Homeಕರ್ನಾಟಕಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೋವಿಡ್ ಸೋಂಕಿಗೆ ಸಂಬಂಧಪಟ್ಟಂತೆ ಸದ್ಯಕ್ಕೆ ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಮೇ.26) ಹೇಳಿದ್ದಾರೆ.

ಕೋವಿಡ್ ಸಂಬಂಧ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ ಸಿಎಂ, ಮುಂಜಾಗೃತ ಕ್ರಮವಾಗಿ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜಾಗಿಟ್ಟುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಿ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ. ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು ಎಂದು ಸಿಎಂ ಆದೇಶಿಸಿದ್ದಾರೆ.

ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ. ಶಾಲೆಗಳೂ ಈ ಬಗ್ಗೆ ಗಮನಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.

ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ ಮಾಹಿತಿ ಪಡೆದ ಸಿಎಂ, ಕಳೆದ ಜನವರಿಯಿಂದಲೂ
ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದೆ. ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ, ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ ಎಂದು ತಿಳಿಸಿದ್ದಾರೆ.

SARI ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳುನಾಡಿನಲ್ಲಿ 66, ಮಹಾರಾಷ್ಟ್ರದಲ್ಲಿ 56 ಪ್ರಕರಣಗಳು ವರದಿಯಾಗಿವೆ ಎಂದಿದ್ದಾರೆ.

ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೋವಿಡ್ ಸಹಾಯವಾಣಿ ಪ್ರಾರಂಭಿಸಲು ಸಭೆಯಲ್ಲಿ ಉಪಸ್ಥಿತರಿದ್ದ ಆರೋಗ್ಯಾಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಿಎಂ, ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ತೋರಬಾರದು. ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆಗಳು ಸರ್ವ ಸನ್ನದ್ಧವಾಗಿ ಇರಬೇಕು ಎಂದಿದ್ದಾರೆ.

ಆರೋಗ್ಯ ಇಲಾಖೆ ಸಿಬ್ಬಂದಿ ರಜೆ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಈಗಾಗಲೇ ಪಾಲಿಸುತ್ತಿದ್ದೇವೆ.
ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣ ಮುನ್ನೆಚ್ಚರಿಕೆಯಾಗಿ ಎಂದ ಸಿಎಂ, ವ್ಯಾಕ್ಸಿನ್‌ಗಳನ್ನು ಸಿದ್ದವಾಗಿಟ್ಟುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆಯೂ ನಿರ್ದೇಶನ ನೀಡಿದ್ದಾರೆ.

ರಾಜ್ಯದ ಕೋವಿಡ್ ಅಂಕಿ-ಅಂಶ

ಆರೋಗ್ಯ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ, ಸೋಮವಾರ (26 ಮೇ 2025) ರಾಜ್ಯದಲ್ಲಿ ಹೊಸದಾಗಿ 37 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಜನವರಿಯಿಂದ ದಾಖಲಾದ ಪಾಸಿಟಿವ್ ಪ್ರಕರಣಗಳ ಸಂಖ್ಯೆ 135ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ಸೋಮವಾರ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಜನವರಿಯಿಂದ ಗುಣಮುಖರಾದ ಒಟ್ಟು ಸೋಂಕಿತರ ಸಂಖ್ಯೆ 54 ಆಗಿದೆ. ರಾಜ್ಯದಲ್ಲಿ ಪ್ರಸ್ತುತ 80 ಸಕ್ರಿಯ ಕೋವಿಡ್ ಪ್ರಕರಣಗಳಿವೆ. 1 ಜನವರಿ 2025ರಿಂದ 26 ಮೇ 2025ವರೆಗೆ ಒಂದು ಸಾವು ಸಂಭವಿಸಿದೆ.

ಮೇ 25ರಿಂದ 26ರ ನಡುವೆ 24 ಗಂಟೆಗಳ ಅವಧಿಯಲ್ಲಿ 191 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈ ಪೈಕಿ 171 ಜನರಿಗೆ ಆರ್‌ಟಿಪಿಸಿಆರ್ 20 ಜನರಿಗೆ ಆರ್‌ಎಟಿ ಪರೀಕ್ಷೆ ಮಾಡಲಾಗಿದೆ.

ಮಂಡ್ಯದಲ್ಲಿ ವಾಹನ ತಪಾಸಣೆ ವೇಳೆ 3 ವರ್ಷದ ಮಗು ಸಾವು ಪ್ರಕರಣ: ಮೂವರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...