Homeಮುಖಪುಟಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!

ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!

- Advertisement -
- Advertisement -

ಮಧ್ಯಪ್ರದೇಶದ ಬಿಜೆಪಿ ಮುಖಂಡರೊಬ್ಬರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ನಿಂತು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೆದ್ದಾರಿಯ ಮಧ್ಯೆಯೆ

ಕಾಮಕೃತ್ಯದಲ್ಲಿ ತೊಡಗಿಸಿಕೊಂಡು ಸಿಕ್ಕಿಬಿದ್ದಿರುವ ಬಿಜೆಪಿ ಮುಖಂಡನನ್ನು ಮನೋಹರ್‌ಲಾಲ್ ಧಾಕಡ್‌ ಎಂದು ಗುರುತಿಸಲಾಗಿದೆ. ಈತ ಮಧ್ಯಪ್ರದೇಶದ ಮಂದ್ಸೌ‌ರ್‌ನ ಸಕ್ರಿಯ ಬಿಜೆಪಿ ನಾಯಕನಾಗಿದ್ದು, ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಘಟಕದಲ್ಲೂ ಜವಾಬ್ದಾರಿ ಹೊಂದಿದ್ದರು ಎಂದು ತಿಳಿದುಬಂದಿದೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರನ್ನು ನಿಲ್ಲಿಸಿದ ಬಳಿಕ, ಕಾರಿನಿಂದ ಇಳಿಯುವ ನಗ್ನ ಮಹಿಳೆಯೊಂದಿಗೆ ರಸ್ತೆಯಲ್ಲೇ ನಿಂತು ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಘಟನೆಯು ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿರುವುದಾಗಿ ವರದಿಯಾಗಿದೆ. ಕಾಮಕೃತ್ಯದ ವಿಡಿಯೋ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ಕಾರಿನ ನಂಬರ್ ಪ್ಲೇಟ್ ಅನ್ನು ಆಧರಿಸಿ ಪರಿಶೀಲನೆ ನಡೆಸಿದಾಗ ಕಾರು ಮನೋಹರ್ ಲಾಲ್ ಧಾಕಡ್ ಅವರಿಗೆ ಸೇರಿದ್ದೆಂದು ತಿಳಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಭಾನ್ಪುರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 296, 285, 3 (5) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಂದ್ಸೌ‌ರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಆನಂದ್‌, “ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋ ಗಮನಕ್ಕೆ ಬಂದಿದೆ. ತನಿಖೆಯ ವೇಳೆ ಆ ವಿಡಿಯೋ ದೆಹಲಿ ಮುಂಬೈ ಅಷ್ಟಪಥದ ಎಕ್ಸ್‌ಪ್ರೆಸ್‌ವೇಯ ಪ್ರದೇಶದ್ದು ಎಂದು ಕಂಡುಬಂದಿದೆ. ಈ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ, ಭಾನ್ಪುರದಲ್ಲಿ ಸೆಕ್ಷನ್ 296, 285, 3 (5) ಬಿ.ಎನ್.ಎಸ್. ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಮನೋಹರ್ ಲಾಲ್ ಧಾಕಡ್ ಅವರಿಗೆ ಇತ್ತೀಚೆಗಷ್ಟೇ ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾದಲ್ಲೂ ಪ್ರಮುಖ ಜವಾಬ್ದಾರಿ ನೀಡಲಾಗಿತ್ತು ಎಂದು ವರದಿಯಾಗಿದೆ. ಈ ಘಟನೆಯು ಸುಮಾರು ನಾಲ್ಕು ದಿನಗಳ ಹಿಂದೆ ನಡೆದಿದ್ದೆಂದು ವರದಿಯಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರಾದರೂ, ಮನೋಹರ್‌ಲಾಲ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮನೋಹರ್‌ಲಾಲ್ ಧಾಕಡ್‌ ಅವರು ವಿವಾಹಿತರಾಗಿದ್ದು, ಅವರ ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯರು ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮನೋಹರ್‌ಲಾಲ್ ಧಾಕಡ್‌ ಅವರ ಈ ಕಾಮಕೃತ್ಯದ ವಿಡಿಯೋ ವೈರಲಾಗುತ್ತಿದ್ದಂತೆಯೇ ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಮಧ್ಯಪ್ರದೇಶದ ಕಾಂಗ್ರೆಸ್, “ಮಂದ್ಸೌ‌ರ್ ಬಿಜೆಪಿ ನಾಯಕ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯ ಪತಿಯಾಗಿರುವ ಮನೋಹರ್‌ಲಾಲ್ ಧಾಕಡ್‌ ಅವರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಶ್ಲೀಲ ಕೃತ್ಯದ ಅತ್ಯಂತ ಆಕ್ಷೇಪಾರ್ಹ ವೀಡಿಯೊ ವೈರಲ್ ಆಗಿ ನಾಲ್ಕು ದಿನಗಳಾಗಿವೆ. ಆದರೂ ಬಿಜೆಪಿಯ ಅವರನ್ನು ಪಕ್ಷದಿಂದ ಉಚ್ಛಾಟಿಸಿಲ್ಲ” ಎಂದು ಹೇಳಿದೆ.

“ಬಿಜೆಪಿಯ ಜಿಲ್ಲಾಧ್ಯಕ್ಷರು ವಿಡಿಯೋದ ಸತ್ಯಾಸತ್ಯತೆಯವನ್ನು ಪರಿಶೀಲಿಸುವುದಾಗಿ ಹೇಳುತ್ತಿದ್ದಾರೆ. ಬಿಜೆಪಿ ನಾಯಕರ ಚಾರಿತ್ರ್ಯ ಪಾತಾಳಕ್ಕೆ ತಲುಪಿದೆ ಎಂಬುದು ಇಂತಹ ಕೃತ್ಯಗಳಿಂದ ತಿಳಿಯಬಹುದು. ಇದು ಇಡೀ ಸಮಾಜಕ್ಕೆ ಅವಮಾನಕರ ಘಟನೆ. ಅಧಿಕಾರದ ದುರಾಸೆಯಲ್ಲಿ ಪಕ್ಷವು ನೈತಿಕತೆಯನ್ನು ಚರಂಡಿಗೆ ಎಸೆದಿದೆ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಹೆದ್ದಾರಿಯ ಮಧ್ಯೆಯೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

ಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...