Homeಕರ್ನಾಟಕಅಮಾಯಕ ಮುಸ್ಲಿಂ ಯುವಕನ ಕೊಲೆಗೆ ಪೊಲೀಸ್ ಇಲಾಖೆ, ಸರಕಾರವೆ ನೇರ ಹೊಣೆ- ಡಿವೈಎಫ್ಐ

ಅಮಾಯಕ ಮುಸ್ಲಿಂ ಯುವಕನ ಕೊಲೆಗೆ ಪೊಲೀಸ್ ಇಲಾಖೆ, ಸರಕಾರವೆ ನೇರ ಹೊಣೆ- ಡಿವೈಎಫ್ಐ

- Advertisement -
- Advertisement -

ಅಮಾಯಕ ಮುಸ್ಲಿಂ ಸಮುದಾಯದ ಯುವಕನ ಕೊಲೆಯನ್ನು ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ಸಮಿತಿ, ಕಾನೂನು ಸುವ್ಯವಸ್ಥೆ ನಿಯಂತ್ರಿಸಲಾಗದ ಪೊಲೀಸ್ ಇಲಾಖೆ ಮತ್ತು ಸರಕಾರವೇ ನೇರ ಹೊಣೆ ಎಂದು ಆರೋಪಿಸಿದೆ. ಅಮಾಯಕ ಮುಸ್ಲಿಂ ಯುವಕನ

ಬಂಟ್ವಾಳ ತಾಲೂಕಿನ ಕೊಳ್ತಮಜಲಿನ ಮುಸ್ಲಿಂ ಸಮುದಾಯದ ಯುವಕನೊಬ್ಬನ ಹತ್ಯೆಯಿಂದ ಮತ್ತೆ ಜಿಲ್ಲೆಯ ಜನಸಾಮಾನ್ಯರಲ್ಲಿ ಆತಂಕ ಮನೆಮಾಡಿದೆ. ದ.ಕ ಜಿಲ್ಲೆಯಲ್ಲಿ ಪದೇ ಪದೇ ನಡೆಯುವ ಇಂತಹದೇ ಮತೀಯ ಹಿಂಸಾಚಾರವು ಜನರ ನೆಮ್ಮದಿಯ ಜೀವನಕ್ಕೆ ಮತ್ತೆ ಜಿಲ್ಲೆಯ ಆರ್ಥಿಕತೆಯ ಮೇಲೆ ಬಹುದೊಡ್ಡ ಹೊಡೆತ ನೀಡಿದೆ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಇಮ್ತಿಯಾಜ್ ಅವರು ಹೇಳಿದ್ದಾರೆ.

ಬಿಜೆಪಿ ಸಂಘಪರಿವಾರದ ಮತೀಯ ದ್ರುವೀಕರಣದ ರಾಜಕಾರಣ, ಕೋಮು ದ್ವೇಷಕಾರುವ, ಹಿಂಸಾಚಾರದ ಕರೆಗಳು ಪ್ರತೀಕಾರದ ಕೊಲೆಗಳಿಗೆ ಅವಕಾಶ ಮಾಡಿಕೊಟ್ಟಂತೆ ಕಾಣುತ್ತಿದೆ. ಜಿಲ್ಲಾಡಳಿತ ಪೊಲೀಸ್ ಇಲಾಖೆ ಈ ಕೂಡಲೇ ಬಂಟ್ವಾಳದಲ್ಲಿ ಕೊಲೆಯಾದ ಮುಸ್ಲಿಂ ಸಮುದಾಯದ ಯುವಕನ ಹಂತಕರನ್ನು ಶೀಘ್ರಗತಿಯಲ್ಲಿ ಬಂಧಿಸಬೇಕು. ಕೊಲೆಯ ಹಿಂದಿರುವ ನೈಜಾಂಶವನ್ನು ಬಯಲುಗೊಳಿಸಬೇಕೆಂದು ಡಿವೈಎಫ್ಐ ಒತ್ತಾಯಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ರಾಜಕಾರಣದಲ್ಲೇ ಹಿಡಿತ ಸಾಧಿಸುತ್ತ ಬಂದಿರುವ ಬಿಜೆಪಿ, ಸಂಘಪರಿವಾರದ ಹಿನ್ನಲೆಗಳನ್ನು ಅರಿತಿರುವ ಇಲ್ಲಿನ ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಮತ್ತು ಈಗಿನ ಸರಕಾರ ಅವರ ಕಾನೂನು ವಿರೋಧಿ ಚಟುವಟಿಕೆಗಳನ್ನು, ದ್ವೇಷ ಹರಡುವ ಭಾಷಣಗಳನ್ನು ನಿಯಂತ್ರಿಸದೆ ಇರುವ ಕಾರಣಕ್ಕೆ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ದಾಳಿಗೆ ಮುಂದಾಗುವ, ಇಂತಹ ಪ್ರತೀಕಾರದ ಕೊಲೆಗಳಿಗೆ ಪ್ರಚೋದನೆಯನ್ನು ಒದಗಿಸಲು ಕಾರಣವಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಜಿಲ್ಲೆಯ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ದಿದೆ ಇಲ್ಲಿನ ಪೊಲೀಸ್ ಇಲಾಖೆಯೊಳಗೆ ಅಮೂಲಾಗ್ರವಾದ ಬದಲಾವಣೆ ತರಬೇಕೆಂದು ಹಲವು ಬಾರಿ ಒತ್ತಾಯಿಸಿದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಆಳುವ ಸರಕಾರಗಳು ಬೇಜವಾಬ್ದಾರಿಯನ್ನು ವಹಿಸಿದೆ ಎಂದು ಇಮ್ತಿಯಾಝ್ ಹೇಳಿದ್ದಾರೆ.

ಜಿಲ್ಲೆಯ ಉಸ್ತುವಾರಿ ಮಂತ್ರಿ ಕೇವಲ ಕಟ್ಟುನಿಟ್ಟಿನ ಕ್ರಮಕೈಗೊಳ್ಳಾಗುವುದೆಂಬ ಕೇವಲ ಹೇಳಿಕೆಗಳನ್ನಷ್ಟೇ ಹೊರಡಿಸುತ್ತಾರೆಯೇ ಹೊರತು ಇಲ್ಲಿ ಬಿಜೆಪಿ ಸಂಘಪಾರಿವಾರದ ಹಿಂಸಾಚಾರಕ್ಕೆ ಗುರಿಯಾಗುತ್ತಿರುವ ಅಮಾಯಕ ಮುಸ್ಲಿಂ ಸಮುದಾಯದ ರಕ್ಷಣೆಗೆ ಯಾವೊಂದು ಕ್ರಮಗಳು ಇಲ್ಲದೇ ಇರೋದು ಖೇದಕರ. ಮತ್ತದೇ ಸಂಜೆಯಾಗುತ್ತಲೇ ವ್ಯಾಪಾರ ನಡೆಸಿ ಬದುಕುವ ಅಂಗಡಿ ಮುಂಗಟ್ಟುಗಳನ್ನು ಬಲವಂತದಿಂದ ಬಂದು ಮಾಡಿಸಿ ನಗರವನ್ನು ಮುಚ್ಚುವ, ಮನೆಯಿಂದ ಹೊರಬರೋದಕ್ಕೂ ಭೀತಿ ಹುಟ್ಟಿಸುವಂತಹ ಕ್ರಮಗಳಿಂದ ಯಾವುದೇ ಪ್ರಯೋಜನಗಳಿಲ್ಲ ಎಂದು ಡಿವೈಎಫ್ಐ ಹೇಳಿದೆ.

ಬಂಟ್ವಾಳದಲ್ಲಿ ಹತ್ಯೆಯಾಗಿರುವ ಮುಸ್ಲಿಂ ಸಮುದಾಯದ ಅಮಾಯಕ ಯುವಕನ ಹಂತಕರನ್ನು ಕೂಡಲೇ ಬಂಧಿಸಬೇಕು. ಕೊಲೆಗೆ ಪ್ರಚೋದನೆ ಕಾರಣದಾವರನ್ನೆಲ್ಲಾ ಬಯಲಿಗೆಳೆಯಬೇಕು. ಜಿಲ್ಲೆಯ ಯುವಜನತೆ ಶಾಂತಿಯನ್ನು ಕಾಪಾಡಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಅಮಾಯಕ ಮುಸ್ಲಿಂ ಯುವಕನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....