Homeಅಂತರಾಷ್ಟ್ರೀಯಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

19 ವರ್ಷ ಜೈಲಿನಲ್ಲಿ ಕಳೆದ ರಹೀಂ ಬಿಡುಗಡೆ ಇನ್ನೂ ಒಂದು ವರ್ಷ ವಿಳಂಬ

- Advertisement -

ಮರಣದಂಡನೆಯಿಂದ ಪಾರಾಗಿರುವ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಫರೂಕ್ ನಿವಾಸಿ ಅಬ್ದುಲ್ ರಹೀಂ ಅವರಿಗೆ ಸೌದಿ ಅರೇಬಿಯಾದ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

- Advertisement -

ಈಗಾಗಲೇ 19 ವರ್ಷಗಳನ್ನು ಜೈಲಿನಲ್ಲಿ ಕಳೆದಿರುವ ಅಬ್ದುಲ್ ರಹೀಂ ಮುಂದಿನ ವರ್ಷ (2026) ಡಿಸೆಂಬರ್‌ ತಿಂಗಳಲ್ಲಿ ರಿಯಾದ್ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ mathrubhumi.com ವರದಿ ಹೇಳಿದೆ.

ಸೌದಿ ಅರೇಬಿಯಾದ ಬಾಲಕನ ಸಾವಿನ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಹೀಂ, ನವೆಂಬರ್ 2006ರಿಂದ ಜೈಲಿನಲ್ಲಿದ್ದಾರೆ. ಆರಂಭದಲ್ಲಿ ರಿಯಾದ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು. ನಂತರ ಮೃತ ಬಾಲಕನ ಕುಟುಂಬ 1.5 ಕೋಟಿ ಮೊತ್ತದ ಸೌದಿ ರಿಯಾಲ್‌ಗಳ (ಸುಮಾರು 34 ಕೋಟಿಗಿಂತ ರೂ.ಗಿಂತ ಹೆಚ್ಚು) ಬ್ಲಡ್ ಮನಿ ಪಡೆದು ಅವರಿಗೆ ಕ್ಷಮಾಧಾನ ನೀಡಲು ಒಪ್ಪಿಕೊಂಡಿತ್ತು. ಹಾಗಾಗಿ, ರಹೀಂ ಅವರ ಮರಣದಂಡನೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಅಬ್ದುಲ್ ರಹೀಂ ಅವರು ನವೆಂಬರ್ 28, 2006ರಂದು ತನ್ನ 26ನೇ ವಯಸ್ಸಿನಲ್ಲಿ ಹೌಸ್ ಡ್ರೈವರ್ ವೀಸಾದಲ್ಲಿ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅವರನ್ನು ಪ್ರಾಯೋಜಕ ಫಯೀಝ್ ಅಬ್ದುಲ್ಲಾ ಅಬ್ದುರಹ್ಮಾನ್ ಅಲ್-ಶಹ್ರಿ ತನ್ನ ಮಗ ಅನಸ್ ಅನ್ನು ನೋಡಿಕೊಳ್ಳಲು ನೇಮಿಸಿದ್ದರು. ಕುತ್ತಿಗೆಯ ಕೆಳಗೆ ಪಾರ್ಶ್ವವಾಯುವಿಗೆ ಒಳಗಾಗಿದ್ದ ಅನಸ್, ಆಹಾರ ಮತ್ತು ನೀರಿಗಾಗಿ ವಿಶೇಷ ಸಾಧನವನ್ನು ಅವಲಂಬಿಸಿದ್ದರು.

ಡಿಸೆಂಬರ್ 24,2006ರಂದು ರಿಯಾದ್‌ನ ಶಿಫಾ ಪ್ರದೇಶದ ಮನೆಯಿಂದ ಜಿಎಂಸಿ ವ್ಯಾನ್‌ನಲ್ಲಿ ಅನಸ್ ಅವರನ್ನು ಕರೆದೊಯ್ಯುತ್ತಿದ್ದಾಗ, ಆಕಸ್ಮಿಕವಾಗಿ ರಹೀಂ ಅವರ ಕೈ ಅನಸ್‌ನ ಕುತ್ತಿಗೆಗೆ ಅಳವಡಿಸಲಾಗಿದ್ದ ಸಾಧನಕ್ಕೆ ತಾಗಿದೆ. ಇದರಿಂದ ಆ ಸಾಧನ ಕಳಚಿ ಬಿದ್ದು ಅನಸ್ ಪ್ರಜ್ಞೆ ಕಳೆದುಕೊಂಡಿದ್ದ. ಇದರ ಅರಿವಿಲ್ಲದೆ ಪ್ರಯಾಣ ಮುಂದುವರಿಸಿದ್ದ ರಹೀಂ ಸ್ವಲ್ಪ ಹೊತ್ತಿನ ಬಳಿಕ ಬಾಲಕ ಪ್ರತಿಕ್ರಿಯಿಸದಿರುವುದನ್ನು ಗಮನಿಸಿದಾಗ ಆತ ಸಾವನ್ನಪ್ಪಿದ್ದ ಎಂದು ಹೇಳಲಾಗ್ತಿದೆ.

ಅನಸ್ ಸಾವಿನ ನಂತರ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾದ ರಹೀಂ ಎರಡು ದಶಕಗಳಲ್ಲಿ ಹಲವಾರು ನ್ಯಾಯಾಲಯಗಳ ತೀರ್ಪುಗಳನ್ನು ಎದುರಿಸಿದ್ದಾರೆ. ಅವರಿಗೆ ಮೂರು ಬಾರಿ ಮರಣದಂಡನೆ ವಿಧಿಸಲಾಗಿತ್ತು. ಬಾಲಕ ಅನಸ್ ಕುಟುಂಬವು ಆರಂಭದಲ್ಲಿ ಮರಣದಂಡನೆಗೆ ಒತ್ತಾಯಿಸಿತ್ತು. ಆದರೆ, ಮಧ್ಯಸ್ಥಿಕೆಯ ಪ್ರಯತ್ನಗಳ ನಂತರ ಬ್ಲಡ್‌ ಮನಿಗೆ ಬದಲಾಗಿ ರಹೀಂಗೆ ಕ್ಷಮೆ ನೀಡಲು ಒಪ್ಪಿಕೊಂಡಿತು.

ಸೌದಿಯಲ್ಲಿ ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾದ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿ ಪದೇ ಪದೇ ವಿಳಂಬವನ್ನು ಕಂಡಿತ್ತು. ಸುಮಾರು 12 ಬಾರಿ ಪ್ರಕರಣವನ್ನು ಮುಂದೂಡಲಾಗಿತ್ತು.

ರಹೀಂ ಜೈಲಿನಲ್ಲಿದ್ದಾಗ ‘ರಿಯಾದ್‌ ರಹೀಮ್ ಸಪೋರ್ಟ್‌ ಕಮಿಟಿ’ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಬೆಂಬಲವನ್ನು ನೀಡಿತ್ತು. ಇದೇ ಕಮಿಟಿ ಈಗ ರಹೀಂ ಅವರ ಬಿಡುಗಡೆಯ ಹೊಸ ದಿನಾಂಕವನ್ನು ದೃಢಪಡಿಸಿದೆ ಮತ್ತು ಅವರ ವಾಪಸಾತಿ ಹಾಗೂ ಅಂತಿಮ ಕಾನೂನು ವಿಧಿವಿಧಾನಗಳ ಕುರಿತು ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು ಎಂಬುವುದಾಗಿ ಹೇಳಿದೆ ಎಂದು english.mathrubhumi.com ವರದಿ ತಿಳಿಸಿದೆ.

ಸಮುದ್ರ ತೀರಕ್ಕೆ ಬರಲಾರಂಭಿಸಿದ ಮುಳುಗಿದ ಹಡಗಿನ ಕಂಟೇನರ್‌ಗಳು: ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...