಿದು ಅದನ್ನೇ ಮುಂದುವರಿಸಿದೆ ಎಂದು ‘ಎದ್ದೇಳು ಕರ್ನಾಟಕ’ದ ಕೇಂದ್ರ ಸಮಿತಿ ಸದಸ್ಯ, ರೈತ ಮುಖಂಡ ವೀರ ಸಂಗಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು. ಎದ್ದೇಳು ಕರ್ನಾಟಕ ಸಂಘಟನೆಯು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಅಧಿಕಾರ ಹಿಡಿದು

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೀರ ಸಂಗಯ್ಯ ಅವರು, “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಅದಕ್ಕಿಂತಲೂ ಮುಂಚೆ ಬಿಜೆಪಿಯಿಂದ ರೋಸಿ ಹೋಗಿದ್ದ ರೈತ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನರು ಹೋರಾಟ ನಡೆಸಿ ಬಿಜೆಪಿಯನ್ನು ಸೋಲಿಸಿದರು. ಅದಾಗ್ಯೂ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಕೋಮುಗಲಭೆ ನಡೆದಿದೆ. ಅದರ ಬಗ್ಗೆ ಅವರು ಸರಿಯಾದ ನಿಲುವು ತೆಗೆದುಕೊಂಡಿಲ್ಲ. ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ ಬೀದಿಯಲ್ಲಿ ಚಳವಳಿಗಳ ಮೂಲಕ ಎದುರಿಸಲಿದ್ದೇವೆ” ಎಂದು ಹೇಳಿದರು.

ಹೋರಾಟಗಾರ ಕೆ.ಎಲ್. ಅಶೋಕ್ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದ್ದಾಗ ಅದನ್ನು ಅವಲೋಕನ ಸಮಾವೇಶ ಮಾಡಿ ಎಂದಿದ್ದೆವು. ಇದೇ ರೀತಿ ಮಾಡಿದರೆ ಮುಂದಿನ ಚುನಾವಣೆಯಲ್ಲಿ ನೀವು ಮನೆಗೆ ಹೋಗುತ್ತೀರಿ” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಎರಡು ವರ್ಷಗಳಾದರೂ ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ನೀತಿಗಳನ್ನು ಯಾಕೆ ವಾಪಾಸು ತೆಗೆದುಕೊಂಡಿಲ್ಲ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ವಿರುದ್ಧವಾಗಿ ಬಂದ ನೀವು ಕೂಡಾ ಭ್ರಷ್ಟಾಚಾರ ಮುಂದುವರೆಸಿದ್ದೀರಿ. ಹಾಗಾಗದರೆ ಅವರಿಗೂ, ನಿಮಗೂ ವ್ಯಾತ್ಯಾಸ ಏನಿದೆ. ಬಿಜೆಪಿಯದೆ ನೀತಿಯನ್ನು ನೀವು ಅನುಸರಿಸುತ್ತಿದ್ದೀರಿ. ಜನ ವಿರೋಧಿ ಕಾಯ್ದೆಯನ್ನು ಬಡವರ ಸಮಾಧಿ ಮೇಲೆ ಜಾರಿಗೆ ತರುತ್ತಿದ್ದೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರದ ವಿರುದ್ಧ ನಾವು ಈ ಹಿಂದೆ ಕೂಡಾ ಮಾಡಿದ್ದೇವೆ.‌ಕರ್ನಾಟಕದ ಅರ್ಧ ಜನರು ಭೂಮಿ ಮತ್ತು ವಸತಿ ಹೀನರಾಗಿದ್ದಾರೆ. ಸರ್ಕಾರದ ಕಣ್ಣು ಕುರುಡಾಗಿದ್ದು ಕಿವಿ ಕೇಳಿಸುತ್ತಿಲ್ಲ. ನೀವು ಇದೇ ರೀತಿ ಮುಂದುವರೆದರೆ ಘನಘೋರ ಪರಿಸ್ಥಿತಿಗೆ ತಲುಪಲಿದ್ದೀರಿ. ಎರಡ ವರ್ಷ ಕಾದರೂ ಏನೂ ಆಗದ ಕಾರಣಕ್ಕೆ ಸರ್ಕಾರದ ವಿರುದ್ಧ ಸಂಗ್ರಾಮಕ್ಕೆ ಮುಂದಾಗಿದ್ದೇವೆ. ಇದಕ್ಕೂ ಕೇಳಿಲ್ಲ ಎಂದರೆ ಜನ ಚಳವಳಿಗಳು ಮತ್ತಷ್ಟು ಜಾಸ್ತಿಯಾಗುತ್ತದೆ” ಎಂದು ಅಶೋಕ್ ಹೇಳಿದರು.

ಮಾಜಿ ಸಚಿವರಾದ ಬಿಟಿ ಲಲಿತಾ ನಾಯಕ್ ಮಾತನಾಡಿ, “ರಾಜ್ಯದಲ್ಲಿ ಶ್ರೀಮಂತರನ್ನು ಬಿಟ್ಟು ಎಲ್ಲರೂ ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಪರದಾಡುವಂತಾಗಿದೆ. ಗ್ಯಾರೆಂಟಿ ಯೋಜನೆ ರೀತಿಯ ಐದಾರು ಅಂಶಗಳನ್ನು ತಂದ ಮಾತ್ರಕ್ಕೆ, ಅದನ್ನೆ ಸರ್ಕಾರದ ದೊಡ್ಡ ಸಾಧನೆ ಎಂದು ಹೇಳಬೇಕೆ? ಬೆಂಗಳೂರಿನಲ್ಲಿ ಮಳೆ ಬಂದು ಜನರು ಸಂಕಷ್ಟದಲ್ಲಿದ್ದಾಗ ಈ ಹಿಂದೆಯೂ ನೀರು ತುಂಬಿಕೊಳ್ಳುತ್ತಿತ್ತು, ಗುಂಡಿ ಇತ್ತು ಎಂದು ಹೇಳುವುದಾದರೆ ನೀವು ಯಾಕೆ ಅಧಿಕಾರಕ್ಕೆ ಬರಬೇಕಿತ್ತು? ಬಿಜೆಪಿ ಇದ್ದರೆ ಸಾಕಿತ್ತಲ್ಲವೆ” ಎಂದು ಪ್ರಶ್ನಿಸಿದರು.

“ಈ ರೀತಿಯಾಗಿ ಮಾತನಾಡಲು ನೀವು ಯಾಕೆ ಬೇಕು? ಬಿಜೆಪಿ ಕೂಡಾ ಅದನ್ನೇ ಮಾಡಿಕೊಂಡು ಬಂದಿದೆ. ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲದಾಗಿದೆ. ಕೋಮುಗಲಭೆ ಹೆಚ್ಚಾಗಿದೆ. ನಿಮ್ಮ ಪರವಾಗಿ ಕೆಲಸ ಮಾಡಿದ ಸಂಘಟನೆಗಳಿಗೆ ನಿಮ್ಮನ್ನು ಸರಿ ಮಾಡಬೇಕಾದ ತುರ್ತಿದೆ. ಯಾವ ವಂಚನೆ ಇಲ್ಲದೆ ಜನರ ಪರವಾಗಿ ಕೆಲಸ ಮಾಡಿ ಎಂದು ಹೇಳುತ್ತಿದ್ದೇವೆ” ಎಂದು ಹೇಳಿದರು.

ದಲಿತ ಹಕ್ಕುಗಳ ಹೋರಾಟಗಾರ ಎನ್. ವೆಂಕಟೇಶ್ ಮಾತನಾಡಿ, “ಬಿಜೆಪಿ ಸೋಲಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆ ಅಡಿಯಲ್ಲಿ ಚುನಾವಣೆ ವೇಳೆ ದಸಂಸ ಕಾಂಗ್ರೆಸ್‌ಗೆ ಬೆಂಬಲ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ನಂತರ ನಿರಾಸೆ ಕಾಂಗ್ರೆಸ್ ಮೂಡಿಸಿದೆ. ಮಂಗಳೂರಿನಲ್ಲಿ ಇಡೀ ಸಮುದಾಯಯವನ್ನೆ ಕೋಮುವಾದಿಕರಣ ಮಾಡಲಾಗುತ್ತಿದೆ. ಕೋಮು ಘಟನೆಗಳು ನಡೆಯುವಲ್ಲಿ ದಕ್ಷ ಅಧಿಕಾರಿಗಳನ್ನು ನೇಮಿಸಬೇಕಿದೆ.” ಎಂದು ಹೇಳಿದರು.

“ಭ್ರಷ್ಟಾಚಾರ ಬಗ್ಗೆ ಸಂಬಂಧಪಟ್ಟ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಏನೂ ಮಾತನಾಡುತ್ತಿರಲಿಲ್ಲ. ಅವರು ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂಬ ಸಂಶಯ ಕಾಡುತ್ತಿದೆ. ಕೇಂದ್ರ ಸರ್ಕಾರ ಎನ್ಇಪಿ ತಂದು ಶಿಕ್ಷಣವನ್ನು ಕೋಮುವಾದಿಕರಣ ಮಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕು. ಇಲ್ಲವೆಂದರೆ ದಸಂಸ ಇತರ ಪ್ರಗತಿಪರ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಬೇಕಾಗುತ್ತದೆ” ಎಂದು ವೆಂಕಟೇಶ್ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಅಧಿಕಾರ ಹಿಡಿದು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...