Homeಅಂತರಾಷ್ಟ್ರೀಯಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

- Advertisement -
- Advertisement -

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾನವೀಯ, ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ 23ರಂದು ಗಾಝಾದ ದೇರ್ ಅಲ್-ಬಲಾಹ್ ಪ್ರದೇಶದ ಅಲ್-ಬರಾಕಾ ಎಂಬಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಯಕೀನ್ ಹಮ್ಮದ್ ಅವರ ಮನೆ ನೆಲಸಮವಾಗಿದೆ. ಈ ವೇಳೆ ಯಕೀನ್ ಜೊತೆ ಆಕೆಯ ತಾಯಿ ಮತ್ತು ಇಬ್ಬರು ಸಹೋದರರು ಕೂಡ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

“ಯಕೀನ್, ಇಸ್ರೇಲ್‌ ಆಕ್ರಮಣದಿಂದ ಸ್ಥಳಾಂತರಗೊಂಡ ಮತ್ತು ಅನಾಥರಾದ ಗಾಝಾದ ಮಕ್ಕಳಿಗೆ ಭರವಸೆಯ ದಾರಿ ದೀಪವಾಗಿದ್ದರು” ಎಂದು ವರದಿಗಳು ಬಣ್ಣಿಸಿವೆ.

“ವಯಸ್ಸು ಕೇವಲ 11 ಆಗಿದ್ದರೂ, ಯಕೀನ್ ಹಮ್ಮದ್ ಗಾಝಾದ ಅತ್ಯಂತ ಕಿರಿಯ ಮಾಧ್ಯಮ ಕಾರ್ಯಕರ್ತೆ ಮತ್ತು ಸ್ಥಳೀಯ ಸ್ವಯಂ ಸೇವಾ ಗುಂಪಿನ ಅತ್ಯಂತ ಕಿರಿಯ ಸದಸ್ಯೆ ಆಗಿದ್ದರು. ತನ್ನ ವಯಸ್ಸಿಗೆ ಮೀರಿದ ಬುದ್ಧಿವಂತಿಕೆಯಿಂದ, ಆಕೆ ಭಯ ಆವರಿಸಿದ್ದ ಕಂದಮ್ಮಗಳ ಮನಸ್ಸಿನಲ್ಲಿ ಭರವಸೆ ಮೂಡಿಸುತ್ತಿದ್ದರು” ಎಂದು ಕೊಂಡಾಡಿವೆ.

ಗಾಝಾದ ನಿರಾಶ್ರಿತ ಶಿಬಿರದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಯಕೀನ್, ತಮ್ಮ ಇನ್‌ಸ್ಟಾಗ್ರಾಂ ವಿಡಿಯೋಗಳ ಮೂಲಕ ಹತ್ತಾರು ಸಾವಿರ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದರು.

ಅನಾಥರು ಮತ್ತು ಸ್ಥಳಾಂತರಗೊಂಡ ಕುಟುಂಬಗಳಿಗೆ ಸಹಾಯ ಮಾಡುವ ಪ್ರಯತ್ನಗಳನ್ನು ಮತ್ತು ಅಂತಹ ಕುಟುಂಬಗಳ ಮಕ್ಕಳೊಂದಿಗೆ ನಗುತ್ತಾ ಆಟವಾಡುತ್ತಾ, ಸಂತೋಷದಿಂದ ಉಡುಗೊರೆಗಳನ್ನು ಹಂಚುತ್ತಿರುವುದನ್ನು ಯಕೀನ್ ತನ್ನ ವಿಡಿಯೋಗಳ ಮೂಲಕ ತೋರಿಸುತ್ತಿದ್ದರು.

ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯ ನಡುವೆ ಜನರು ತಮ್ಮ ಜೀವನ ನಡೆಸಲು ಪ್ರತಿದಿನ ಹೇಗೆ ಹೋರಾಟ ಮಾಡುತ್ತಿದ್ದಾರೆ ಎಂಬುವುದನ್ನು ಯಕೀನ್ ತನ್ನ ವಿಡಿಯೋಗಳಲ್ಲಿ ದಾಖಲಿಸಿ ಹೊರ ಜಗತ್ತಿಗೆ ತೊರಿಸುತ್ತಿದ್ದರು. ಪುಟ್ಟ ಬಾಲಕಿಯ ಮಾತುಗಳು ಇಸ್ರೇಲ್‌ ನರಮೇಧ ಗಾಝಾ ಜನತೆಯ ಹಕ್ಕುಗಳನ್ನು ಹೇಗೆ ಹತ್ತಿಕ್ಕಿವೆ ಎಂಬುವುದನ್ನು ಜಗತ್ತಿಗೆ ವಿವರಿಸುತ್ತಿತ್ತು.

ಯಕೀನ್ ತನ್ನ ಅಣ್ಣ, ಮಾನವೀಯ ಕಾರ್ಯಕರ್ತ ಮೊಹಮ್ಮದ್ ಹಮ್ಮದ್ ಜೊತೆ ಸಹಾಯ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದರು. ಒಟ್ಟಿನಲ್ಲಿ ಅವರು ಸ್ಥಳಾಂತರಗೊಂಡ ಕುಟುಂಬಗಳಿಗೆ ಆಹಾರ, ಬಟ್ಟೆ ಮತ್ತು ಆ ಕುಟುಂಬಗಳ ಮಕ್ಕಳಿಗೆ ಆಟಿಕೆಗಳನ್ನು ತಲುಪಿಸುತ್ತಿದ್ದರು.

ತನ್ನವರನ್ನು ಕಳೆದುಕೊಂಡವರ, ವಿಶೇಷವಾಗಿ ಯುದ್ದದ ಭೀಕರತೆಗೆ ನಲುಗಿದ್ದ ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸುತ್ತಿದ್ದ ಯಕೀನ್, ಈಗ ಸಾವಿಗೀಡಾದ ಸಾವಿರಾರು ಮಕ್ಕಳ ಪಟ್ಟಿಗೆ ಸೇರಿದ್ದಾರೆ. ಆಕೆಯ ಮರಣದಿಂದ ಗಾಝಾ ಅತ್ಯಂತ ಕಿರಿಯ ಮತ್ತು ಅತ್ಯಂತ ಧೈರ್ಯಶಾಲಿ ಧ್ವನಿಗಳಲ್ಲಿ ಒಂದನ್ನು ಕಳೆದುಕೊಂಡಿದೆ.

ಯಕೀನ್ ಅವರ ಸಾವಿಗೆ ಸಂಪೂರ್ಣ ಗಾಝಾ ಮತ್ತು ಜಗತ್ತಿನ ವಿವಿಧ ಭಾಗಗಳ ಮನುಷ್ಯರು ದುಖಃ ವ್ಯಕ್ತಪಡಿಸಿದ್ದಾರೆ. ಗಾಝಾದ ಕರಾಳ ಅವಧಿಯಲ್ಲಿ ಬೆಳಕನ್ನು ಪಸರಿಸಲು ಬಂದ ಮಗುವಿನ ನಷ್ಟಕ್ಕೆ ಹೋರಾಟಗಾರರು, ಪತ್ರಕರ್ತರು ಮತ್ತು ಆಕೆಯ ಬೆಂಬಲಿಗರು ಕಂಬನಿ ಮಿಡಿದಿದ್ದಾರೆ.

“ದಿಗ್ಬಂಧನಗಳ ನಡುವೆ ಹುಟ್ಟಿ, ಬಾಂಬ್ ದಾಳಿಗಳ ನಡುವೆ ಬೆಳೆದು, ಆಘಾತಗಳಿಂದ ರೂಪುಗೊಂಡ ಯಕೀನ್, ಮೌನವಾಗಿರದೆ ಧ್ವನಿಯಾದಳು. ಆಕೆಯ ಧೈರ್ಯ ಹಲವರ ಮೇಲೆ ಶಾಶ್ವತ ಪ್ರಭಾವ ಬೀರಿತು. ಯಕೀನ್ ಅವಶೇಷಗಳ ನಡುವೆ ಮಾದರಿ ಜೀವನ ನಡೆಸಿ ಪುಟ್ಟ ಹುಡುಗಿ” ಎಂದು palestinechronicle.com ತನ್ನ ವರದಿಯಲ್ಲಿ ಯಕೀನ್ ಕುರಿತು ಹೇಳಿದೆ. 

ದೋಣಿ ದುರಂತದಲ್ಲಿ 427 ರೋಹಿಂಗ್ಯಾ ನಿರಾಶ್ರಿತರು ಮುಳುಗಿರುವ ಶಂಕೆ: UNHCR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...