Homeಕರ್ನಾಟಕಕರಾವಳಿಯಲ್ಲಿ ಮತ್ತೊಬ್ಬ ಯುವಕನ ಹತ್ಯೆ: ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ಕರಾವಳಿಯಲ್ಲಿ ಮತ್ತೊಬ್ಬ ಯುವಕನ ಹತ್ಯೆ: ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

'ಖಂಡನೆಯ ತೇಪೆ ಸಾಕು, ಕಠಿಣ ಕ್ರಮ ಬೇಕು' ಎಂದ ಜನರು

- Advertisement -
- Advertisement -

ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬ ಯುವಕನ ಹತ್ಯೆಯಾಗಿದೆ. ಮೇ 1ರಂದು ಗುರುವಾರ ಸಂಜೆ ಮಂಗಳೂರಿನ ಹೊರವಲಯ ಬಜ್ಪೆ ಬಳಿ ರೌಡಿ ಶೀಟರ್ ಸುಹಾಸ್ ಎಂಬಾತನ ಹತ್ಯೆಯಾಗಿತ್ತು. ಅದಾಗಿ ತಿಂಗಳು ಕಳೆಯುವುದೊರಳಗೆ, ಅಂದರೆ ಮೇ 27ರಂದು ಸಂಜೆ ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದಿದೆ.

ಸುಹಾಸ್ ಹತ್ಯೆಗೂ ನಾಲ್ಕು ದಿನ ಮುಂಚೆ, ಅಂದರೆ 27 ಏಪ್ರಿಲ್ 2025ರಂದು ಮಂಗಳೂರು ನಗರದ ಹೊರವಲಯ ಕುಡುಪು ಬಳಿಯ ಭಟ್ರ ಕಲ್ಲುರ್ಟಿ ದೇವಸ್ಥಾನ ಸಮೀಪ ಕೇರಳದ ವಯನಾಡ್ ಮೂಲದ ಅಶ್ರಫ್ ಎಂಬ 36 ವರ್ಷದ ಯವಕನ ಗುಂಪು ಹತ್ಯೆ ನಡೆದಿತ್ತು.

ಈ ಎಲ್ಲಾ ಹತ್ಯೆಗಳಿಗೆ ಕೋಮು ವೈಷಮ್ಯವೇ ಕಾರಣ ಎಂಬುವುದು ಜಿಲ್ಲೆಯ ಜನರ ಆರೋಪವಾಗಿದೆ. ಕೆಲ ಪ್ರಕರಣಗಳ ಹಿನ್ನೆಲೆ ಕೂಡ ಕೋಮು ಕಾರಣಕ್ಕೇ ಕೊಲೆಗಳು ನಡೆಯುತ್ತಿವೆ ಎಂಬುವುದನ್ನು ಸಾಬೀತುಪಡಿಸಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರು “ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಸುಹಾಸ್ ಹತ್ಯೆ ನಡೆದಿದೆ”ಎಂದು ಹೇಳಿದ್ದರು.

ಮಂಗಳವಾರ ನಡೆದ ಅಬ್ದುಲ್ ರಹಿಮಾನ್ ಕೊಲೆ ಸುಹಾಸ್ ಹತ್ಯೆಗೆ ಪ್ರತೀಕಾರ ಆಗಿರಬಹುದು ಎಂಬುವುದು ಜನರ ಅನುಮಾನವಾಗಿದೆ. ಇದು ಕೋಮು ವೈಷ್ಯಮ್ಯದ ಕೊಲೆಯೇ ಎಂಬುವುದು ಇನ್ನೂ ಖಚಿತವಾಗಿಲ್ಲ.

ಒಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳೊಳಗೆ ಮೂವರು ಯುವಕರ ಹತ್ಯೆ ನಡೆದು ಹೋಗಿದೆ. ತಂದೆ-ತಾಯಿಗೆ ಮಕ್ಕಳು, ಹೆಂಡತಿಗೆ ಗಂಡ, ಮಕ್ಕಳಿಗೆ ಅಪ್ಪ, ಸಹೋದರರಿಗೆ ಸಹೋದರ ಇಲ್ಲವಾಗಿದ್ದಾರೆ.

ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರ, ಜನರಿಂದ ತೀವ್ರ ಆಕ್ರೋಶ

ಅಶ್ರಫ್ ಅವರ ಗುಂಪು ಹತ್ಯೆ, ರೌಡಿ ಶೀಟರ್ ಸುಹಾಸ್ ಅವರನ್ನು ದುಷ್ಕರ್ಮಿಗಳು ಜನನಿಬಿಡ ಪ್ರದೇಶದ ರಸ್ತೆ ಮಧ್ಯೆಯೇ ಯಾವುದೇ ಭಯವಿಲ್ಲದೆ ಬರ್ಬರವಾಗಿ ಹತ್ಯೆಗೈದ ಬಳಿಕ, ಹದಗೆಟ್ಟ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅತಿಥಿಯಂತೆ ಆಗಾಗ ಜಿಲ್ಲೆಗೆ ಭೇಟಿ ನೀಡುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಜನ ಆಗ್ರಹಿಸಿದ್ದಾರೆ.

ಅಶ್ರಫ್ ಮತ್ತು ಸುಹಾಸ್ ಅವರ ಹತ್ಯೆಯ ಕೆಲ ದಿನಗಳ ಬಳಿಕ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದರು. ಆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಗೃಹ ಸಚಿವರು, ಜಿಲ್ಲೆಯಲ್ಲಿ ಕೋಮುವಾದಕ್ಕೆ ಕಡಿವಾಣ ಹಾಕುವ ಮಾತುಗಳನ್ನು ಆಡಿದ್ದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ‘ಕೋಮುದ್ವೇಷ ನಿಗ್ರಹ ದಳ (Anti Communal Force)’ ಆರಂಭಿಸುವುದಾಗಿ ಘೋಷಿಸಿದ್ದರು.

ಗೃಹ ಸಚಿವರು ಸುದ್ದಿಗೋಷ್ಠಿ ನಡೆಸಿ ತೆರಳಿದ ಬೆನ್ನಿಗೇ ಜಿಲ್ಲೆಯ ಜನಪ್ರತಿನಿಧಿಯೊಬ್ಬರು ಸೇರಿದಂತೆ ಕೆಲ ಸಂಘಟನೆಗಳ ಮುಖಂಡರು ಬಹಿರಂಗವಾಗಿ ಕೋಮುದ್ವೇಷದ ಭಾಷಣ ಮಾಡಿದ್ದಾರೆ. ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿದ್ದಾರೆ.

ಈ ಎಲ್ಲದರ ನಡುವೆ ಮಂಗಳವಾರ ಬಂಟ್ವಾಳದ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದು ಹೋಗಿದೆ. ಅವರ ಜೊತೆಗಿದ್ದ ಮತ್ತೊಬ್ಬ ಯುವಕನ ಕೊಲೆಯತ್ನ ನಡೆದಿದೆ.

ಈ ಬೆಳವಣಿಗೆಯಿಂದ ಜಿಲ್ಲೆಯ ಜನರು ಬೇಸತ್ತು ಹೋಗಿದ್ದು, ಕೋಮುವಾದಕ್ಕೆ ಕಡಿವಾಣ ಹಾಕಲು ಸಾಧ್ಯವಾಗದ ರಾಜ್ಯ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

“ಖಂಡನೆಯ ತೇಪೆ ಸಾಕು, ಕಠಿಣ ಕ್ರಮ ಬೇಕು” ಜನರ ಆಗ್ರಹ

ಮಂಗಳವಾರ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದೇನೆ” ಎಂದಿದ್ದರು.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿ “ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್, ಡಿಜಿಪಿ ಕರ್ನಾಟ ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿ ಜೊತೆ ಮಾತಾಡಿದ್ದೇನೆ.”

“ದ.ಕನ್ನಡ ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಘಟನೆಯು ಇದರ ಒಂದು ಭಾಗದಂತೆ ಕಾಣಿಸುತ್ತಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತಕ್ಕೆ ಕಠಿಣ ಸೂಚನೆ ನೀಡಿದ್ದೇನೆ‌. ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ‌.” ಎಂದು ಬರೆದುಕೊಂಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಈ ಪೋಸ್ಟ್ ಕೆಳಗಡೆ ಜನರು ಆಕ್ರೋಶದ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಕೋಮುವಾದಕ್ಕೆ ಕಡಿವಾಣ ಹಾಕಲು ಸಾಧ್ಯವಾಗದ ಉಸ್ತುವಾರು ಸಚಿವರು ಮತ್ತು ಪೊಲೀಸ್ ಅಧಿಕಾರಿಗಳು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

 

 

 

 

 

 

 

ಕರಾವಳಿಯ ಹಲವು ಪಕ್ಷ, ಸಂಘಟನೆಗಳು ಕೂಡ ಸರಣಿ ಕೊಲೆಗಳು ಮತ್ತು ಹದೆಗೆಟ್ಟ ಕಾನೂನು ಸುವ್ಯವಸ್ಥೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಬಿಜೆಪಿ, ಸಂಘಪರಿವಾರದ ದ್ವೇಷ ಭಾಷಣ, ಸರ್ಕಾರ ಬೇಜವಾಬ್ದಾರಿ ನಡೆ ಜಿಲ್ಲೆಯ ಇಂದಿನ ಸ್ಥಿತಿಗೆ ಕಾರಣ ಎಂದು ಸಿಪಿಐಎಂ ಜಿಲ್ಲಾ ಘಟಕ ಆರೋಪಿಸಿದೆ.

ಪ್ರಚೋದನಕಾರಿ ಭಾಷಣಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ಜನಪ್ರತಿನಿಧಿಗಳೇ, ಓಲೈಕೆ ರಾಜಕಾರಣ ನಿಲ್ಲಿಸಿ. ಕೊಲೆಗೆ ಪ್ರಚೋದನೆ ನೀಡಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಿ. ರಾಜ್ಯದ ಜನತೆಯನ್ನು ಕಾಪಾಡಿ ಎಂದು ಎಸ್ಎಸ್‌ಎಫ್‌ ಕರ್ನಾಟಕ ಆಗ್ರಹಿಸಿದೆ.

ಅಬ್ದುಲ್ ರಹಿಮಾನ್ ಅವರ ಕೊಲೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಕೋಮು ಗಲಭೆ ನಿಯಂತ್ರಿಸಲು ಸಾಧ್ಯವಾಗದಿದ್ದರೆ ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ ಎಂದು ಎಸ್‌ಕೆಎಸ್‌ಎಸ್‌ಎಫ್‌ ಸಂಘಟನೆ ಒತ್ತಾಯಿಸಿದೆ.

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಎಕ್ಸ್‌, ಇನ್‌ಸ್ಟಾಗ್ರಾಂ ಮತ್ತು ವಾಟ್ಸಾಪ್‌ ಮೆಸೆಂಜರ್‌ಗಳಲ್ಲಿ ಜಿಲ್ಲೆಯ ಧಾರ್ಮಿಕ ನಾಯಕರು, ಇತರ ಜನರು ಸರ್ಕಾರ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಂದು ಕೊಲೆ ನಡೆದ ಬಳಿಕ ಅದಕ್ಕೆ ಪ್ರತೀಕಾತ ತೀರಿಸುತ್ತೇವೆ ಎಂದು ಕೆಲವರು ಬಹಿರಂಗವಾಗಿ ವೇದಿಕೆ ಕಟ್ಟಿ ಬೆದರಿಕೆ ಹಾಕುವಾಗ ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಕರಾವಳಿಯ ಕೋಮುವಾದಕ್ಕೆ ಕಡಿವಾಣ ಹಾಕಲು ಸರ್ಕಾರಕ್ಕೆ ಏಕೆ ಸಾಧ್ಯವಾಗುತ್ತಿಲ್ಲ ಎಂಬುವುದು ಜನರ ಪ್ರಶ್ನೆಯಾಗಿದೆ.

ಅಬ್ದುಲ್ ರಹಿಮಾನ್ ಹತ್ಯೆ:15 ಮಂದಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳದ ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಅವರ ಕೊಲೆಯತ್ನ ಪ್ರಕರಣ ಸಂಬಂಧ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ದೀಪಕ್ ಮತ್ತು ಸುಮಿತ್ ಎಂಬವರು ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ಸುದ್ದಿ ಸಂಸ್ಥೆ ವಾರ್ತಾಭಾರತಿ ಇತ್ತೀಚಿನ ವರದಿಯಲ್ಲಿ ಹೇಳಿದೆ.

ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...