Homeಮುಖಪುಟಹೆರಿಗೆ ರಜೆ ಜೀವಿಸುವ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

ಹೆರಿಗೆ ರಜೆ ಜೀವಿಸುವ ಹಕ್ಕಿನ ಭಾಗ: ಸುಪ್ರೀಂ ಕೋರ್ಟ್

- Advertisement -
- Advertisement -

ಹೆರಿಗೆ ರಜೆ ಎಂಬುದು ಮಹಿಳಾ ಉದ್ಯೋಗಿಯ ಸಂತಾನೋತ್ಪತ್ತಿ ಹಕ್ಕು ಮತ್ತು ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಹಕ್ಕಿನ ಭಾಗವಾಗಿದೆ. ಮಹಿಳೆಗೆ ಜನಿಸಿದ್ದು ಮೂರನೇ ಮಗು, ಎರಡನೇ ಮದುವೆಯಿಂದ ಪಡೆದದ್ದು ಎಂಬ ಕಾರಣಗಳನ್ನು ಮುಂದಿಟ್ಟು ಆಕೆಗೆ ಹೆರಿಗೆ ರಜೆ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.23) ತೀರ್ಪು ನೀಡಿದೆ.

ಮಹಿಳಾ ಉದ್ಯೋಗಿ ಮೂರನೇ ಮಗುವಿಗೆ ಜನ್ಮ ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಆಕೆಗೆ ಹೆರಿಗೆ ರಜೆ ನಿರಾಕರಿಸುವುದು ಸಂವಿಧಾನದ 21ನೇ ವಿಧಿಯಡಿ ಆಕೆಗೆ ದೊರೆಯಬೇಕಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಹೇಳಿರುವುದಾಗಿ barandbench.com ವರದಿ ಮಾಡಿದೆ.

ತಮಿಳುನಾಡಿನ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು 2021ರಲ್ಲಿ ತಮ್ಮ ಎರಡನೇ ಮದುವೆಯ ಫಲವಾಗಿ ಗರ್ಭ ಧರಿಸಿದ ಹಿನ್ನೆಲೆ ಹೆರಿಗೆ ರಜೆ ಕೋರಿ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ತಮ್ಮ ಮೊದಲ ಮದುವೆಯಿಂದ ಆಕೆಗೆ ಇಬ್ಬರು ಮಕ್ಕಳು ಜನಿಸಿದ್ದರು. ವಿಚ್ಛೇದನ ಪಡೆದಿದ್ದ ಹಿನ್ನೆಲೆಯಲ್ಲಿ ಮೊದಲ ಮದುವೆಯ ಫಲವಾಗಿ ಜನಿಸಿದ ಮಕ್ಕಳು ಮಾಜಿ ಪತಿಯ ಸುಪರ್ದಿಯಲ್ಲೇ ಇದ್ದರು.

ಎರಡನೇ ಮದುವೆಯ ಫಲವಾಗಿ ಜನಿಸಿದ ಮಗುವಿಗೆ ಆಕೆ ಜನ್ಮ ನೀಡಿದ್ದರೂ, ಜಿಲ್ಲಾ ಶಿಕ್ಷಣ ಕಚೇರಿ ಆಕೆಗೆ ಹೆರಿಗೆ ರಜೆ ನಿರಾಕರಿಸಿತ್ತು. ತಮಿಳುನಾಡು ಮೂಲಭೂತ ನಿಯಮಾವಳಿಯ ನಿಯಮ 101(ಎ) ಪ್ರಕಾರ ಎರಡು ಮಕ್ಕಳು ಪಡೆಯುವವರೆಗೆ ಮಾತ್ರ ಮಹಿಳಾ ಸರ್ಕಾರಿ ನೌಕರರಿಗೆ ಹೆರಿಗೆ ರಜೆ ಪಡೆಯಲು ಅವಕಾಶ ಇರುತ್ತದೆ. ಆದರೆ, ಅರ್ಜಿದಾರೆ ಮೂರನೇ ಮಗು ಪಡೆಯುತ್ತಿರುವುದರಿಂದ ಆಕೆ ಹೆರಿಗೆ ರಜೆ ಪಡೆಯಲು ಅರ್ಹರಲ್ಲ ಎಂದು ಅದು ಹೇಳಿತ್ತು.

ಈ ಹಿನ್ನೆಲೆಯಲ್ಲಿ ಆಕೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಹೈಕೋರ್ಟ್‌ ಏಕ ಸದಸ್ಯ ಪೀಠ ಆಕೆಯ ಪರವಾಗಿ ತೀರ್ಪು ನೀಡಿತ್ತು. ಆಕೆಯ ಮೊದಲ ಇಬ್ಬರು ಮಕ್ಕಳು ಆಕೆ ಸೇವೆಗೆ ಸೇರುವ ಮುನ್ನ ಜನಿಸಿದ್ದರಿಂದ ಈ ಪ್ರಕರಣದಲ್ಲಿ ಇಬ್ಬರು ಮಕ್ಕಳಿಗಷ್ಟೇ ಹೆರಿಗೆ ರಜೆ ಅನ್ವಯ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತಿಲ್ಲ ಎಂದು ಅದು ಹೇಳಿತ್ತು. ಈ ಆದೇಶವನ್ನು ಸರ್ಕಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಾಗಿತ್ತು. ಮಾತೃತ್ವ ರಜೆ ಮೂಲಭೂತ ಹಕ್ಕಲ್ಲ ಬದಲಿಗೆ ಸೇವಾ ಷರತ್ತಿನನ್ವಯ ದೊರೆಯುವ ಹಕ್ಕು ಎಂದ ವಿಭಾಗೀಯ ಪೀಠ ಆಕೆಗೆ ಪರಿಹಾರ ನಿರಾಕರಿಸಿತ್ತು. ಹೀಗಾಗಿ ಆಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಹೈಕೋರ್ಟ್‌ ವಿಭಾಗೀಯ ಪೀಠದ ತಾರ್ಕಿಕತೆಯನ್ನು ಒಪ್ಪದ ಸುಪ್ರೀಂ ಕೋರ್ಟ್ ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಮೂಲಭೂತ ಹಕ್ಕು ಸಂತಾನೋತ್ಪತ್ತಿಯನ್ನೂ ಒಳಗೊಂಡಿದೆ ಮತ್ತು ಜನಸಂಖ್ಯಾ ನಿಯಂತ್ರಣವನ್ನು ಜಾರಿಗೊಳಿಸಲು ಉದ್ದೇಶಿಸಲಾದ ನೀತಿಗಳು ದುಡಿಯುವ ಮಹಿಳೆಯರ ಘನತೆ ಮತ್ತು ಕಲ್ಯಾಣಕ್ಕೆ ಅನುಗುಣವಾಗಿರಬೇಕು ಎಂದಿದೆ.

ಪ್ರಸಕ್ತ ಪ್ರಕರಣಗಳಂತಹ ಸಂದರ್ಭಗಳಲ್ಲಿ ಎರಡು ಮಕ್ಕಳ ನಿಯಮವನ್ನು ಯಾಂತ್ರಿಕ ರೀತಿಯಲ್ಲಿ ಅನ್ವಯಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶ ರದ್ದುಗೊಳಿಸಿದೆ ಮತ್ತು ಎಫ್‌ಆರ್ 101(ಎ) ಅಡಿಯಲ್ಲಿ ಅವರಿಗೆ ಹೆರಿಗೆ ರಜೆ ನೀಡಬೇಕೆಂದು ನಿರ್ದೇಶಿಸಿದೆ. ಅಲ್ಲದೆ, ಎರಡು ತಿಂಗಳೊಳಗೆ ಆಕೆಗೆ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸುವಂತೆ ಆದೇಶಿಸಿದೆ.

ಸೌಜನ್ಯ : barandbench.com

ಮಧ್ಯಪ್ರದೇಶ| ಸಾಮೂಹಿಕ ಅತ್ಯಾಚಾರದ ಬಳಿಕ ಬುಡಕಟ್ಟು ಮಹಿಳೆ ಸಾವು; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪುನರ್ವಸತಿ ಕೇಂದ್ರದಲ್ಲಿ ದಲಿತ ಯುವಕ ಸಾವು ಪ್ರಕರಣ; ನಾಲ್ವರು ಪೊಲೀಸರು ಅಮಾನತು

ಬೆಂಗಳೂರು ಪೊಲೀಸರ ಕಸ್ಟಡಿಯಲ್ಲಿ 22 ವರ್ಷದ ದಲಿತ ಯುವಕನಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಮಂಗಳವಾರ ಇನ್ಸ್‌ಪೆಕ್ಟರ್ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ನಂತರ, ಪುನರ್ವಸತಿ ಕೇಂದ್ರದಲ್ಲಿ ಅವರ...

ಉತ್ತರ ಪ್ರದೇಶ| ಮುಜಫರ್‌ನಗರದ ಮಸೀದಿ-ದೇವಸ್ಥಾನಗಳ 55 ಕ್ಕೂ ಹೆಚ್ಚು ಧ್ವನಿವರ್ಧಕ ತೆರವು

ಉತ್ತರ ಪ್ರದೇಶದ ಮುಜಫರ್‌ನಗರದ ಪೊಲೀಸರು, ನಗರದಲ್ಲಿ ಹೆಚ್ಚಿನ ಶಬ್ದ ಮಾಡುತ್ತಿದ್ದ ಧ್ವನಿವರ್ಧಕಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಧ್ವನಿ ಮಿತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿವಿಧ ಮಸೀದಿಗಳಿಂದ 55 ಕ್ಕೂ...

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ...

ಮೊಬೈಲ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸ್ಮಾರ್ಟ್‌ ಫೋನ್ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ (ಡಿ.3) ಹಿಂಪಡೆದಿದೆ. ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಸಾವು, ಇಬ್ಬರು ಯೋಧರು ಹುತಾತ್ಮ

ಛತ್ತೀಸ್‌ಗಢದ ಬಿಜಾಪುರದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಆರು ಜನ ನಕ್ಸಲರು ಸಾವನ್ನಪ್ಪಿದ್ದು, ದುರದೃಷ್ಟವಶಾತ್, ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಇಬ್ಬರು ಜವಾನರು ಹುತಾತ್ಮರಾಗಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ,...

ಏಪ್ರಿಲ್ 2026 ರಿಂದ 2 ಹಂತದ ಡಿಜಿಟಲ್ ಜನಗಣತಿ: ಕೇಂದ್ರ ಸರ್ಕಾರ

2027 ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಮೊದಲ ಹಂತವು ಏಪ್ರಿಲ್ ಮತ್ತು ಸೆಪ್ಟೆಂಬರ್ 2026 ರ ನಡುವೆ ನಿಗದಿಯಾಗಿದೆ. ಎರಡನೇ ಹಂತವು ಫೆಬ್ರವರಿ...

ಬಂಗಾಳಿ ಕಾರ್ಮಿಕರನ್ನು ಒಡಿಶಾ ಪೊಲೀಸರು ಬಲವಂತವಾಗಿ ಹೊರಹಾಕಿದ್ದಾರೆ

ಒಡಿಶಾದ ನಯಾಗಢ ಜಿಲ್ಲೆಯ ಪೊಲೀಸರು ನಾಲ್ಕು ಜನ ಬಂಗಾಳಿ ಮಾತನಾಡುವ ಮುಸ್ಲಿಂ ವ್ಯಾಪಾರಿಗಳನ್ನು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸುವ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳ ಹೊರತಾಗಿಯೂ ಬಲವಂತವಾಗಿ ಹೊರಹಾಕಿದ್ದಾರೆ ಎಂದು ತೃಣಮೂಲ...

‘ಸಂಚಾರ್ ಸಾಥಿ ಆ್ಯಪ್‌’ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

ಕೇಂದ್ರ ಸರ್ಕಾರ ಎಲ್ಲಾ ಸ್ಮಾರ್ಟ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯಗೊಳಿಸಿರುವುದರಿಂದ ಜನರು ಗೌಪ್ಯತೆ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಕುರಿತು ಬುಧವಾರ (ಡಿ.3) ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ...

ಮಹಾರಾಷ್ಟ್ರ| ವರದಕ್ಷಿಣೆಯಾಗಿ ಬೈಕ್‌ ಕೊಡಲಿಲ್ಲವೆಂದು ಪತ್ನಿಗೆ ‘ತಲಾಖ್’ ನೀಡಿದ ಪತಿ

ಭಾರತೀಯ ಕಾನೂನಿನಡಿಯಲ್ಲಿ ಕ್ರಿಮಿನಲ್ ಅಪರಾಧವಾಗಿದ್ದರೂ, ವರದಕ್ಷಿಣೆಯಾಗಿ ಮೋಟಾರ್ ಸೈಕಲ್ (ಬೈಕ್‌) ಕೊಡದ ಕಾರಣ ತನ್ನ ಪತ್ನಿಗೆ 'ತ್ರಿವಳಿ ತಲಾಖ್' ನೀಡಿದ ಆರೋಪದ ಮೇಲೆ ಮಹಾರಾಷ್ಟ್ರದ ಭಿವಂಡಿಯ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಥಾಣೆ...

ದೆಹಲಿ ಮಹಾನಗರ ಪಾಲಿಕೆ ಉಪಚುನಾವಣೆ: 7 ವಾರ್ಡ್‌ಗಳಲ್ಲಿ ಬಿಜೆಪಿ, ಮೂರರಲ್ಲಿ ಆಪ್‌ಗೆ ಗೆಲುವು

ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಉಪಚುನಾವಣೆಯ ಮತಗಳ ಎಣಿಕೆ ಬುಧವಾರ (ಡಿಸೆಂಬರ್ 1) ನಡೆಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ) 12 ವಾರ್ಡ್‌ಗಳಲ್ಲಿ ಏಳು ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ....