Homeಅಂತರಾಷ್ಟ್ರೀಯಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

19 ವರ್ಷ ಜೈಲಿನಲ್ಲಿ ಕಳೆದ ರಹೀಂ ಬಿಡುಗಡೆ ಇನ್ನೂ ಒಂದು ವರ್ಷ ವಿಳಂಬ

- Advertisement -

ಮರಣದಂಡನೆಯಿಂದ ಪಾರಾಗಿರುವ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಫರೂಕ್ ನಿವಾಸಿ ಅಬ್ದುಲ್ ರಹೀಂ ಅವರಿಗೆ ಸೌದಿ ಅರೇಬಿಯಾದ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

- Advertisement -

ಈಗಾಗಲೇ 19 ವರ್ಷಗಳನ್ನು ಜೈಲಿನಲ್ಲಿ ಕಳೆದಿರುವ ಅಬ್ದುಲ್ ರಹೀಂ ಮುಂದಿನ ವರ್ಷ (2026) ಡಿಸೆಂಬರ್‌ ತಿಂಗಳಲ್ಲಿ ರಿಯಾದ್ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ mathrubhumi.com ವರದಿ ಹೇಳಿದೆ.

ಸೌದಿ ಅರೇಬಿಯಾದ ಬಾಲಕನ ಸಾವಿನ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಹೀಂ, ನವೆಂಬರ್ 2006ರಿಂದ ಜೈಲಿನಲ್ಲಿದ್ದಾರೆ. ಆರಂಭದಲ್ಲಿ ರಿಯಾದ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು. ನಂತರ ಮೃತ ಬಾಲಕನ ಕುಟುಂಬ 1.5 ಕೋಟಿ ಮೊತ್ತದ ಸೌದಿ ರಿಯಾಲ್‌ಗಳ (ಸುಮಾರು 34 ಕೋಟಿಗಿಂತ ರೂ.ಗಿಂತ ಹೆಚ್ಚು) ಬ್ಲಡ್ ಮನಿ ಪಡೆದು ಅವರಿಗೆ ಕ್ಷಮಾಧಾನ ನೀಡಲು ಒಪ್ಪಿಕೊಂಡಿತ್ತು. ಹಾಗಾಗಿ, ರಹೀಂ ಅವರ ಮರಣದಂಡನೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಅಬ್ದುಲ್ ರಹೀಂ ಅವರು ನವೆಂಬರ್ 28, 2006ರಂದು ತನ್ನ 26ನೇ ವಯಸ್ಸಿನಲ್ಲಿ ಹೌಸ್ ಡ್ರೈವರ್ ವೀಸಾದಲ್ಲಿ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅವರನ್ನು ಪ್ರಾಯೋಜಕ ಫಯೀಝ್ ಅಬ್ದುಲ್ಲಾ ಅಬ್ದುರಹ್ಮಾನ್ ಅಲ್-ಶಹ್ರಿ ತನ್ನ ಮಗ ಅನಸ್ ಅನ್ನು ನೋಡಿಕೊಳ್ಳಲು ನೇಮಿಸಿದ್ದರು. ಕುತ್ತಿಗೆಯ ಕೆಳಗೆ ಪಾರ್ಶ್ವವಾಯುವಿಗೆ ಒಳಗಾಗಿದ್ದ ಅನಸ್, ಆಹಾರ ಮತ್ತು ನೀರಿಗಾಗಿ ವಿಶೇಷ ಸಾಧನವನ್ನು ಅವಲಂಬಿಸಿದ್ದರು.

ಡಿಸೆಂಬರ್ 24,2006ರಂದು ರಿಯಾದ್‌ನ ಶಿಫಾ ಪ್ರದೇಶದ ಮನೆಯಿಂದ ಜಿಎಂಸಿ ವ್ಯಾನ್‌ನಲ್ಲಿ ಅನಸ್ ಅವರನ್ನು ಕರೆದೊಯ್ಯುತ್ತಿದ್ದಾಗ, ಆಕಸ್ಮಿಕವಾಗಿ ರಹೀಂ ಅವರ ಕೈ ಅನಸ್‌ನ ಕುತ್ತಿಗೆಗೆ ಅಳವಡಿಸಲಾಗಿದ್ದ ಸಾಧನಕ್ಕೆ ತಾಗಿದೆ. ಇದರಿಂದ ಆ ಸಾಧನ ಕಳಚಿ ಬಿದ್ದು ಅನಸ್ ಪ್ರಜ್ಞೆ ಕಳೆದುಕೊಂಡಿದ್ದ. ಇದರ ಅರಿವಿಲ್ಲದೆ ಪ್ರಯಾಣ ಮುಂದುವರಿಸಿದ್ದ ರಹೀಂ ಸ್ವಲ್ಪ ಹೊತ್ತಿನ ಬಳಿಕ ಬಾಲಕ ಪ್ರತಿಕ್ರಿಯಿಸದಿರುವುದನ್ನು ಗಮನಿಸಿದಾಗ ಆತ ಸಾವನ್ನಪ್ಪಿದ್ದ ಎಂದು ಹೇಳಲಾಗ್ತಿದೆ.

ಅನಸ್ ಸಾವಿನ ನಂತರ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾದ ರಹೀಂ ಎರಡು ದಶಕಗಳಲ್ಲಿ ಹಲವಾರು ನ್ಯಾಯಾಲಯಗಳ ತೀರ್ಪುಗಳನ್ನು ಎದುರಿಸಿದ್ದಾರೆ. ಅವರಿಗೆ ಮೂರು ಬಾರಿ ಮರಣದಂಡನೆ ವಿಧಿಸಲಾಗಿತ್ತು. ಬಾಲಕ ಅನಸ್ ಕುಟುಂಬವು ಆರಂಭದಲ್ಲಿ ಮರಣದಂಡನೆಗೆ ಒತ್ತಾಯಿಸಿತ್ತು. ಆದರೆ, ಮಧ್ಯಸ್ಥಿಕೆಯ ಪ್ರಯತ್ನಗಳ ನಂತರ ಬ್ಲಡ್‌ ಮನಿಗೆ ಬದಲಾಗಿ ರಹೀಂಗೆ ಕ್ಷಮೆ ನೀಡಲು ಒಪ್ಪಿಕೊಂಡಿತು.

ಸೌದಿಯಲ್ಲಿ ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾದ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿ ಪದೇ ಪದೇ ವಿಳಂಬವನ್ನು ಕಂಡಿತ್ತು. ಸುಮಾರು 12 ಬಾರಿ ಪ್ರಕರಣವನ್ನು ಮುಂದೂಡಲಾಗಿತ್ತು.

ರಹೀಂ ಜೈಲಿನಲ್ಲಿದ್ದಾಗ ‘ರಿಯಾದ್‌ ರಹೀಮ್ ಸಪೋರ್ಟ್‌ ಕಮಿಟಿ’ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಬೆಂಬಲವನ್ನು ನೀಡಿತ್ತು. ಇದೇ ಕಮಿಟಿ ಈಗ ರಹೀಂ ಅವರ ಬಿಡುಗಡೆಯ ಹೊಸ ದಿನಾಂಕವನ್ನು ದೃಢಪಡಿಸಿದೆ ಮತ್ತು ಅವರ ವಾಪಸಾತಿ ಹಾಗೂ ಅಂತಿಮ ಕಾನೂನು ವಿಧಿವಿಧಾನಗಳ ಕುರಿತು ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು ಎಂಬುವುದಾಗಿ ಹೇಳಿದೆ ಎಂದು english.mathrubhumi.com ವರದಿ ತಿಳಿಸಿದೆ.

ಸಮುದ್ರ ತೀರಕ್ಕೆ ಬರಲಾರಂಭಿಸಿದ ಮುಳುಗಿದ ಹಡಗಿನ ಕಂಟೇನರ್‌ಗಳು: ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...