Homeಕರ್ನಾಟಕಕೆ.ಆರ್.ಪೇಟೆ ಚಲೋ: ಜಾಗೃತ ಸಮುದಾಯ ಜೀವಂತ ಆಗಿರುತ್ತದೆ, ಅದರ ಮೇಲೆ ದಾಳಿ ಆಗಲ್ಲ; ಜ್ಞಾನ ಪ್ರಕಾಶ್...

ಕೆ.ಆರ್.ಪೇಟೆ ಚಲೋ: ಜಾಗೃತ ಸಮುದಾಯ ಜೀವಂತ ಆಗಿರುತ್ತದೆ, ಅದರ ಮೇಲೆ ದಾಳಿ ಆಗಲ್ಲ; ಜ್ಞಾನ ಪ್ರಕಾಶ್ ಸ್ವಾಮಿ

- Advertisement -
- Advertisement -

‘‘ಯಾವ ಸಮುದಾಯ ಜಾಗೃತವಾಗಿ ಇರುತ್ತದೋ ಅದು ಜೀವಂತ ಆಗಿರುತ್ತದೆ. ಎಚ್ಚೆತ್ತ ಸಮುದಾಯಗಳ ಮೇಲೆ ದಾಳಿ ಆಗಲ್ಲ’’ ಎಂದು ಉರಿಲಿಂಗಪೆದ್ದಿ ಮಠದ ಪೀಠಾಧೀಶ ಜ್ಞಾನ ಪ್ರಕಾಶ್ ಸ್ವಾಮಿ ಮಂಗಳವಾರ ಹೇಳಿದರು. ಅವರು ಕೆ.ಆರ್. ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಮೇ 17ರಂದು ನಡೆದ ದಲಿತ ಯುವಕ ಜಯಕುಮಾರ್‌ ಹತ್ಯೆ ವಿರೋಧಿಸಿ ಮೇ 27ರಂದು ನಡೆದ ಕೆ.ಆರ್. ಪೇಟೆ ಚಲೋ ಹೋರಾಟದಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದರು. ಜಾಗೃತ ಸಮುದಾಯ ಜೀವಂತ

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಕರಾಳ ಚರಿತ್ರೆಗೆ 75 ವರ್ಷ ಆಗಿದ್ದು, ಸರ್ಕಾರಕ್ಕೆ ನಾಚಿಕೆ ಆಗಬೇಕು. ಮಂಡ್ಯ ಹಾಗೂ ಕೆ.ಆರ್. ಪೇಟೆ ಆಡಳಿತಕ್ಕೂ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. “ಎಚ್.ಡಿ. ಕೋಟೆ ತಾಲ್ಲೂಕಿನಲ್ಲಿ ತನ್ನ ಮಗಳು ಅನ್ಯ ಜಾತಿ ಯುವಕನನ್ನು ಮದುವೆ ಆಗಿದ್ದಕ್ಕೆ ಕೊಲೆ ಮಾಡಿದ್ದರು. ಯಾವ ಸಮುದಾಯ ಜಾಗೃತವಾಗಿ ಇರುತ್ತದೋ ಅದು ಜೀವಂತ ಆಗಿರುತ್ತದೆ, ಎಚ್ಚೆತ್ತ ಸಮುದಾಯಗಳ ಮೇಲೆ ದಾಳಿ ಆಗಲ್ಲ” ಎಂದು ಅವರು ಹೇಳಿದರು.

“ಮುಂದೆ ನಮ್ಮ ಎಲ್ಲರ ಮನೆಗಳೂ ಬೂದಿ ಆಗುತ್ತವೆ. ಕೆ.ಆರ್ ಪೇಟೆಯಲ್ಲಿ ಇಂತ ಪ್ರಕರಣಗಳು ನಡೆಯುತ್ತಲೇ ಇವೆ. ಜಯಕುಮಾರ್ ಹತ್ಯೆ ಪ್ರಕರಣವನ್ನ ಆತ್ಮಹತ್ಯೆ ಎಂದು ಹೇಳಿದ ಪೊಲೀಸ್ ಅಧಿಕಾರಿ ಯೂನಿಫಾರಂ ಬಿಚ್ಚಿಸಬೇಕು. ಆತ್ಮಹತ್ಯೆ ಎಂದು ಹೇಳುವುದಕ್ಕೆ ಆತನೇನು ನ್ಯಾಯಾಧೀಶನೆ” ಎಂದು ಅವರು ಪ್ರಶ್ನಿಸಿದರು.

ಜಯಕುಮಾರ್ ಪರ ಹೋರಾಟದಲ್ಲಿ ಅವರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾನು ಜೊತೆಯಲ್ಲಿ ಇರುತ್ತೇನೆ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ. “ನಾನು ಭಾಷಣ ಮಾಡಿ ಹೋಗುವುದಕ್ಕೆ ಇಲ್ಲಿಗೆ ಬಂದಿಲ್ಲ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ನಮ್ಮ ಶಕ್ತಿ ತೋರಿಸುತ್ತೇವೆ. ದಲಿತರ ಶಕ್ತಿ ಏನೆಂದು ಅವರಿಗೆ ಗೊತ್ತಿಲ್ಲ. ಪೊಲೀಸರು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ಈ ಪ್ರಕರಣ ನಡೆಯುತ್ತಿರಲಿಲ್ಲ. ಯಾವುದೇ ಕಾರಣಕ್ಕೂ ಪೊಲೀಸರನ್ನು ಸುಮ್ಮನೆ ಬಿಡುವ ಮಾತಿಲ್ಲ” ಎಂದರು. ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಎಸ್.ಐ.ಟಿ ತನಿಖೆ ಮಾಡಿಸುತ್ತೇವೆ ಎಂದು ಅವರು ಹೇಳಿದರು.

“ಆತ್ಮಹತ್ಯೆ ಎಂದು ಬಿಂಬಿಸಲು ಹೊರಟ ಇನ್ಸ್‌ಪೆಕ್ಟರ್‌ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್‌ ಅವರನ್ನು ಸುಮ್ಮನೆ ಬಿಡುವುದಿಲ್ಲ. ಕಾಕಿ ಬಟ್ಟೆ ಹಾಕಿದವರಿಗೆ ಕನಿಷ್ಟ ಮಾನವೀಯತೆ ಇರಬೇಕು. ರಾಗಿ ಬಿತ್ತಿದರೆ ಜೋಳ ಬರುವುದಿಲ್ಲ. ಮುಂದಿನ ದಿನಗಳಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳಿಗೂ ಇಂತಹ ಸ್ಥಿತಿ ಬರಬಹುದು. 135 ಸೀಟು ಕೊಟ್ಟು ನಾವು ಬೀದಿಯಲ್ಲಿ ತಮಟೆ ಹೊಡೆದುಕೊಂಡು ಸುಮ್ಮನೆ ಕೂರಬೇಕ” ಎಂದು ಅವರು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.

ಇದೇ ವೇಳೆ ಮಾತನಾಡಿದ ಸಿಪಿಐಎಂ ನಾಯಕಿ ಕುಮಾರಿ ಅವರು, “ತಮ್ಮ ಮಕ್ಕಳಿಗಾಗಿ ಜಯಕುಮಾರ್ ಬೆಂಗಳೂರಿನಲ್ಲಿ ಕೆಲಸ ಬಿಟ್ಟು ಹಳ್ಳಿಗೆ ಬಂದಿದ್ದರು. ಸರ್ಕಾರ ನೀಡಿದ್ದ ಜಮೀನನ್ನು ಹಸನು ಮಾಡುತ್ತಿದ್ದರು. ಅಲ್ಲಿ ಕೃಷಿ ಮಾಡಲು ಯೋಚಿಸುತ್ತಿದ್ದರು. ಆದರೆ ಅದನ್ನು ಸಹಿಸದ ಆರೋಪಿ ಜಯಕುಮಾರ್ ಅವರನ್ನು ಕೊಲೆ ಮಾಡಿದ್ದಾನೆ. ಅವನಿಗೆ ಪೊಲೀಸರು ಬೆಂಬಲ ನೀಡುತ್ತಿದ್ದಾರೆ.” ಎಂದು ಆರೋಪಿಸಿದರು.

“15 ನೆ ತಾರೀಖು ನಡೆದ ಗಲಾಟೆ ಬಗ್ಗೆ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಆತನಿಗೆ ಎಚ್ಚರಿಕೆ ನೀಡದಂತೆ ಪೊಲೀಸರನ್ನು ತಡೆದವರು ಯಾರು? ಆತನೇ ನಾಗಮಂಗಲ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆತನಿಗೆ ಬೆಂಬಲ ನೀಡಿರುವವರು ಯಾರು ಎಂಬುದು ಗೊತ್ತಾಗಬೇಕು” ಎಂದು ಕುಮಾರಿ ಅವರು ಹೇಳಿದರು. ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದು, ಆತನ ರಕ್ಷಣೆಗೆ ದೊಡ್ಡ ಶಕ್ತಿ ನಿಂತಿದೆ ಎಂದು ಆರೋಪಿಸಿದ ಅವರು, ಅದು ಯಾವ ಶಕ್ತಿ ಎಂದು ಗೊತ್ತಾಗಬೇಕು, ಸತ್ಯ ಹೊರಬರಬೇಕಾದರೆ ಎಸ್ಐಟಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು. ಜಾಗೃತ ಸಮುದಾಯ ಜೀವಂತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....