Homeಮುಖಪುಟಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

ಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

- Advertisement -
- Advertisement -

ಅತ್ಯಾಚಾರ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ ಆರು ಕ್ರೈಸ್ತ ಸನ್ಯಾಸಿನಿಗಳಲ್ಲಿ ಒಬ್ಬರಾದ ಸಿಸ್ಟರ್ ಅನುಪಮಾ ಕೆಲಮಂಗಲತುವೆಲಿಯಿಲ್ ಅವರು ಅಧಿಕೃತವಾಗಿ ಸನ್ಯಾಸತ್ವ ತೊರೆದು ಕೇರಳದ ಅಲಪ್ಪುಝದಲ್ಲಿರುವ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

2018ರಲ್ಲಿ, ಕೊಟ್ಟಾಯಂನ ಮಿಷನರೀಸ್ ಆಫ್ ಜೀಸಸ್ ಕಾನ್ವೆಂಟ್‌ನ ಸನ್ಯಾಸಿನಿಯೊಬ್ಬರು, 2014ರಿಂದ 2016ರ ನಡುವೆ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ವೇಳೆ ಕ್ಯಾಥೋಲಿಕ್ ಚರ್ಚ್‌ನಿಂದ ತೀವ್ರ ಒತ್ತಡ ಎದುರಿಸುತ್ತಿದ್ದರೂ, ಸಿಸ್ಟರ್ ಅನುಪಮಾ ಸೇರಿದಂತೆ ಇತರ ಆರು ಮಂದಿ ಸನ್ಯಾಸಿನಿಗಳು ಸಂತ್ರಸ್ತೆಯ ಬೆಂಬಲಕ್ಕೆ ನಿಂತು ಹೋರಾಡಿದ್ದರು.

ಆದರೂ, ಅತ್ಯಾಚಾರ ಪ್ರಕರಣ ದಾಖಲಾಗಿ ಮೂರು ತಿಂಗಳು ಕಳೆದರೂ ಜಲಂಧರ್‌ನ ಲ್ಯಾಟಿನ್ ಕ್ಯಾಥೋಲಿಕ್ ಡಯಾಸಿಸ್‌ನ ಮುಖ್ಯಸ್ಥರಾಗಿದ್ದ ಬಿಷಪ್ ಅವರನ್ನು ಬಂಧಿಸಿರಲಿಲ್ಲ.

ನಂತರ, ಸಿಸ್ಟರ್ ಅನುಪಮಾ ನೇತೃತ್ವದಲ್ಲಿ ಸನ್ಯಾಸಿಗಳು ಕೊಚ್ಚಿಯಲ್ಲಿ ಸಾರ್ವಜನಿಕ ಧರಣಿ ಪ್ರತಿಭಟನೆ ನಡೆಸಿದ್ದರು. ನಂತರ ಸಾರ್ವಜನಿಕ ವಲಯದಿಂದ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಲ್ಲಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸಲಾಗಿತ್ತು.

ಈ ಪ್ರಕರಣದಲ್ಲಿ, ಭಾರತದ ಕ್ಯಾಥೋಲಿಕ್ ಚರ್ಚ್‌ನ ಅಧಿಕಾರವನ್ನು ಸನ್ಯಾಸಿನಿಯರ ಗುಂಪೊಂದು ಪ್ರಶ್ನಿಸಿದ್ದು ಇದೇ ಮೊದಲ ಬಾರಿಯಾಗಿತ್ತು.

2019ರಲ್ಲಿ, ಬಿಷಪ್ ವಿರುದ್ದ ಹೋರಾಟ ನಡೆಸಿದ್ದ ಆರು ಸನ್ಯಾಸಿನಿಗಳಲ್ಲಿ ನಾಲ್ವರಿಗೆ ಚರ್ಚ್ ವರ್ಗಾವಣೆ ಆದೇಶ ನೀಡಿತ್ತು. ಈ ವೇಳೆ ಸನ್ಯಾಸಿನಿಯರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದು, ಬಿಷಪ್ ವಿರುದ್ದ ಪ್ರಕರಣದ ವಿಚಾರಣೆಯ ಅಂತ್ಯದವರೆಗೆ ತಮ್ಮ ವರ್ಗಾವಣೆ ಆದೇಶವನ್ನು ತಡೆಯುವಂತೆ ಕೋರಿದ್ದರು.

ಈ ಸಂದರ್ಭದಲ್ಲಿ ಸನ್ಯಾಸಿನಿಯರು ಭಾರೀ ವಿರೋಧ ಮತ್ತು ಬಹಿಷ್ಕಾರವನ್ನು ಎದುರಿಸಬೇಕಾಯಿತು. ಆದರೂ, ಅವರು ತಮ್ಮ ಕಾನ್ವೆಂಟ್ ಬಿಡಲು ನಿರಾಕರಿಸಿದ್ದರು. ಸಂತ್ರಸ್ತೆ ಸನ್ಯಾಸಿನಿಯ ಬೆನ್ನಿಗೆ ದೃಢವಾಗಿ ನಿಂತಿದ್ದರು.

ಈ ವೇಳೆ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಸಂತ್ರಸ್ತೆ ಸನ್ಯಾಸಿನಿ, “ನನ್ನನ್ನು ಇತರ ಸನ್ಯಾಸಿನಿಗಳಿಂದ ಪ್ರತ್ಯೇಕಿಸಲು, ಕಿರುಕುಳ ಮತ್ತು ಚಿತ್ರಹಿಂಸೆ ನೀಡಲು ಚರ್ಚ್ ಪ್ರಯತ್ನಿಸುತ್ತಿದೆ. ಅಂತಹ ಪರಿಸ್ಥಿತಿ ಎದುರಾದರೆ ನನ್ನ ಜೀವಕ್ಕೆ ಅಪಾಯವಿದೆ” ಎಂದು ಆರೋಪಿಸಿದ್ದರು.

ಈ ನಡುವೆ 2022ರಲ್ಲಿ, ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಕೊಟ್ಟಾಯಂನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿತು.

ಆಗ, ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಸ್ಟರ್ ಅನುಪಮಾ “ನಮ್ಮ ಸಹೋದರಿಗೆ ನ್ಯಾಯ ಸಿಗುವವರೆಗೂ ನಾವು ಹೋರಾಟವನ್ನು ಮುಂದುವರಿಸುತ್ತೇವೆ. ನಾವು ಸಾಯಬೇಕಾಗಿ ಬಂದರೂ ಸರಿ, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬಿಷಪ್ ಫ್ರಾಂಕೊ ಹಣ ಮತ್ತು ತೋಳ್ಬಲ ಎರಡನ್ನೂ ಹೊಂದಿರುವ ವ್ಯಕ್ತಿ” ಎಂದು ಹೇಳಿದ್ದರು.

ಬಳಿಕ ಸಂತ್ರಸ್ತೆ ಸನ್ಯಾಸಿನಿ ಕೊಟ್ಟಾಯಂ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಪ್ರಕರಣ ಹೈಕೋರ್ಟ್‌ನಲ್ಲಿ ಬಾಕಿಯಿದೆ.

ಜಿಲ್ಲಾ ನ್ಯಾಯಾಲಯದ ತೀರ್ಪಿನ ಬಳಿಕ ಹೋರಾಟ ನಿರತ ಎಲ್ಲಾ ಸನ್ಯಾಸಿನಿಗಳು ತಮ್ಮ ಕಾನ್ವೆಂಟ್‌ನಲ್ಲೇ ಉಳಿದು ಹೋರಾಟ ಮುಂದುವರಿಸುವುದಾಗಿ ಹೇಳಿದ್ದರು. ಆದಾಗ್ಯೂ, ಕಳೆದ ಮೂರು ವರ್ಷಗಳಲ್ಲಿ ಸಿಸ್ಟರ್ ಅನುಪಮಾ ಅಲ್ಲದೆ, ಇತರ ಇಬ್ಬರು ಸನ್ಯಾಸಿನಿಗಳು ಕೂಡ ಸನ್ಯಾಸಿನಿತ್ವವನ್ನು ತ್ಯಜಿಸಿ ಕಾನ್ವೆಂಟ್ ತೊರೆದಿದ್ದಾರೆ.

ಪೋಕ್ಸೋ ಕಾಯ್ದೆಯಡಿ ತೀವ್ರ ಲೈಂಗಿಕ ದೌರ್ಜನ್ಯಕ್ಕೆ 20 ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸುವಂತಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...