Homeಅಂತರಾಷ್ಟ್ರೀಯಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

19 ವರ್ಷ ಜೈಲಿನಲ್ಲಿ ಕಳೆದ ರಹೀಂ ಬಿಡುಗಡೆ ಇನ್ನೂ ಒಂದು ವರ್ಷ ವಿಳಂಬ

- Advertisement -

ಮರಣದಂಡನೆಯಿಂದ ಪಾರಾಗಿರುವ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಫರೂಕ್ ನಿವಾಸಿ ಅಬ್ದುಲ್ ರಹೀಂ ಅವರಿಗೆ ಸೌದಿ ಅರೇಬಿಯಾದ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

- Advertisement -

ಈಗಾಗಲೇ 19 ವರ್ಷಗಳನ್ನು ಜೈಲಿನಲ್ಲಿ ಕಳೆದಿರುವ ಅಬ್ದುಲ್ ರಹೀಂ ಮುಂದಿನ ವರ್ಷ (2026) ಡಿಸೆಂಬರ್‌ ತಿಂಗಳಲ್ಲಿ ರಿಯಾದ್ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ mathrubhumi.com ವರದಿ ಹೇಳಿದೆ.

ಸೌದಿ ಅರೇಬಿಯಾದ ಬಾಲಕನ ಸಾವಿನ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಹೀಂ, ನವೆಂಬರ್ 2006ರಿಂದ ಜೈಲಿನಲ್ಲಿದ್ದಾರೆ. ಆರಂಭದಲ್ಲಿ ರಿಯಾದ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು. ನಂತರ ಮೃತ ಬಾಲಕನ ಕುಟುಂಬ 1.5 ಕೋಟಿ ಮೊತ್ತದ ಸೌದಿ ರಿಯಾಲ್‌ಗಳ (ಸುಮಾರು 34 ಕೋಟಿಗಿಂತ ರೂ.ಗಿಂತ ಹೆಚ್ಚು) ಬ್ಲಡ್ ಮನಿ ಪಡೆದು ಅವರಿಗೆ ಕ್ಷಮಾಧಾನ ನೀಡಲು ಒಪ್ಪಿಕೊಂಡಿತ್ತು. ಹಾಗಾಗಿ, ರಹೀಂ ಅವರ ಮರಣದಂಡನೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಅಬ್ದುಲ್ ರಹೀಂ ಅವರು ನವೆಂಬರ್ 28, 2006ರಂದು ತನ್ನ 26ನೇ ವಯಸ್ಸಿನಲ್ಲಿ ಹೌಸ್ ಡ್ರೈವರ್ ವೀಸಾದಲ್ಲಿ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅವರನ್ನು ಪ್ರಾಯೋಜಕ ಫಯೀಝ್ ಅಬ್ದುಲ್ಲಾ ಅಬ್ದುರಹ್ಮಾನ್ ಅಲ್-ಶಹ್ರಿ ತನ್ನ ಮಗ ಅನಸ್ ಅನ್ನು ನೋಡಿಕೊಳ್ಳಲು ನೇಮಿಸಿದ್ದರು. ಕುತ್ತಿಗೆಯ ಕೆಳಗೆ ಪಾರ್ಶ್ವವಾಯುವಿಗೆ ಒಳಗಾಗಿದ್ದ ಅನಸ್, ಆಹಾರ ಮತ್ತು ನೀರಿಗಾಗಿ ವಿಶೇಷ ಸಾಧನವನ್ನು ಅವಲಂಬಿಸಿದ್ದರು.

ಡಿಸೆಂಬರ್ 24,2006ರಂದು ರಿಯಾದ್‌ನ ಶಿಫಾ ಪ್ರದೇಶದ ಮನೆಯಿಂದ ಜಿಎಂಸಿ ವ್ಯಾನ್‌ನಲ್ಲಿ ಅನಸ್ ಅವರನ್ನು ಕರೆದೊಯ್ಯುತ್ತಿದ್ದಾಗ, ಆಕಸ್ಮಿಕವಾಗಿ ರಹೀಂ ಅವರ ಕೈ ಅನಸ್‌ನ ಕುತ್ತಿಗೆಗೆ ಅಳವಡಿಸಲಾಗಿದ್ದ ಸಾಧನಕ್ಕೆ ತಾಗಿದೆ. ಇದರಿಂದ ಆ ಸಾಧನ ಕಳಚಿ ಬಿದ್ದು ಅನಸ್ ಪ್ರಜ್ಞೆ ಕಳೆದುಕೊಂಡಿದ್ದ. ಇದರ ಅರಿವಿಲ್ಲದೆ ಪ್ರಯಾಣ ಮುಂದುವರಿಸಿದ್ದ ರಹೀಂ ಸ್ವಲ್ಪ ಹೊತ್ತಿನ ಬಳಿಕ ಬಾಲಕ ಪ್ರತಿಕ್ರಿಯಿಸದಿರುವುದನ್ನು ಗಮನಿಸಿದಾಗ ಆತ ಸಾವನ್ನಪ್ಪಿದ್ದ ಎಂದು ಹೇಳಲಾಗ್ತಿದೆ.

ಅನಸ್ ಸಾವಿನ ನಂತರ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾದ ರಹೀಂ ಎರಡು ದಶಕಗಳಲ್ಲಿ ಹಲವಾರು ನ್ಯಾಯಾಲಯಗಳ ತೀರ್ಪುಗಳನ್ನು ಎದುರಿಸಿದ್ದಾರೆ. ಅವರಿಗೆ ಮೂರು ಬಾರಿ ಮರಣದಂಡನೆ ವಿಧಿಸಲಾಗಿತ್ತು. ಬಾಲಕ ಅನಸ್ ಕುಟುಂಬವು ಆರಂಭದಲ್ಲಿ ಮರಣದಂಡನೆಗೆ ಒತ್ತಾಯಿಸಿತ್ತು. ಆದರೆ, ಮಧ್ಯಸ್ಥಿಕೆಯ ಪ್ರಯತ್ನಗಳ ನಂತರ ಬ್ಲಡ್‌ ಮನಿಗೆ ಬದಲಾಗಿ ರಹೀಂಗೆ ಕ್ಷಮೆ ನೀಡಲು ಒಪ್ಪಿಕೊಂಡಿತು.

ಸೌದಿಯಲ್ಲಿ ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾದ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿ ಪದೇ ಪದೇ ವಿಳಂಬವನ್ನು ಕಂಡಿತ್ತು. ಸುಮಾರು 12 ಬಾರಿ ಪ್ರಕರಣವನ್ನು ಮುಂದೂಡಲಾಗಿತ್ತು.

ರಹೀಂ ಜೈಲಿನಲ್ಲಿದ್ದಾಗ ‘ರಿಯಾದ್‌ ರಹೀಮ್ ಸಪೋರ್ಟ್‌ ಕಮಿಟಿ’ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಬೆಂಬಲವನ್ನು ನೀಡಿತ್ತು. ಇದೇ ಕಮಿಟಿ ಈಗ ರಹೀಂ ಅವರ ಬಿಡುಗಡೆಯ ಹೊಸ ದಿನಾಂಕವನ್ನು ದೃಢಪಡಿಸಿದೆ ಮತ್ತು ಅವರ ವಾಪಸಾತಿ ಹಾಗೂ ಅಂತಿಮ ಕಾನೂನು ವಿಧಿವಿಧಾನಗಳ ಕುರಿತು ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು ಎಂಬುವುದಾಗಿ ಹೇಳಿದೆ ಎಂದು english.mathrubhumi.com ವರದಿ ತಿಳಿಸಿದೆ.

ಸಮುದ್ರ ತೀರಕ್ಕೆ ಬರಲಾರಂಭಿಸಿದ ಮುಳುಗಿದ ಹಡಗಿನ ಕಂಟೇನರ್‌ಗಳು: ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...