Homeಮುಖಪುಟದಾಖಲೆರಹಿತ ವಲಸಿಗರೆಂದು ನೂರಾರು ನಿವಾಸಿಗಳ ವಶಕ್ಕೆ ಪಡೆದ ಅಸ್ಸಾಂ ಪೊಲೀಸರು

ದಾಖಲೆರಹಿತ ವಲಸಿಗರೆಂದು ನೂರಾರು ನಿವಾಸಿಗಳ ವಶಕ್ಕೆ ಪಡೆದ ಅಸ್ಸಾಂ ಪೊಲೀಸರು

- Advertisement -
- Advertisement -

ಬಾಂಗ್ಲಾದೇಶದಿಂದ ಬಂದ ದಾಖಲೆರಹಿತ ವಲಸಿಗರು ಎಂಬ ಅನುಮಾನದ ಮೇಲೆ ಅಸ್ಸಾಂ ಪೊಲೀಸರು ಭಾನುವಾರ ರಾಜ್ಯದ ಹಲವಾರು ನಿವಾಸಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ ಹಲವರನ್ನು ದಾಖಲೆಗಳನ್ನು ಪರಿಶೀಲಿಸಿದ ನಂತರ 15 ಗಂಟೆಗಳಿಗೂ ಹೆಚ್ಚು ಸಮಯದ ನಂತರ ಬಿಡುಗಡೆ ಮಾಡಲಾಯಿತು ಎಂದು ಅದು ಹೇಳಿದೆ. ದಾಖಲೆರಹಿತ ವಲಸಿಗರೆಂದು

ಕಾರ್ಯಾಚರಣೆ ಶನಿವಾರ ರಾತ್ರಿ ಪ್ರಾರಂಭವಾಯಿತು ಮತ್ತು ಭಾನುವಾರ ಬೆಳಿಗ್ಗೆ ತನಕ ಮುಂದುವರೆಯಿತು. ಹತಿಗಾಂವ್, ಸಿಜುಬಾರಿ, ಘೋರಾಮಾರ ಮತ್ತು ಸೋನಾಪುರ ಸೇರಿದಂತೆ ಗುವಾಹಟಿಯ ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ವರದಿ ಹೇಳಿದೆ.

ಹೆಚ್ಚುವರಿಯಾಗಿ, ಗಡಿ ಪೊಲೀಸರು ಗೋಲಾಘಾಟ್, ಧುಬ್ರಿ, ಬಾರ್ಪೇಟಾ ಮತ್ತು ಕ್ಯಾಚರ್ ಜಿಲ್ಲೆಗಳಿಂದ ಹಲವಾರು ಜನರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ವಿದೇಶಿಯರ ನ್ಯಾಯಮಂಡಳಿಗಳು ಈ ಹಿಂದೆ ವಿದೇಶಿಯರೆಂದು ಘೋಷಿಸಿವೆ ಎಂದು ಅವರ ಕುಟುಂಬ ಸದಸ್ಯರು ಮತ್ತು ವಕೀಲರು ಸ್ಕ್ರೋಲ್‌ಗೆ ತಿಳಿಸಿದ್ದಾರೆ.

ವಶಕ್ಕೆ ಪಡೆಯಲಾದವರ ಸಂಖ್ಯೆಯನ್ನು ಪೊಲೀಸರು ಇನ್ನೂ ದೃಢೀಕರಿಸಿಲ್ಲ. ಆದಾಗ್ಯೂ, 100 ರಷ್ಟು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಸ್ಕ್ರೋಲ್‌.ಇನ್ ವರದಿ ಮಾಡಿದೆ. “ಅಕ್ರಮ ವಲಸಿಗರನ್ನು” ಪತ್ತೆಹಚ್ಚಲು ದೇಶಾದ್ಯಂತದ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ ಇದು ನಡೆದಿವೆ ಎಂದು ಅಧಿಕಾರಿ ಹೇಳಿದ್ದಾರೆ.

“ದಾಖಲೆ ಪರಿಶೀಲನೆ ನಡೆಯುತ್ತಿದೆ. ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ. ಭದ್ರತಾ ಕಾರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.. ವಿದೇಶಿಯರನ್ನು ನಾವು ಏಕೆ [ದೇಶದಲ್ಲಿ] ಉಳಿಸಿಕೊಳ್ಳಬೇಕು.” ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರದ ಆದೇಶದ ನಂತರ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ನಿಯೋಜಿತರಾಗಿರುವ ಸಬ್-ಇನ್ಸ್‌ಪೆಕ್ಟರ್ ಸ್ಕ್ರೋಲ್‌ಗೆ ಹೇಳಿದ್ದಾರೆ.

ಬಾಂಗ್ಲಾದೇಶಿ ಮತ್ತು ಮ್ಯಾನ್ಮಾರ್ ಪ್ರಜೆಗಳೆಂದು ಶಂಕಿಸಲಾಗಿರುವ ವ್ಯಕ್ತಿಗಳ ವಿವರಗಳನ್ನು 30 ದಿನಗಳ ಒಳಗೆ ಪರಿಶೀಲಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿರುವ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನಗಳನ್ನು ಅವರು ಉಲ್ಲೇಖಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, “ಅಕ್ರಮ ವಲಸಿಗರನ್ನು ಪತ್ತೆಹಚ್ಚಲು, ಗುರುತಿಸಲು ಮತ್ತು ಗಡೀಪಾರು ಮಾಡಲು” ತಮ್ಮ ಶಾಸನಬದ್ಧ ಅಧಿಕಾರವನ್ನು ಬಳಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ತಿಳಿಸಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾನುವಾರ ಪೊಲೀಸರ ವಶಕ್ಕೆ ಸಿಕ್ಕ ಕುಟುಂಬಗಳು ಗುವಾಹಟಿ ಪೊಲೀಸ್ ಕಮಿಷನರೇಟ್ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಗಳಲ್ಲಿ ಒಬ್ಬರಾದ ಹನ್ನನ್ ಅಹ್ಮದ್ ಅವರ ಸಹೋದರಿ ಅನೋವಾರಾ ಬೇಗಂ ಅವರು ತಮ್ಮ ಸಹೋದರನ ದಾಖಲೆಗಳನ್ನು ಸಲ್ಲಿಸಿರುವುದಾಗಿ ಹೇಳಿದ್ದು, ಅದಾಗ್ಯೂ, ಪೊಲೀಸರು ಅದನ್ನು ಪರಿಶೀಲಿಸಿಲ್ಲ ಎಂದು ತಿಳಿಸಿದ್ದಾಗಿ ಸ್ಕ್ರೋಲ್‌ ವರದಿ ಮಾಡಿದೆ.

ಹನ್ನನ್ ಅವರು ಮತದಾರರ ಗುರುತಿನ ಚೀಟಿಯನ್ನು ಹೊಂದಿದ್ದು, ಅವರ ಹೆಸರು ಮತ್ತು ಅವರ ಪೋಷಕರ ಹೆಸರು 2019 ರ ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಕಾಣಿಸಿಕೊಂಡಿದೆ ಎಂದು ಸ್ಕ್ರೋಲ್ ಹೇಳಿದೆ. ಅಷ್ಟೆ ಅಲ್ಲದೆ, ಅವರ ಅಜ್ಜ ಮತ್ತು ಅಜ್ಜಿ ಕೂಡಾ 1951 ರ ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಅದು ಹೇಳಿದೆ.

2019 ರ ರಾಷ್ಟ್ರೀಯ ನಾಗರಿಕರ ನೋಂದಣಿಯು ಅಸ್ಸಾಂನಲ್ಲಿರುವ ಭಾರತೀಯ ನಾಗರಿಕರ ಪಟ್ಟಿಯಾಗಿದ್ದು, ಇದನ್ನು ಹಲವಾರು ಸುತ್ತಿನ ಸಾಕ್ಷ್ಯಚಿತ್ರ ಮತ್ತು ಭೌತಿಕ ಪರಿಶೀಲನೆಯ ನಂತರ 2019 ರಲ್ಲಿ ಸಂಗ್ರಹಿಸಲಾಯಿತು. 1951 ರ ನಂತರ ಇದನ್ನು ನವೀಕರಿಸಲಾಗಿದೆ.

ಅದಾಗ್ಯೂ, ಸಂಜೆ 7 ಗಂಟೆ ಸುಮಾರಿಗೆ ಪೊಲೀಸರು ಹನ್ನನ್ ಅವರನ್ನು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ಅಧಿಕಾರಿಗಳು ರೋಹಿಂಗ್ಯಾ ನಿರಾಶ್ರಿತರು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ಗೆ ಗಡಿಪಾಡು ಮಾಡಿದ್ದಾರೆ ಎಂಬ ಆರೋಪದ ನಡುವೆ ಈ ಕಾರ್ಯಾಚರಣೆ ನಡೆದಿದೆ.

ಭಾರತದಿಂದ “ಗಡೀಪಾರು ಮಾಡಬೇಕಾದ” 2,360 ಕ್ಕೂ ಹೆಚ್ಚು ವ್ಯಕ್ತಿಗಳ ಪ್ರಕರಣಗಳಿವೆ ಎಂದು ಗುರುವಾರ ವಿದೇಶಾಂಗ ಸಚಿವಾಲಯವು ಹೇಳಿದೆ. “ನಾವು ಇಲ್ಲಿ ಹೆಚ್ಚಿನ ಸಂಖ್ಯೆಯ ಬಾಂಗ್ಲಾದೇಶಿ ಪ್ರಜೆಗಳನ್ನು ಗಡೀಪಾರು ಮಾಡಬೇಕಾಗಿದೆ. ನಾವು ಬಾಂಗ್ಲಾದೇಶದ ಕಡೆಯಿಂದ ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಕೇಳಿದ್ದೇವೆ.” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈವಾಲ್ ಹೇಳಿದ್ದಾರೆ. ದಾಖಲೆರಹಿತ ವಲಸಿಗರೆಂದು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಂಧ್ರಪ್ರದೇಶ| ಮೂರು ವರ್ಷದ ದಲಿತ ಬಾಲಕಿಯನ್ನು ಅತ್ಯಾಚಾರಗೈದು ಭೀಕರ ಕೊಲೆ

ಆಂಧ್ರಪ್ರದೇಶ| ಮೂರು ವರ್ಷದ ದಲಿತ ಬಾಲಕಿಯನ್ನು ಅತ್ಯಾಚಾರಗೈದು ಭೀಕರ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...