Homeಅಂತರಾಷ್ಟ್ರೀಯ ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

 ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

- Advertisement -
- Advertisement -

ಐರೋಪ್ಯ ಒಕ್ಕೂಟದ 800ಕ್ಕೂ ಹೆಚ್ಚು ವಕೀಲರು, ಶಿಕ್ಷಣ ತಜ್ಞರು ಮತ್ತು ಮಾಜಿ ನ್ಯಾಯಾಧೀಶರು ಇಸ್ರೇಲ್ ಸರ್ಕಾರ ಮತ್ತು ಅದರ ಮಂತ್ರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಮತ್ತು ಗಾಜಾದಲ್ಲಿ “ನರಮೇಧವನ್ನು ತಡೆಗಟ್ಟಲು ಮತ್ತು ಅದನ್ನು ಶಿಕ್ಷಿಸಲು” ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ಕೀರ್ ಸ್ಟಾರ್ಮರ್‌ಗೆ ಬರೆದ ಪತ್ರವು ಪ್ರಸ್ತುತ ಇಸ್ರೇಲ್‌ನಿಂದ ಅಂತರರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಮತ್ತು ಅವರಿಗೆ ಮತ್ತಷ್ಟು ಬೆದರಿಕೆ ಇದೆ ಎಂದು ಪ್ರತಿಪಾದಿಸಿದೆ.

ಗಾಜಾದಲ್ಲಿ ನರಮೇಧವನ್ನು ನಡೆಸಲಾಗುತ್ತಿದೆ ಅಥವಾ ಕನಿಷ್ಠ ಪಕ್ಷ ನರಮೇಧದ ಗಂಭೀರ ಅಪಾಯವಿದೆ ಎಂದು ಇವರು ಹೇಳಿದ್ದಾರೆ. ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧ ಅಪರಾಧಗಳು ಮತ್ತು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಜುಲೈ 2024ರಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯ (ICJ) ಇಸ್ರೇಲ್ ಇಡೀ ಗಾಝಾದೆಲ್ಲೆಡೆ ಅಂತರರಾಷ್ಟ್ರೀಯ ಕಾನೂನಿನ ಖಂಡನೀಯ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಪತ್ತೆಹಚ್ಚಿದೆ. ಪ್ಯಾಲೆಸ್ಟೀನಿಯನ್ ಜನರಿಗೆ ಅವರ ಸ್ವ-ನಿರ್ಣಯದ ಹಕ್ಕನ್ನು ನಿರಾಕರಿಸುವ ಮೂಲಕ ಮತ್ತು ಬಲವಂತವಾಗಿ ಸ್ವಾಧೀನಪಡಿಸಿಕೊಂಡ ಪ್ರದೇಶವನ್ನು ಕಾನೂನುಬಾಹಿರವಾಗಿ ತನ್ನ ತೆಕ್ಕೆಗೆ ತಗೆದುಕೊಳ್ಳುತ್ತಿದೆ ಎಂದು ವಕೀಲರು ಹೇಳಿದ್ದಾರೆ.

ಗಾಜಾದ ಪ್ಯಾಲೆಸ್ಟೀನಿಯನ್ ಜನರ ಸರ್ವನಾಶವನ್ನು ತಪ್ಪಿಸಲು ಈಗ ತುರ್ತು ಮತ್ತು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಸ್ಟಾರ್ಮರ್ ಅವರನ್ನು ಅದು ಒತ್ತಾಯಿಸಿದೆ. ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ಇತ್ತೀಚಿನ ಕಾಮೆಂಟ್‌ಗಳನ್ನು ಪತ್ರವು ಉಲ್ಲೇಖಿಸಿದೆ. ಅವರು, ಗಾಜಾಪಟ್ಟಿಯ ಎಲ್ಲಾ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮತ್ತು ಹಮಾಸ್ ನಾಶವಾಗುವವರೆಗೆ ವಶಪಡಿಸಿಕೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದರು.

ಇಸ್ರೇಲ್ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಐರೋಪ್ಯ ಒಕ್ಕೂಟವು ಕಳೆದ ವಾರ ಇಸ್ರೇಲ್‌ನೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಸ್ಥಗಿತಗೊಳಿಸಿತು. ಈ ಪತ್ರವು ಇಸ್ರೇಲ್‌ನ ಮೇ 2025ರ ಯೋಜನೆಯನ್ನು ಕೇಂದ್ರೀಕರಿಸುತ್ತದೆ. ಇದರ ಅನುಷ್ಠಾನವು ಈ ವರ್ಷದ ಮೇ 16ರಂದು ಪ್ರಾರಂಭವಾಯಿತು. ಈ ಯೋಜನೆಯು ಇಸ್ರೇಲಿನಿಂದ ಗಾಜಾಪಟ್ಟಿಯನ್ನು ವಶಪಡಿಸಿಕೊಳ್ಳುವುದು ಮತ್ತು ಪ್ರದೇಶಗಳನ್ನು ಹಿಡಿದಿಟ್ಟುಕೊಳ್ಳುವ ಗುರಿಯನ್ನು ಹೊಂದಿರುವ ವಿಸ್ತೃತ ಮಿಲಿಟರಿ ಕಾರ್ಯಾಚರಣೆಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಗಾಜಾದ ಜನಸಂಖ್ಯೆಯನ್ನು ಅಲ್ಲಿಂದ ಬೇರೆಡೆಗೆ ಬಲವಂತವಾಗಿ ಸ್ಥಳಾಂತರಿಸುವುದು ಕೂಡ ಸೇರಿದೆ.

ಐಡಿಎಫ್ ವಕ್ತಾರರು ಈ ದಾಳಿಯು ಗಾಜಾಪಟ್ಟಿಯ ಬಹುಪಾಲು ಜನಸಂಖ್ಯೆಯನ್ನು ಬೇರೆಡೆ ಸ್ಥಳಾಂತರಿಸುವ ಉದ್ದೇಶವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇಸ್ರೇಲಿ ಮಂತ್ರಿಗಳು ಗಾಜಾವನ್ನು ಸಂಪೂರ್ಣವಾಗಿ ನಾಶಪಡಿಸಲಾಗುವುದು ಮತ್ತು ಅಲ್ಲಿನ ಜನರನ್ನು ದಕ್ಷಿಣದ ಮಾನವೀಯ ವಲಯಕ್ಕೆ ಕಳುಹಿಸಲಾಗುವುದು ಎಂದು ಹೇಳುತ್ತಿದ್ದಾರೆ. ಅಲ್ಲಿಂದ ಅವರು “ಮೂರನೇ ದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗಲು ಪ್ರಾರಂಭಿಸುತ್ತಾರೆ” ಎಂದು ಕೂಡ ಹೇಳಿದ್ದಾರೆ.

ಪ್ರಧಾನ ಮಂತ್ರಿ ನೆತನ್ಯಾಹು ಅವರು ಇಸ್ರೇಲ್ ಗಾಜಾದಲ್ಲಿ ಮನೆಗಳನ್ನು ನಾಶಪಡಿಸುತ್ತಿದೆ. ಆದ್ದರಿಂದ ಪ್ಯಾಲೆಸ್ಟೀನಿಯನ್ನರು ಮತ್ತೆ ಗಾಜಾಕ್ಕೆ ಹಿಂತಿರುಗಲು ಅಲ್ಲಿ ಅವರಿಗೆ ಮನೆಗಳು ಇಲ್ಲ ಮತ್ತು ಸ್ಪಷ್ಟವಾಗಿ ಹೇಳುವುದಾದರೆ ಗಾಜಾ ಜನರು ಪಟ್ಟಿಯ ಹೊರಗೆ ವಲಸೆ ಹೋಗಲು ಆಯ್ಕೆ ಮಾಡಿಕೊಳ್ಳುವುದು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಮೇ 16ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಗಾಜಾದ ಜನರು ಶಾಶ್ವತವಾಗಿ ಗಾಜಾವನ್ನು ತೊರೆಯುವುದಕ್ಕೆ ಒತ್ತಾಯಿಸುವುದನ್ನು ಅಂತರರಾಷ್ಟ್ರೀಯ ಕಾನೂನಿನ ಧಿಕ್ಕರಿಸುವುದಾಗಿದೆ ಮತ್ತು ಅದು ಜನಾಂಗೀಯ ಶುದ್ಧೀಕರಣಕ್ಕೆ ಸಮಾನ ಎಂದು ಬಣ್ಣಿಸಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ನಡೆಸಿದ ಯುದ್ಧವು ಕನಿಷ್ಠ 54,056 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಮತ್ತು 123,129 ಜನರು ಗಾಯಗೊಂಡಿದ್ದಾರೆ. ಸರ್ಕಾರಿ ಮಾಧ್ಯಮ ಕಚೇರಿ ತನ್ನ ಸಾವಿನ ಸಂಖ್ಯೆಯನ್ನು 61,700 ಕ್ಕೂ ಹೆಚ್ಚು ಎಂದು ಹೇಳಿದೆ. ಅವಶೇಷಗಳಡಿ ಸಿಲುಕಿ ಕಾಣೆಯಾದ ಸಾವಿರಾರು ಜನರು ಸತ್ತಿದ್ದಾರೆಂದು ಭಾವಿಸಲಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ.

ಯುಎನ್‌ಒಸಿಎಚ್‌ಎ ಪರಿಸ್ಥಿತಿಯನ್ನು “ಕರುಣೆಯಿಲ್ಲದ ಯುದ್ಧ” ಎಂದು ಬಣ್ಣಿಸಿದೆ. ಮೇ 2025ರ ವರದಿಯು ಇಡೀ ಗಾಜಾ ಜನಸಂಖ್ಯೆಯು ಹೆಚ್ಚಿನ ಆಹಾರ ಅಭದ್ರತೆಯನ್ನು ಎದುರಿಸುತ್ತಿದೆ, ಅರ್ಧ ಮಿಲಿಯನ್ ಜನರು (ಐದರಲ್ಲಿ ಒಬ್ಬರು) ಹಸಿವನ್ನು ಎದುರಿಸುತ್ತಿದ್ದಾರೆ ಎಂದು ಕಂಡುಹಿಡಿದಿದೆ.

ನರಮೇಧವನ್ನು ತಡೆಗಟ್ಟಲು ಮತ್ತು ಇಸ್ರೇಲಿಗೆ ಶಿಕ್ಷೆ ವಿಧಿಸಲು ಮತ್ತು ಅಂತರಾಷ್ಟ್ರೀಯ ಕಾನೂನಿನ ಮಾನದಂಡಗಳ ಉಲ್ಲಂಘನೆಯನ್ನು ಕೊನೆಗೊಳಿಸಲು ಯುಕೆ ಕಾನೂನುಬದ್ಧವಾಗಿ ಎಲ್ಲಾ ಸಮಂಜಸ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕಾನೂನು ತಜ್ಞರು ಒತ್ತಿ ಹೇಳಿದ್ದಾರೆ. ಇಲ್ಲಿಯವರೆಗಿನ ಯುಕೆ ಕ್ರಮಗಳು ಈ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ಅವರು ವಾದಿಸುತ್ತಾರೆ.

ಪತ್ರವು ಗಾಜಾದಲ್ಲಿ ಇಸ್ರೇಲ್ ಇರುವಿಕೆಯ ಕಾನೂನುಬಾಹಿರತೆಯನ್ನು ಸಹ ತಿಳಿಸುತ್ತದೆ. ಇಸ್ರೇಲ್‌ನ ನೀತಿಗಳು ಮತ್ತು ಪದ್ಧತಿಗಳು ಬಲವಂತದ ಮೂಲಕ ಭೂಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧದ ನಿಷೇಧ ಮತ್ತು ಪ್ಯಾಲೆಸ್ಟೀನಿಯನ್ ಸ್ವ-ನಿರ್ಣಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ICJ ಅಭಿಪ್ರಾಯಿಸಿದೆ. ಪ್ಯಾಲೆಸ್ಟೀನಿಯನ್ನರ ಮೇಲೆ ವಿಧಿಸಲಾದ ನಿರ್ಬಂಧಗಳು ಜನಾಂಗೀಯ ತಾರತಮ್ಯ ಮತ್ತು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಉಲ್ಲಂಘನೆಯಾಗಿದೆ ಎಂದು ICJ ಕಂಡುಹಿಡಿದಿದೆ. ಇಸ್ರೇಲ್ “ಸಾಧ್ಯವಾದಷ್ಟು ಬೇಗ” ಗಾಜಾದಿಂದ ಹಿಂದೆ ಸರಿಯಬೇಕು ಎಂದು ICJ ತೀರ್ಮಾನಿಸಿದೆ.

ನರಮೇಧ, ಬಲವಂತದ ಸ್ಥಳಾಂತರ ಮತ್ತು ಪ್ಯಾಲೆಸ್ಟೀನಿಯನ್ನರ ವಿರುದ್ಧ ಸಾಮೂಹಿಕ ಶಿಕ್ಷೆಯ ಕೃತ್ಯಗಳು ಹಾಗೂ ಆಕ್ರಮಿತ ಪ್ರದೇಶವನ್ನು ಮತ್ತಷ್ಟು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಹೆಚ್ಚುತ್ತಿರುವ ಪುರಾವೆಗಳಿವೆ ಎಂದು ಹೇಳುವ ಮೂಲಕ ಪತ್ರವು ಮುಕ್ತಾಯಗೊಳ್ಳುತ್ತದೆ. ಗಾಜಾದ ಪ್ಯಾಲೆಸ್ಟೀನಿಯನ್ ಜನಸಂಖ್ಯೆಯ ನಾಶವನ್ನು ತಪ್ಪಿಸಲು ನಿರ್ಣಾಯಕ ಕ್ರಮದ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳುತ್ತಾರೆ. ವಿಶ್ವಸಂಸ್ಥೆಯ ತಜ್ಞರನ್ನು ಪ್ರತಿಧ್ವನಿಸುತ್ತಾ ರಾಜ್ಯಗಳು ಈಗಲೇ ಕಾರ್ಯನಿರ್ವಹಿಸಬೇಕು ಅಥವಾ ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ ಜನಸಂಖ್ಯೆ ನಿರ್ನಾಮವಾಗುವುದನ್ನು ತಡೆಯಬೇಕು ಎಂದು ಅವರು ಎಚ್ಚರಿಸಿದ್ದಾರೆ.

ದಲಿತ ವೃದ್ಧನ ಜೀವಂತ ದಹನ: ‘ಗುಜರಾತ್ ದಲಿತರಿಗೆ ನರಕವಾಗುತ್ತಿದೆ’ ಎಂದ ಶಾಸಕ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....