Homeಮುಖಪುಟಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ನಿರ್ಭಯ ಪ್ರಕರಣದ ನಂತರ ನ್ಯಾ. ವರ್ಮಾ ಸಮಿತಿ ವರದಿ ಏನು ಹೇಳುತ್ತದೆ?

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ನಿರ್ಭಯ ಪ್ರಕರಣದ ನಂತರ ನ್ಯಾ. ವರ್ಮಾ ಸಮಿತಿ ವರದಿ ಏನು ಹೇಳುತ್ತದೆ?

ರಾಸಾಯನಿಕ ವಿಧಾನದಿಂದ ಅತ್ಯಾಚಾರಿಗಳ ಪುರುಷತ್ವ ಹರಣಗೊಳಿಸುವ ಶಿಕ್ಷೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಹಾಗೂ ದೇಹಕ್ಕೆ ಊನ ಮಾಡುವುದನ್ನು ನಮ್ಮ ಸಂವಿಧಾನ ಸಮ್ಮತಿಸುವುದಿಲ್ಲ.

- Advertisement -
- Advertisement -

ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಕಾನೂನುಗಳಿಗೆ ತಿದ್ದುಪಡಿಗಳನ್ನು ಸೂಚಿಸಲು ರಚಿಸಲಾಗಿದ್ದ ನ್ಯಾಯಮೂರ್ತಿ ವರ್ಮಾ ಸಮಿತಿಯು ತನ್ನ ವರದಿಯನ್ನು ಗೃಹಖಾತೆಗೆ ಸಲ್ಲಿಸಿದೆ.

ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಮೇಲೆ 2012ರ ಡಿಸೆಂಬರಿನಲ್ಲಿ ನಡೆದ ಕ್ರೂರವಾದ ಸಾಮೂಹಿಕ ಅತ್ಯಾಚಾರದ ಬಳಿಕ ಕಾನೂನುಗಳಿಗೆ ತಿದ್ದುಪಡಿ ಸೂಚಿಸಲು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಮಾಜಿ ಪ್ರಧಾನ ನ್ಯಾಯಾಧೀಶ ಜೆ.ಎಸ್. ವರ್ಮಾ ಅವರ ನೇತೃತ್ವದಲ್ಲಿ ಮೂರು ಸದಸ್ಯರ ಈ ಸಮಿತಿಯನ್ನು ನೇಮಿಸಿತ್ತು.

ವಿದ್ಯಾರ್ಥಿನಿಯ ಮೇಲಿನ ಆ ಲೈಂಗಿಕ ದಾಳಿಯು ದೇಶದಾದ್ಯಂತ ಜನರನ್ನು ರೊಚ್ಚಿಗೆಬ್ಬಿಸಿತ್ತಲ್ಲದೆ, ಅತ್ಯಾಚಾರಿಗಳನ್ನು ಶಿಕ್ಷಿಸಲು ಇನ್ನೂ ಕಠಿಣವಾದ ಕಾನೂನುಗಳನ್ನು ರೂಪಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು.

ನಾನಾ ಮಹಿಳಾ ಗುಂಪುಗಳು, ನ್ಯಾಯವೇತ್ತರು ಹಾಗೂ ಇನ್ನಿತರ ವೇದಿಕೆಗಳಿಂದ ವರ್ಮಾ ಸಮಿತಿಗೆ 80,000 ಸಲಹೆಗಳು ಬಂದಿದ್ದವು. ಸಮಿತಿಯು ವೈವಾಹಿಕ ರೇಪ್ ಬಗ್ಗೆ ಸಹ ಚರ್ಚೆ ಕೈಗೆತ್ತಿಕೊಂಡಿತ್ತು.

ವರದಿಯ ಮುಖ್ಯಾಂಶಗಳು:
ಅ) ಮಹಿಳೆಯರನ್ನು ವಿವಸ್ತ್ರ (ನಗ್ನ)ಗೊಳಿಸುವುದು, (ರಹಸ್ಯವಾಗಿ) ಮಹಿಳೆಯರ ಗುಪ್ತಾಂಗಗಳನ್ನು ನೋಡಿ ಅಥವಾ ಮೈಥುನ ನೋಡಿ ಸುಖಪಡುವುದು, ಮಹಿಳೆಯರ ಹಿಂದೆಮುಂದೆ ಸುತ್ತುತ್ತಾ ಕಿರುಕುಳ ಉಂಟುಮಾಡುವುದು, ವೇಶ್ಯಾವಾಟಿಕೆಗೆ ಹೆಣ್ಣುಗಳ ಮಾರಾಟ – ಇವುಗಳನ್ನು ಸಮಿತಿಯ ಶಿಫಾರಸುಗಳಲ್ಲಿ ಹೊಸ ಅಪರಾಧಗಳನ್ನಾಗಿ ಸೇರ್ಪಡೆ ಮಾಡಲಾಗಿದೆ ಹಾಗೂ ಶಿಕ್ಷೆಯನ್ನು ಇನ್ನೂ ಕಠಿಣಗೊಳಿಸುವಂತೆ ಸಲಹೆ ಮಾಡಲಾಗಿದೆ.

ಆ) ಅತ್ಯಾಚಾರಕ್ಕೊಳಗಾದ ವ್ಯಕ್ತಿ ಅದರ ಪರಿಣಾಮವಾಗಿ ಸತ್ತರೆ ಅಥವಾ ಸಸ್ಯಸದೃಶ ಬದುಕು ನೂಕುವಂಥ ಸ್ಥಿತಿಗೆ (ವೆಜಿಟೇಟಿವ್ ಸ್ಟೇಟ್‌ಗೆ) ತಳ್ಳಲ್ಪಟ್ಟರೆ ಅಪರಾಧಿಗೆ 20 ವರ್ಷದ ಜೈಲು ಶಿಕ್ಷೆ ಹಾಗೂ ಸಾಮೂಹಿಕ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ವಿಧಿಸಲು ಸಮಿತಿ ಸಲಹೆ ಮಾಡಿದೆ. ಸಾಮೂಹಿಕ ಅತ್ಯಾಚಾರದ ಪರಿಣಾಮವಾಗಿ ಮಹಿಳೆ ಸಾವಿಗೀಡಾದರೆ ಅತ್ಯಾಚಾರಿಗಳಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಲು ಸಲಹೆ ನೀಡಲಾಗಿದೆ.

ಈಗಿರುವ ಕಾನೂನು ಪ್ರಕಾರ ಈ ಶಿಕ್ಷೆ ಕನಿಷ್ಠ 7 ವರ್ಷದಿಂದ ಗರಿಷ್ಠ ಜೀವಾವಧಿಯದಾಗಿತ್ತು. ಫಾಶಿ ಶಿಕ್ಷೆಯೊಂದು(ಗಲ್ಲಿಗೇರಿಸುವುದು) ‘ತಿರೋಗಾಮಿ ಹೆಜ್ಜೆ’ (ಹಿಂಚಲನೆ) ಮತ್ತು ಅದು ‘ಅಪರಾಧಕ್ಕೆ ತಡೆಯೊಡ್ಡುವ ಪರಿಣಾಮ ಉಂಟುಮಾಡಲಾರದು’ ಎಂಬ ಕಾರಣಕ್ಕಾಗಿ ವರ್ಮಾ ಸಮಿತಿಯು ಅತ್ಯಾಚಾರಕ್ಕೆ ಫಾಶಿ ಶಿಕ್ಷೆಯನ್ನು ಶಿಫಾರಸು ಮಾಡಿಲ್ಲ.

ಇ) ಮಹಿಳೆಯ ಆತ್ಮರಕ್ಷಣೆಯ ಹಕ್ಕನ್ನು ಕುರಿತ ಭಾರತೀಯ ದಂಡಸಂಹಿತೆಯ ಸೆಕ್ಷನ್ 100ಕ್ಕೆ ತಿದ್ದುಪಡಿ ಮಾಡುವಂತೆ ಸಮಿತಿ ಶಿಫಾರಸು ಮಾಡಿದೆ. ಆತ್ಮರಕ್ಷಣೆಯ ಹಕ್ಕಿನ ಚಲಾವಣೆಯಿಂದ ಸಾವು ಉಂಟಾದರೂ ಈ ಸೆಕ್ಷನ್ ಅದಕ್ಕೆ ಅನ್ವಯಿಸಬೇಕು ಎನ್ನುತ್ತದೆ ಶಿಫಾರಸು.

ಈ) ರಾಸಾಯನಿಕ ವಿಧಾನದಿಂದ ಅತ್ಯಾಚಾರಿಗಳ ಪುರುಷತ್ವ ಹರಣಗೊಳಿಸುವ ಶಿಕ್ಷೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಹಾಗೂ ದೇಹಕ್ಕೆ ಊನ ಮಾಡುವುದನ್ನು ನಮ್ಮ ಸಂವಿಧಾನ ಸಮ್ಮತಿಸುವುದಿಲ್ಲ ಎನ್ನುವ ಕಾರಣಕ್ಕೆ ಸಮಿತಿ ಆ ಶಿಕ್ಷೆಯ ಸಲಹೆಯನ್ನು ತಿರಸ್ಕರಿಸಿದೆ.

ಉ) ವೈವಾಹಿಕ ಅತ್ಯಾಚಾರದ ಬಗ್ಗೆ ಹಾಗೂ ಹೋರಾಟದ (“ಗಲಭೆಗ್ರಸ್ತ”) ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಕೂಡ ಸಮಿತಿ ಚರ್ಚಿಸಿದೆ; ‘ಸಶಸ್ತ್ರ ಬಲಗಳ ವಿಶೇಷಾಧಿಕಾರ ಕಾಯ್ದೆ’ (AFSPA)ಯನ್ನು ಸಶಸ್ತ್ರ ಪಡೆಗಳವರು ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸಲು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿರುವುದರಿಂದ ಆ ಕಾಯ್ದೆಯನ್ನು ಪುನರ್ ವಿಮರ್ಶಿಸಬೇಕೆಂದು ಸಮಿತಿ ಶಿಫಾರಸು ಮಾಡಿದೆ.

ಊ) ಸಾಂವಿಧಾನಿಕ ಪರಿಹಾರದ ಮಾರ್ಗದ ಮೂಲಕ ಮೂಲಭೂತ ಹಕ್ಕುಗಳ ರಕ್ಷಣೆಯು ನ್ಯಾಯಾಂಗದ ಪ್ರಧಾನ ಜವಾಬ್ದಾರಿಯಾಗಿದೆ ಎಂದು ಸಮಿತಿ ಹೇಳಿದೆ. ಭಾರತದ ಪ್ರಧಾನ ನ್ಯಾಯಾಧೀಶರು ಯಾವುದೇ ಪ್ರಕರಣವನ್ನು ತಾವಾಗಿಯೇ ವಿಚಾರಣೆಗೆ ಎತ್ತಿಕೊಳ್ಳಬಹುದು (ಸುವೋ ಮೋಟು ಕಾಗ್ನಿಜನ್ಸ್); ಸಾಮಾಜಿಕ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೋರ್ಟಿಗೆ ನೆರವಾಗಬೇಕು. ಪ್ರತಿಯೊಂದು ರಾಜ್ಯದ ಹೈಕೋರ್ಟುಗಳ ಮುಖ್ಯ ನ್ಯಾಯಾಧೀಶರುಗಳು ಬಾಲ ರಕ್ಷಣಾ ಗೃಹಗಳ ನಿರ್ವಹಣೆ, ಮೇಲ್ವಿಚಾರಣೆ ಮಾಡಲು ಆ ಕ್ಷೇತ್ರದ ತಜ್ಞರ ಸಲಹೆಗಳ ಮೇರೆಗೆ ಸೂಕ್ತವಾದ ಯಂತ್ರಾಂಗವನ್ನು ರೂಪಿಸಬೇಕು ಎಂದೂ ಶಿಫಾರಸು ಮಾಡಿದೆ.

ಇದನ್ನೂ ಓದಿ: ಅತ್ಯಾಚಾರವನ್ನು ತಡೆಗಟ್ಟಲು ಸಾಧ್ಯ! ತಡೆಗಟ್ಟಲೇಬೇಕು! ಅದರ ಮೂಲಬೇರುಗಳನ್ನು ಅರಿತಾಗ ಮಾತ್ರ…

ಋ) ದೇಶದಲ್ಲಿ ಯಾವುದೇ ವೈಯಕ್ತಿಕ ಕಾನೂನಿನ (ಪರ್ಸನಲ್ ಲಾ) ಮೇರೆಗೆ ನಡೆಯುವ ಎಲ್ಲಾ ಮದುವೆಗಳನ್ನೂ ಒಬ್ಬ ಮ್ಯಾಜಿಸ್ಟ್ರೇಟರ ಸಮ್ಮುಖದಲ್ಲಿ ನೊಂದಾವಣೆ ಮಾಡಿಸಲೇಬೇಕು. ಆ ಮದುವೆಯಲ್ಲಿ ವರದಕ್ಷಿಣೆಯ ಡಿಮ್ಯಾಂಡ್ ಇರಲಿಲ್ಲ ಹಾಗೂ ವಧೂವರರಿಬ್ಬರ ಸಂಪೂರ್ಣ, ಸ್ವತಂತ್ರ ಒಪ್ಪಿಗೆಯ ಮೇರೆಗೆ ಮದುವೆ ನಡೆಯುತ್ತಿದೆ ಎಂಬುದನ್ನು ಮ್ಯಾಜಿಸ್ಟ್ರೇಟರು ಖಾತ್ರಿಪಡಿಸಿಕೊಳ್ಳಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.

ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗಿರುವ ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನು ಸ್ತ್ರೀ ರೋಗ ಮತ್ತು ಮನೋವೈದ್ಯಕೀಯ ಕ್ಷೇತ್ರಗಳಲ್ಲಿನ ಜಾಗತಿಕ ಖ್ಯಾತಿಯ ತಜ್ಞರು ಶಿಫಾರಸು ಮಾಡಿರುವ ಅತ್ಯುತ್ತಮ ವಿಧಾನಗಳ ಮೂಲಕ ನಡೆಸಬೇಕು ಎಂದು ಶಿಫಾರಸು ಮಾಡಲಾಗಿದೆ.

ಎ) ಅಪ್ರಾಪ್ತ ವಯಸ್ಸಿನ ಮಕ್ಕಳ ಮಾರಾಟ ಜಾಲವನ್ನು ಒಂದು ತೀವ್ರವಾದ ಅಪರಾಧವೆಂದು ಪರಿಗಣಿಸಬೇಕು ಹಾಗೂ ಅದಕ್ಕೆ ಕಠಿಣ ಶಿಕ್ಷೆ ನೀಡಬೇಕು. ಶಿಕ್ಷೆಯು ಏಳು ವರ್ಷಗಳಿಗಿಂತ ಕಡಿಮೆ ಇರಬಾರದು, ಹತ್ತು ವರ್ಷಗಳವರೆಗೂ ಹೆಚ್ಚಬಹುದು ಎಂದು ಸಮಿತಿ ಶಿಫಾರಸು ಮಾಡಿದೆ.

ಏ) ತನಿಖಾ ಸಂಸ್ಥೆಗಳು ಚುನಾಯಿತ ಸದಸ್ಯರ ಮೇಲೆ ಅಥವಾ ಚುನಾವಣಾ ಅಭ್ಯರ್ಥಿಯ ಮೇಲೆ ಹಾಕಿದ ಚಾರ್ಜ್ ಶೀಟನ್ನು ನ್ಯಾಯಾಲಯವು ವಿಚಾರಣೆಗೆ ಪರಿಗಣಿಸಿದ್ದರೆ ಅಂಥ ಸದಸ್ಯರ ಅಧಿಕಾರ ರದ್ದಾಗಬೇಕು ಹಾಗೂ ಅಂಥ ಅಭ್ಯರ್ಥಿಗೆ ನಾಮಪತ್ರ ಸಲ್ಲಿಸದಂತೆ ನಿಷೇಧ ಹೇರಬೇಕು ಎಂಬ ಸಲಹೆಯನ್ನು ಸಹ ಮಾಡಲಾಗಿದೆ.

ಕೃಪೆ: ಹೇಮಲತಾರವರು ಸಂಪಾದಿಸಿರುವ “ಅತ್ಯಾಚಾರ ಬರ್ಬರತೆಯ ಬೇರುಗಳೆಲ್ಲಿ?” ಪುಸ್ತಕದಿಂದ ಈ ಲೇಖನವನ್ನು ಆಯ್ದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ರದ್ದು: ಹೈಕೋರ್ಟ್‌ನಿಂದ ಮರುನೇಮಕಕ್ಕೆ ಆದೇಶ

ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ...

ಗೋಡ್ಸೆ ಹೊಗಳಿಕೆ, ದಲಿತದ್ವೇಷ, ಸ್ತ್ರೀದ್ವೇಷ ಮತ್ತು ಮುಸ್ಲಿಂ ದ್ವೇಷ: ತೀವ್ರ ಪರಿಶೀಲನೆಯಲ್ಲಿರುವ ಬಿಜೆಪಿಯ ಹೊಸ ಸಾಮಾಜಿಕ ಮಾಧ್ಯಮ ತಂಡದ ವಿರುದ್ಧ ಜನಾಕ್ರೋಶ

ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ ಹಳೆಯ ಪೋಸ್ಟ್‌ಗಳು, ಇಸ್ಲಾಮೋಫೋಬಿಕ್ ಹಾಗೂ ಜನಾಂಗೀಯ ಹತ್ಯೆಯ ಹೇಳಿಕೆಗಳು, ದಲಿತ ಹಾಗೂ ಮೀಸಲಾತಿ ವಿರೋಧಿ ಮಾತುಗಳು ಮತ್ತು ಮಹಿಳೆಯರ ವಿರುದ್ಧ ಬಳಸಿರುವ ಸ್ತ್ರೀದ್ವೇಷದ ಭಾಷೆಯ ಕಾರಣಕ್ಕಾಗಿ...

‘ಮಹಾತ್ಮ ಗಾಂಧಿ – ವಾಜಪೇಯಿ ಹಾಡಿದ್ದನ್ನೇ ನಾವು ಹಾಡಿದ್ದೇವೆ..’; ವಂದೇ ಮಾತರಂ ವಿವಾದದ ಕುರಿತು ಖರ್ಗೆ ಸ್ಪಷ್ಟನೆ

ಪಕ್ಷದ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಹಾಡಿದ ಬಗ್ಗೆ ನಡೆಯುತ್ತಿರುವ ವಿವಾದದ ನಡುವೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್...

ದೆಹಲಿ ಪೊಲೀಸರಿಂದ AAP ಶಾಸಕನ ಅಪಹರಣ?: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ತುರ್ತು ವಿಚಾರಣೆಗೆ ಅಸ್ತು!

AAP ಶಾಸಕ ಕುಲ್ದೀಪ್ ಕುಮಾರ್ ಅವರನ್ನು ಅವರ ಮನೆಯಿಂದ ಅಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ (Habeas Corpus) ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ಒಪ್ಪಿಗೆ...

ಅದಾನಿ-ಎಲ್‌ಐಸಿ ತನಿಖಾ ವರದಿ: ಪತ್ರಕರ್ತ ರವಿ ನಾಯರ್ ಮನೆಗಳ ಮೇಲೆ ಗುಜರಾತ್ ಪೊಲೀಸರ ದಾಳಿ, ಡಿಜಿಟಲ್ ಉಪಕರಣಗಳ ವಶ

ಅದಾನಿ ಸಮೂಹ ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ (ಎಲ್‌ಐಸಿ) ನಡುವಿನ ಹೂಡಿಕೆ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ತನಿಖಾ ವರದಿ ಪ್ರಕಟಿಸಿದ್ದ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರ ದೆಹಲಿ ಮತ್ತು ಕೇರಳದಲ್ಲಿರುವ...

ಗುಜರಾತ್ | ನಕಲಿ ಸರ್ಕಾರಿ ಕಚೇರಿಗಳನ್ನು ಸ್ಥಾಪಿಸಿ ಸರ್ಕಾರದ ಅನುದಾನ ಲೂಟಿ; ಬೃಹತ್ ಹಗರಣ ಬಯಲು

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಹೆಸರಿನಲ್ಲಿ 6 ನಕಲಿ ಸರ್ಕಾರಿ ಕಚೇರಿಗಳನ್ನು ಸೃಷ್ಟಿಸಿ, ಕೋಟ್ಯಂತರ ರೂಪಾಯಿ ಸರ್ಕಾರಿ ಅನುದಾನವನ್ನು ಲೂಟಿ ಮಾಡಿರುವುದು ಪತ್ತೆಯಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ...

ಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ...

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಪಿಎಂ...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೋಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...