Homeಮುಖಪುಟ'ಪಹಲ್ಗಾಮ್‌ನಲ್ಲಿ ಮಹಿಳೆಯರಿಗೆ ವೀರೋಚಿತ ಗುಣಗಳಿರಲಿಲ್ಲ': ಭಯೋತ್ಪಾದಕ ದಾಳಿಯಲ್ಲಿ ಸಂಗಾತಿಗಳನ್ನು ಕಳೆದುಕೊಂಡವರ ಕುರಿತು ಬಿಜೆಪಿ ಸಂಸದನ ಅಸೂಕ್ಷ್ಮ...

‘ಪಹಲ್ಗಾಮ್‌ನಲ್ಲಿ ಮಹಿಳೆಯರಿಗೆ ವೀರೋಚಿತ ಗುಣಗಳಿರಲಿಲ್ಲ’: ಭಯೋತ್ಪಾದಕ ದಾಳಿಯಲ್ಲಿ ಸಂಗಾತಿಗಳನ್ನು ಕಳೆದುಕೊಂಡವರ ಕುರಿತು ಬಿಜೆಪಿ ಸಂಸದನ ಅಸೂಕ್ಷ್ಮ ಹೇಳಿಕೆ

- Advertisement -
- Advertisement -

ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಗಂಡಂದಿರನ್ನು ಕಳೆದುಕೊಂಡ ದುಃಖಿತ ಮಹಿಳೆಯರನ್ನು ಟೀಕಿಸಿರುವ ಬಿಜೆಪಿ ಸಂಸದ, “ಅವರಲ್ಲಿ (ಸಂತ್ರಸ್ತ ಮಹಿಳೆಯರಲ್ಲಿ) ವೀರೋಚಿತ ಗುಣಗಳು, ಉತ್ಸಾಹದ ಕೊರತೆಯಿಂದಾಗಿ ಅವರ ಗಂಡಂದಿರು ಬಲಿಪಶುಗಳಾದರು” ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು, ಸೇನಾ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ತಮ್ಮ ಅಸಭ್ಯ ಹೇಳಿಕೆಗಳಿಗೆ ಟೀಕೆಗಳನ್ನು ಎದುರಿಸಿ ಕ್ಷಮೆಯಾಚಿಸಿದ ಕೆಲವು ದಿನಗಳ ನಂತರ, ರಾಜ್ಯಸಭಾ ಬಿಜೆಪಿ ಸಂಸದ ರಾಮ್ ಚಂದರ್ ಜಂಗ್ರಾ ಸಹ ಅಂತಹದ್ದೇ ಅಸೂಕ್ಷ್ಮ ಹೇಳಿಕೆ ನೀಡಿದ್ದಾರೆ. ಪ್ರವಾಸಿಗರು ಅಗ್ನಿವೀರ್ ತರಬೇತಿ ಪಡೆದಿದ್ದರೆ ಪ್ರತಿದಾಳಿ ಮಾಡಬೇಕಾಗಿತ್ತು, ಅದು ಯಶಸ್ವಿಯಾಗುತ್ತಿತ್ತು ಎಂದು ಹೇಳಿದರು.

ಏಪ್ರಿಲ್ 22 ರಂದು, ಪಹಲ್ಗಾಮ್ ಬಳಿಯ ಸುಂದರವಾದ ಬೈಸರನ್ ಹುಲ್ಲುಗಾವಲಿನಲ್ಲಿ 25 ಪ್ರವಾಸಿಗರು ಮತ್ತು ತನ್ನ ಸುತ್ತಲಿನ ಜನರನ್ನು ರಕ್ಷಿಸಲು ಭಯೋತ್ಪಾದಕನ ಬಂದೂಕನ್ನು ಕಸಿದುಕೊಳ್ಳಲು ಪ್ರಯತ್ನಿಸಿದ ಪೋನಿವಾಲ್ಲಾ ಅವರನ್ನು ಐದು ಭಯೋತ್ಪಾದಕರು ಕೊಂದರು. ಲಷ್ಕರ್-ಎ-ತೈಬಾದ ಒಂದು ಭಾಗವಾದ ರೆಸಿಸ್ಟೆನ್ಸ್ ಫ್ರಂಟ್ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಭಯೋತ್ಪಾದಕರು ನಿರ್ದಿಷ್ಟವಾಗಿ ಪುರುಷರನ್ನು ಗುರಿಯಾಗಿಸಿಕೊಂಡಿದ್ದರು, ದಾಳಿಯ ತಕ್ಷಣದ ನಂತರ ಹೊರಬಂದ ವೀಡಿಯೊಗಳು ಹಲವಾರು ಮಹಿಳೆಯರು ಸಹಾಯಕ್ಕಾಗಿ ಬೇಡಿಕೊಳ್ಳುವುದನ್ನು, ಅವರ ಗೋಳಾಟ ಕಣಿವೆಯಾದ್ಯಂತ ಪ್ರತಿಧ್ವನಿಸಿತ್ತು.

ಹರಿಯಾಣದ ಭಿವಾನಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಜಾಂಗ್ರಾ, ಪಹಲ್ಗಮ್‌ನಲ್ಲಿ ಗಂಡಂದಿರನ್ನು ಕಳೆದುಕೊಂಡ ಮಹಿಳೆಯರಿಗೆ ಯೋಧ ಮನೋಭಾವ, ಹೋರಾಡುವ ಉತ್ಸಾಹ ಇರಲಿಲ್ಲ. ಆದ್ದರಿಂದ, ಅವರ ಗಂಡಂದಿರು ದಾಳಿಗೆ ಬಲಿಯಾದರು” ಎಂದು ಹೇಳಿದರು.

“‘ಭಯೋತ್ಪಾದಕರು ಕೈಗಳನ್ನು ಮಡಚಿಕೊಂಡಿರುವುದರಿಂದ ಯಾರನ್ನೂ ಬಿಡುವುದಿಲ್ಲ. ನಮ್ಮ ಜನರು ಕೈಗಳನ್ನು ಮಡಚಿ ಸತ್ತರು” ಎಂದು ಅವರು ಹೇಳಿದರು.

ಅಗ್ನಿಪಥ್ ಯೋಜನೆ ತರಬೇತಿಯನ್ನು ಉಲ್ಲೇಖಿಸಿ ಮಾತನಾಡಿದ ಜಂಗ್ರಾ, “ಪ್ರವಾಸಿಗರು ತರಬೇತಿಯಲ್ಲಿ ಉತ್ತೀರ್ಣರಾಗಿದ್ದರೆ, ಮೂವರು ಭಯೋತ್ಪಾದಕರು 26 ಜನರನ್ನು ಕೊಲ್ಲಲು ಸಾಧ್ಯವಿರಲಿಲ್ಲ… ಅವರು ಖಂಡಿತವಾಗಿಯೂ ಹೋರಾಡಬೇಕಿತ್ತು. ಅವರು ಹೋರಾಡಿದ್ದರೆ, ಸಾವುನೋವುಗಳು ಕಡಿಮೆಯಾಗುತ್ತಿದ್ದವು” ಎಂದು ಸಲಹೆ ನೀಡಿದ್ದಶಾರೆ.

ಮಹಿಳೆಯರು ಭಯೋತ್ಪಾದಕರ ವಿರುದ್ಧ ಹೋರಾಡಬೇಕಿತ್ತು ಎಂದು ನೀವು ನಿರೀಕ್ಷಿಸಿದ್ದೀರಾ ಎಂದು ಕೇಳಿದಾಗ,”ಅಹಲ್ಯಾಬಾಯಿ ಹೋಳ್ಕರ್ ಒಬ್ಬ ಮಹಿಳೆ, ಹಾಗೆಯೇ ರಾಣಿ ಲಕ್ಷ್ಮಿಬಾಯಿ ಕೂಡ ಹೋರಾಡಲಿಲ್ಲವೇ? ನಮ್ಮ ಸಹೋದರಿಯರು ಧೈರ್ಯಶಾಲಿಗಳಾಗಿರಬೇಕು ಮತ್ತು ಧೈರ್ಯದಿಂದ ಬದುಕಬೇಕೆಂದು ನಾವು ಬಯಸುತ್ತೇವೆ” ಎಂದು ಹೇಳಿದರು.

‘ನಾಚಿಕೆಗೇಡಿನ ಹೇಳಿಕೆ’

ಜಂಗ್ರಾ ಅವರ “ನಾಚಿಕೆಗೇಡಿನ” ಹೇಳಿಕೆಗಳನ್ನು ಖಂಡಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಬಿಜೆಪಿ ನಾಯಕರು “ಭಾರತೀಯ ಸೇನೆ ಮತ್ತು ಹುತಾತ್ಮರನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ” ಎಂದು ಹೇಳಿದರು.

ಭಾಷಣದ ವೀಡಿಯೊವನ್ನು ಹಂಚಿಕೊಂಡ ಅವರು, “ರಾಜ್ಯಸಭಾ ಸಂಸದ ರಾಮಚಂದ್ರ ಜಂಗ್ರಾ ಅವರ ಈ ನಾಚಿಕೆಗೇಡಿನ ಹೇಳಿಕೆಯು ಅಧಿಕಾರದ ಅಮಲಿನಲ್ಲಿದ್ದ ಬಿಜೆಪಿ ಎಷ್ಟು ಸಂವೇದನಾಶೀಲವಾಗಿಲ್ಲ ಎಂಬುದನ್ನು ತೋರಿಸುತ್ತದೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸೈನಿಕರ ತ್ಯಾಗಕ್ಕೆ ಭದ್ರತಾ ಲೋಪವನ್ನು ದೂಷಿಸುವ ಬದಲು, ಬಿಜೆಪಿ ಸಂಸದರು ಹುತಾತ್ಮರು ಮತ್ತು ಅವರ ಪತ್ನಿಯರ ಮೇಲೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ” ಎಂದು ಹೇಳಿದರು.

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, “ಬಿಜೆಪಿ ಸಂಸದ ರಾಮ್ ಚಂದರ್ ಜಂಗ್ರಾ ಪಹಲ್ಗಾಮ್ ದಾಳಿಯಲ್ಲಿ ಗಂಡಂದಿರನ್ನು ಕಳೆದುಕೊಂಡ ಮಹಿಳೆಯರ ಬಗ್ಗೆ ಮಾತನಾಡುತ್ತಿದ್ದಾರೆ… ನಾಚಿಕೆಯಿಲ್ಲದಿರುವಿಕೆಗೆ ಮಿತಿ ಇದೆ” ಎಂದು ಅವರು ಹೇಳಿದರು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಬಿಜೆಪಿಯ ಮೇಲೆ ದಾಳಿ ಮಾಡಿ, “ಅದು ಪಕ್ಷವಲ್ಲ; ಆದರೆ ಮಹಿಳಾ ವಿರೋಧಿ ಮನಸ್ಥಿತಿಯ ಜೌಗು ಪ್ರದೇಶ” ಎಂದು ಹೇಳಿದರು.

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಹೇಳಿಕೆ ನೀಡಿದ್ದ ಸಚಿವ ನಾಪತ್ತೆ | ಕಾಂಗ್ರೆಸ್‌ನಿಂದ ಪೋಸ್ಟರ್ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...