Homeಮುಖಪುಟಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆಯೇ ಪಂಕಜ ಮುಂಡೆ?

ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆಯೇ ಪಂಕಜ ಮುಂಡೆ?

- Advertisement -
- Advertisement -

ಬಿಜೆಪಿ ನಾಯಕಿ ಪಂಕಜ ಮುಂಡೆ ಪಕ್ಷವನ್ನು ತೊರೆಯಲಿದ್ದಾರೆ ಎಂಬ ಮಾತುಗಳು ವ್ಯಾಪಕವಾಗಿ ಕೇಳಿಬಂದಿವೆ. ಇದಕ್ಕೆ ಪೂರಕವೆಂಬಂತೆ ಫೇಸ್ಬುಕ್ ನಲ್ಲಿದ್ದ ಬಿಜೆಪಿ ಟ್ಯಾಗ್ ಅನ್ನು ಅವರು ತೆಗೆದುಹಾಕಿರುವುದರಿಂದ ಅವರ ಮುಂದಿನ ರಾಜಕೀಯ ನಡೆ ಕುರಿತು ಊಹಾಪೋಹಗಳು ಎದ್ದಿವೆ. ಪಂಕಜ ಮುಂಡೆಯ ಮುಂದಿನ ತೀರ್ಮಾನಗಳು ಡಿಸೆಂಬರ್ 12 ರಂದು ಹೊರಬೀಳಲಿವೆ ಎಂದು ಪಿಟಿಐ ವರದಿ ಮಾಡಿದೆ.

ಹೌದು ಪಂಕಜ ಮುಂಡೆ ತನ್ನ ಫೇಸ್ಬುಕ್ ಖಾತೆಯಲ್ಲಿ ಉಲ್ಲೇಖಿಸಿದ್ದ ಬಿಜೆಪಿ ಎಂಬದನ್ನು ತೆಗೆದುಹಾಕಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಪಂಕಜ ಮುಂಡೆ ಪಕ್ಷ ತೊರೆಯಲು ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ.

ಚಿಕ್ಕಪ್ಪ ಮತ್ತು ಎನ್.ಸಿ.ಪಿ. ನಾಯಕ ಧನಂಜಯ ಮುಂಡೆ ಮತ್ತು ಪಂಕಜ ಮುಂಡೆ ವಿಧಾನಸಭಾ ಚುನಾವಣೆಯಲ್ಲಿ ಎದುರು-ಬದರು ಸ್ಪರ್ಧಿಸಿದ್ದರು. ಅಲ್ಲಿ ಸುಮಾರು 30 ಸಾವಿರ ಮತಗಳ ಅಂತರದಿಂದ ಪಂಕಜ ಮುಂಡೆ ಸೋತಿದ್ದರು. ಈಗ ಬಿಜೆಪಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಸಾದ್ಯವಾಗಿಲ್ಲ. ಇದರಿಂದ ಬೇಸತ್ತಿರುವ ಪಂಕಜ ಮುಂಡೆ ಆತ್ಮಾವಲೋಕನ ಮಾಡಿಕೊಳ್ಳಲು ಮತ್ತು ಬೆಂಬಲಿಗರೊಂದಿಗೆ  ಮಾತುಕತೆ ನಡೆಸಲು ಡಿಸೆಂಬರ್ 12ರಂದು ಸಭೆ ಕರೆದಿದ್ದಾರೆ.

ಪಂಕಜ ಅವರ ತಂದೆ ಗೋಪಿನಾಥ್ ಮುಂಡೆ 2014ರಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೆಲವು ತೀರ್ಮಾನಗಳನ್ನು ಕೈಗೊಂಡಿದ್ದರು. ಈಗ ಮತ್ತೆ ಮಹಾರಾಷ್ಟ್ರದಲ್ಲಿ ರಾಜಕೀಯ ಬದಲಾವಣೆಯಾಗಿದೆ. ಅನಿವಾರ್ಯ ಕಾರಣಗಳಿಂದ ನಿರ್ಧಾರಗಳನ್ನು ಕೈಗೊಳ್ಳಬೇಕಾಗಿದೆ. ಈ ತೀರ್ಮಾನ ಕೈಗೊಳ್ಳಲು ನನಗೆ 8-10 ದಿನ ಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಹೀಗಾಗಿಯೇ ಡಿಸೆಂಬರ್ 12ರಂದು ಅವರ ಬೆಂಬಲಿಗರಿಗೆ ಸಭೆ ಸೇರುವಂತೆ ಆಹ್ವಾನ ನೀಡಿದ್ದಾರೆ. ಹಾಗಾಗಿ ಅವರ ಮುಂದಿನ ತೀರ್ಮಾನಗಳು ಒಂದು ವಾರದಲ್ಲಿ ಹೊರಬೀಳಲಿವೆ. ಮುಂದಿನ ತೀರ್ಮಾನಗಳು ಏನಿರಬೇಕು, ಯಾವ ಮಾರ್ಗ ಅನುಸರಿಸಬೇಕು, ನಮ್ಮ ರಾಜಕೀಯ ಬಲವೇನು? ಜನರಿಗೆ ಏನು ಕೊಡಬೇಕು/ ಜನರ ನಿರೀಕ್ಷೆಗಳೇನು ಈ ಎಲ್ಲಾ ಕೋನಗಳಿಂದಲೂ ಯೋಚಿಸಿ 12ರಂದು ನಿಮ್ಮ ಮುಂದೆ ಬರುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ

ಕಳೆದ ಬಿಜೆಪಿ ಸರ್ಕಾರದ ಫಡ್ನಾವೀಸ್ ಸಂಪುಟದಲ್ಲಿ ಪಂಕಜ ಮುಮಡೆ ಗ್ರಾಮೀಣ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. 2014ರಲ್ಲಿ ತಂದೆ ಗೋಪಿನಾಥ್ ಮುಂಡೆ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ಅಲೆಯ ಮೇಲೆ ಪಂಕಜ ಮುಂಡೆ ಗೆದ್ದು ಬಂದಿದ್ದರು.

ಈ ಕುರಿತು ಪ್ರತಿಕ್ರಿಯ ನೀಡಿರುವ ಮಹಾರಾಷ್ಟ್ರ ಬಿಜೆಪಿ ವಕ್ತಾರ ಶಿರಿಶ್ ಬೋರ್ಕರ್, ಪಂಕಜ ಮುಂಡೆ ಬಿಜೆಪಿಯಲ್ಲೇ ಮುಂದುವರಿಯುತ್ತಾರೆ. ಪಕ್ಷವನ್ನು ಬಲಪಡಿಸಲು ಕೆಲಸ ಮಾಡುತ್ತಾರೆ. ಅವರ ಫೇಸ್ಬುಕ್ ಹೇಳಿಕೆಯನ್ನು ಓದಿದ್ದೇನೆ. ಅವರಿಗೆ ಬಿಜೆಪಿ ಬಗ್ಗೆ ಸಿಟ್ಟಿಲ್ಲ. ಅವರು ಕೋರ್ ಕಮಿಟಿ ಸಭೆಗೆ ಬರುತ್ತಾರೆ. ಅವರ ತಂದೆ ಬಿಜೆಪಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹಾಗಾಗಿ ಪಂಕಜ್ ಮುಂಡೆ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...