HomeUncategorizedಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು...

ಬುಲೆಟ್‌ ಟ್ರೈನ್‌ಗಾಗಿನ ವೆಚ್ಚದಲ್ಲಿ ದೇಶದ ಎಲ್ಲಾ ರೈಲುಗಳನ್ನು ಎರಡು ಪಟ್ಟು ವೇಗದಲ್ಲಿ ಓಡುವಂತೆ ನವೀಕರಿಸಬಹುದು…

- Advertisement -
- Advertisement -

ಭಾರತದಲ್ಲಿ ಪ್ರತಿನಿತ್ಯ ಸುಮಾರು 10000 ರೈಲುಗಳು ಓಡಾಡುತ್ತಿವೆ. ಅವು ದಿನವೊಂದಕ್ಕೆ 2.3 ಕೋಟಿಗೂ ಅಧಿಕ ಜನರನ್ನು ಹೊತ್ತು ಸಾಗುತ್ತಿವೆ. ಇದರಲ್ಲಿ 66,687 ಕಿ.ಮೀ ಉದ್ದದ ರೈಲು ಮಾರ್ಗವು ತುಂಬಾ ಹಳೆಯದಾಗಿದ್ದು ವಸಾಹತು ಕಾಲದ್ದಾಗಿದೆ. ಇದರಲ್ಲಿ ಅರ್ಧದಷ್ಟನ್ನು ಮಾತ್ರ ವಿದ್ಯುದ್ದೀಕರಿಸಲಾಗಿದೆ. ನೈರ್ಮಲ್ಯ ಅತಿ ದೊಡ್ಡ ಸಮಸ್ಯೆಯಾಗಿದ್ದು ಸುರಕ್ಷತಾ ಮಾನದಂಡಗಳು ಕೂಡ ಸಾಕಾಗುವುದಿಲ್ಲ ಎನ್ನಲಾಗುತ್ತಿದೆ. ಹಾಗಾಗಿಯೇ ಪದೇ ಪದೇ ಹಳಿ ತಪ್ಪುವ ರೈಲುಗಳ ಬಗ್ಗೆ ವರದಿಯಾಗುತ್ತಿದೆ.

ಇಂತಹ ಬೃಹತ್‌ ದೇಶದಲ್ಲಿ ಕೆಲವೇ ಕೆಲವು ಸಾವಿರ ಜನರನ್ನು ಹೊತ್ತೊಯ್ಯುವ ಬುಲೆಟ್ ರೈಲನ್ನು ‘ಅಭಿವೃದ್ಧಿಯ’ ಸಂಕೇತವೆಂದು ಕರೆಯಲಾಗುತ್ತದೆಯೇ? ಈ ಚರ್ಚೆ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಿದ್ದು ಶಿವಸೇನೆ ನೇತೃತ್ವದ ಕಾಂಗ್ರೆಸ್‌-ಎನ್‌ಸಿಪಿ ಸರ್ಕಾರ ಬಂದಿರುವುದರಿಂದ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಅಹಮದಾಬಾದ್ – ಮುಂಬೈ ಬುಲೆಟ್ ರೈಲು ಯೋಜನೆ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲು ಆದೇಶಿಸಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಬುಲೆಟ್‌ ರೈಲು ಯೋಜನೆಗಾಗಿ ಮೀಸಲಿದ್ದ 40000 ಸಾವಿರ ಕೋಟಿ ಹಣವನ್ನು ಕೇಂದ್ರಕ್ಕೆ ವಾಪಸ್ ಮಾಡಲೆಂದೇ ಫಡ್ನವೀಸ್‌ ಮೂರು ದಿನ ಮುಖ್ಯಮಂತ್ರಿಯ ನಾಟಕವಾಡಿದ್ದರು ಎಂದು ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿದ್ದಾರೆ. ಅದೆಲ್ಲಾ ಸುಳ್ಳು ಎಂದು ಫಡ್ನವಿಸ್‌ ಸ್ಪಷ್ಟೀಕರಣ ನೀಡಿದ್ದಾರೆ.

ಈ ನಡುವೆ ಬುಲೆಟ್‌ ರೈಲು ಯೋಜನೆಯನ್ನು ಪರಿಶೀಲಿಸುವ ಠಾಕ್ರೆಯವರ ನಿರ್ಧಾರವನ್ನು ಸುಪ್ರೀಂ ಕೋರ್ಟ್‌‌ನ ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್‌ ಭೂಷಣ್‌ರವರು ಸ್ವಾಗತಿಸಿದ್ದಾರೆ.

ಇದು ಒಳ್ಳೆಯ ನಿರ್ಧಾರ. ಕೇವಲ ಅಹಮದಾಬಾದ್-ಮುಂಬೈ ಮಾರ್ಗದ ‘ಬುಲೆಟ್ ರೈಲು’ ಯೋಜನೆಯು 1 ಲಕ್ಷ ಕೋಟಿಗಿಂತ ಹೆಚ್ಚು ವೆಚ್ಚದ ಹಾಸ್ಯಾಸ್ಪದ ಯೋಜನೆಯಾಗಿದೆ. ಇದೇ ವೆಚ್ಚದಲ್ಲಿ ದೇಶಾದ್ಯಂತ ಇರುವ ರೈಲ್ವೆಯ ಎಲ್ಲಾ ಟ್ರಂಕ್ ಮಾರ್ಗಗಳನ್ನು ನವೀಕರಿಸಿ ರೈಲುಗಳು ಎರಡು ಪಟ್ಟು ವೇಗದಲ್ಲಿ ಓಡುವಂತೆ ಮಾಡಬಹುದಾಗಿದೆ. ಜೊತೆಗೆ ಸಾಗಾಣಿಕಾ ಸಾಮರ್ಥ್ಯವನ್ನು ಸಹ ಶೆ. 50% ಹೆಚ್ಚಿಸಬಹುದು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇನ್ನೊಂದು ಕಡೆ ಭಾರತೀಯ ರೈಲ್ವೆಯು ಅಸ್ಥಿರ ಆರ್ಥಿಕ ಸ್ಥಿತಿಗೆ ತಲುಪಿದೆ ಎಂದು ಸಿಎಜಿ ವರದಿ ತಿಳಿಸಿದೆ. ಭಾರತೀಯ ರೈಲ್ವೆಯ 2017-18ರ ಕಾರ್ಯಾಚರಣಾ ಅನುಪಾತವು 98.44% ರಷ್ಟು ಹೆಚ್ಚಾಗಿದ್ದು 10 ವರ್ಷಗಳಲ್ಲಿ ಕೆಟ್ಟದು ಎಂದು ಸಿಎಜಿ ತಿಳಿಸಿದೆ. ಕಾರ್ಯಾಚರಣಾ ಅನುಪಾತವೆಂದರೆ ಭಾರತೀಯ ರೈಲ್ವೆಯು 100ರೂ ಗಳಿಸಲು 98.44 ರೂ ಖರ್ಚು ಮಾಡಿದೆ ಎಂದರ್ಥ. ಅಲ್ಲಿಗೆ ಲಾಭ ಕೇವಲ 1.66% ಮಾತ್ರ ಆಗಿದೆ.

ಆದಾಯದ ವಿರುದ್ಧದ ಖರ್ಚಿನ ಅಳತೆಯ ಅನುಪಾತವು ರೈಲ್ವೆ ಎಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದರ ಹಣಕಾಸು ಎಷ್ಟು ಆರೋಗ್ಯಕರವಾಗಿದೆ ಎಂಬುದನ್ನು ತೋರಿಸುತ್ತದೆ. 98.44% ನಷ್ಟು ಕಾರ್ಯಾಚರಣಾ ಅನುಪಾತ ಎಂದರೆ ರೈಲ್ವೆ ಇಲಾಖೆ ಕಳಪೆ ಸ್ಥಿತಿಯಲ್ಲಿದೆ ಎಂದು ಅರ್ಥವಾಗುತ್ತದೆ.

ಇಂದು ಸಂಸತ್ತಿನಲ್ಲಿ ಮಂಡಿಸಲಾದ ಸಿಎಜಿ ವರದಿಯಲ್ಲಿ, ರೈಲ್ವೆಯು 1,665.61 ಕೋಟಿ ರೂಗಳ ಉಳಿತಾಯ ಮಾಡಿದೆ ಎಂದು ಹೇಳಲಾಗಿದೆ. ವಾಸ್ತವದಲ್ಲಿ ಅದು 5,676.29 ಕೋಟಿ ರೂ ನಷ್ಟ ಅನುಭವಿಸಿದೆ. ಏಕೆಂದರೆ ಎನ್‌ಟಿಪಿಸಿ ಮತ್ತು ಐಆರ್‌ಕಾನ್‌ನಿಂದ ಅದು ಮುಂಗಡ ಪಡೆದಿರುವುದರಿಂದ ಲಾಭ ಕಾಣುತ್ತಿದೆ “ಈ ಮುಂಗಡವನ್ನು ಹೊರತುಪಡಿಸಿದರೆ ಕಾರ್ಯಾಚರಣಾ ಅನುಪಾತವನ್ನು 102.66% ಕ್ಕೆ ಹೆಚ್ಚಾಗುತ್ತಿತ್ತು” ಎಂದು ವರದಿ ತಿಳಿಸಿದೆ. ಎಂದರೆ ಲಾಭಕ್ಕಿಂತ ವೆಚ್ಚವೇ ಹೆಚ್ಚಾಗುತ್ತಿತ್ತು ಎನ್ನಲಾಗುತ್ತಿದೆ.

ಭಾರತೀಯ ರೈಲ್ವೆಯ ಖಾತೆಗಳ ಹಣಕಾಸು ಲೆಕ್ಕಪರಿಶೋಧನೆಯ ವಿಶ್ಲೇಷಣೆಯು ತನ್ನ ನಿವ್ವಳ ಆದಾಯದಲ್ಲಿ 2016-17ರಲ್ಲಿ ರೂ 4,913 ಕೋಟಿಯಿಂದ 2017-18ರಲ್ಲಿ ರೂ 1,665.61 ಕೋಟಿಗೆ ಅಂದರೆ 66.1% ರಷ್ಟು ಕುಸಿದಿದೆ ಎಂದು ತಿಳಿದುಬಂದಿದೆ.

ಈ ಎಲ್ಲಾ ಅಂಕಿ ಅಂಶಗಳು ಕಡೆಗೆ ಎಲ್ಲಿಗೆ ಕರೆದೊಯ್ಯುತ್ತವೆ ಎಂಬುದಕ್ಕೆ ಅನುಮಾನವೇ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಜನರಿಗೆ ಉದ್ಯೋಗ ಕೊಟ್ಟಿರುವ ಕ್ಷೇತ್ರವಾದ ರೈಲ್ವೆಯನ್ನು ಖಾಸಗೀಕರಿಸುವ ಕಡೆ ಇದು ಹೋಗಲಿದೆ. ಅದಕ್ಕೆ ಇದೆಲ್ಲವೂ ತಳಪಾಯವಾಗಲಿದೆ. ಒಎನ್‌ಜಿಸಿ, ಬಿಪಿಸಿಎಲ್‌, ಬಿಎಸ್‌ಎನ್‌ಎಲ್‌ ಥರಹದ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗೀಕರಿಸಿ ಮಾರಾಟ ಮಾಡುವ ಹಂತಕ್ಕೆ ಕೇಂದ್ರ ಸರ್ಕಾರ ಬಂದಿದೆ. ಒಟ್ಟಿನಲ್ಲಿ ಮುಂಬರಲಿರುವ ಕರಾಳ ದಿನ ಮುನ್ಸೂಚನೆ ಇದಾಗಿದೆ ಎಂದು ರಾಜಶೇಖರ್‌ ಅಕ್ಕಿಯವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Reason for loss is obvious.. For populism train fare not done since more than a decade. Even was shown in profits! The minister was invited to address people how this turn around was possible..

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...