Homeಮುಖಪುಟನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

ನ್ಯೂಸ್ ಲಾಂಡ್ರಿಯ ಮಹಿಳಾ ಪತ್ರಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಪಟ್ಟ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ರಾಜಕೀಯ ವ್ಯಾಖ್ಯಾನಕಾರ ಮತ್ತು ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ ದೆಹಲಿ ಹೈಕೋರ್ಟ್ ಆದೇಶದಂತೆ ತೆಗೆದುಹಾಕಿದ್ದಾರೆ.

ಆದರೆ, ಮೊಕದ್ದಮೆಯಲ್ಲಿ ಮಹಿಳಾ ಪತ್ರಕರ್ತರು ಮಾನನಷ್ಟಕ್ಕೆ ಪರಿಹಾರ ಕೋರಿದ್ದಾರೆ. ಈ ಹಿನ್ನೆಲೆ, ಪ್ರಕರಣದ ವಿಚಾರಣೆ ಮುಂದುವರಿದಿದೆ. ದೆಹಲಿ ಹೈಕೋರ್ಟ್ ಸೋಮವಾರ (ಮೇ.26) ಅಭಿಜಿತ್ ಅಯ್ಯರ್‌ಗೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ಪರ ಮಾಧ್ಯಮ ಒಪಿಇಂಡಿಯಾ ಅಂಕಣಕಾರ ಅಭಿಜಿತ್ ಅಯ್ಯರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು 2 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಪತ್ರಕರ್ತರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ನ್ಯೂಸ್‌ ಲಾಂಡ್ರಿಯ 9 ಮಹಿಳಾ ಪತ್ರಕರ್ತರು ದಾಖಲಿಸಿರುವ ಈ ಪ್ರಕರಣದಲ್ಲಿ ನ್ಯೂಸ್ ಲಾಂಡ್ರಿ ಕೂಡ ವಾದಿಯಾಗಿದೆ.

ಸೋಮವಾರ ವಿಚಾರಣೆ ವೇಳೆ ಅಭಿಜಿತ್ ಅಯ್ಯರ್ ಪರ ಹಿರಿಯ ವಕೀಲ ಪರ್ಸಿವಲ್ ಬಿಲ್ಲಿಮೋರಿಯಾ ಅವರು, ತನ್ನ ಕಕ್ಷಿದಾರರು ವಿವಾದಾತ್ಮಕ ಪೋಸ್ಟ್‌ಗಳನ್ನು ತೆಗೆದು ಹಾಕಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ನ್ಯೂಸ್‌ ಲಾಂಡ್ರಿ ಪತ್ರಕರ್ತರ ಪರ ವಕೀಲ ಬಾನಿ ದೀಕ್ಷಿತ್ ಅವರು, ಅಭಿಜಿತ್ ಅಯ್ಯರ್‌ಗೆ ಈ ಪ್ರಕರಣ ಸಂಬಂಧ ಯಾವುದೇ ಪಶ್ಚಾತ್ತಾಪವಿಲ್ಲ. ಅವರು ಈಗಲೂ ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಮತ್ತು ಕಾವ್ಯಾತ್ಮಕವಾಗಿ ಬರೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ ಅಭಿಜಿತ್ ಪರ ವಕೀಲ, ಮಾನನಷ್ಟ ಪ್ರಕರಣವನ್ನು ವೆಚ್ಚದೊಂದಿಗೆ ವಜಾಗೊಳಿಸುವಂತೆ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ತನ್ನ ಕೈಯಲ್ಲಿರುವ ವಿಷಯವು ಅಭಿಜಿತ್ ಅಯ್ಯರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಮಾತ್ರ ಸೀಮಿತವಾಗಿದೆ. ನಿಮಗೆ ಇತರ ಯಾವುದೇ ದೂರು ಇದ್ದರೆ ಅದನ್ನು ಬೇರೆಲ್ಲಿಯಾದರೂ ಹೇಳಿಕೊಳ್ಳಿ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಭಿಜಿತ್ ಪರ ವಕೀಲ ಬಿಲ್ಲಿಮೋರಿಯಾ, ನ್ಯೂಸ್ ಲಾಂಡ್ರಿ ಅತ್ಯಂತ ಕಪಟ ಸುದ್ದಿವಾಹಿನಿಗಳಲ್ಲೊಂದಾಗಿದೆ. ಅದು ಇಟಲಿಯ ಪ್ರಧಾನಿಯ ಜೊತೆಗೆ ಪ್ರಧಾನಿ ಮೋದಿಯವರ ಸಂಬಂಧದ ಬಗ್ಗೆ ಟೀಕಿಸಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, “ಲಕ್ಷ್ಮಣ ರೇಖೆ ಎಲ್ಲಿದೆ ಎನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಒಂದು ಪೋಸ್ಟ್ ಮನಹಾನಿಕರವಾಗಿದ್ದಾಗ ಅವರು ನ್ಯಾಯಾಲಯದ ಮೆಟ್ಟಿಲೇರುವ ಹಕ್ಕು ಹೊಂದಿರುತ್ತಾರೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, ಮೊಕದ್ದಮೆಯಲ್ಲಿ ಉಲ್ಲೇಖಿಸಿರುವಂತೆ ಪರಿಹಾರ ಪಡೆಯುವ ವಿಷಯವನ್ನು ಮುಂದುವರಿಸಲು ಬಯಸುವುದಾಗಿ ಮಹಿಳಾ ಪತ್ರಕರ್ತರ ಪರ ವಕೀಲರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಅಭಿಜಿತ್ ಅಯ್ಯರ್ ಪರ ವಕೀಲರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಕೌರವ್, “ಅವರು (ಅರ್ಜಿದಾರ) ಖ್ಯಾತಿ ನಷ್ಟವಾಗಿದೆ ಎಂದು ಹೇಳುತ್ತಿದ್ದಾರೆ. ಆದ್ದರಿಂದ ನೀವು ನಿಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಿ” ಎಂದು ಮೌಖಿಕವಾಗಿ ಸೂಚನೆ ನೀಡಿದ್ದಾರೆ. ನಂತರ ನ್ಯಾಯಾಲಯವು ಎರಡೂ ಪಕ್ಷಗಳ ವಾದಗಳನ್ನು ಪೂರ್ಣಗೊಳಿಸಲು ಜಂಟಿ ರಿಜಿಸ್ಟ್ರಾರ್ ಮುಂದೆ ವಿಷಯವನ್ನು ಇಡುವಂತೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಡಿಜಿಟಲ್ ಸುದ್ದಿ ವೇದಿಕೆ ನ್ಯೂಸ್‌ ಲಾಂಡ್ರಿಯ ಪತ್ರಕರ್ತೆಯರನ್ನು ‘ವೇಶ್ಯೆಯರು’ ಮತ್ತು ಅವರು ಕೆಲಸ ಮಾಡುವ ಸ್ಥಳವನ್ನು ‘ವೇಶ್ಯಾಗೃಹ’ ಎಂದು ನಿಂದಿಸಿ ಪೋಸ್ಟ್ ಹಾಕಿದ್ದ ಅಭಿಜಿತ್ ಅಯ್ಯರ್ ಮಿತ್ರ ವಿರುದ್ದ ಪತ್ರಕರ್ತೆಯರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಹಿಳಾ ಪತ್ರಕರ್ತರಾದ ಮನೀಶಾ ಪಾಂಡೆ, ಇಶಿತಾ ಪ್ರದೀಪ್, ಸುಹಾಸಿನಿ ಬಿಸ್ವಾಸ್, ಸುಮೇಧಾ ಮಿತ್ತಲ್, ತೀಸ್ತಾ ರಾಯ್ ಚೌಧರಿ, ತಸ್ನೀಮ್ ಫಾತಿಮಾ, ಪ್ರಿಯಾ ಜೈನ್, ಜಯಶ್ರೀ ಅರುಣಾಚಲಂ ಮತ್ತು ಪ್ರಿಯಾಲಿ ಧಿಂಗ್ರಾ ಮೊಕದ್ದಮೆ ಹೂಡಿದವರು. ಪ್ರಕರಣದ ಪಕ್ಷಕಾರರಲ್ಲಿ ನ್ಯೂಸ್ ಲಾಂಡ್ರಿಯೂ ಸೇರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಭಿಜಿತ್ ಅಯ್ಯರ್ ಹಾಕಿರುವ ಪೋಸ್ಟ್‌ಗಳು ಮಾನಹಾನಿಕರ ಆಧಾರರಹಿತ ಮತ್ತು ತಪ್ಪು ಕಲ್ಪನೆಯಿಂದ ಕೂಡಿದ್ದು, ಮಹಿಳಾ ಉದ್ಯೋಗಿಗಳ ಘನತೆ ಮತ್ತು ಖ್ಯಾತಿಗೆ ಹಾನಿ ಮಾಡುವ ಉದ್ದೇಶ ಹೊಂದಿದೆ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...