Homeಕರ್ನಾಟಕಕರಾವಳಿಯಲ್ಲಿ ಮತ್ತೊಬ್ಬ ಯುವಕನ ಹತ್ಯೆ: ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ಕರಾವಳಿಯಲ್ಲಿ ಮತ್ತೊಬ್ಬ ಯುವಕನ ಹತ್ಯೆ: ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

'ಖಂಡನೆಯ ತೇಪೆ ಸಾಕು, ಕಠಿಣ ಕ್ರಮ ಬೇಕು' ಎಂದ ಜನರು

- Advertisement -
- Advertisement -

ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬ ಯುವಕನ ಹತ್ಯೆಯಾಗಿದೆ. ಮೇ 1ರಂದು ಗುರುವಾರ ಸಂಜೆ ಮಂಗಳೂರಿನ ಹೊರವಲಯ ಬಜ್ಪೆ ಬಳಿ ರೌಡಿ ಶೀಟರ್ ಸುಹಾಸ್ ಎಂಬಾತನ ಹತ್ಯೆಯಾಗಿತ್ತು. ಅದಾಗಿ ತಿಂಗಳು ಕಳೆಯುವುದೊರಳಗೆ, ಅಂದರೆ ಮೇ 27ರಂದು ಸಂಜೆ ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದಿದೆ.

ಸುಹಾಸ್ ಹತ್ಯೆಗೂ ನಾಲ್ಕು ದಿನ ಮುಂಚೆ, ಅಂದರೆ 27 ಏಪ್ರಿಲ್ 2025ರಂದು ಮಂಗಳೂರು ನಗರದ ಹೊರವಲಯ ಕುಡುಪು ಬಳಿಯ ಭಟ್ರ ಕಲ್ಲುರ್ಟಿ ದೇವಸ್ಥಾನ ಸಮೀಪ ಕೇರಳದ ವಯನಾಡ್ ಮೂಲದ ಅಶ್ರಫ್ ಎಂಬ 36 ವರ್ಷದ ಯವಕನ ಗುಂಪು ಹತ್ಯೆ ನಡೆದಿತ್ತು.

ಈ ಎಲ್ಲಾ ಹತ್ಯೆಗಳಿಗೆ ಕೋಮು ವೈಷಮ್ಯವೇ ಕಾರಣ ಎಂಬುವುದು ಜಿಲ್ಲೆಯ ಜನರ ಆರೋಪವಾಗಿದೆ. ಕೆಲ ಪ್ರಕರಣಗಳ ಹಿನ್ನೆಲೆ ಕೂಡ ಕೋಮು ಕಾರಣಕ್ಕೇ ಕೊಲೆಗಳು ನಡೆಯುತ್ತಿವೆ ಎಂಬುವುದನ್ನು ಸಾಬೀತುಪಡಿಸಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರು “ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಸುಹಾಸ್ ಹತ್ಯೆ ನಡೆದಿದೆ”ಎಂದು ಹೇಳಿದ್ದರು.

ಮಂಗಳವಾರ ನಡೆದ ಅಬ್ದುಲ್ ರಹಿಮಾನ್ ಕೊಲೆ ಸುಹಾಸ್ ಹತ್ಯೆಗೆ ಪ್ರತೀಕಾರ ಆಗಿರಬಹುದು ಎಂಬುವುದು ಜನರ ಅನುಮಾನವಾಗಿದೆ. ಇದು ಕೋಮು ವೈಷ್ಯಮ್ಯದ ಕೊಲೆಯೇ ಎಂಬುವುದು ಇನ್ನೂ ಖಚಿತವಾಗಿಲ್ಲ.

ಒಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳೊಳಗೆ ಮೂವರು ಯುವಕರ ಹತ್ಯೆ ನಡೆದು ಹೋಗಿದೆ. ತಂದೆ-ತಾಯಿಗೆ ಮಕ್ಕಳು, ಹೆಂಡತಿಗೆ ಗಂಡ, ಮಕ್ಕಳಿಗೆ ಅಪ್ಪ, ಸಹೋದರರಿಗೆ ಸಹೋದರ ಇಲ್ಲವಾಗಿದ್ದಾರೆ.

ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರ, ಜನರಿಂದ ತೀವ್ರ ಆಕ್ರೋಶ

ಅಶ್ರಫ್ ಅವರ ಗುಂಪು ಹತ್ಯೆ, ರೌಡಿ ಶೀಟರ್ ಸುಹಾಸ್ ಅವರನ್ನು ದುಷ್ಕರ್ಮಿಗಳು ಜನನಿಬಿಡ ಪ್ರದೇಶದ ರಸ್ತೆ ಮಧ್ಯೆಯೇ ಯಾವುದೇ ಭಯವಿಲ್ಲದೆ ಬರ್ಬರವಾಗಿ ಹತ್ಯೆಗೈದ ಬಳಿಕ, ಹದಗೆಟ್ಟ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅತಿಥಿಯಂತೆ ಆಗಾಗ ಜಿಲ್ಲೆಗೆ ಭೇಟಿ ನೀಡುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಜನ ಆಗ್ರಹಿಸಿದ್ದಾರೆ.

ಅಶ್ರಫ್ ಮತ್ತು ಸುಹಾಸ್ ಅವರ ಹತ್ಯೆಯ ಕೆಲ ದಿನಗಳ ಬಳಿಕ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದರು. ಆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಗೃಹ ಸಚಿವರು, ಜಿಲ್ಲೆಯಲ್ಲಿ ಕೋಮುವಾದಕ್ಕೆ ಕಡಿವಾಣ ಹಾಕುವ ಮಾತುಗಳನ್ನು ಆಡಿದ್ದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ‘ಕೋಮುದ್ವೇಷ ನಿಗ್ರಹ ದಳ (Anti Communal Force)’ ಆರಂಭಿಸುವುದಾಗಿ ಘೋಷಿಸಿದ್ದರು.

ಗೃಹ ಸಚಿವರು ಸುದ್ದಿಗೋಷ್ಠಿ ನಡೆಸಿ ತೆರಳಿದ ಬೆನ್ನಿಗೇ ಜಿಲ್ಲೆಯ ಜನಪ್ರತಿನಿಧಿಯೊಬ್ಬರು ಸೇರಿದಂತೆ ಕೆಲ ಸಂಘಟನೆಗಳ ಮುಖಂಡರು ಬಹಿರಂಗವಾಗಿ ಕೋಮುದ್ವೇಷದ ಭಾಷಣ ಮಾಡಿದ್ದಾರೆ. ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿದ್ದಾರೆ.

ಈ ಎಲ್ಲದರ ನಡುವೆ ಮಂಗಳವಾರ ಬಂಟ್ವಾಳದ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದು ಹೋಗಿದೆ. ಅವರ ಜೊತೆಗಿದ್ದ ಮತ್ತೊಬ್ಬ ಯುವಕನ ಕೊಲೆಯತ್ನ ನಡೆದಿದೆ.

ಈ ಬೆಳವಣಿಗೆಯಿಂದ ಜಿಲ್ಲೆಯ ಜನರು ಬೇಸತ್ತು ಹೋಗಿದ್ದು, ಕೋಮುವಾದಕ್ಕೆ ಕಡಿವಾಣ ಹಾಕಲು ಸಾಧ್ಯವಾಗದ ರಾಜ್ಯ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

“ಖಂಡನೆಯ ತೇಪೆ ಸಾಕು, ಕಠಿಣ ಕ್ರಮ ಬೇಕು” ಜನರ ಆಗ್ರಹ

ಮಂಗಳವಾರ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದೇನೆ” ಎಂದಿದ್ದರು.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿ “ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್, ಡಿಜಿಪಿ ಕರ್ನಾಟ ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿ ಜೊತೆ ಮಾತಾಡಿದ್ದೇನೆ.”

“ದ.ಕನ್ನಡ ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಘಟನೆಯು ಇದರ ಒಂದು ಭಾಗದಂತೆ ಕಾಣಿಸುತ್ತಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತಕ್ಕೆ ಕಠಿಣ ಸೂಚನೆ ನೀಡಿದ್ದೇನೆ‌. ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ‌.” ಎಂದು ಬರೆದುಕೊಂಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಈ ಪೋಸ್ಟ್ ಕೆಳಗಡೆ ಜನರು ಆಕ್ರೋಶದ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಕೋಮುವಾದಕ್ಕೆ ಕಡಿವಾಣ ಹಾಕಲು ಸಾಧ್ಯವಾಗದ ಉಸ್ತುವಾರು ಸಚಿವರು ಮತ್ತು ಪೊಲೀಸ್ ಅಧಿಕಾರಿಗಳು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

 

 

 

 

 

 

 

ಕರಾವಳಿಯ ಹಲವು ಪಕ್ಷ, ಸಂಘಟನೆಗಳು ಕೂಡ ಸರಣಿ ಕೊಲೆಗಳು ಮತ್ತು ಹದೆಗೆಟ್ಟ ಕಾನೂನು ಸುವ್ಯವಸ್ಥೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಬಿಜೆಪಿ, ಸಂಘಪರಿವಾರದ ದ್ವೇಷ ಭಾಷಣ, ಸರ್ಕಾರ ಬೇಜವಾಬ್ದಾರಿ ನಡೆ ಜಿಲ್ಲೆಯ ಇಂದಿನ ಸ್ಥಿತಿಗೆ ಕಾರಣ ಎಂದು ಸಿಪಿಐಎಂ ಜಿಲ್ಲಾ ಘಟಕ ಆರೋಪಿಸಿದೆ.

ಪ್ರಚೋದನಕಾರಿ ಭಾಷಣಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ಜನಪ್ರತಿನಿಧಿಗಳೇ, ಓಲೈಕೆ ರಾಜಕಾರಣ ನಿಲ್ಲಿಸಿ. ಕೊಲೆಗೆ ಪ್ರಚೋದನೆ ನೀಡಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಿ. ರಾಜ್ಯದ ಜನತೆಯನ್ನು ಕಾಪಾಡಿ ಎಂದು ಎಸ್ಎಸ್‌ಎಫ್‌ ಕರ್ನಾಟಕ ಆಗ್ರಹಿಸಿದೆ.

ಅಬ್ದುಲ್ ರಹಿಮಾನ್ ಅವರ ಕೊಲೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಕೋಮು ಗಲಭೆ ನಿಯಂತ್ರಿಸಲು ಸಾಧ್ಯವಾಗದಿದ್ದರೆ ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ ಎಂದು ಎಸ್‌ಕೆಎಸ್‌ಎಸ್‌ಎಫ್‌ ಸಂಘಟನೆ ಒತ್ತಾಯಿಸಿದೆ.

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಎಕ್ಸ್‌, ಇನ್‌ಸ್ಟಾಗ್ರಾಂ ಮತ್ತು ವಾಟ್ಸಾಪ್‌ ಮೆಸೆಂಜರ್‌ಗಳಲ್ಲಿ ಜಿಲ್ಲೆಯ ಧಾರ್ಮಿಕ ನಾಯಕರು, ಇತರ ಜನರು ಸರ್ಕಾರ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಂದು ಕೊಲೆ ನಡೆದ ಬಳಿಕ ಅದಕ್ಕೆ ಪ್ರತೀಕಾತ ತೀರಿಸುತ್ತೇವೆ ಎಂದು ಕೆಲವರು ಬಹಿರಂಗವಾಗಿ ವೇದಿಕೆ ಕಟ್ಟಿ ಬೆದರಿಕೆ ಹಾಕುವಾಗ ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಕರಾವಳಿಯ ಕೋಮುವಾದಕ್ಕೆ ಕಡಿವಾಣ ಹಾಕಲು ಸರ್ಕಾರಕ್ಕೆ ಏಕೆ ಸಾಧ್ಯವಾಗುತ್ತಿಲ್ಲ ಎಂಬುವುದು ಜನರ ಪ್ರಶ್ನೆಯಾಗಿದೆ.

ಅಬ್ದುಲ್ ರಹಿಮಾನ್ ಹತ್ಯೆ:15 ಮಂದಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳದ ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಅವರ ಕೊಲೆಯತ್ನ ಪ್ರಕರಣ ಸಂಬಂಧ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ದೀಪಕ್ ಮತ್ತು ಸುಮಿತ್ ಎಂಬವರು ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ಸುದ್ದಿ ಸಂಸ್ಥೆ ವಾರ್ತಾಭಾರತಿ ಇತ್ತೀಚಿನ ವರದಿಯಲ್ಲಿ ಹೇಳಿದೆ.

ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...