Homeಕರ್ನಾಟಕಅಮಾಯಕ ಮುಸ್ಲಿಂ ಯುವಕನ ಕೊಲೆಗೆ ಪೊಲೀಸ್ ಇಲಾಖೆ, ಸರಕಾರವೆ ನೇರ ಹೊಣೆ- ಡಿವೈಎಫ್ಐ

ಅಮಾಯಕ ಮುಸ್ಲಿಂ ಯುವಕನ ಕೊಲೆಗೆ ಪೊಲೀಸ್ ಇಲಾಖೆ, ಸರಕಾರವೆ ನೇರ ಹೊಣೆ- ಡಿವೈಎಫ್ಐ

- Advertisement -
- Advertisement -

ಅಮಾಯಕ ಮುಸ್ಲಿಂ ಸಮುದಾಯದ ಯುವಕನ ಕೊಲೆಯನ್ನು ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಡಿವೈಎಫ್‌ಐ ಸಮಿತಿ, ಕಾನೂನು ಸುವ್ಯವಸ್ಥೆ ನಿಯಂತ್ರಿಸಲಾಗದ ಪೊಲೀಸ್ ಇಲಾಖೆ ಮತ್ತು ಸರಕಾರವೇ ನೇರ ಹೊಣೆ ಎಂದು ಆರೋಪಿಸಿದೆ. ಅಮಾಯಕ ಮುಸ್ಲಿಂ ಯುವಕನ

ಬಂಟ್ವಾಳ ತಾಲೂಕಿನ ಕೊಳ್ತಮಜಲಿನ ಮುಸ್ಲಿಂ ಸಮುದಾಯದ ಯುವಕನೊಬ್ಬನ ಹತ್ಯೆಯಿಂದ ಮತ್ತೆ ಜಿಲ್ಲೆಯ ಜನಸಾಮಾನ್ಯರಲ್ಲಿ ಆತಂಕ ಮನೆಮಾಡಿದೆ. ದ.ಕ ಜಿಲ್ಲೆಯಲ್ಲಿ ಪದೇ ಪದೇ ನಡೆಯುವ ಇಂತಹದೇ ಮತೀಯ ಹಿಂಸಾಚಾರವು ಜನರ ನೆಮ್ಮದಿಯ ಜೀವನಕ್ಕೆ ಮತ್ತೆ ಜಿಲ್ಲೆಯ ಆರ್ಥಿಕತೆಯ ಮೇಲೆ ಬಹುದೊಡ್ಡ ಹೊಡೆತ ನೀಡಿದೆ ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಇಮ್ತಿಯಾಜ್ ಅವರು ಹೇಳಿದ್ದಾರೆ.

ಬಿಜೆಪಿ ಸಂಘಪರಿವಾರದ ಮತೀಯ ದ್ರುವೀಕರಣದ ರಾಜಕಾರಣ, ಕೋಮು ದ್ವೇಷಕಾರುವ, ಹಿಂಸಾಚಾರದ ಕರೆಗಳು ಪ್ರತೀಕಾರದ ಕೊಲೆಗಳಿಗೆ ಅವಕಾಶ ಮಾಡಿಕೊಟ್ಟಂತೆ ಕಾಣುತ್ತಿದೆ. ಜಿಲ್ಲಾಡಳಿತ ಪೊಲೀಸ್ ಇಲಾಖೆ ಈ ಕೂಡಲೇ ಬಂಟ್ವಾಳದಲ್ಲಿ ಕೊಲೆಯಾದ ಮುಸ್ಲಿಂ ಸಮುದಾಯದ ಯುವಕನ ಹಂತಕರನ್ನು ಶೀಘ್ರಗತಿಯಲ್ಲಿ ಬಂಧಿಸಬೇಕು. ಕೊಲೆಯ ಹಿಂದಿರುವ ನೈಜಾಂಶವನ್ನು ಬಯಲುಗೊಳಿಸಬೇಕೆಂದು ಡಿವೈಎಫ್ಐ ಒತ್ತಾಯಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ರಾಜಕಾರಣದಲ್ಲೇ ಹಿಡಿತ ಸಾಧಿಸುತ್ತ ಬಂದಿರುವ ಬಿಜೆಪಿ, ಸಂಘಪರಿವಾರದ ಹಿನ್ನಲೆಗಳನ್ನು ಅರಿತಿರುವ ಇಲ್ಲಿನ ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಮತ್ತು ಈಗಿನ ಸರಕಾರ ಅವರ ಕಾನೂನು ವಿರೋಧಿ ಚಟುವಟಿಕೆಗಳನ್ನು, ದ್ವೇಷ ಹರಡುವ ಭಾಷಣಗಳನ್ನು ನಿಯಂತ್ರಿಸದೆ ಇರುವ ಕಾರಣಕ್ಕೆ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ದಾಳಿಗೆ ಮುಂದಾಗುವ, ಇಂತಹ ಪ್ರತೀಕಾರದ ಕೊಲೆಗಳಿಗೆ ಪ್ರಚೋದನೆಯನ್ನು ಒದಗಿಸಲು ಕಾರಣವಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಜಿಲ್ಲೆಯ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ದಿದೆ ಇಲ್ಲಿನ ಪೊಲೀಸ್ ಇಲಾಖೆಯೊಳಗೆ ಅಮೂಲಾಗ್ರವಾದ ಬದಲಾವಣೆ ತರಬೇಕೆಂದು ಹಲವು ಬಾರಿ ಒತ್ತಾಯಿಸಿದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಆಳುವ ಸರಕಾರಗಳು ಬೇಜವಾಬ್ದಾರಿಯನ್ನು ವಹಿಸಿದೆ ಎಂದು ಇಮ್ತಿಯಾಝ್ ಹೇಳಿದ್ದಾರೆ.

ಜಿಲ್ಲೆಯ ಉಸ್ತುವಾರಿ ಮಂತ್ರಿ ಕೇವಲ ಕಟ್ಟುನಿಟ್ಟಿನ ಕ್ರಮಕೈಗೊಳ್ಳಾಗುವುದೆಂಬ ಕೇವಲ ಹೇಳಿಕೆಗಳನ್ನಷ್ಟೇ ಹೊರಡಿಸುತ್ತಾರೆಯೇ ಹೊರತು ಇಲ್ಲಿ ಬಿಜೆಪಿ ಸಂಘಪಾರಿವಾರದ ಹಿಂಸಾಚಾರಕ್ಕೆ ಗುರಿಯಾಗುತ್ತಿರುವ ಅಮಾಯಕ ಮುಸ್ಲಿಂ ಸಮುದಾಯದ ರಕ್ಷಣೆಗೆ ಯಾವೊಂದು ಕ್ರಮಗಳು ಇಲ್ಲದೇ ಇರೋದು ಖೇದಕರ. ಮತ್ತದೇ ಸಂಜೆಯಾಗುತ್ತಲೇ ವ್ಯಾಪಾರ ನಡೆಸಿ ಬದುಕುವ ಅಂಗಡಿ ಮುಂಗಟ್ಟುಗಳನ್ನು ಬಲವಂತದಿಂದ ಬಂದು ಮಾಡಿಸಿ ನಗರವನ್ನು ಮುಚ್ಚುವ, ಮನೆಯಿಂದ ಹೊರಬರೋದಕ್ಕೂ ಭೀತಿ ಹುಟ್ಟಿಸುವಂತಹ ಕ್ರಮಗಳಿಂದ ಯಾವುದೇ ಪ್ರಯೋಜನಗಳಿಲ್ಲ ಎಂದು ಡಿವೈಎಫ್ಐ ಹೇಳಿದೆ.

ಬಂಟ್ವಾಳದಲ್ಲಿ ಹತ್ಯೆಯಾಗಿರುವ ಮುಸ್ಲಿಂ ಸಮುದಾಯದ ಅಮಾಯಕ ಯುವಕನ ಹಂತಕರನ್ನು ಕೂಡಲೇ ಬಂಧಿಸಬೇಕು. ಕೊಲೆಗೆ ಪ್ರಚೋದನೆ ಕಾರಣದಾವರನ್ನೆಲ್ಲಾ ಬಯಲಿಗೆಳೆಯಬೇಕು. ಜಿಲ್ಲೆಯ ಯುವಜನತೆ ಶಾಂತಿಯನ್ನು ಕಾಪಾಡಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಅಮಾಯಕ ಮುಸ್ಲಿಂ ಯುವಕನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ವಿಧಾನಸಭೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಮೀರ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...