Homeಕರ್ನಾಟಕಅಮಾಯಕ ಮುಸ್ಲಿಂ ಯುವಕನ ಕೊಲೆಗೆ ಪೊಲೀಸ್ ಇಲಾಖೆ, ಸರಕಾರವೆ ನೇರ ಹೊಣೆ- ಡಿವೈಎಫ್ಐ

ಅಮಾಯಕ ಮುಸ್ಲಿಂ ಯುವಕನ ಕೊಲೆಗೆ ಪೊಲೀಸ್ ಇಲಾಖೆ, ಸರಕಾರವೆ ನೇರ ಹೊಣೆ- ಡಿವೈಎಫ್ಐ

- Advertisement -
- Advertisement -

ಅಮಾಯಕ ಮುಸ್ಲಿಂ ಸಮುದಾಯದ ಯುವಕನ ಕೊಲೆಯನ್ನು ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ಸಮಿತಿ, ಕಾನೂನು ಸುವ್ಯವಸ್ಥೆ ನಿಯಂತ್ರಿಸಲಾಗದ ಪೊಲೀಸ್ ಇಲಾಖೆ ಮತ್ತು ಸರಕಾರವೇ ನೇರ ಹೊಣೆ ಎಂದು ಆರೋಪಿಸಿದೆ. ಅಮಾಯಕ ಮುಸ್ಲಿಂ ಯುವಕನ

ಬಂಟ್ವಾಳ ತಾಲೂಕಿನ ಕೊಳ್ತಮಜಲಿನ ಮುಸ್ಲಿಂ ಸಮುದಾಯದ ಯುವಕನೊಬ್ಬನ ಹತ್ಯೆಯಿಂದ ಮತ್ತೆ ಜಿಲ್ಲೆಯ ಜನಸಾಮಾನ್ಯರಲ್ಲಿ ಆತಂಕ ಮನೆಮಾಡಿದೆ. ದ.ಕ ಜಿಲ್ಲೆಯಲ್ಲಿ ಪದೇ ಪದೇ ನಡೆಯುವ ಇಂತಹದೇ ಮತೀಯ ಹಿಂಸಾಚಾರವು ಜನರ ನೆಮ್ಮದಿಯ ಜೀವನಕ್ಕೆ ಮತ್ತೆ ಜಿಲ್ಲೆಯ ಆರ್ಥಿಕತೆಯ ಮೇಲೆ ಬಹುದೊಡ್ಡ ಹೊಡೆತ ನೀಡಿದೆ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಇಮ್ತಿಯಾಜ್ ಅವರು ಹೇಳಿದ್ದಾರೆ.

ಬಿಜೆಪಿ ಸಂಘಪರಿವಾರದ ಮತೀಯ ದ್ರುವೀಕರಣದ ರಾಜಕಾರಣ, ಕೋಮು ದ್ವೇಷಕಾರುವ, ಹಿಂಸಾಚಾರದ ಕರೆಗಳು ಪ್ರತೀಕಾರದ ಕೊಲೆಗಳಿಗೆ ಅವಕಾಶ ಮಾಡಿಕೊಟ್ಟಂತೆ ಕಾಣುತ್ತಿದೆ. ಜಿಲ್ಲಾಡಳಿತ ಪೊಲೀಸ್ ಇಲಾಖೆ ಈ ಕೂಡಲೇ ಬಂಟ್ವಾಳದಲ್ಲಿ ಕೊಲೆಯಾದ ಮುಸ್ಲಿಂ ಸಮುದಾಯದ ಯುವಕನ ಹಂತಕರನ್ನು ಶೀಘ್ರಗತಿಯಲ್ಲಿ ಬಂಧಿಸಬೇಕು. ಕೊಲೆಯ ಹಿಂದಿರುವ ನೈಜಾಂಶವನ್ನು ಬಯಲುಗೊಳಿಸಬೇಕೆಂದು ಡಿವೈಎಫ್ಐ ಒತ್ತಾಯಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ರಾಜಕಾರಣದಲ್ಲೇ ಹಿಡಿತ ಸಾಧಿಸುತ್ತ ಬಂದಿರುವ ಬಿಜೆಪಿ, ಸಂಘಪರಿವಾರದ ಹಿನ್ನಲೆಗಳನ್ನು ಅರಿತಿರುವ ಇಲ್ಲಿನ ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಮತ್ತು ಈಗಿನ ಸರಕಾರ ಅವರ ಕಾನೂನು ವಿರೋಧಿ ಚಟುವಟಿಕೆಗಳನ್ನು, ದ್ವೇಷ ಹರಡುವ ಭಾಷಣಗಳನ್ನು ನಿಯಂತ್ರಿಸದೆ ಇರುವ ಕಾರಣಕ್ಕೆ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ದಾಳಿಗೆ ಮುಂದಾಗುವ, ಇಂತಹ ಪ್ರತೀಕಾರದ ಕೊಲೆಗಳಿಗೆ ಪ್ರಚೋದನೆಯನ್ನು ಒದಗಿಸಲು ಕಾರಣವಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಜಿಲ್ಲೆಯ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ದಿದೆ ಇಲ್ಲಿನ ಪೊಲೀಸ್ ಇಲಾಖೆಯೊಳಗೆ ಅಮೂಲಾಗ್ರವಾದ ಬದಲಾವಣೆ ತರಬೇಕೆಂದು ಹಲವು ಬಾರಿ ಒತ್ತಾಯಿಸಿದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಆಳುವ ಸರಕಾರಗಳು ಬೇಜವಾಬ್ದಾರಿಯನ್ನು ವಹಿಸಿದೆ ಎಂದು ಇಮ್ತಿಯಾಝ್ ಹೇಳಿದ್ದಾರೆ.

ಜಿಲ್ಲೆಯ ಉಸ್ತುವಾರಿ ಮಂತ್ರಿ ಕೇವಲ ಕಟ್ಟುನಿಟ್ಟಿನ ಕ್ರಮಕೈಗೊಳ್ಳಾಗುವುದೆಂಬ ಕೇವಲ ಹೇಳಿಕೆಗಳನ್ನಷ್ಟೇ ಹೊರಡಿಸುತ್ತಾರೆಯೇ ಹೊರತು ಇಲ್ಲಿ ಬಿಜೆಪಿ ಸಂಘಪಾರಿವಾರದ ಹಿಂಸಾಚಾರಕ್ಕೆ ಗುರಿಯಾಗುತ್ತಿರುವ ಅಮಾಯಕ ಮುಸ್ಲಿಂ ಸಮುದಾಯದ ರಕ್ಷಣೆಗೆ ಯಾವೊಂದು ಕ್ರಮಗಳು ಇಲ್ಲದೇ ಇರೋದು ಖೇದಕರ. ಮತ್ತದೇ ಸಂಜೆಯಾಗುತ್ತಲೇ ವ್ಯಾಪಾರ ನಡೆಸಿ ಬದುಕುವ ಅಂಗಡಿ ಮುಂಗಟ್ಟುಗಳನ್ನು ಬಲವಂತದಿಂದ ಬಂದು ಮಾಡಿಸಿ ನಗರವನ್ನು ಮುಚ್ಚುವ, ಮನೆಯಿಂದ ಹೊರಬರೋದಕ್ಕೂ ಭೀತಿ ಹುಟ್ಟಿಸುವಂತಹ ಕ್ರಮಗಳಿಂದ ಯಾವುದೇ ಪ್ರಯೋಜನಗಳಿಲ್ಲ ಎಂದು ಡಿವೈಎಫ್ಐ ಹೇಳಿದೆ.

ಬಂಟ್ವಾಳದಲ್ಲಿ ಹತ್ಯೆಯಾಗಿರುವ ಮುಸ್ಲಿಂ ಸಮುದಾಯದ ಅಮಾಯಕ ಯುವಕನ ಹಂತಕರನ್ನು ಕೂಡಲೇ ಬಂಧಿಸಬೇಕು. ಕೊಲೆಗೆ ಪ್ರಚೋದನೆ ಕಾರಣದಾವರನ್ನೆಲ್ಲಾ ಬಯಲಿಗೆಳೆಯಬೇಕು. ಜಿಲ್ಲೆಯ ಯುವಜನತೆ ಶಾಂತಿಯನ್ನು ಕಾಪಾಡಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಅಮಾಯಕ ಮುಸ್ಲಿಂ ಯುವಕನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...