Homeಮುಖಪುಟತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

- Advertisement -
- Advertisement -

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರಿಗೆ ಮಗಳು ಕೆ.ಕವಿತಾ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ವೈರಲ್ ಆಗಿದ್ದು, ರಾಜ್ಯದಲ್ಲಿ ಹೊಸ ರಾಜಕೀಯ ಚರ್ಚೆಯನ್ನು ಹುಟ್ಟು ಹಾಕಿದೆ.

ತೆಲಂಗಾಣದಲ್ಲಿ ಬಿಜೆಪಿ ಜೊತೆ ಬಿಆರ್‌ಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳು ದಟ್ಟವಾಗಿ ಹರಡಿತ್ತು. ಈ ನಡುವೆ ಕವಿತಾ ಅವರದ್ದು ಎನ್ನಲಾದ ಪತ್ರದ ಕೆಲವೊಂದು ಅಂಶಗಳು ಸಂಚಲನ ಸೃಷ್ಟಿಸಿದೆ.

ವೈರಲ್ ಪತ್ರದ ನೈಜತೆ ಇನ್ನೂ ದೃಢಪಡದಿದ್ದರೂ, ಈ ಕುರಿತು ಕವಿತಾರ ಕಚೇರಿಯಾಗಲಿ ಅಥವಾ ಕೆ.ಚಂದ್ರಶೇಖರ್ ಅವರಿಂದಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

“ನೀವು (ಕೆಸಿಆರ್) ಕೇವಲ ಎರಡು ನಿಮಿಷಗಳ ಕಾಲ ಮಾತನಾಡಿದರೂ, ಭವಿಷ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಏರ್ಪಡುತ್ತದೆ ಎಂದು ಕೆಲವರು ಊಹಿಸಲು ಪ್ರಾರಂಭಿಸಿದ್ದಾರೆ. ನೀವು (ಬಿಜೆಪಿ ವಿರುದ್ಧ) ಇನ್ನೂ ಬಲವಾಗಿ ಮಾತನಾಡಬೇಕಿತ್ತು ಎಂದು ನಾನು ವೈಯಕ್ತಿಕವಾಗಿ ಭಾವಿಸಿದ್ದೇನೆ. ಬಹುಶಃ ನಾನು (ಬಿಜೆಪಿಯಿಂದಾಗಿ) ತೊಂದರೆ ಅನುಭವಿಸಿದ್ದರಿಂದ ಹಾಗೆ ಅನಿಸಿರಬಹುದು. ಆದರೆ, ನೀವು ಬಿಜೆಪಿಯನ್ನು ಇನ್ನೂ ಸ್ವಲ್ಪ ಹೆಚ್ಚು ಗುರಿಯಾಗಿಸಿಕೊಳ್ಳಬೇಕಿತ್ತು ಅಪ್ಪಾ” ಎಂದು ಕವಿತಾ ಅವರು ತಂದೆಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ, ಪರಿಶಿಷ್ಟ ಜಾತಿ ಒಳ ಮೀಸಲಾತಿ, ವಕ್ಫ್ ತಿದ್ದುಪಡಿ ಕಾಯ್ದೆ ಮತ್ತು ತಮ್ಮ ಭಾಷಣದಲ್ಲಿ ಉರ್ದು ಭಾಷೆಯನ್ನು ಕೈಬಿಟ್ಟಿರುವುದು ಮುಂತಾದ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ನೀವು (ಕೆಸಿಆರ್) ಮೌನ ವಹಿಸಿರುವುದು ನಕಾರಾತ್ಮಕ ಪ್ರತಿಕ್ರಿಯೆಗೆ ಕಾರಣ” ಎಂದು ಪತ್ರದಲ್ಲಿ ಹೇಳಲಾಗಿದೆ

“ಕಾಂಗ್ರೆಸ್ ಸರ್ಕಾರವು ತಳಮಟ್ಟದ ಜನ ಬೆಂಬಲವನ್ನು ಕಳೆದುಕೊಂಡಿದೆ. ಕೆಲವು ಬಿಆರ್‌ಎಸ್ ಕಾರ್ಯಕರ್ತರು ಈಗ ಬಿಜೆಪಿಯನ್ನು ಪರ್ಯಾಯವಾಗಿ ನೋಡುತ್ತಿದ್ದಾರೆ. ಇತ್ತೀಚಿನ ಎಂಎಲ್‌ಸಿ ಚುನಾವಣೆಯಲ್ಲಿ ಬಿಆರ್‌ಎಸ್ ಸ್ಪರ್ಧಿಸದಿರಲು ನಿರ್ಧರಿಸಿದ್ದು, ನಾವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಬಲವಾದ ಸೂಚನೆಯನ್ನು ಪಕ್ಷದ ಕಾರ್ಯಕರ್ತರಿಗೆ ರವಾನಿಸಿದೆ” ಎನ್ನಲಾಗಿದೆ.

“ರಾಜಕೀಯ ಸನ್ನಿವೇಶವನ್ನು ಪರಿಹರಿಸಲು ನೀವು ನಿರ್ದಿಷ್ಟ ಕಾರ್ಯಕ್ರಮಗಳು ಅಥವಾ ಮಾರ್ಗಸೂಚಿಗಳನ್ನು ನೀಡುತ್ತೀರಿ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಕನಿಷ್ಠ ಈಗ ನಾವು ಒಂದು ಅಥವಾ ಎರಡು ದಿನಗಳ ಕಾಲ ಸಮಗ್ರ ಸಭೆಯನ್ನು ನಡೆಸಬಹುದು. ಕಾರ್ಯಕರ್ತರಿಂದ ಸಾಧ್ಯವಾದಷ್ಟು ಅಭಿಪ್ರಾಯಗಳನ್ನು ಸಂಗ್ರಹಿಸಿ ಅವರಿಗೆ ಮಾರ್ಗಸೂಚಿಯನ್ನು ನೀಡಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಈ ಪತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಗಂಟೆಗಳೇ ಕಳೆದಿದ್ದರೂ, ವಿರೋಧ ಪಕ್ಷವಾದ ಬಿಆರ್‌ಎಸ್‌ ಈವರೆಗೆ ಪತ್ರವನ್ನು ನಿರಾಕರಿಸಿಲ್ಲ. ಬಿಆರ್‌ಎಸ್ ತನ್ನ ವಜ್ರ ಮಹೋತ್ಸವವನ್ನು ಏಪ್ರಿಲ್ 27 ರಂದು ವಾರಂಗಲ್‌ನಲ್ಲಿ ಆಚರಿಸಿತ್ತು.

ವಾರಂಗಲ್ ಕಾರ್ಯಕ್ರಮದ ಸಂದರ್ಭದಲ್ಲಿ ತೆಲಂಗಾಣ ಚಳವಳಿಯ ಕೆಲವು ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳಲಾಗಿಲ್ಲ ಅಥವಾ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ಪತ್ರವು ಕಳವಳ ವ್ಯಕ್ತಪಡಿಸಿದೆ.

ಸಕಾರಾತ್ಮಕವಾಗಿ, “ಆಪರೇಷನ್ ಕಾಗರ್” ಬಗೆಗಿನ ಕೆಸಿಆರ್ ನಿಲುವನ್ನು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗಾಗಿ ಅವರು ಮೌನ ಆಚರಿಸಿದ ಕ್ಷಣವನ್ನು ಶ್ಲಾಘಿಸಲಾಗಿದೆ. ವಾರಂಗಲ್ ಕಾರ್ಯಕ್ರಮದ ಯಶಸ್ಸಿಗೆ ಕೆಸಿಆರ್ ಅವರನ್ನು ಅಭಿನಂದಿಸುತ್ತಾ ಪತ್ರವನ್ನು ಮುಕ್ತಾಯಗೊಳಿಸಲಾಗಿದೆ.

ಬಿಆರ್‌ಎಸ್ ಎಂಎಲ್‌ಸಿಯೂ ಆಗಿರುವ ಕವಿತಾ ಅವರು ತಮ್ಮ ಮಗನ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಪ್ರಸ್ತುತ ಅಮೆರಿಕದಲ್ಲಿರುವುದರಿಂದ ಅವರು ವೈರಲ್ ಪತ್ರದ ಬಗ್ಗೆ ತಕ್ಷಣದ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿಗಳು ತಿಳಿಸಿವೆ.

ವೈರಲ್ ಪತ್ರವನ್ನು ಕವಿತಾ ಅವರೇ ನಿಜವಾಗಿಯೂ ಬರೆದಿದ್ದಾರೆಯೇ ಎಂಬುವುದು ಖಚಿತವಾಗಿಲ್ಲ. ಒಂದು ವೇಳೆ ಅವರೇ ಬರೆದಿದ್ದರೂ, ಅದರಲ್ಲಿ ಆಶ್ಚರ್ಯ ಪಡುವಂತದ್ದು ಏನೂ ಇಲ್ಲ. ಪತ್ರದ ವಿಷಯಗಳು ಪ್ರತಿಕ್ರಿಯೆಯ ಸ್ವರೂಪದ್ದಾಗಿವೆ ಎಂದು ಬಿಆರ್‌ಎಸ್ ಎಂಎಲ್‌ಸಿ ಶ್ರವಣ್ ದಾಸೋಜು ಹೇಳಿದ್ದಾರೆ.

“ಒಬ್ಬರು ಮಗಳು ತಂದೆಗೆ ಅಥವಾ ಒಬ್ಬ ಸರ್ವೋಚ್ಚ ನಾಯಕನಿಗೆ ನೀಡುವ ಸಾಮಾನ್ಯ ಪ್ರತಿಕ್ರಿಯೆ ಇದು. ಇದು ಜನರಿಂದ ಪಡೆದ ಪ್ರತಿಕ್ರಿಯೆಯನ್ನು ಕ್ರೋಢೀಕರಿಸಿ ರವಾನಿಸಿದಂತಿದೆ” ಎಂದಿದ್ದಾರೆ.

ವೈರಲ್ ಪತ್ರವು ಬಿಆರ್‌ಎಸ್‌ ಪಕ್ಷದಲ್ಲಿನ ಆಂತರಿಕ ಬಿರುಕುಗಳನ್ನು ಬಯಲು ಮಾಡಿದೆ ಎಂಬ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಅಭಿಪ್ರಾಯಗಳ ಬಗ್ಗೆ ಕೇಳಿದಾಗ, “ಭತ್ತ ಖರೀದಿ ಮತ್ತು ನಿರುದ್ಯೋಗದಂತಹ ಜನರಿಗೆ ಹೆಚ್ಚು ಪ್ರಸ್ತುತವಾದ ಇತರ ವಿಷಯಗಳಿವೆ” ಎಂದು ದಾಸೋಜು ಹೇಳಿದ್ದಾರೆ.

ನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...