Homeಕರ್ನಾಟಕ'ಪಬ್ಲಿಕ್ ಟಿವಿ' ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

‘ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

- Advertisement -
- Advertisement -

ದಲಿತ ವಿರೋಧಿ ಮನಸ್ಥಿತಿ; ತಳಸಮುದಾಯಗಳ ಪರವಾಗಿ ಧ್ವನಿ ಎತ್ತುವ ಪತ್ರಕರ್ತರ ಕುರಿತು ಅಸಹನೆ! ಇದಿಷ್ಟೇ ಅಲ್ಲ, ಮುಖ್ಯವಾಹಿನಿ ಮಾಧ್ಯಮದಲ್ಲಿ ಕೆಲಸ ಮಾಡುತ್ತಿರುವ ನಾನು ಏನೇ ಮಾಡಿದರೂ ನೀಗಿಸಿಕೊಳ್ಳುತ್ತೇನೆ ಎಂಬ ಅಹಂಕಾರವನ್ನೇ ಮೈಗೂಡಿಸಿಕೊಂಡಿರುವ ಪಬ್ಲಿಕ್ ಟಿವಿಯ ತುಮಕೂರು ಜಿಲ್ಲಾ ವರದಿಗಾರ ಮಂಜುನಾಥ್ ತಾಳಮಕ್ಕಿ ಕುರಿತು ಇನ್ನೂ ಹೇಳಬೇಕಾಗಿರುವ ಸಾಕಷ್ಟು ವಿಚಾರಗಳಿವೆ ಎನ್ನುತ್ತಾರೆ ಅಲ್ಲಿನ ಕೆಲ ಪತ್ರಕರ್ತರು.

ದಲಿತ ಸಮುದಾಯದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದಡಿ ತುಮಕೂರು ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದಾ ದಲಿತ ವಿರೋಧಿ ಮನಸ್ಥಿತಿಯ ಮಂಜುನಾಥ್, ಮಾದಿಗ ಸಮುದಾಯದ ಜಿ.ಎನ್.ಮಂಜುನಾಥ್  (ಸಮಯ ಮಂಜು) ಎಂಬುವವರ ಮೇಲೆ ತಾನು ಹಿಡಿದಿದ್ದ ಪಬ್ಲಿಕ್ ಟಿವಿ ಲೋಗೋ ಮೈಕ್‌ನಿಂದ ಹಲ್ಲೆ ನಡೆಸಿದ್ದಾನೆ; ಜಾತಿ ಹೆಸರಿಡಿದು ನಿಂದಿಸಿದ ಆತನ ಮೇಲೆ ಇದೀಗ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989’ ಅಡಿ ಪ್ರಕರಣ ದಾಖಲಾಗಿದೆ.

ದಲಿತ ಸಮುದಾಯದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿರುವ ಪಬ್ಲಿಕ್ ಟಿವಿ ವರದಿಗಾರನ ಕುರಿತು ಮಾಹಿತಿ ಕಲೆ ಹಾಕಲು ಅಲ್ಲಿನ ಸ್ಥಳೀಯ ಪತ್ರಕರ್ತರನ್ನು ಸಂಪರ್ಕಿಸಿದಾಗ, ಮಂಜುನಾಥ್ ಈ ಹಿಂದೆ ಕೂಡ ಮಂಡ್ಯದಲ್ಲಿ ವರದಿಗಾರನಾಗಿದ್ದಾಗ ಇದೇ ರೀತಿ ವರ್ತಿಸಿದ್ದ ಎನ್ನಲಾಗಿದೆ. ಆಗಲೂ ಈತನ ಮೇಲೆ ‘ಅಟ್ರಾಸಿಟಿ’ ಪ್ರಕರಣ ದಾಖಲಾಗಿ, ಬಳಿಕ ಕೆಲವರು ರಾಜಿ ಮಾಡಿಸಿ ದೂರು ಹಿಂಪಡೆಯುವಂತೆ ಮನವೊಲಿಸಿದ್ದರು ಎಂದು ತಿಳಿದುಬಂದಿದೆ. ಇಷ್ಟೆಲ್ಲಾ ಆದರೂ ಬುದ್ದಿ ಕಲಿಯದ ಈತ, ತಾನು ಕೆಲಸ ಮಾಡುತ್ತಿದ್ದ ಸುದ್ದಿವಾಹಿನಿಯ ‘ಕ್ಯಾಮೆರಾಮ್ಯಾನ್‌’ ಒಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದನಂತೆ! ವಿವಾದದ ಬಳಿಕ ಈತನನ್ನು ತುಮಕೂರಿಗೆ ವರ್ಗಾವಣೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ತನ್ನ ಹಿಂದಿನ ಕೃತ್ಯಗಳಿಗೆ ಕೇಸು ಹಾಕಿಸಿಕೊಂಡು, ವರ್ಗಾವಣೆಯಾಗಿದ್ದರೂ ಬುದ್ದಿ ಕಲಿಯದ ಮಂಜುನಾಥ್, ತುಮಕೂರಿಗೆ ಬಂದ ಬಳಿಕವೂ ತನ್ನ ಹಿಂದಿನ ಅದೇ ದಾಳಿ ಮನಸ್ಥಿತಿಯನ್ನೇ ಮುಂದುವರಿಸಿದ್ದಾರೆ.

ಮಂಜುನಾಥ್ ತಾಳಮಕ್ಕಿ ತುಮಕೂರಿಗೆ ವರ್ಗಾವಣೆ ಆದ ಬಳಿಕ, ಈಗ ದಾಳಿಗೆ ಒಳಗಾಗಿರುವ ದಲಿತ ಸಮುದಾಯದ ಪತ್ರಕರ್ತ ಜಿ.ಎನ್‌.ಮಂಜುನಾಥ್ ಅವರ ಮನೆಯಲ್ಲೇ ಆಶ್ರಯ ಪಡೆದುಕೊಂಡಿದ್ದನಂತೆ. ದಲಿತ ಸಮುದಾಯದ ಮಂಜುನಾಥ್ ತಮ್ಮ ಕೈಯಾರೆ ಮಾಡುತ್ತಿದ್ದ ಅನ್ನವನ್ನೇ ಉಣ್ಣುತ್ತಿದ್ದಾಗ ಆತನಿಗೆ ಕಾಣದ ಜಾತಿಪ್ರಜ್ಞೆ, ಈಗ ತುಮಕೂರಿನಲ್ಲಿ ನೆಲೆ ಕಂಡುಕೊಂಡ ಬಳಿಕ ಎಚ್ಚರವಾಗಿಬಿಟ್ಟಿದೆ. ಅನ್ನ-ಆಶ್ರಯ ಕೊಟ್ಟವರಿಗೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾನೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಹಲ್ಲೆಗೊಳಗಾದ ದಲಿತ ಪತ್ರಕರ್ತ ಜಿ.ಎನ್‌.ಮಂಜುನಾಥ್, “ದೈಹಿಕವಾಗಿ ಚೇತರಿಕೊಂಡಿದ್ದೇನೆ. ಆದರೆ, ಅಂದು ನಡೆದ ಮಾನಸಿಕ ಆಘಾತದಿಂದ ಇನ್ನೂ ಹೊರಬರುವುದಕ್ಕೆ ಸಾಧ್ಯವಾಗಿಲ್ಲ. ಹತ್ತಾರು ಜನ ಸಹೋದ್ಯೋಗಿಗಳು ಮತ್ತು ಅಲ್ಲಿದ್ದ ವಿದ್ಯಾರ್ಥಿಗಳ ಎದುರು ನಡೆದ ಅವಮಾನದಿಂದ ಸಾಕಷ್ಟು ನೊಂದಿದ್ದೇನೆ” ಎಂದು ನೋವು ತೋಡಿಕೊಂಡರು.

“ಮಂಜುನಾಥ್ ತಾಳಮಕ್ಕಿ ಸದಾ ದಲಿತ ವಿರೋಧಿ ಮನಸ್ಥಿತಿಯ ಪತ್ರಕರ್ತ; ತಳ ಸಮುದಾಯಗಳ ಪರವಾಗಿ ಮಾತನಾಡುವ ಎಲ್ಲರನ್ನೂ ಸಕಾರಣವಿಲ್ಲದೆ ದ್ವೇಷಿಸುತ್ತಾರೆ. ಈತ ಕೆಲಸ ಮಾಡುವ ಸಂಸ್ಥೆಯ ಸಂಪಾದಕರನ್ನು ವಿಮರ್ಷೆ ಮಾಡಿ ಲೇಖನ ಪ್ರಕಟಿಸಿದ್ದ ಸ್ವತಂತ್ರ ಮಾಧ್ಯಮ ಸಂಸ್ಥೆಯೊಂದರ ಜಿಲ್ಲಾ ವರದಿಗಾರನನ್ನು ವೈಯಕ್ತಿಕವಾಗಿ ನಿಂದಿಸಿ, ಆಗಲೂ ಈತ ದಲಿತ ಸಮುದಾಯದ ಪತ್ರಕರ್ತರನ್ನು ಹೀಯಾಳಿಸಿದ್ದ. ‘ನೀವು ದನ ತಿನ್ನುವವರನ್ನು ಬೆಂಬಲಿಸುವವರು’ ಎಂದು ತೇಜೋವಧೆ ಮಾಡಿದ್ದ. ಹೀಗೆಲ್ಲಾ ಮಾತನಾಡುವುದು ಸರಿಯಲ್ಲ ಎಂದು ನಾನು ಆಕ್ಷೇಪಿಸಿದ್ದೆ” ಎಂದರು.

ಹಲ್ಲೆಗೆ ಕಾರಣ ಏನು?

ತಮ್ಮ ಮೇಲೆ ಹಲ್ಲೆ ನಡೆಸಿದ್ದಕ್ಕೆ ಕಾರಣ ಏನು ಎಂಬುದರ ಹಿನ್ನೆಲೆ ವಿವರಿಸಿದ ಮಂಜುನಾಥ್ “ಇದೇ ತಿಂಗಳ 8 ರಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ತುಮಕೂರು ನಿರೀಕ್ಷಣಾ ಮಂದಿರಕ್ಕೆ (ಐಬಿ) ಬಂದಿದ್ದಾಗ, ಅವರ ಹೇಳಿಕೆ ಪಡೆಯಲು ನಾವೆಲ್ಲರೂ (ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರು) ಹೋಗಿದ್ದೆವು. ಸಚಿವರು ಮಾತನಾಡಿದ ಬಳಿಕ, ಅವರದ್ದೇ ಕ್ಷೇತ್ರವಾದ ಕೊರಟಗೆರೆಯಲ್ಲಿ ದಲಿತರಿಗೆ ನೀಡಿದ್ದ ನಿವೇಶನದ ಹಕ್ಕುಪತ್ರದ ಬಗ್ಗೆ ಎದ್ದಿರುವ ಗೊಂದಲದ ಕುರಿತು ನಾನು ಪ್ರಶ್ನೆ ಮಾಡಿದ್ದೆ. ಆದರೆ, ‘ಸ್ಥಳೀಯ ವಿಚಾರ ಬಿಟ್ಟು, ಬೇರೆ ಏನಾದರೂ ಕೇಳಿ’ ಎಂದಿದ್ದ ಸಚಿವರು, ತುಮಕೂರು ಪತ್ರಕರ್ತರನ್ನು ನಿರ್ಲಕ್ಷಿಸುವ ರೀತಿ ಮಾತನಾಡಿದ್ದರು. ಸಚಿವರ ನಡೆಯಿಂದ ನಾನೂ ಸೇರಿದಂತೆ ಉಳಿದ ಪತ್ರಕರ್ತರು ಅಸಮಾಧಾನಗೊಂಡಿದ್ದರು. ಕೆಲ ದಿನಗಳ ಬಳಿಕ, ಜಿಲ್ಲಾ ದೇಶ್ಯ ಮಾಧ್ಯಮ ವರದಿಗಾರರ ಸಭೆ ನಡೆಸಿದ್ದೆವು. ‘ಪತ್ರಕರ್ತರಿಗೆ ಅವಮಾನ ಮಾಡಿದ ಸಚಿವರ ಕುರಿತು ಸುದ್ದಿ ಪ್ರಕಟಿಸುವುದಿಲ್ಲ ಎಂದು ನಿರ್ಣಯ ಮಾಡಬೇಕು’ ಎಂದು ಮಂಜುನಾಥ್ ತಾಳಮಕ್ಕಿ ಹೇಳಿದ್ದರು. ಹೀಗೆ ನಿರ್ಧಾರ ಮಾಡುವುದು ತಪ್ಪಾಗುತ್ತದೆ ಎಂದು ಹೇಳಿದ್ದೆ; ಉಳಿದ ಪತ್ರಕರ್ತರಿಗೂ ಈ ಬಗ್ಗೆ ಸಹಮತವಿರಲಿಲ್ಲ. ಆದರೂ ಆತ ಒತ್ತಾಯ ಮಾಡಿ ಎಲ್ಲರಿಂದ ಸಹಿ ಪಡೆದುಕೊಂಡು, ಗೃಹ ಸಚಿವರ ಸುದ್ದಿಗಳನ್ನು ‘ಬಾಯ್ಕಾಟ್’ ಮಾಡಿದ್ದೇವೆ ಎಂದು ಪತ್ರಕರ್ತರ ವಾಟ್ಸಾಪ್‌ ಗ್ರೂಪ್‌ನಲ್ಲಿ ಹೇಳಿಕೆ ಹೊರಡಿಸಿದ್ದರು. ಆದರೆ, ಆ ಪತ್ರಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸಿ, ಹೀಗೆ ಮಾಡುವುದು ಸರಿಯಲ್ಲ ಎಂದಿದ್ದರು. ನಾನೂ ಕೂಡ ಈ ಬೆಳವಣಿಗೆ ಒಳ್ಳೆಯದಲ್ಲ, ಮುಂದಿನ ದಿನಗಳಲ್ಲಿ ನಾವು ಅವರ ಕುರಿತು ಸುದ್ದಿ ಮಾಡಬೇಕಾಗಿ ಬರಬಹುದು ಎಂದು ಹೇಳಿದ್ದೆ. ಈ ವಿಚಾರದಲ್ಲಿ ಎಲ್ಲರನ್ನೂ ಬಿಟ್ಟು, ನನ್ನನ್ನು ಮಾತ್ರ ಗುರಿಯಾಗಿಸಿಕೊಂಡು ಕೆಟ್ಟದಾಗಿ ಮಾತನಾಡಿದರು” ಎಂದು ವಿವರಿಸಿದರು.

“ನಿನಗೆ ಪರಮೇಶ್ವರ್ ಮೇಲೆ ಜಾತಿಪ್ರೇಮವಿದೆ, ಎಡಚರ ಲದ್ದಿ, ಬುದ್ದಿ ತೋರಿಸಬೇಡಾ ಎಂದು ನಿಂದಿಸಿದ್ದ. ಆತನ ಟೀಕೆಗಳಿಗೆ ನಾನು ನಯವಾಗೇ ಪ್ರತಿಕ್ರಿಯೆ ನೀಡಿದ್ದೆ. ಮರುದಿನ, ಗೃಹ ಸಚಿವರಾದ ಜಿ.ಪರಮೇಶ್ವರ್ ಕುಟುಂಬದ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ (ಜಾರಿ ನಿರ್ದೇಶನಾಲಯ) ನಡೆಯುತ್ತದೆ; ಎಂದಿನಂತೆ ಎಲ್ಲರ ಜೊತೆಗೆ ನಾನೂ ಕೂಡ ಅಲ್ಲಿ ವರದಿಗಾಗಿ ತೆರಳಿದ್ದೆ. ಅಲ್ಲಿಗೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ಕೂಡ ಆಗಮಿಸಿ, ಹಿಂದಿನ ದಿನ ನಾನು ವಾಟ್ಸಾಪ್‌ ಗ್ರೂಪಿನಲ್ಲಿ ಅವರ ನಿರ್ಧಾರ ವಿರೋಧಿಸಿದ್ದನ್ನೇ ಮುಂದಿಟ್ಟುಕೊಂಡು ಕಾಲುಕೆರೆದು ಜಗಳಕ್ಕೆ ಬಂದರು. ಏನಲೇ, ನೀನು ಬಂದಿದಿಯಾ, ನಿನಗೆ ನೀನು ದೊಡ್ಡ ಬುದ್ದಿವಂತ ಎಂದು ತೋರಿಸಿಕೊಳ್ಳೊಕೆ ಬಂದಿದಿಯಾ ಎಂದು ಹಿಯಾಳಿಸುತ್ತಾನೆ. ‘ಇಡಿ ದಾಳಿ’ ಗಂಭೀರ ಸುದ್ದಿಯಾಗಿದ್ದು, ಈಗ ಸುಮ್ಮನಿರು ನಂತರ ಮಾತನಾಡೋಣ ಎಂದು ನಾನು ಸೇರಿದಂತೆ ಉಳಿದ ಪತ್ರಕರ್ತರೂ ಅವರಿಗೆ ತಿಳುವಳಿಕೆ ಹೇಳಲು ಯತ್ನಿಸಿದರು. ಆದರೆ, ಯಾವುದನ್ನೂ ಕೇಳಿಸಿಕೊಳ್ಳದ ಆತ ಜಗಳ ಮುಂದುವರಿಸಿದ್ದ. ಅಶ್ಲೀಲ ಮಾತುಗಳಿಂದ ನನ್ನ ಮೇಲೆ ದಾಳಿ ನಡೆಸಿ, ಏನೆ ಮಾಡಿದರೂ ನಿಮ್ಮ ಜಾತಿ ಕೀಳು ಜಾತಿನೇ, ನೀವು ಕೀಳು ಜಾತಿ ಬುದ್ದಿ ಬಿಡಲ್ಲಾ, ಎಂದು ಮಾದಿಗ ನನ್ನ ಮಗನೇ’ ಎಂದು ಜಾತಿ ಬಳಸಿ ನಿಂದಿಸಿ ಅವಾಚ್ಯ ಶಬ್ದಗಳನ್ನ ಬಳಸಿ ಸಾರ್ವಜನಿಕವಾಗಿ ಅವಮಾನಿಸುತ್ತಾನೆ. ನಾನು ನಾಲಿಗೆ ಬಿಗಿ ಹಿಡಿದು ಮಾತನಾಡು ಎಂದು ಜಾತಿ ಹಿಡಿದು ಯಾಕೆ ಮಾತನಾಡುತ್ತಿಯಾ ಎಂದು ಪ್ರಶ್ನಿಸಿದ್ದಕ್ಕೆ ಆತ ನೇರವಾಗಿ ತನ್ನ ಕೈನಲ್ಲಿದ್ದ ಲೋಗೋದಿಂದ ನನ್ನ ಮೇಲೆ ದಾಳಿ ಮಾಡಿದ, ಇದರಿಂದ ನನ್ನ ತಲೆಗೆ ಪೆಟ್ಟಾಗಿ ಕಿವಿ ಹಿಂದೆ ಗಾಯ ಆಗಿದೆ. ತಕ್ಷಣ ಮಧ್ಯಪ್ರವೇಶಿಸಿದ ಸ್ಥಳದಲ್ಲಿದ್ದ ವರದಿಗಾರರು, ಸಾರ್ವಜನಿಕರು ಆಸ್ಪತ್ರೆಗೆ ತೆರಳುವಂತೆ ನನ್ನನ್ನು ಅಲ್ಲಿಂದ ಕಳುಹಿಸಿದರು. ಈ ಘಟನೆಯಿಂದ ನನಗೆ ಬಹಳ ಆಘಾತವಾಯಿತು. ನೇರವಾಗಿ ಮನೆಗೆ ತೆರಳಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಿಗೆ ಕರೆ ಮಾಡಿದೆ. ಹಿರಿಯ ಪತ್ರಕರ್ತರನ್ನು ಸಂಪರ್ಕಿಸಿ ಆತನಿಗೆ ಬುದ್ದಿ ಹೇಳುವಂತೆ ಕೇಳಿಕೊಂಡೆ. ಆದರೆ, ಆತ ಯಾರ ಮಾತನ್ನೂ ಕೇಳುವುದಿಲ್ಲ ಎಂದು ಕೆಲವರು ಅಸಹಾಯಕತೆ ವ್ಯಕ್ತಪಡಿಸಿದರು. ನಾನು ಕೆಲಸ ಮಾಡುತ್ತಿರುವ ಸಂಸ್ಥೆ ಹಾಗೂ ಹಿರಿಯರ ಸಲಹೆ ಪಡೆದು ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ” ಎಂದರು.

“ಹಿಂದಿನಿಂದಲೂ ಈತ ಇದೇ ರೀತಿಯ ಕೃತ್ಯ ಮಾಡಿಕೊಂಡು ಬಂದಿದ್ದಾನೆ. ಮಂಡ್ಯದಲ್ಲಿ ಕೂಡ ದಲಿತ ಯುವಕನನ್ನು ಥಳಿಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಆಗ ತಲೆಮರೆಸಿಕೊಂಡಿದ್ದ ಈತನಿಗೆ, ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರು ನೆರವಿಗೆ ಬಂದು ರಾಜಿ ಮಾಡಿಸಿದ್ದರು. ಆ ಬಳಿಕವೂ ಈತ ತನ್ನ ಸಹೋದ್ಯೋಗಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಎಂದು ಅಲ್ಲಿನ ಸ್ಥಳೀಯ ಪತ್ರಕರ್ತರು ನನಗೆ ತಿಳಿಸಿದ್ದಾರೆ. ಅಲ್ಲಿಂದ ವರ್ಗಾವಣೆ ಆದ ಬಳಿಕ ಈತನಿಗೆ ನಾನೇ ಆಶ್ರಯ ನೀಡಿದ್ದೆ; ಈತ ಮೂಲತಃ ಕಾರವಾರದವನು. ಅವನಿಗೆ ನಾನೇ ಅಡುಗೆ ಮಾಡಿ ಬಡಿಸಿದ್ದೆ, ಅವನಿಗೆ ಕೋವಿಡ್ ತಗುಲಿದ್ದಾಗ ನಮ್ಮ ಸಮುದಾಯದ ಹುಡುಗರೇ ಮುಂದೆ ನಿಂತು ಆಸ್ಪತ್ರೆಯಲ್ಲಿ ನೆರವಾಗಿದ್ದರು. ಆಗ ಆತನಿಗೆ ಕಾಣದ ಜಾತಿ ಈಗ ಕಾಣಿಸುತ್ತಿದೆ. ನನ್ನ ಮೇಲೆ ಹಲ್ಲೆ ನಡೆಸಿದ ಬಳಿಕ, ಕ್ಷಮೆ ಕೇಳಿ ರಾಜಿ ಮಾಡಿಕೊಳ್ಳುವಂತೆ ಆತನಿಗೆ ಕೆಲ ಹಿರಿಯರು ಸಲಹೆ ನೀಡಿದ್ದಾರೆ. ‘ಅವರ ಬಳಿ ನಾನು ಕ್ಷಮೆ ಕೇಳುವುದಕ್ಕೆ ಸಾಧ್ಯವೇ? ಬೇಕಿದ್ದರೆ ಜೈಲಿನಲ್ಲಿ ಇದ್ದು ಬರುತ್ತೇನೆ’ ಎಂದು ದುರಹಂಕಾರದಿಂದ ಮಾತನಾಡಿದ್ದಾನೆ” ಎಂದು ಹೇಳಿದರು.

ದಲಿತ ಪತ್ರಕರ್ತನ ಮೇಲೆ ಹಲ್ಲೆ-ಜಾತಿ ನಿಂದನೆ: ತುಮಕೂರು ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...