Homeಮುಖಪುಟಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

ಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

- Advertisement -
- Advertisement -

ಅತ್ಯಾಚಾರ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ ಆರು ಕ್ರೈಸ್ತ ಸನ್ಯಾಸಿನಿಗಳಲ್ಲಿ ಒಬ್ಬರಾದ ಸಿಸ್ಟರ್ ಅನುಪಮಾ ಕೆಲಮಂಗಲತುವೆಲಿಯಿಲ್ ಅವರು ಅಧಿಕೃತವಾಗಿ ಸನ್ಯಾಸತ್ವ ತೊರೆದು ಕೇರಳದ ಅಲಪ್ಪುಝದಲ್ಲಿರುವ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

2018ರಲ್ಲಿ, ಕೊಟ್ಟಾಯಂನ ಮಿಷನರೀಸ್ ಆಫ್ ಜೀಸಸ್ ಕಾನ್ವೆಂಟ್‌ನ ಸನ್ಯಾಸಿನಿಯೊಬ್ಬರು, 2014ರಿಂದ 2016ರ ನಡುವೆ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ವೇಳೆ ಕ್ಯಾಥೋಲಿಕ್ ಚರ್ಚ್‌ನಿಂದ ತೀವ್ರ ಒತ್ತಡ ಎದುರಿಸುತ್ತಿದ್ದರೂ, ಸಿಸ್ಟರ್ ಅನುಪಮಾ ಸೇರಿದಂತೆ ಇತರ ಆರು ಮಂದಿ ಸನ್ಯಾಸಿನಿಗಳು ಸಂತ್ರಸ್ತೆಯ ಬೆಂಬಲಕ್ಕೆ ನಿಂತು ಹೋರಾಡಿದ್ದರು.

ಆದರೂ, ಅತ್ಯಾಚಾರ ಪ್ರಕರಣ ದಾಖಲಾಗಿ ಮೂರು ತಿಂಗಳು ಕಳೆದರೂ ಜಲಂಧರ್‌ನ ಲ್ಯಾಟಿನ್ ಕ್ಯಾಥೋಲಿಕ್ ಡಯಾಸಿಸ್‌ನ ಮುಖ್ಯಸ್ಥರಾಗಿದ್ದ ಬಿಷಪ್ ಅವರನ್ನು ಬಂಧಿಸಿರಲಿಲ್ಲ.

ನಂತರ, ಸಿಸ್ಟರ್ ಅನುಪಮಾ ನೇತೃತ್ವದಲ್ಲಿ ಸನ್ಯಾಸಿಗಳು ಕೊಚ್ಚಿಯಲ್ಲಿ ಸಾರ್ವಜನಿಕ ಧರಣಿ ಪ್ರತಿಭಟನೆ ನಡೆಸಿದ್ದರು. ನಂತರ ಸಾರ್ವಜನಿಕ ವಲಯದಿಂದ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಲ್ಲಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸಲಾಗಿತ್ತು.

ಈ ಪ್ರಕರಣದಲ್ಲಿ, ಭಾರತದ ಕ್ಯಾಥೋಲಿಕ್ ಚರ್ಚ್‌ನ ಅಧಿಕಾರವನ್ನು ಸನ್ಯಾಸಿನಿಯರ ಗುಂಪೊಂದು ಪ್ರಶ್ನಿಸಿದ್ದು ಇದೇ ಮೊದಲ ಬಾರಿಯಾಗಿತ್ತು.

2019ರಲ್ಲಿ, ಬಿಷಪ್ ವಿರುದ್ದ ಹೋರಾಟ ನಡೆಸಿದ್ದ ಆರು ಸನ್ಯಾಸಿನಿಗಳಲ್ಲಿ ನಾಲ್ವರಿಗೆ ಚರ್ಚ್ ವರ್ಗಾವಣೆ ಆದೇಶ ನೀಡಿತ್ತು. ಈ ವೇಳೆ ಸನ್ಯಾಸಿನಿಯರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದು, ಬಿಷಪ್ ವಿರುದ್ದ ಪ್ರಕರಣದ ವಿಚಾರಣೆಯ ಅಂತ್ಯದವರೆಗೆ ತಮ್ಮ ವರ್ಗಾವಣೆ ಆದೇಶವನ್ನು ತಡೆಯುವಂತೆ ಕೋರಿದ್ದರು.

ಈ ಸಂದರ್ಭದಲ್ಲಿ ಸನ್ಯಾಸಿನಿಯರು ಭಾರೀ ವಿರೋಧ ಮತ್ತು ಬಹಿಷ್ಕಾರವನ್ನು ಎದುರಿಸಬೇಕಾಯಿತು. ಆದರೂ, ಅವರು ತಮ್ಮ ಕಾನ್ವೆಂಟ್ ಬಿಡಲು ನಿರಾಕರಿಸಿದ್ದರು. ಸಂತ್ರಸ್ತೆ ಸನ್ಯಾಸಿನಿಯ ಬೆನ್ನಿಗೆ ದೃಢವಾಗಿ ನಿಂತಿದ್ದರು.

ಈ ವೇಳೆ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಸಂತ್ರಸ್ತೆ ಸನ್ಯಾಸಿನಿ, “ನನ್ನನ್ನು ಇತರ ಸನ್ಯಾಸಿನಿಗಳಿಂದ ಪ್ರತ್ಯೇಕಿಸಲು, ಕಿರುಕುಳ ಮತ್ತು ಚಿತ್ರಹಿಂಸೆ ನೀಡಲು ಚರ್ಚ್ ಪ್ರಯತ್ನಿಸುತ್ತಿದೆ. ಅಂತಹ ಪರಿಸ್ಥಿತಿ ಎದುರಾದರೆ ನನ್ನ ಜೀವಕ್ಕೆ ಅಪಾಯವಿದೆ” ಎಂದು ಆರೋಪಿಸಿದ್ದರು.

ಈ ನಡುವೆ 2022ರಲ್ಲಿ, ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಕೊಟ್ಟಾಯಂನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿತು.

ಆಗ, ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಸ್ಟರ್ ಅನುಪಮಾ “ನಮ್ಮ ಸಹೋದರಿಗೆ ನ್ಯಾಯ ಸಿಗುವವರೆಗೂ ನಾವು ಹೋರಾಟವನ್ನು ಮುಂದುವರಿಸುತ್ತೇವೆ. ನಾವು ಸಾಯಬೇಕಾಗಿ ಬಂದರೂ ಸರಿ, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬಿಷಪ್ ಫ್ರಾಂಕೊ ಹಣ ಮತ್ತು ತೋಳ್ಬಲ ಎರಡನ್ನೂ ಹೊಂದಿರುವ ವ್ಯಕ್ತಿ” ಎಂದು ಹೇಳಿದ್ದರು.

ಬಳಿಕ ಸಂತ್ರಸ್ತೆ ಸನ್ಯಾಸಿನಿ ಕೊಟ್ಟಾಯಂ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಪ್ರಕರಣ ಹೈಕೋರ್ಟ್‌ನಲ್ಲಿ ಬಾಕಿಯಿದೆ.

ಜಿಲ್ಲಾ ನ್ಯಾಯಾಲಯದ ತೀರ್ಪಿನ ಬಳಿಕ ಹೋರಾಟ ನಿರತ ಎಲ್ಲಾ ಸನ್ಯಾಸಿನಿಗಳು ತಮ್ಮ ಕಾನ್ವೆಂಟ್‌ನಲ್ಲೇ ಉಳಿದು ಹೋರಾಟ ಮುಂದುವರಿಸುವುದಾಗಿ ಹೇಳಿದ್ದರು. ಆದಾಗ್ಯೂ, ಕಳೆದ ಮೂರು ವರ್ಷಗಳಲ್ಲಿ ಸಿಸ್ಟರ್ ಅನುಪಮಾ ಅಲ್ಲದೆ, ಇತರ ಇಬ್ಬರು ಸನ್ಯಾಸಿನಿಗಳು ಕೂಡ ಸನ್ಯಾಸಿನಿತ್ವವನ್ನು ತ್ಯಜಿಸಿ ಕಾನ್ವೆಂಟ್ ತೊರೆದಿದ್ದಾರೆ.

ಪೋಕ್ಸೋ ಕಾಯ್ದೆಯಡಿ ತೀವ್ರ ಲೈಂಗಿಕ ದೌರ್ಜನ್ಯಕ್ಕೆ 20 ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸುವಂತಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...